ಆಸ್ಪತ್ರೆಗಳು ಬಡವರ ಆರೋಗ್ಯ ಕಾಪಾಡಲಿ; ಸಚಿವ ಪ್ರಹ್ಲಾದ ಜೋಶಿ

ಕಳೆದ 25 ವರ್ಷಗಳಿಂದ ವೈದ್ಯಕೀಯ ಕ್ಷೇತ್ರದಲ್ಲಿ ದೊಡ್ಡ ಕ್ರಾಂತಿ ಆಗುತ್ತಿದೆ.

Team Udayavani, Dec 12, 2022, 6:34 PM IST

ಆಸ್ಪತ್ರೆಗಳು ಬಡವರ ಆರೋಗ್ಯ ಕಾಪಾಡಲಿ; ಸಚಿವ ಪ್ರಹ್ಲಾದ ಜೋಶಿ

ಹುಬ್ಬಳ್ಳಿ: ಬಡವರ ದುಡಿಮೆಯಿಂದಲೇ ದೇಶ ನಡೆಯುತ್ತಿದ್ದು, ದೇಶದ ಅಭಿವೃದ್ಧಿಯಲ್ಲಿ ಅವರ ಕೊಡುಗೆ ಸಾಕಷ್ಟಿದೆ. ಆದ್ದರಿಂದ ಅವರಿಗೆ ಉತ್ತಮ ಸೌಲಭ್ಯ ದೊರಕಬೇಕು. ಆ ನಿಟ್ಟಿನಲ್ಲಿ ಆಸ್ಪತ್ರೆಗಳು ತಮ್ಮ ಆದಾಯದಲ್ಲಿನ ಒಂದಿಷ್ಟು ಭಾಗವನ್ನು ಬಡವರಿಗಾಗಿ ಮೀಸಲಿಟ್ಟು ಅವರ ಆರೋಗ್ಯ ಕಾಪಾಡಬೇಕು ಎಂದು ಕೇಂದ್ರ ಸಂಸದೀಯ ವ್ಯವಹಾರಗಳು, ಕಲ್ಲಿದ್ದಲು ಮತ್ತು ಗಣಿ ಸಚಿವ ಪ್ರಹ್ಲಾದ ಜೋಶಿ ಹೇಳಿದರು.

ಇಲ್ಲಿನ ಗೋಕುಲ ರಸ್ತೆಯ ಕೆಎಸ್‌ಆರ್‌ಟಿಸಿ ಡಿಪೋ ವೃತ್ತ ಬಳಿ ಆರಂಭಿಸಲಾದ ನಿರಾಮಯ ಮೆಡಿಕಲ್‌ ಸೆಂಟರ್‌ ಹಾಗೂ ಹುಬ್ಬಳ್ಳಿ ಸ್ಕ್ಯಾನ್‌ ಸೆಂಟರ್‌ನ ಹೈಟೆಕ್‌ ಡೈಗ್ನೊಸ್ಟಿಕ್‌ ಮತ್ತು ಎಂಆರ್‌ಐ ಪಾಲಿಕ್ಲಿನಿಕ್‌ ಒಪಿಡಿ ಕೇಂದ್ರವನ್ನು ರವಿವಾರ ಉದ್ಘಾಟಿಸಿ ಅವರು ಮಾತನಾಡಿದರು.

ಒಂದು ಕಾಲದಲ್ಲಿ ಭಾರತದಲ್ಲಿ ವಿದ್ಯೆ, ಔಷಧಿ ಮಾರಾಟ ಮಾಡಬಾರದೆಂಬ ಪರಿಕಲ್ಪನೆ ಇತ್ತು. ಸಮಯ ಬದಲಾದಂತೆ ಅದು ಬದಲಾಗಿದೆ. ಅದರಂತೆ ಮಾಡಬೇಕೆಂದಿಲ್ಲ. ಆದರೆ ರೋಗಿಗಳು ವೈದ್ಯರ ಬಳಿ ಬಂದಾಗ ತೃಪ್ತಿಗೊಳ್ಳಬೇಕು. ಅವರಲ್ಲಿ ಆತ್ಮವಿಶ್ವಾಸ ಮೂಡಿಸಬೇಕು. ರೋಗಿಗಳಿಗೆ ತಿಳಿಯುವ ಭಾಷೆಯಲ್ಲಿ ಹೇಳಬೇಕು. ಸಮಾಜ ಕೊಟ್ಟಿದ್ದರಲ್ಲಿ ಕೆಲಭಾಗವನ್ನು ಬಡವರಿಗಾಗಿ ನೀಡಬೇಕು. ಅವರಿಗೆ ಒಂದಿಷ್ಟು ಉತ್ಕೃಷ್ಟ ಸೇವೆ ಒದಗಿಸಬೇಕು. ಅದರಿಂದ
ನಿಮಗೆ-ನಿಮ್ಮ ಕುಟುಂಬದವರಿಗೆ ಪುಣ್ಯ ಲಭಿಸುತ್ತದೆ.ಆಸ್ಪತ್ರೆಗೆ ಆಗಮಿಸುವ ರೋಗಿಗಳು ಗುಣಮುಖರಾಗಿ ಆತ್ಮವಿಶ್ವಾಸ ಹಾಗೂ ನಗುಮೊಗದಿಂದ ಮನೆಗೆ ತೆರಳಬೇಕು. ಅಂತಹ ಸೇವೆ ದೊರಕಬೇಕು ಎಂದರು.

2027ರಲ್ಲಿ ಭಾರತವು ಆರ್ಥಿಕತೆಯಲ್ಲಿ ವಿಶ್ವದಲ್ಲಿ 3ನೇ ಸ್ಥಾನ, 2047ರಲ್ಲಿ 1ನೇ ಸ್ಥಾನ ಹೊಂದಲಿದೆ ಎಂದು ಸಂಶೋಧಕರು ಹೇಳಿದ್ದಾರೆ. ಅದಕ್ಕೆ ತಕ್ಕಂತೆ ನಾವು ವಿಶ್ವದ ಜನರ ಅಪೇಕ್ಷೆ ನೆರವೇರಿಸಬೇಕಿದೆ ಎಂದರು.

ವಿಆರ್‌ಎಲ್‌ ಸಮೂಹ ಸಂಸ್ಥೆಗಳ ಚೇರ್ಮನ್‌ ಡಾ| ವಿಜಯ ಸಂಕೇಶ್ವರ ಮಾತನಾಡಿ, ಮೊದಲು ಈ ಭಾಗದ ರೋಗಿಗಳು ಸಣ್ಣ ಸಮಸ್ಯೆಗಳಿಗೂ ಕೂಡ ಮುಂಬಯಿ, ಬೆಂಗಳೂರುಗಳತ್ತ ಮುಖ ಮಾಡಬೇಕಿತ್ತು. ಇದು ವಿಶೇಷವಾಗಿ ಆರ್ಥಿಕವಾಗಿ ಹಿಂದುಳಿದವರಿಗೆ ಸಾಧ್ಯವಾಗುತ್ತಿರಲಿಲ್ಲ. ಆದರೆ ಕಳೆದ 25 ವರ್ಷಗಳಿಂದ ವೈದ್ಯಕೀಯ ಕ್ಷೇತ್ರದಲ್ಲಿ ದೊಡ್ಡ ಕ್ರಾಂತಿ ಆಗುತ್ತಿದೆ. ಬಹಳಷ್ಟು ತಜ್ಞರು ಹು-ಧಾಗೆ ಆಗಮಿಸುತ್ತಿದ್ದಾರೆ. ತಂತ್ರಜ್ಞಾನದಲ್ಲೂ ಉತ್ತಮವಾಗಿ
ಬೆಳೆದಿದೆ. ಪ್ರತಿವರ್ಷ ಒಂದು ಅತ್ಯುತ್ತಮ ವೈದ್ಯಕೀಯ ಸೇವಾ ಕೇಂದ್ರಗಳು ಆರಂಭವಾಗಬೇಕು.

ಇದರಿಂದ ವೈದ್ಯರು-ರೋಗಿಗಳಿಗೆ ಸಾಕಷ್ಟು ಅನುಕೂಲವಾಗಲಿದೆ. ದರ-ದಕ್ಷತೆಯ ಫಲಿತಾಂಶ ದೊರೆಯುತ್ತದೆ. ವೈದ್ಯರು ಹೆಚ್ಚು ಕೌಶಲ್ಯ ವೃದ್ಧಿಸಿಕೊಳ್ಳಬೇಕು. ವಿಶೇಷ ಯಂತ್ರಗಳನ್ನು ಸೇರ್ಪಡೆ ಮಾಡಿಕೊಳ್ಳಬೇಕು. ಆ ಮೂಲಕ ರೋಗಿಗಳು ಬೇರೆ ರಾಜ್ಯ, ಪ್ರದೇಶಗಳಿಗೆ ಹೋಗದಂತೆ ತಮ್ಮತ್ತ ಸೆಳೆಯಬೇಕು ಎಂದರು.

ಹುಬ್ಬಳ್ಳಿ ಸ್ಕ್ಯಾನ್‌ ಸೆಂಟರ್‌ನ ಚೇರ್ಮನ್‌ ಡಾ|ಸಂಜೀವ ಕಳಸೂರ ಮಾತನಾಡಿದರು. ಮಹಾಪೌರ ಈರೇಶ ಅಂಚಟಗೇರಿ, ಮಾಜಿ ಶಾಸಕ ಅಶೋಕ ಕಾಟವೆ, ಡಾ| ದತ್ತಾ ನಾಡಗೇರ, ಡಾ|ಎಸ್‌.ಪಿ. ಬಳಿಗಾರ, ಡಾ|ಬಿ.ಆರ್‌. ಪಾಟೀಲ, ಡಾ|ಜಿ.ಬಿ.ಸತ್ತೂರ, ಹುಬ್ಬಳ್ಳಿ ಸ್ಕ್ಯಾನ್‌ ಸೆಂಟರ್‌ನ ಎಂಡಿ ಡಾ|ಚಂದ್ರಕಾಂತ ಕಾಟವೆ, ಡಾ|ರಾಜೇಶ ರೇವಣಕರ ಮೊದಲಾದವರಿದ್ದರು. ಡಾ|ವಿವೇಕ ಪಾಟೀಲ ನಿರೂಪಿಸಿದರು.

ಟಾಪ್ ನ್ಯೂಸ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Train: ರೈಲು ಢಿಕ್ಕಿ ತಡೆಯಲು ಉಪಕ್ರಮ: ನೈಋತ್ಯ ರೈಲ್ವೇಗೆ ಮೊದಲ ಬಾರಿ “ಕವಚ’

Train: ರೈಲು ಢಿಕ್ಕಿ ತಡೆಯಲು ಉಪಕ್ರಮ: ನೈಋತ್ಯ ರೈಲ್ವೇಗೆ ಮೊದಲ ಬಾರಿ “ಕವಚ’

ಮೂವರು ಲೇಖಕಿಯರಿಗೆ ಕವಿಸಂ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಆಯ್ಕೆ

ಮೂವರು ಲೇಖಕಿಯರಿಗೆ ಕವಿಸಂ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಆಯ್ಕೆ

8

Dharwad: ಪಂ.ಮನಸೂರ ಸಂಗೀತ ಪಾಠ ಶಾಲೆ ಮತ್ತೆ ಆರಂಭ; ಜಿಲ್ಲಾಧಿಕಾರಿ ದಿವ್ಯ ಪ್ರಭು

Hubli: Police seize Rs 89.99 lakhs being transported without documents

Hubli: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89.99 ಲಕ್ಷ ರೂ ಪೊಲೀಸ್‌ ವಶಕ್ಕೆ

ED summons case: Temporary relief for Siddaramaiah’s wife Parvathi, Bairati Suresh

ED summons: ಸಿದ್ದರಾಮಯ್ಯ ಪತ್ನಿ ಪಾರ್ವತಿ, ಬೈರತಿ ಸುರೇಶಗೆ ತಾತ್ಕಾಲಿಕ ರಿಲೀಫ್

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.