3 ಕಡಲತೀರಕ್ಕೆ ಶೀಘ್ರ ಹೊಸ ಮೆರುಗು: ತಣ್ಣೀರುಬಾವಿಗೆ ಬ್ಲೂಫ್ಲ್ಯಾಗ್‌, ಪಣಂಬೂರು, ಸಸಿಹಿತ್ಲು ಬೀಚ್‌ಗಳಿಗೂ ಯೋಜನೆ


Team Udayavani, Dec 13, 2022, 6:10 AM IST

3 ಕಡಲತೀರಕ್ಕೆ ಶೀಘ್ರ ಹೊಸ ಮೆರುಗು: ತಣ್ಣೀರುಬಾವಿಗೆ ಬ್ಲೂಫ್ಲ್ಯಾಗ್‌, ಪಣಂಬೂರು, ಸಸಿಹಿತ್ಲು ಬೀಚ್‌ಗಳಿಗೂ ಯೋಜನೆ

ಮಹಾನಗರ : ಕರಾವಳಿ ಪ್ರವಾಸೋದ್ಯಮದ ಪ್ರಮುಖ ಭಾಗವಾಗಿರುವ ಜಿಲ್ಲೆಯ 3 ಕಡಲ ತೀರಗಳನ್ನು ಆಕರ್ಷಕಗೊಳಿಸುವ ಮೂಲಕ ಪ್ರವಾಸಿಗರನ್ನು ಸೆಳೆಯಲು ಪ್ರವಾಸೋದ್ಯಮ ಇಲಾಖೆ ಮುಂದಾಗಿದೆ.

ಮಂಗಳೂರಿನ ತಣ್ಣೀರುಬಾವಿ ಕಡಲತೀರ ಈಗಾಗಲೇ ಬ್ಲೂಫ್ಲ್ಯಾಗ್‌ ಯೋಜನೆಯಡಿ ಆಯ್ಕೆಯಾಗಿದ್ದರೆ, ಅತ್ಯಧಿಕ ಜನರನ್ನು ಆಕರ್ಷಿಸುವ ಪಣಂಬೂರು ಕಡಲತೀರದ ಅಭಿವೃದ್ಧಿಗೂ ಪಿಪಿಪಿ ಅಡಿಯಲ್ಲಿ ಯೋಜನೆ ಜಾರಿಗೊಂಡಿದೆ. ಇನ್ನು ಸರ್ಫಿಂಗ್‌ ಖ್ಯಾತಿಯ ಸಸಿಹಿತ್ಲು ಬೀಚ್‌ನಲ್ಲಿ ಅರಣ್ಯ ಇಲಾಖೆಯ ಸಹಯೋಗದೊಂದಿಗೆ ಜಂಗಲ್‌ ಲಾಡ್ಜಸ್‌ ಅಭಿವೃದ್ಧಿಗೆ ಮುಂದಾಗಿದೆ.

ತಣ್ಣೀರುಬಾವಿ ಕಡಲತೀರದ ಅಭಿವೃದ್ಧಿ ಕಾರ್ಯ ಈಗಾಗಲೇ ಆರಂಭವಾಗಿದೆ. ವೃಕ್ಷೋದ್ಯಾನದ ಜತೆಗೆ ಈ ಕಡಲತೀರ ಹೆಚ್ಚು ಸ್ವತ್ಛವಾಗಿರುವುದು ಹಾಗೂ ಬ್ಲೂಫ್ಲ್ಯಾಗ್‌ ಗುರು
ತಿಸುವಿಕೆಗೆ ಪೂರಕ ಅರ್ಹತೆಗಳನ್ನು ಹೊಂದಿದ್ದ ಕಾರಣ ಆಯ್ಕೆ ಮಾಡಲಾಗಿದೆ. ಅದರ ಅಭಿವೃದ್ಧಿ ಕಾರ್ಯವನ್ನೂ ಕೇಂದ್ರ ಸರಕಾರವೇ ಟೆಂಡರ್‌ ಮೂಲಕ ಬಿವಿಜಿ ಕಂಪೆನಿಗೆ ನೀಡಿದೆ.

ಈಗಾಗಲೇ ಈ ಕಡಲತೀರವನ್ನು ಬ್ಲೂಫ್ಲ್ಯಾಗ್‌ ಮಾನದಂಡಗಳಿಗೆ ಅನುಗುಣವಾಗಿ ಪೂರ್ಣವಾಗಿ ಪರಿವರ್ತಿಸುವ ಕೆಲಸ ಪ್ರಾರಂಭಗೊಂಡಿದೆ. ಸೆಪ್ಟಂಬರ್‌ನಲ್ಲಷ್ಟೇ ಕಾರ್ಯಾದೇಶ ನೀಡಲಾಗಿತ್ತು. ಯಾವುದೇ ರೀತಿಯಲ್ಲೂ ಕರಾವಳಿ ನಿಯಂತ್ರಣ ವಲಯದ ಮಾರ್ಗಸೂಚಿಯನ್ನು ಉಲ್ಲಂಘಿಸದೆ ಬಿದಿರು ಮುಂತಾದ ಪರಿಸರ ಪೂರಕ ವಸ್ತುಗಳನ್ನು ಬಳಸಿ ಕೊಂಡು ಶೌಚಾಲಯ, ವಸ್ತ್ರ ಬದಲಾವಣೆ ಕೊಠಡಿ, ವೀಕ್ಷಣ ಗೋಪುರ, ಸೋಲಾರ್‌ ಟವರ್‌, ತ್ಯಾಜ್ಯ ಸಂಸ್ಕರಣ ಘಟಕಗಳನ್ನು ನಿರ್ಮಿಸ ಲಾಗುತ್ತದೆ. 2 ವರ್ಷ ಪೂರ್ಣ ನಿರ್ವ ಹಣೆಯ ಬಳಿಕ ಬಿವಿಜಿ ಕಂಪೆನಿ ಇದನ್ನು ಪ್ರವಾಸೋದ್ಯಮ ಇಲಾಖೆಗೆ ಹಸ್ತಾಂತರಿಸಲಿದೆ.

ಪಣಂಬೂರು ಬೀಚ್‌ಗೆ ವಾಟರ್‌ಸ್ಪೋರ್ಟ್
ಪಣಂಬೂರು ಬೀಚ್‌ ಹೆಚ್ಚು ಮಂದಿಯನ್ನು ಸೆಳೆಯುವ ಬೀಚ್‌ ಆಗಿದ್ದರೂ ಕೆಲವು ವರ್ಷಗಳಿಂದ ನಿರ್ವಹಣೆಯಿಲ್ಲದೆ ಸೊರಗಿತ್ತು. ಈ ಬಾರಿ ಜಿಲ್ಲಾಡಳಿತ ಇದರ ನಿರ್ವಹಣೆಯ ಹೊಣೆಯನ್ನು ಭಂಡಾರಿ ಬಿಲ್ಡರ್ಗೆ ನೀಡಿದೆ.

10 ವರ್ಷಗಳ ಕಾಲ ಈ ಸಂಸ್ಥೆ ಪಣಂಬೂರು ಬೀಚ್‌ ಅಭಿವೃದ್ಧಿ ಹಾಗೂ ನಿರ್ವಹಣೆ ಮಾಡಲಿದೆ. ಮುಖ್ಯವಾಗಿ ಕಯಾಕಿಂಗ್‌, ಜೆಟ್‌ ಸ್ಕೀಯಿಂಗ್‌, ಬನಾನಾ ರೈಡ್‌ ಸಹಿತ ಹಲವು ರೀತಿಯ ಸಮುದ್ರ ಕ್ರೀಡೆಗಳನ್ನು ಪರಿಚಯಿಸಲಿದೆ. ಸೀಪ್ಲೇನ್‌ ಕೂಡ ಪರಿಚಯಿಸುವ ಸಾಧ್ಯತೆ ಇದೆ.

ಸುಸಜ್ಜಿತ ಮಳಿಗೆಗಳು, ಕಾಟೇಜ್‌ಗಳು, ಸಿಸಿ ಕೆಮರಾ, ಹೈಮಾಸ್ಟ್‌ ದೀಪಗಳ ಅಳವಡಿಕೆ, ಗಾರ್ಡ್‌ ಟವರ್‌, ಶೌಚಾಲಯ, ಡ್ರೈನೇಜ್‌ ಸಂಸ್ಕರಣ ಸ್ಥಾವರ ಅಳವಡಿಸಲಾಗುತ್ತದೆ. ಮುಖವಾಗಿ ಪಣಂಬೂರು ಬೀಚ್‌ ಅಪಾಯಕಾರಿಯಾಗಿರುವುದರಿಂದ ಜನರ ಸುರಕ್ಷೆಗಾಗಿ ಜೀವ ರಕ್ಷಕರ ತಂಡವನ್ನೂ ನಿಯೋಜಿಸಲಾಗುತ್ತದೆ. ಭಂಡಾರಿ ಸಂಸ್ಥೆಗೆ ನವೆಂಬರ್‌ನಲ್ಲಿ ಕಾರ್ಯಾದೇಶ ನೀಡಲಾಗಿದೆ.

ಸಸಿಹಿತ್ಲುಗೆ ಜಂಗಲ್‌ ಲಾಡ್ಜಸ್‌
ಪ್ರವಾಸಿಗರಿಗೆ ಸುವಿಹಾರಿ ವ್ಯವಸ್ಥೆಗಳನ್ನು ಕಲ್ಪಿಸಬೇಕು ಹಾಗೂ ಅವರನ್ನು ಕಡಲತೀರಕ್ಕೆ ಸೆಳೆಯುವ ಸಲುವಾಗಿ ಸಸಿಹಿತ್ಲುವಿನ ಸುಮಾರು 29.5 ಎಕ್ರೆಯಷ್ಟು ಜಾಗದಲ್ಲಿ ಪ್ರವಾಸೋದ್ಯಮ ಇಲಾಖೆ ಹಾಗೂ ಅರಣ್ಯ ಇಲಾಖೆ ಸಹಯೋಗದೊಂದಿಗೆ ಜಂಗಲ್‌ ಲಾಡ್ಜಸ್‌ ರಿಸಾರ್ಟ್‌ ನಿರ್ಮಾಣಕ್ಕೆ ಮುಂದಾಗಿವೆ. 10 ಕೋಟಿ ರೂ. ಯೋಜನೆಗಾಗಿ ಈಗಾಗಲೇ 5 ಕೋಟಿ ರೂ. ಮಂಜೂರಾಗಿದೆ. ಇದರ ಡಿಪಿಆರ್‌ಇನ್ನಷ್ಟೇ ತಯಾರಾಗಬೇಕಿದೆ.

ಬ್ಲೂಫ್ಲ್ಯಾಗ್‌ ನಿಗಾ
ಈ ಬಾರಿ ಇಡೀ ದೇಶದಲ್ಲೇ ಬ್ಲೂಫ್ಲ್ಯಾಗ್‌ ಕಾರ್ಯಕ್ರಮದಡಿ ಆಯ್ಕೆಯಾದ ಮೂರು ಬೀಚ್‌ಗಳಲ್ಲಿ ಒಂದು ತಣ್ಣೀರುಬಾವಿ. ಕರಾವಳಿಯಲ್ಲಿ ಸದ್ಯ ಇರುವ ಇಂತಹ ಇನ್ನೊಂದು ಬೀಚ್‌ ಪಡುಬಿದ್ರಿ. ಇದೇ ಕಾರ್ಯಕ್ರಮಕ್ಕೆ ಇಡ್ಯಾ ಬೀಚ್‌ನ ಪ್ರಸ್ತಾವನೆ ಸಲ್ಲಿಸಿದ್ದರೂ ಆಯ್ಕೆಯಾಗಿರಲಿಲ್ಲ. ಸ್ವತ್ಛತೆ, ಕಡಲ ನೀರಿನ ಸ್ವತ್ಛತೆ ಅತಿ ಮುಖ್ಯವಾಗಿದ್ದು, ಆಗಾಗ ಅದನ್ನು ತಜ್ಞರ ತಂಡ ಪರಿಶೀಲಿಸುತ್ತದೆ. ಮಾನದಂಡಕ್ಕನುಗುಣವಾಗಿ ಇರಲೇಬೇಕಾಗುತ್ತದೆ. ಮುಖ್ಯವಾಗಿ ಬ್ಲೂಫ್ಲ್ಯಾಗ್‌ ಬೀಚ್‌ನ ವ್ಯಾಪ್ತಿಯ ಸುಮಾರು 400 ಮೀಟರ್‌ ವ್ಯಾಪ್ತಿಯ ಸಮುದ್ರದಲ್ಲಿ
ಬೋಟ್‌ ಸಂಚರಿಸುವುದಕ್ಕೂ ಅವಕಾಶವಿಲ್ಲ, ಮಾಲಿನ್ಯವಾಗ ಬಾರದು ಎಂಬುದು ಉದ್ದೇಶ.

ಪ್ರವಾಸೋದ್ಯಮ ಏರುಗತಿಯಲ್ಲಿರು ವಾಗಲೇ ನಮ್ಮ ವ್ಯಾಪ್ತಿ ಯಲ್ಲಿಯ ಮೂರು ಬೀಚ್‌ಗಳನ್ನು ಪ್ರವಾಸಿ ಸ್ನೇಹಿ ಹಾಗೂ ಆಕರ್ಷಕಗೊಳಿಸಲಿದ್ದೇವೆ, ಪ್ರವಾಸಿಗರು ಇಲ್ಲಿನ ಕಡಲಿನ ಸೌಂದರ್ಯ ಸವಿಯುವ ನಿಟ್ಟಿನಲ್ಲಿ ಈ ಯೋಜನೆಗಳಿವೆ.
-ಎನ್‌. ಮಾಣಿಕ್ಯ, ಉಪನಿರ್ದೇಶಕರು, ಪ್ರವಾಸೋದ್ಯಮ ಇಲಾಖೆ, ಮಂಗಳೂರು

– ವೇಣುವಿನೋದ್‌ ಕೆ.ಎಸ್‌.

ಟಾಪ್ ನ್ಯೂಸ್

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11

Kulai: ಬೃಹತ್‌ ಟ್ರಕ್‌ ಓಡಾಟದಿಂದ ರಸ್ತೆಗೆ ಹಾನಿ

10

Lalbagh: ಪಾಲಿಕೆ ಚುನಾವಣೆ ಸನ್ನಿಹಿತ; ಮೀಸಲಾತಿಯದೇ ಆತಂಕ!

7–ullala

Ullala: ಇನ್ಸ್‌ಪೆಕ್ಟರ್ ಕೊಠಡಿಯೊಳಗೆಯೇ ಹಿಂದೂ ಸಂಘಟನೆ ಮುಖಂಡನಿಗೆ ಮುಸ್ಲಿಂ ಯುವಕ ಹಲ್ಲೆ

7

Mangaluru: ನಿತ್ಯ ಟ್ರಾಫಿಕ್‌ ಜಾಮ್‌ ಗೋಳು; ವಾಹನ ಸವಾರರ ಪರದಾಟ

Crime

Mangaluru: ಬಸ್‌ ನಿರ್ವಾಹಕನ ಕೊಲೆ; ಆರೋಪಿಗಳ ಸುಳಿವು ಲಭ್ಯ?

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.