ಹಿಮಾಚಲ : ಎಂಟು ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳ ಸೋಲಿಗೆ ಕಾರಣವಾದ ಬಂಡಾಯ

ಜಿದ್ದಾ ಜಿದ್ದಿನ ಸಮರದಲ್ಲಿ ಬಂಡಾಯದ ಬಿಸಿ

Team Udayavani, Dec 9, 2022, 2:46 PM IST

BJP Symbol

ಶಿಮ್ಲಾ: ಹಿಮಾಚಲ ಪ್ರದೇಶದ 68 ವಿಧಾನಸಭಾ ಕ್ಷೇತ್ರಗಳ ಪೈಕಿ 12 ಕ್ಷೇತ್ರಗಳಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್‌ಗೆ ಬಂಡಾಯದ ಬಿಸಿ ತಟ್ಟಿದೆ.

ಚುನಾವಣೆಯಲ್ಲಿ ಸ್ವತಂತ್ರವಾಗಿ ಸ್ಪರ್ಧಿಸಿದ್ದ ಬಂಡಾಯಗಾರರು ಎಂಟು ಸ್ಥಾನಗಳಲ್ಲಿ ಬಿಜೆಪಿ ಅಭ್ಯರ್ಥಿಗಳ ನಿರೀಕ್ಷೆಯನ್ನು ಹಾಳುಮಾಡಿದರೆ, ನಾಲ್ಕು ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಹೊಡೆತ ಬಿದ್ದಿದೆ.

ಕಣದಲ್ಲಿದ್ದ ಒಟ್ಟು 99 ಸ್ವತಂತ್ರರ ಪೈಕಿ 28 ಮಂದಿ ಬಂಡಾಯ ಅಭ್ಯರ್ಥಿಗಳಾಗಿದ್ದರು. ನಲಗಢದಿಂದ ಕೆ ಎಲ್ ಠಾಕೂರ್, ಡೆಹ್ರಾದಿಂದ ಹೋಶಿಯಾರ್ ಸಿಂಗ್ ಮತ್ತು ಹಮೀರ್‌ಪುರದಿಂದ ಆಶಿಶ್ ಶರ್ಮಾ ಗೆದ್ದ ಮೂವರು ಪಕ್ಷೇತರರು ಬಿಜೆಪಿ ಬಂಡಾಯ ಅಭ್ಯರ್ಥಿಗಳಾಗಿದ್ದರು. ಅವರಿಗೆ ಪಕ್ಷದ ಟಿಕೆಟ್ ನಿರಾಕರಿಸಲಾಗಿತ್ತು. ಠಾಕೂರ್ ಅವರು 2012 ರಲ್ಲಿ ಗೆದ್ದಿದ್ದರು ಆದರೆ 2017 ರಲ್ಲಿ ಸೋತಿದ್ದರು ಮತ್ತು ಬಿಜೆಪಿಯು ಎರಡು ಅವಧಿಯ ಕಾಂಗ್ರೆಸ್ ಶಾಸಕರಾಗಿದ್ದ ಲಖ್ವಿಂದರ್ ಸಿಂಗ್ ರಾಣಾ ಅವರನ್ನು ಚುನಾವಣಾ ಕಣಕ್ಕೆ ಇಳಿಸಿತ್ತು.

ಡೆಹ್ರಾದಿಂದ ಹಾಲಿ ಸ್ವತಂತ್ರ ಶಾಸಕ ಸಿಂಗ್, ವಿಧಾನಸಭಾ ಚುನಾವಣೆಯ ಮುನ್ನಾದಿನದಂದು ಬಿಜೆಪಿಗೆ ಸೇರ್ಪಡೆಗೊಂಡಿದ್ದರು ಆದರೆ ಪಕ್ಷವು ರಮೇಶ್ ಧವಾಲಾಗೆ ಟಿಕೆಟ್ ನೀಡಿತು ಮತ್ತು ಹಮೀರ್‌ಪುರದಿಂದ ಆಶಿಶ್ ಶರ್ಮಾ ಕೂಡ ಬಿಜೆಪಿ ಬಂಡಾಯಗಾರರಾಗಿದ್ದರು.

ಬಂಡಾಯ ಅಭ್ಯರ್ಥಿಗಳು ಕಿನ್ನೌರ್, ಕುಲು, ಬಂಜಾರ್, ಇಂದೋರಾ ಮತ್ತು ಧರ್ಮಶಾಲಾದಲ್ಲಿ ಬಿಜೆಪಿಯ ಗೆಲುವನ್ನು ಕಸಿದರೆ,ಪಚ್ಚಾಡ್, ಚೋಪಾಲ್, ಅನ್ನಿ ಮತ್ತು ಸುಲಾದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಅವಕಾಶಕ್ಕೆ ಅಡ್ಡಿಯಾಯಿತು.

ಸ್ವತಂತ್ರ ಮತ್ತು ಇತರ ಸಣ್ಣ ಪಕ್ಷಗಳ ಒಟ್ಟು ಮತಗಳ ಪ್ರಮಾಣವು 10.39 ಶೇಕಡಾವಾಗಿದೆ. ಕಿನ್ನೌರ್‌ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜಗತ್ ಸಿಂಗ್ ನೇಗಿ ಅವರ ಗೆಲುವಿನ ಅಂತರಕ್ಕಿಂತ (6,964) ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಬಿಜೆಪಿಯ ಮಾಜಿ ಶಾಸಕ ತೇಜವಂತ್ ನೇಗಿ ಶೇ.19.25ರಷ್ಟು (8,574) ಮತಗಳನ್ನು ಪಡೆದು ಬಿಜೆಪಿ ಅಧಿಕೃತ ಅಭ್ಯರ್ಥಿ ಸೂರತ್ ನೇಗಿ ಸೋಲಿಗೆ ಕಾರಣರಾದರು.

ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿದ್ದ ರಾಮ್ ಸಿಂಗ್ ಶೇಕಡಾ 16.77 ಮತಗಳನ್ನು (11,937 ಮತಗಳು) ಪಡೆದರೆ, ಬಿಜೆಪಿ ಅಭ್ಯರ್ಥಿ ನರೋತಮ್ ಸಿಂಗ್ ಅವರು ಕಾಂಗ್ರೆಸ್ ಅಭ್ಯರ್ಥಿ ಸುರೇಂದರ್ ಠಾಕೂರ್ ವಿರುದ್ಧ 4,103 ಮತಗಳಿಂದ ಸೋಲನ್ನು ಒಪ್ಪಿಕೊಂಡರು.

ಬಿಜೆಪಿ ನಾಯಕ ಮಹೇಶ್ವರ್ ಸಿಂಗ್ ಅವರ ಪುತ್ರ ಹಿತೇಶ್ವರ್ ಸಿಂಗ್ ಶೇಕಡಾ 24.12 ಮತಗಳನ್ನು (14,568) ಪಡೆದು ಬಿಜೆಪಿ ಅಭ್ಯರ್ಥಿ ಖಿಮಿ ರಾಮ್ ಅವರನ್ನು 4,334 ಮತಗಳಿಂದ ಸೋಲಿಸುವ ಮೂಲಕ ಕುಲುವಿನ ಸನ್ನಿವೇಶವು ಭಿನ್ನವಾಗಿರಲಿಲ್ಲ.ಧರ್ಮಶಾಲಾದಲ್ಲಿ, ಬಿಜೆಪಿ ಬಂಡಾಯ ಅಭ್ಯರ್ಥಿ ವಿಪನ್ ನೆಹೆರಿಯಾ ಅವರು ಶೇಕಡಾ 12.36 ಮತಗಳನ್ನು (7,416) ಪಡೆದರು, ಇದು ಕಾಂಗ್ರೆಸ್ ಅಭ್ಯರ್ಥಿ ಸುಧೀರ್ ಶರ್ಮಾ ಅವರ ಗೆಲುವಿನ ಅಂತರಕ್ಕಿಂತ (3,285) ಹೆಚ್ಚು. ಸುಳ್ಯ ಮತ್ತು ಅನ್ನಿಯಲ್ಲಿ ಪರಿಸ್ಥಿತಿ ಭಿನ್ನವಾಗಿರಲಿಲ್ಲ, ಅಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಬಂಡಾಯಗಾರರ ನಡುವೆ ಸ್ಪರ್ಧೆ ಇತ್ತು ಮತ್ತು ಕಾಂಗ್ರೆಸ್ ಅಧಿಕೃತ ಅಭ್ಯರ್ಥಿಗಳು ಮೂರನೇ ಸ್ಥಾನಕ್ಕೆ ತಳ್ಳಲ್ ಪಟ್ಟರು.

68 ಸ್ಥಾನಗಳ ಪೈಕಿ ಕಾಂಗ್ರೆಸ್ 40 ಸ್ಥಾನಗಳನ್ನು ಗೆದ್ದು ಸರಕಾರ ರಚಿಸಲು ಸಿದ್ಧತೆ ನಡೆಸಿದ್ದು, ಆಡಳಿತ ನಡೆಸುತ್ತಿದ್ದ ಬಿಜೆಪಿ 25 ಸ್ಥಾನಗಳನ್ನು ಮಾತ್ರ ಗೆದ್ದಿದೆ. ಬಹುಮತಕ್ಕೆ 35 ಸ್ಥಾನಗಳು ಅಗತ್ಯವಾಗಿತ್ತು.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.