ವಿದ್ಯುತ್‌ ತಂತಿ ಅಳವಡಿಕೆ ಸಂದರ್ಭ ನಿರ್ಲಕ್ಷ್ಯ: ಕಾರ್ಮಿಕ ಸಾವು; ಶಿಕ್ಷೆ ಪ್ರಕಟ


Team Udayavani, Dec 2, 2022, 11:30 PM IST

ವಿದ್ಯುತ್‌ ತಂತಿ ಅಳವಡಿಕೆ ಸಂದರ್ಭ ನಿರ್ಲಕ್ಷ್ಯ: ಕಾರ್ಮಿಕ ಸಾವು; ಶಿಕ್ಷೆ ಪ್ರಕಟ

ಕುಂದಾಪುರ: ವಿದ್ಯುತ್‌ ತಂತಿ ಅಳವಡಿಕೆ ಸಂದರ್ಭ ನಿರ್ಲಕ್ಷ್ಯ ಮಾಡಿ ಕಾರ್ಮಿಕರೊಬ್ಬರ ಸಾವಿಗೆ ಕಾರಣರಾದುದಕ್ಕೆ ಇಲ್ಲಿನ ನ್ಯಾಯಾಲಯ ಗುತ್ತಿಗೆದಾರರಿಗೆ ಶಿಕ್ಷೆ ವಿಧಿಸಿದೆ.

2010ರಲ್ಲಿ ಉಪ್ಪಿನಕುದ್ರು ಗ್ರಾಮದ ಕೆಳಹಿತ್ಲು ಎಂಬಲ್ಲಿ ತಲ್ಲೂರು ಮೆಸ್ಕಾಂಗೆ ಸಂಬಂಧಿಸಿದ ಹಳೆ ವಿದ್ಯುತ್‌ ತಂತಿ ಬದಲು ಹೊಸ ವಿದ್ಯುತ್‌ ತಂತಿ ಅಳವಡಿಕೆ ಕಾರ್ಯ ನಡೆಯುತ್ತಿತ್ತು.

ಸಿದ್ದಾಪುರದ ಕೊಳ್ಕೆಬೈಲು ನಿವಾಸಿ ನರಸಿಂಹ ಕುಲಾಲ್‌ ಅವರು ಗುತ್ತಿಗೆ ಪಡೆದಿದ್ದು ತಲ್ಲೂರಿನ ಮಾರ್ತಾಂಡಪ್ಪ ಹಾಗೂ ತಲ್ಲೂರಿನ ಜಾಫ‌ರ್‌ ಹುಸೇನ್‌ ಅವರು ವಿದ್ಯುತ್‌ ತಂತಿಗೆ ಭೂಸಂಪರ್ಕ ನೀಡದೆ ಸಂತೋಷ್‌ ಹಾಗೂ ಇತರ ನಾಲ್ವರನ್ನು ಕಂಬಕ್ಕೆ ಹತ್ತಿಸಿದ್ದರು.

ಕಾಮಗಾರಿ ವೇಳೆ ಜನರಿದ್ದುದನ್ನು ಗಮನಿಸದೇ ಜಾಫ‌ರ್‌ ಅವರು ವಿದ್ಯುತ್‌ ಸಂಪರ್ಕ ನೀಡಿದಾಗ ಕಂಬದಲ್ಲಿದ್ದ ನಾಲ್ವರು ಕೆಳಗೆ ಬಿದ್ದಿದ್ದರು. ಈ ಪೈಕಿ ಸಂತೋಷ್‌ ಮೃತಪಟ್ಟಿದ್ದರು. ಇತರರಿಗೆ ಗಾಯವಾಗಿತ್ತು.

ಈ ಬಗ್ಗೆ ಗುತ್ತಿಗೆದಾರ ನರಸಿಂಹ ಕುಲಾಲ್‌, ಮಾರ್ತಾಂಡಪ್ಪ, ಜಾಫ‌ರ್‌ ಹುಸೇನ್‌ ಅವರ ವಿರುದ್ಧ ಪ್ರಕರಣ ದಾಖಲಾಗಿತ್ತು.

ವಿಚಾರಣೆ ನಡೆಸಿದ ನ್ಯಾಯಾಲಯ ಗುತ್ತಿಗೆದಾರ ನರಸಿಂಹ ಕುಲಾಲ್‌ಗೆ ಸೆಕ್ಷನ್‌ 337ರಲ್ಲಿ 6 ತಿಂಗಳ ಸಾದಾಶಿಕ್ಷೆ, 500 ರೂ. ದಂಡ, ದಂಡ ತೆರಲು ತಪ್ಪಿದರೆ 15 ದಿನಗಳ ಹೆಚ್ಚುವರಿ ಶಿಕ್ಷೆ, 304(ಎ) ಸೆಕ್ಷನ್‌ನ ಅಪರಾಧಕ್ಕಾಗಿ 1 ವರ್ಷ ಜೈಲು, 5 ಸಾವಿರ ರೂ. ದಂಡ, ದಂಡ ಪಾವತಿಗೆ ತಪ್ಪಿದರೆ 2 ತಿಂಗಳ ಜೈಲು, ಸೆಕ್ಷನ್‌ 357ರ ಅಡಿ ದಂಡದ ಹಣದಲ್ಲಿ 3 ಸಾವಿರ ರೂ. ಮೃತರ ಕುಟುಂಬಿಕರಿಗೆ, ಸೆಕ್ಷನ್‌ 357ರಲ್ಲಿ ಹೆಚ್ಚುವರಿ ಪರಿಹಾರವಾಗಿ 50 ಸಾವಿರ ರೂ.ಗಳನ್ನು ಪಾವತಿಸುವಂತೆ ಆದೇಶಿಸಲಾಗಿದೆ.

ಹೆಚ್ಚುವರಿ ಸಿವಿಲ್‌ ನ್ಯಾಯಾಧೀಶೆ ಮತ್ತು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿ ರೋಹಿಣಿ ಡಿ. ತೀರ್ಪು ನೀಡಿದ್ದು, ಸರಕಾರದ ಪರ ಸಹಾಯಕ ಸರಕಾರಿ ಅಭಿಯೋಜಕಿ ವರ್ಷಶ್ರೀ ವಾದಿಸಿದ್ದರು.

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.