![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Dec 14, 2022, 10:00 AM IST
ನವದೆಹಲಿ: ಭಾರೀ ಮಳೆ ಹಾಗೂ ಪ್ರವಾಹದಿಂದ ಭೂಕುಸಿತ ಉಂಟಾಗಿ 120 ಕ್ಕೂ ಹೆಚ್ಚು ಮಂದಿ ಮೃತಪಟ್ಟಿರುವ ಘಟನೆ ಡೆಮಾಕ್ರಟಿಕ್ ರಿಪಬ್ಲಿಕ್ ಆಫ್ ಕಾಂಗೋ ರಾಜಧಾನಿ ಕಿನ್ಶಾಸದಲ್ಲಿ ನಡೆದಿದೆ ಎಂದು ವರದಿಯಾಗಿದೆ.
ಭಾರೀ ಮಳೆಯಿಂದ ಪ್ರವಾಹ ಉಂಟಾಗಿದ್ದು, ರಸ್ತೆಗಳು ಕೆಸರುಮಯವಾಗಿದೆ. ಮನೆಗಳೆಲ್ಲಾ ಮುಳುಗಿ, ಭೂಕುಸಿತ ಉಂಟಾಗಿದೆ ಇದರ ಪರಿಣಾಮ 120 ಕ್ಕೂ ಹೆಚ್ಚು ಮಂದಿ ಸಾವಿಗೀಡಾಗಿದ್ದಾರೆ. ಕಿನ್ಶಾಸದಿಂದ ಮಟಾಡಿಯ ಮುಖ್ಯ ಬಂದರಿಗೆ ಸಂಪರ್ಕಿಸುವ ರಸ್ತೆ ಅಲ್ಲಲ್ಲಿ ಕುಸಿತ ಉಂಟಾಗಿದ್ದು. ಈ ರಸ್ತೆಯನ್ನು 3-4 ದಿನಗಳ ಕಾಲ ಬಂದ್ ಮಾಡಲಾಗುತ್ತದೆ ಎಂದು ಅಲ್ಲಿನ ಪ್ರಧಾನ ಮಂತ್ರಿ ಕಚೇರಿ ಹೇಳಿದೆ.
ಇದನ್ನೂ ಓದಿ:ರೋಗಿ ಸಾಗಿಸುವ ಅಂಬ್ಯುಲೆನ್ಸ್ ನಲ್ಲಿ 14 ಕೋಟಿ.ರೂ ಮೌಲ್ಯದ ಡ್ರಗ್ಸ್ ಸಾಗಾಟ: ಆರೋಪಿ ಅರೆಸ್ಟ್
ಸಾವಿನ ಸಂಖ್ಯೆ ಇನ್ನು ಹೆಚ್ಚಾಗುವ ಸಾಧ್ಯತೆಯಿದೆ ಎಂದು ಅಲ್ಲಿನ ಸರ್ಕಾರ ಹೇಳಿದೆ. 2009 ರಲ್ಲಿ ಕಿನ್ಶಾಸ ಸುತ್ತಮುತ್ತ ಇದೇ ರೀತಿಯ ಭೀಕರ ಪ್ರವಾಹ ಹಾಗೂ ಭೂಕುಸಿತ ಉಂಟಾಗಿತ್ತು. ಅದರಲ್ಲಿ 32 ಜನ ಸಾವನ್ನಪ್ಪಿದ್ದರು.
ನಾಪತ್ತೆಯಾದ ಜನರ ಪತ್ತೆ ಹಾಗೂ ರಕ್ಷಣಾ ಕಾರ್ಯ ಸಾಗುತ್ತಿದೆ.
Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್ ಗಂಡಸು: ಮಸ್ಕ್ ತಂದೆ
Cut Down: ವೆಚ್ಚ ಕಡಿತ: ಅಮೆರಿಕ ಸರಕಾರಿ ಉದ್ಯೋಗಿಗಳೇ ವಜಾ!
Mexico:ಯುರೋಪ್ ನ Most ವಾಂಟೆಡ್ ಕ್ರಿ*ಮಿನಲ್, ಡ್ರ*ಗ್ ಕಿಂಗ್ ಪಿನ್ ಮಾರ್ಕೋ ಹ*ತ್ಯೆ
Bourbon Whiskey: ಅಮೆರಿಕದ ಬೌರ್ಬನ್ ವಿಸ್ಕಿ ಆಮದು ಸುಂಕ ಕಡಿತ ಮಾಡಿದ ಭಾರತ
ರಷ್ಯಾ-ಉಕ್ರೇನ್ ಕಾಳಗ ತಪ್ಪಿಸಲು ಮುಂದಿನ ವಾರ 3 ದೇಶದ ಅಧಿಕಾರಿಗಳ ಸಭೆ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.