ಪಕ್ಷಿಗಳ ವಿಹಾರ ತಾಣ, ಕೃಷಿ ಭೂಮಿಗೆ ಅನುಕೂಲ

ಮೇಲೂರು ಕೆರೆಗೆ ಕಾಯಕಲ್ಪ: 40 ಸೆಂಟ್ಸ್‌ ಜಾಗ ದಾನ

Team Udayavani, Dec 10, 2022, 11:26 AM IST

5

ಪುತ್ತೂರು: ನೈಸರ್ಗಿಕ ಸಂಪನ್ಮೂಲ ನಿರ್ವಹಣೆ ಮತ್ತು ಸಾಂಪ್ರದಾಯಿಕ ಕೆರೆ-ಕಟ್ಟೆಗಳನ್ನು ಉಳಿಸಿ ಅಭಿವೃದ್ಧಿಪಡಿಸುವ ಅಭಿಯಾನಕ್ಕೆ ಪೂರಕ ಎಂಬಂತೆ ಬಜತ್ತೂರು ಗ್ರಾ.ಪಂ. ವ್ಯಾಪ್ತಿಯ ಮೇಲೂರಿನಲ್ಲಿ ಕೆರೆ ಹೂಳೆತ್ತಿ ಅಭಿವೃದ್ಧಿಪಡಿಸುವ ಕಾರ್ಯ ಪ್ರಾರಂಭಗೊಂಡಿದೆ.

ಮೇಲೂರಿನಲ್ಲಿ 60 ಸೆಂಟ್ಸ್‌ ಜಾಗ ಕೆರೆಗೆ ಮೀಸಲಿಡಲಾಗಿತ್ತು. ಅದರಲ್ಲಿ 10 ಸೆಂಟ್ಸ್‌ ಜಾಗದಲ್ಲಿ ಮಾತ್ರ ನೀರು ನಿಲ್ಲುತ್ತಿತ್ತು. ಇನ್ನುಳಿದ 50 ಸೆಂಟ್ಸ್‌ ಜಾಗದಲ್ಲಿ ಹೂಳು ತುಂಬಿತ್ತು. ಕೆರೆಗೆ ಹೊಂದಿಕೊಂಡಿರುವ ಭೂ ಮಾಲಕರಾದ ಮೇಲೂರು ಅಪರಂಜಿ ಅರಿಗ ಅವರು 40 ಸೆಂಟ್ಸ್‌ ಜಾಗವನ್ನು ಗ್ರಾ.ಪಂ.ಗೆ ದಾನ ಪತ್ರದ ಮೂಲಕ ನೀಡಿದ್ದಾರೆ. ಕೆರೆ ರಚನೆಗೆ ಮುತುವರ್ಜಿ ವಹಿಸಿ ಜಮೀನು ದಾನ ನೀಡಿರುವುದು ಕೆರೆ ಅಭಿವೃದ್ಧಿ ನಡೆಸಲು ಮುಖ್ಯ ಕಾರಣ ಎನ್ನುತ್ತದೆ ಗ್ರಾ.ಪಂ. ಆಡಳಿತ ಮಂಡಳಿ.

ಕೆರೆ ಅಭಿವೃದ್ಧಿ

ಮೇಲೂರು ಕೆರೆ ಅಭಿವೃದ್ಧಿ ಕುರಿತು ಉದ್ಯೋಗ ಖಾತರಿ ಯೋಜನೆಯ ಗ್ರಾಮಸಭೆಯಲ್ಲಿ ಪ್ರಸ್ತಾವವಾಗಿತ್ತು. ಕೇವಲ ಉದ್ಯೋಗ ಖಾತರಿ ಯೋಜನೆಯ ಅನುದಾನದಿಂದ ಅಭಿವೃದ್ಧಿ ಸಾಧ್ಯವಿಲ್ಲದಿ ರುವುದರಿಂದ ಜಿ.ಪಂ., ಪಂಚಾಯತ್‌ ರಾಜ್‌ ಎಂಜಿನಿಯರಿಂಗ್‌ ಇಲಾಖೆ, ಧ.ಗ್ರಾ. ಯೋಜನೆ ಹೀಗೆ ಹಲವು ಇಲಾಖೆಗಳಿಗೆ ಮತ್ತು ಸಿಎಸ್‌ಆರ್‌ ಅನುದಾನಕ್ಕಾಗಿ ಮನವಿ ಸಲ್ಲಿಸಲಾಗಿತ್ತು. ಜಿ.ಪಂ., ಪಂಚಾಯತ್‌ ರಾಜ್‌ ಎಂಜಿನಿಯರಿಂಗ್‌ ಇಲಾಖೆಯ ಅನುದಾನದಲ್ಲಿ ಮೊದಲ ಹಂತದ ಕಾಮಗಾರಿ ಪ್ರಗತಿಯಲ್ಲಿದೆ. ಒಟ್ಟು 32 ಲಕ್ಷ ರೂ. ವೆಚ್ಚದಲ್ಲಿ ಕೆರೆ ಅಭಿವೃದ್ಧಿಗೊಳ್ಳಲಿದೆ.

ಮೂರು ಭಾಗ ಗುಡ್ಡ ಪ್ರದೇಶವಿದ್ದು ಮಧ್ಯದಲ್ಲಿ ಮೇಲೂರು ಕೆರೆ ಇದೆ. ತಗ್ಗು ಪ್ರದೇಶದಲ್ಲಿ ತೋಟ, ಗದ್ದೆ ಇದ್ದು, ಗುಡ್ಡ ಪ್ರದೇಶದಿಂದ ಹರಿದು ಬಂದ ನೀರು ಈ ಕೆರೆಯಲ್ಲಿ ನಿಲ್ಲಲು ಸಹಕಾರಿಯಾಗಲಿದೆ. ಮಳೆಗಾಲ ಆರಂಭವಾಗುವಾಗ ವಿವಿಧ ಜಾತಿಯ ಪಕ್ಷಿಗಳು ಈ ಪರಿಸರದಲ್ಲಿ ವಿಹರಿಸಿ ಡಿಸೆಂಬರ್‌ ವೇಳೆ ವಲಸೆ ಹೋಗುತ್ತವೆ. ಹೀಗೆ ಪಕ್ಷಿಗಳಿಗೆ ಪ್ರಿಯ ತಾಣವೂ ಇದಾಗಿದೆ.

ಕೆರೆಯ ಹೂಳೆತ್ತುವುದುರಿಂದ ಅಂತ ರ್ಜಲ ವೃದ್ಧಿಯಾಗಲಿದೆ. ಸುತ್ತಲಿನ ನೀರಿನ ಮೂಲಗಳಿಗೆ ಅಲ್ಲದೆ ಕೊಳವೆ ಬಾವಿಗಳಿಗೂ ಪ್ರಯೋಜನವಾಗಲಿದೆ.

ಅಂತರ್ಜಲ ವೃದ್ಧಿಗೆ ಮುಖ್ಯ ಪಾತ್ರವಹಿ ಸಲಿರುವ ಕಾರಣ ಕೆರೆಯ ಅಭಿವೃದ್ಧಿಯ ಆವಶ್ಯಕತೆಗೆ 0.40 ಸೆಂಟ್ಸ್‌ ಜಾಗವನ್ನು ಗ್ರಾ.ಪಂ.ಗೆ ದಾನ ನೀಡಿದ್ದೇವೆ. ಗ್ರಾಮದ ಜನತೆಗೆ ಸಹಾಯವಾಗುತ್ತಿರುವುದಕ್ಕೆ ಖುಷಿ ಇದೆ ಎಂದು ಜಾಗ ದಾನಿಗಳಾದ ವೀರೇಂದ್ರ ಜೈನ್‌ ಮೇಲೂರು ಹೇಳುತ್ತಾರೆ.

ಕಾಮಗಾರಿ ಪ್ರಗತಿಯಲ್ಲಿದೆ: ಪಂಚಾಯತ್‌ರಾಜ್‌ ಎಂಜಿನಿಯರಿಂಗ್‌ ಇಲಾಖೆಯಿಂದ 32 ಲ.ರೂ.ನಲ್ಲಿ ಕೆರೆ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದೆ. ಅಂದಾಜು 6 ಮೀ. ಆಳ ಹಾಗೂ 60 ಮೀ. ಉದ್ದ -ಅಗಲ ಕಾಮಗಾರಿ ಪ್ರಗತಿಯಲ್ಲಿದೆ. ಅನುದಾನದ ಕೊರತೆಯಾದರೆ ಇತರ ಅನುದಾನಗಳನ್ನು ಒಗ್ಗೂಡಿಸಿ ಅನುಷ್ಠಾನಿಸಬೇಕಿದೆ. –ಭರತ್‌ ಬಿ.ಎಂ., ಸಹಾಯಕ ಕಾರ್ಯಪಾಲಕ ಅಭಿಯಂತರರು, ಪಂ. ರಾಜ್‌ ಎಂಜಿನಿಯರಿಂಗ್‌ ಇಲಾಖೆ, ಪುತ್ತೂರು

ಪಕ್ಷಿಗಳಿಗೂ ಸಹಕಾರಿ: ಮೇಲೂರು ಕೆರೆ ಅಭಿವೃದ್ಧಿಯಿಂದ ಕೃಷಿ ಜಮೀನುಗಳಿಗೆ ಅನುಕೂಲಕರವಾಗಲಿದೆ. ಕೆರೆಗೆ ಬೇರೆಡೆಯಿಂದ ವಿವಿಧ ಜಾತಿಯ ಪಕ್ಷಿಗಳು ಸ್ಥಳಕ್ಕೆ ವಲಸೆ ಬರುತ್ತಿದ್ದು, ಪಕ್ಷಿಗಳಿಗೂ ಸಹಕಾರಿಯಾಗಲಿದೆ. –ಪ್ರೇಮಾ ಬಿ., ಅಧ್ಯಕ್ಷರು, ಬಜತ್ತೂರು ಗ್ರಾ.ಪಂ.

ಟಾಪ್ ನ್ಯೂಸ್

Eid-Milad

Eid Milad Festival: ಕರಾವಳಿಯಾದ್ಯಂತ ಸಂಭ್ರಮದ ಈದ್‌ ಮಿಲಾದ್‌

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

RSS

RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bantwala: ಶರಣ್ ಪಂಪುವೆಲ್ ಗೆ ಸವಾಲು ಹಾಕಿದ ಶರೀಫ್: ಬಂಟ್ವಾಳದಲ್ಲಿ ಬಿಗುವಿನ ವಾತಾವರಣ

Bantwala: ಶರಣ್ ಪಂಪ್ ವೆಲ್ ಗೆ ಸವಾಲು ಹಾಕಿದ ಶರೀಫ್… ಬಂಟ್ವಾಳದಲ್ಲಿ ಬಿಗುವಿನ ವಾತಾವರಣ

police

Eid Milad: ರ್‍ಯಾಲಿ ವಿಚಾರ ಪ್ರಚೋದನಕಾರಿ ಹೇಳಿಕೆ: ಇಬ್ಬರ ವಿರುದ್ಧ ಪ್ರಕರಣ ದಾಖಲು

Cocoa; ವ್ಯಾಪಕವಾಗಿ ಕರಟಿದ ಕೊಕ್ಕೋ; ವಿಪರೀತ ಮಳೆ ತಂದೊಡ್ಡಿದೆ ಬೆಳೆಗಾರರಿಗೆ ಭಾರೀ ನಷ್ಟ

Cocoa; ವ್ಯಾಪಕವಾಗಿ ಕರಟಿದ ಕೊಕ್ಕೋ; ವಿಪರೀತ ಮಳೆ ತಂದೊಡ್ಡಿದೆ ಬೆಳೆಗಾರರಿಗೆ ಭಾರೀ ನಷ್ಟ

ಸುಳ್ಯ: ಬೈಕ್‌ ಗಳ ನಡುವೆ ಅಪಘಾತ

Sullia: ಬೈಕ್‌ ಗಳ ನಡುವೆ ಅಪಘಾತ

Arack

ವಿಟ್ಲ: ಅಡಿಕೆ ಸುಲಿಯುವ ಯಂತ್ರ ಕಂಡು ಹಿಡಿದ ನರಸಿಂಹ ಭಟ್‌ ವಿಧಿವಶ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

Eid-Milad

Eid Milad Festival: ಕರಾವಳಿಯಾದ್ಯಂತ ಸಂಭ್ರಮದ ಈದ್‌ ಮಿಲಾದ್‌

1-32

Cat; ವಿಶ್ವದ ಹಿರಿಯ ಬೆಕ್ಕು, 33 ವರ್ಷದ ರೋಸಿ ಇನ್ನಿಲ್ಲ

yogi-3

Pakistan ಕ್ಯಾನ್ಸರ್‌, ಅದರ ಹುಟ್ಟಿಗೆ ಕಾಂಗ್ರೆಸ್‌ ಕಾರಣ: ಯೋಗಿ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

kangana-2

Emergency; ಭಿಂದ್ರನ್‌ವಾಲೆ ಸಾಧುವಲ್ಲ, ಭಯೋತ್ಪಾದಕ: ಸಂಸದೆ ಕಂಗನಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.