ನರೇಗಾ ನಿಯಮ ಉಲ್ಲಂಘಿಸಿ ರಸ್ತೆ ಕಾಮಗಾರಿ: ಕಿಡಿ
Team Udayavani, Dec 10, 2022, 3:52 PM IST
ಕನಕಪುರ: ನರೇಗಾ ನಿಯಮ ಉಲ್ಲಂಘಿಸಿ ನಡೆಸಿರುವ ಜೆಲ್ಲಿ ಮೆಟ್ಲಿಂಗ್ ರಸ್ತೆ ಕಾಮಗಾರಿಗೆ ಹಣಬಿಡುಗಡೆ ಮಾಡದೆ ತಡೆಹಿಡಿದು ಕ್ರಮ ಕೈಗೊಳ್ಳಬೇಕು ಎಂದು ಗುತ್ತಲ ಹುಣಸೆ ಗ್ರಾಮಸ್ಥರು ಜಿಲ್ಲಾ ಮತ್ತು ತಾಪಂ ಅಧಿಕಾರಿಗಳಿಗೆ ಒತ್ತಾಯಿಸಿದ್ದಾರೆ.
ತಾಲೂಕಿನ ಮರಳವಾಡಿ ಹೋಬಳಿಯ ತೂಕಸಂದ್ರ ಗ್ರಾಪಂ ವತಿಯಿಂದ ಗುತ್ತಲಹುಣಸೆಗ್ರಾಮದ ಪಾರ್ವತಮ್ಮನ ಕೆರೆಯ ಏರಿಯ ಮೇಲಿಂದ ಮಾದಯ್ಯನ ಜಮೀನಿನವರೆಗೆ ನರೇಗಾ ಯೋಜನೆಯಲ್ಲಿ 5 ಲಕ್ಷ ರೂ. ಅಂದಾಜು ವೆಚ್ಚದಲ್ಲಿ 9 ಮಾನವ ದಿನಗಳಲ್ಲಿ ಜಲ್ಲಿ ಮೆಟ್ಲಿಂಗ್ ಕಾಮಗಾರಿ ಕೈಗೆತ್ತಿಕೊಳ್ಳಲಾಗಿತ್ತು. ಆದರೆ, ಕಾಮಗಾರಿಯಲ್ಲಿ ಪಂಚಾಯತ್ ರಾಜ್ ಇಲಾಖೆ ಉದ್ದೇಶ ಮತ್ತುನಿಯಮ ಗಾಳಿಗೆ ತೋರಿ ಮಾನವ ಸಂಪನ್ಮೂಲಸರಿಯಾಗಿ ಬಳಸಿಕೊಳ್ಳದೆ ಬೇಕಾಬಿಟ್ಟಿಯಾಗಿಕಾಮಗಾರಿ ನಡೆಸಿದ್ದಾರೆ ಎಂಬುದು ಗ್ರಾಮಸ್ಥರ ಆರೋಪವಾಗಿದೆ.
ಸ್ಥಳೀಯವಾಗಿ ಗ್ರಾಮೀಣ ಭಾಗದ ಜನರಿಗೆ ಉದ್ಯೋಗ ಕಲ್ಪಿಸಿಕೊಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ನರೇಗಾ ಯೋಜನೆಯನ್ನು ಅನುಷ್ಠಾನ ಮಾಡುತ್ತದೆ.ಆದರೆ, ಮಾನವ ಸಂಪನ್ಮೂಲ ಬಳಸಿ ಮಾಡಬೇಕಾದ ಕಾಮಗಾರಿ ಜೆಸಿಬಿ ಯಂತ್ರ ಬಳಸಿಕೊಂಡು ಕಾಮಗಾರಿ ಮುಗಿಸಿ ಸ್ಥಳೀಯ ಜನರಿಗೆ ಉದ್ಯೋಗ ವಂಚಿತರನ್ನಾಗಿ ಮಾಡಿ ತರಾತುರಿಯಲ್ಲಿ ಮೂರು ದಿನದಲ್ಲೇ ಕಾಮಗಾರಿ ಮಾಡಿ ಮುಗಿಸಿದ್ದು, ಮಾನವ ಸಂಪನ್ಮೂಲ ಬಳಸಿ ಕಾಮಗಾರಿ ಮಾಡಿರುವಂತೆ ಬಿಂಬಿಸಲು ಹೊರಟ್ಟಿದ್ದಾರೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ದೂರು ಸಲ್ಲಿಸಲಾಗಿದೆ: ಕಾಮಗಾರಿ ಮುಗಿದಿರುವ ಸ್ಥಳದಲ್ಲಿ ಏನು ಅರಿಯದ ಮುಗ್ಧ ಜನರನ್ನು ನಿಲ್ಲಿಸಿ ಮಾನವ ಸಂಪನ್ಮೂಲ ಬಳಸಿ ಕಾಮಗಾರಿನಡೆಸಿರುವುದಾಗಿ ದಾಖಲೆ ಸೃಷ್ಟಿಸಲು ಕಾಯಕ ಬಂಧು ಸಿಬ್ಬಂದಿಗಳಿಂದ ಭಾವಚಿತ್ರ ತೆಗೆಸಿ ಎನ್ ಎಂಎಂಎಸ್ ಮಾಡುತ್ತಿದ್ದಾರೆ. ಈ ಸಂಬಂಧ ಈಗಾಗಲೇ ಗ್ರಾಪಂ ಅಧಿಕಾರಿಗಳಿಗೆ ದೂರು ಸಲ್ಲಿಸಲಾಗಿದೆ. ಆದರೆ, ಯಾವುದೇ ಪ್ರಯೋಜನವಾಗಿಲ್ಲ. ಗ್ರಾಪಂ ಅಧಿಕಾರಿಗಳು ನಿಯಮ ಉಲ್ಲಂಘಿಸಿ ಕಾಮಗಾರಿ ಕೈಗೊಂಡವರ ಬೆನ್ನಿಗೆ ನಿಂತಿದ್ದಾರೆ. ಜಿಲ್ಲಾ ಮತ್ತು ತಾಪಂ ಅಧಿಕಾರಿಗಳು ನಿಯಮ ಉಲ್ಲಂಘಿಸಿ ನಡೆದಿರುವ ಕಾಮಗಾರಿ ಹಣ ಬಿಡುಗಡೆಗೆ ಮಾಡದಂತೆ ತಡೆ ಹಿಡಿದು ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕು ಎಂದು ಗೊತ್ತಲಹಣಸೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.
ತೂಕಸಂದ್ರ ಗ್ರಾಮಸ್ಥರು ನೀಡಿದ ದೂರಿನ ಮೇರೆಗೆ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದೇವೆ.ಕಾಮಗಾರಿಯನ್ನು ಯಂತ್ರದಲ್ಲಿಮಾಡಿರುವುದಾಗಲಿ ಮತ್ತು ಯಾವುದೇ ಲೋಪ ಕಂಡು ಬಂದಿಲ್ಲ. – ಶ್ರೀಧರ್, ತೋಕಸಂದ್ರ ಗ್ರಾಪಂ ಪ್ರಭಾರ ಪಿಡಿಒ
ನರೇಗಾ ನಿಯಮ ಉಲ್ಲಂಘಿಸಿಜೆಸಿಬಿಯಲ್ಲಿ ಕಾಮಗಾರಿ ಮಾಡಿದ್ದಾರೆ. ಕೂಲಿ ಚೀಟಿ ಫಲಾನುಭವಿಗಳಿಗೆ 9 ದಿನ ಉದ್ಯೋಗ ಕೊಡದೆ ಯಂತ್ರದ ಮೂಲಕ ಮೂರು ದಿನದಲ್ಲಿ ಕಾಮಗಾರಿ ಮಾಡಿದ್ದಾರೆ. ಅನುದಾನ ತಡೆ ಹಿಡಿದು ಕ್ರಮಕೈಗೊಳ್ಳಬೇಕು– ಪ್ರದೀಪ್, ಗುತ್ತಲಹುಣಸೆ ಗ್ರಾಮಸ್ಥ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್ ಗೆ ಹೊಡೆದ ಯುವಕ!
BJP MLA Munirathna: ನನಗೇ ಹನಿಟ್ರ್ಯಾಪ್ ಮಾಡಲು ಮುಂದಾಗಿದ್ದರು
ರಾಜಕಾರಣಿಗಳನ್ನು ಹನಿಟ್ರ್ಯಾಪ್ ಮಾಡುತ್ತಿದ್ದರಾ ಮುನಿರತ್ನ?
Channapatnam by-election: ಡಿಕೆಸು ಕೈ ಅಭ್ಯರ್ಥಿ ಮಾಡಲು ಕಾರ್ಯಕರ್ತರ ಒತ್ತಡ
Munirathna: ಮುನಿರತ್ನ ವಿರುದ್ಧ ಅತ್ಯಾಚಾರ, ಹನಿಟ್ರ್ಯಾಪ್ ಆರೋಪ ಮಾಡಿದ ಮಹಿಳೆ; ಎಫ್ಐಆರ್
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
INDvsBAN; ಬಸವಳಿದ ಬಾಂಗ್ಲಾ ಎದುರು ಪಂತ್-ಗಿಲ್ ಸೂಪರ್ ಶತಕ; ಡಿಕ್ಲೇರ್ ಘೋಷಿಸಿದ ಭಾರತ
Mahalingapura: ಗಮನ ಸೆಳೆದ ಮಹಾಲಿಂಗೇಶ್ವರ ಜಾತ್ರೆಯ ರಾಷ್ಟ್ರಮಟ್ಟದ ಕುಸ್ತಿ ಪಂದ್ಯಾವಳಿ…
Desi Swara: ಮೊಂತಿ ಆಚರಣೆ- ವರ್ಷದ ಮೊದಲ ಸುಗ್ಗಿ ಸಂಭ್ರಮ
Alanda: ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು
Parvin Dabas: ಬಾಲಿವುಡ್ ನಟ ಪರ್ವಿನ್ ದಾಬಾಸ್ ಕಾರು ಅಪಘಾತ… ಐಸಿಯುನಲ್ಲಿ ಚಿಕಿತ್ಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.