ಮಹದಾಯಿ ವಿವಾದವಾಗಲು ಕಾಂಗ್ರೆಸ್‌ ಕಾರಣ: ಸಿಎಂ ಬೊಮ್ಮಾಯಿ


Team Udayavani, Dec 13, 2022, 8:21 PM IST

ಮಹದಾಯಿ ವಿವಾದವಾಗಲು ಕಾಂಗ್ರೆಸ್‌ ಕಾರಣ: ಸಿಎಂ ಬೊಮ್ಮಾಯಿ

ಮೈಸೂರು: ಕಾಂಗ್ರೆಸ್‌ ಪಕ್ಷ ಏನು ಎಂಬುದು ಜನರಿಗೆ ಗೊತ್ತಿದೆ. ಅವರೀಗ ಜಲ ಮತ್ತು ಎಸ್ಸಿ/ಎಸ್ಟಿ ಮೀಸಲಾತಿ ವಿಚಾರದ ಬಗ್ಗೆ ಸಮಾವೇಶ ಮಾಡುತ್ತಿದ್ದಾರೆ. ಆದರೆ ಮಹದಾಯಿ ವಿವಾದವಾಗಲು ಕಾಂಗ್ರೆಸ್‌ ಕಾರಣ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ನಗರದ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಸೋನಿಯಾ ಗಾಂಧಿ ಗೋವಾ ಚುನಾವಣೆಗೆ ಹೋಗಿ ಮಹದಾಯಿಯ ಒಂದು ಹನಿ ನೀರನ್ನೂ ಕೊಡಲ್ಲ ಎಂದದ್ದು ಜನ ಮರೆತಿಲ್ಲ ಎಂದು ವಾಗ್ಧಾಳಿ ನಡೆಸಿದರು.

ಕಾಂಗ್ರೆಸ್‌ ನವರು ಐದು ವರ್ಷ ಅಧಿಕಾರದಲ್ಲಿ ಏನು ಮಾಡಿದರು? ಕೆನಾಲ್‌ಗೆ ಅಡ್ಡಲಾಗಿ ನೀರು ಬರಬಾರದೆಂದು ಗೋಡೆ ಕಟ್ಟಿಸಿದರು. ಕೃಷ್ಣಾ ವಿಚಾರದಲ್ಲೂ ನಮ್ಮ ಹಕ್ಕನ್ನು ಮಂಡಿಸಲು ಮೀನಮೇಷ ಮಾಡಿದರು. ಇವರಿಗೆ ಯಾವ ನೈತಿಕತೆ ಇದೆ? ಎಸ್‌ಸಿ, ಎಸ್‌ ಟಿ ಮೀಸಲಾತಿ ಬಗ್ಗೆ 40 ವರ್ಷವಾದರೂ ತಿರುಗಿ ನೋಡಿರಲಿಲ್ಲ. ನಿನ್ನೆ ಸಿದ್ದರಾಮಯ್ಯ ನಾವು ಅಧಿಕಾರಕ್ಕೆ ಬಂದರೆ ಪರಿಶಿಷ್ಟ ಜಾತಿಯ ಒಳ ಮೀಸಲಾತಿ ಜಾರಿಗೆ ತರುತ್ತೇವೆ ಎಂದು ಟ್ವೀಟ್‌ ಮಾಡಿದರು.

ಸಿದ್ದರಾಮಯ್ಯನವರು ಐದು ವರ್ಷ ಮುಖ್ಯಮಂತ್ರಿ ಆಗಿದ್ದರೂ ಆ ವರದಿ ಮಂಡನೆ ಮಾಡಲಿಲ್ಲ. ಮೊನ್ನೆ ನಡೆದ ಸಮಾವೇಶದಲ್ಲಿ ಇವರು ಹೋಗಿ ಕೇವಲ ದೀಪ ಹಚ್ಚಿ ಬಂದರು. ಇವೆಲ್ಲವೂ ಜನರ ಮನದಾಳದಲ್ಲಿ ಇದೆ. ಎಲ್ಲ ಮುಚ್ಚಿ ಹಾಕಿಕೊಳ್ಳಲು ಸಮಾವೇಶ ಮಾಡುತ್ತಿದ್ದಾರೆ. ಜನರನ್ನು ಪದೇ ಪದೆ ಮರಳು ಮಾಡಲು ಸಾಧ್ಯವಿಲ್ಲ ಎಂದು ತಿರುಗೇಟು ನೀಡಿದರು.

ಮಾಂಡೋಸ್‌ ಚಂಡಮಾರುತ ವಿಚಾರವಾಗಿ ಮಾತನಾಡಿ, ಕೆಲವೊಂದು ಗೊಂದಲಗಳಾಗಿವೆ, ಸಂಬಂಧಪಟ್ಟ ಇಲಾಖೆಯಿಂದ ವರದಿ ತರಸಿ ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದರು. ಸಂಪುಟ ವಿಸ್ತರಣೆ ಕುರಿತು ಮಾತನಾಡಿ, ಈಗ ಪ್ರಮುಖವಾಗಿರುವುದು ಗಡಿ ವಿಚಾರ. ಅಲ್ಲಿ ಏನಾದರೂ ಪ್ರಸ್ತಾಪ ಮಾಡಿದರೆ ಎಲ್ಲ ರೆಡಿ ಮಾಡಿಕೊಂಡು ಹೋಗಿರುತ್ತೇನೆ ಎಂದರು.

ಟಾಪ್ ನ್ಯೂಸ್

BJP 2

CM Siddaramaiah ಕಂಡಲ್ಲೆಲ್ಲ ಕಪ್ಪುಪಟ್ಟಿ ಪ್ರದರ್ಶನಕ್ಕೆ ಬಿಜೆಪಿ ಸಜ್ಜು

1-mali

Karnataka; ಮಳಿಗೆಯಲ್ಲಿ 10 ಸಿಬಂದಿ ಇದ್ದರೆ 24 ತಾಸೂ ವ್ಯವಹಾರಕ್ಕೆ ಅವಕಾಶ

Sunita williams

Sunita Williams;ಬಾಹ್ಯಾಕಾಶದಿಂದ ಕರೆ ತರುವ ಕಾರ್ಯ ಆರಂಭ

naksal (2)

Karnataka; ರಾಜ್ಯದ ಆರು ನಕ್ಸಲರಿಂದ ಶರಣಾಗತಿಗೆ ಒಲವು?

highcourt

Shame; ಕಾರ್ಮಿಕರ ಮಕ್ಕಳ ಹಣ ಅನ್ಯ ಉದ್ದೇಶಕ್ಕೆ: ಹೈಕೋರ್ಟ್‌ ಕಿಡಿ

Exam

SSLC ಪರೀಕ್ಷೆ ಪ್ರಶ್ನೆಪತ್ರಿಕೆ ಮತ್ತೆ ಸೋರಿಕೆ: ಅವಾಂತರ ಸೃಷ್ಟಿ

1-www

JDS ನಾಯಕ ಸೆರೆ; ಕೋಟಿ ರೂ. ಪಡೆದು ಸ್ವಾಮೀಜಿಗೆ ವಂಚನೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP 2

CM Siddaramaiah ಕಂಡಲ್ಲೆಲ್ಲ ಕಪ್ಪುಪಟ್ಟಿ ಪ್ರದರ್ಶನಕ್ಕೆ ಬಿಜೆಪಿ ಸಜ್ಜು

1-mali

Karnataka; ಮಳಿಗೆಯಲ್ಲಿ 10 ಸಿಬಂದಿ ಇದ್ದರೆ 24 ತಾಸೂ ವ್ಯವಹಾರಕ್ಕೆ ಅವಕಾಶ

naksal (2)

Karnataka; ರಾಜ್ಯದ ಆರು ನಕ್ಸಲರಿಂದ ಶರಣಾಗತಿಗೆ ಒಲವು?

highcourt

Shame; ಕಾರ್ಮಿಕರ ಮಕ್ಕಳ ಹಣ ಅನ್ಯ ಉದ್ದೇಶಕ್ಕೆ: ಹೈಕೋರ್ಟ್‌ ಕಿಡಿ

Exam

SSLC ಪರೀಕ್ಷೆ ಪ್ರಶ್ನೆಪತ್ರಿಕೆ ಮತ್ತೆ ಸೋರಿಕೆ: ಅವಾಂತರ ಸೃಷ್ಟಿ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

BJP 2

CM Siddaramaiah ಕಂಡಲ್ಲೆಲ್ಲ ಕಪ್ಪುಪಟ್ಟಿ ಪ್ರದರ್ಶನಕ್ಕೆ ಬಿಜೆಪಿ ಸಜ್ಜು

1-mali

Karnataka; ಮಳಿಗೆಯಲ್ಲಿ 10 ಸಿಬಂದಿ ಇದ್ದರೆ 24 ತಾಸೂ ವ್ಯವಹಾರಕ್ಕೆ ಅವಕಾಶ

Puttur: ತಿರುಪತಿ ಲಡ್ಡು ಅಪವಿತ್ರಗೊಳಿಸಿದವರ ವಿರುದ್ಧ ದೂರು ದಾಖಲು

Puttur: ತಿರುಪತಿ ಲಡ್ಡು ಅಪವಿತ್ರಗೊಳಿಸಿದವರ ವಿರುದ್ಧ ದೂರು ದಾಖಲು

Mangaluru: ಸೈಬರ್‌ ಕ್ರೈಂ ಅಧಿಕಾರಿ ಹೆಸರಿನಲ್ಲಿ ಬೆದರಿಸಿ 35 ಲ.ರೂ. ವಂಚನೆ

Mangaluru: ಸೈಬರ್‌ ಕ್ರೈಂ ಅಧಿಕಾರಿ ಹೆಸರಿನಲ್ಲಿ ಬೆದರಿಸಿ 35 ಲ.ರೂ. ವಂಚನೆ

Sunita williams

Sunita Williams;ಬಾಹ್ಯಾಕಾಶದಿಂದ ಕರೆ ತರುವ ಕಾರ್ಯ ಆರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.