![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Dec 10, 2022, 3:14 PM IST
ಬೆಂಗಳೂರು: ಪದೇ-ಪದೆ ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾಗುತ್ತಿದ್ದ ಕುಖ್ಯಾತ ರೌಡಿ ಸುಹೇಲ್ನನ್ನು ಡಿಜೆ ಹಳ್ಳಿ ಪೊಲೀಸರು ಮತ್ತೆ ಬಂಧಿಸಿದ್ದಾರೆ.
ಕೈಗೆ ಬೇಡಿ ಹಾಕಿಕೊಂಡು ಮೆರವಣಿಗೆ ಮಾದರಿಯಲ್ಲಿ ಕರೆದುಕೊಂಡು ಹೋಗಿ ಸ್ಥಳೀಯರಿಗೆ ಧೈರ್ಯ ತುಂಬಿದ್ದಾರೆ.
ಸುಹೇಲ್ 15ಕ್ಕೂ ಅಧಿಕ ಪ್ರಕರಣಗಳಲ್ಲಿ ಈ ಹಿಂದೆ ಪೊಲೀಸರ ಬಲೆಗೆ ಬಿದ್ದು ಜೈಲಿಗೆ ಹೋಗಿ ಜಾಮೀನಿನ ಮೇಲೆ ಹೊರ ಬಂದು ಮತ್ತೆ ಹಳೆ ಚಾಳಿ ಮುಂದುವರಿಸುತ್ತಿದ್ದ. ಆತನ ಉಪಟಳದಿಂದ ಸ್ಥಳೀಯರು ಹೈರಾಣಾಗಿ ಪೊಲೀಸರಿಗೆ ಮಾಹಿತಿ ನೀಡುತ್ತಿದ್ದರು. ಇತ್ತ ಪೊಲೀಸರು ಹಲವಾರು ಬಾರಿ ಬಂಧಿಸಿದರೂ ಆರೋಪಿಗೆ ಬುದ್ಧಿ ಬಂದಿರಲಿಲ್ಲ. ಕೆಲ ದಿನಗಳ ಹಿಂದೆ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದಾಗ ಮತ್ತೆ ಡಿಜೆ ಹಳ್ಳಿ ಪೊಲೀಸರ ಬಲೆಗೆ ಬಿದ್ದಿದ್ದ. ಈ ಬಾರಿ ಪೊಲೀಸರು ಆತನನ್ನು ಮಹಜರು
ನಡೆಸಲು ಆತನನ್ನು ಕರೆದುಕೊಂಡು ಹೋಗುವ ವೇಳೆ ಆತ ಕೃತ್ಯ ಎಸಗುತ್ತಿದ್ದ ಪ್ರದೇಶಗಳಲ್ಲಿ ಬೇಡಿ ಹಾಕಿ ಮೆರವಣಿಗೆ ಮಾದರಿಯಲ್ಲಿ ಕರೆದುಕೊಂಡು ಹೋಗಿದ್ದರು. ಈ ಮೂಲಕ ಆತನಿಂದ ಜನ ಸಾಮಾನ್ಯರು ಇನ್ನು ಭಯಪಡುವ ಅಗತ್ಯವಿಲ್ಲ ಎಂಬ ಸಂದೇಶವನ್ನು ಪರೋಕ್ಷವಾಗಿ ಸಾರಿದ್ದಾರೆ. ಇದನ್ನು ಕಂಡ ಸ್ಥಳೀಯರು ಪೊಲೀಸರ ಕಾರ್ಯಕ್ಕೆ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.