ಗಡಿ ವಿವಾದ: ಕೇಂದ್ರ ಗೃಹ ಸಚಿವರಿಗೆ ಕಾನೂನಾತ್ಮಕವಾಗಿ ರಾಜ್ಯದ ನಿಲುವು ಮನವರಿಕೆ ಮಾಡುತ್ತೇವೆ; ಸಿಎಂ
Team Udayavani, Dec 14, 2022, 2:44 PM IST
ಹುಬ್ಬಳ್ಳಿ : ಮಹಾರಾಷ್ಟ್ರ ಮತ್ತು ಕರ್ನಾಟಕ ಗಡಿ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕರೆದ ಉಭಯ ರಾಜ್ಯದ ಮುಖ್ಯಮಂತ್ರಿಗಳ ಸಭೆಯಲ್ಲಿ ಕಾನೂನಾತ್ಮಕವಾಗಿ, ಆಡಳಿತಾತ್ಮಕವಾಗಿ ಮತ್ತು ರಾಜಕೀಯವಾಗಿ ರಾಜ್ಯದ ನಿಲುವು ಮನವರಿಕೆ ಮಾಡಿಕೊಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಇಲ್ಲಿನ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಪುನರ್ ವಿಂಗಡನೆಯಾಗಿ ಕಾಯ್ದೆಯಾಗಿದೆ. ಅದರ ಪಾಲನೆ ಸಂವಿಧಾನಬದ್ಧವಾಗಿ ಆಗುತ್ತಿದೆಯೇ ಎಂಬ ಪ್ರಶ್ನೆ ಎದುರಾಗಿದೆ. ಮಹಾರಾಷ್ಟ್ರ ಈ ಕುರಿತು ಸುಪ್ರೀಂ ಕೋರ್ಟ್ ಗೆ ಹೋಗಿದೆ. ರಾಜ್ಯ ಸರಕಾರವು ಕಾನೂನಾತ್ಮಕವಾಗಿ ಸಮರ್ಥವಾಗಿ ತನ್ನ ನಿಲುವು ಮಂಡಿಸಲಿದೆ. ವಿಷಯ ಕೋರ್ಟ್ ನಲ್ಲಿರುವುದರಿಂದ ಹೆಚ್ಚಿನ ವ್ಯಾಖ್ಯಾನ ಮಾಡಲ್ಲ ಎಂದರು.
ಇದನ್ನೂಓದಿ: ಬಾಂಗ್ಲಾ ವಿರುದ್ಧದ ಮೊದಲ ಟೆಸ್ಟ್ : 1 ರನ್ ಗೆ ಔಟಾಗಿ ಟ್ರೋಲ್ ಆದ ಕೊಹ್ಲಿ
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇಂದು ಕರೆದಿರುವ ಎರಡು ರಾಜ್ಯಗಳ ಮುಖ್ಯಮಂತ್ರಿಗಳ ಸಭೆಯಲ್ಲಿ ರಾಜ್ಯದ ಸ್ಪಷ್ಟ ನಿಲುವು ಏನೆಂಬುದನ್ನು ಮನವರಿಕೆ ಮಾಡಿಕೊಡಲಾಗುವುದು ಎಂದರು.
ಮಹಾದಾಯಿ ಕಾಮಗಾರಿ ಆರಂಭಿಸಿದ್ದೆ ನಾವು:
ಮಹಾದಾಯಿಗೆ ತಡೆಗೋಡೆ ಕಟ್ಡಿರುವುದೇ ಕಾಂಗ್ರೆಸ್ ಸಾಧನೆ. ಹಿಂದೆ ನಾನು ಜಲಸಂಪನ್ಮೂಲ ಸಚಿವನಾಗಿದ್ದಾಗ ಮಹಾದಾಯಿ ನದಿ ನೀರು ರಾಜ್ಯಕ್ಕೆ ತರಲು ಐದೂವರೆ ಕಿ.ಮೀ. ಕೆನಾಲ್ ನಿರ್ಮಾಣ ಮಾಡಿದ್ದು. ನಾನು ರಕ್ತದಲ್ಲಿ ಪತ್ರ ಬರೆದಿದ್ದರಿಂದಲೇ ಮಹಾದಾಯಿ ನದಿ ನೀರು ತರಲು ಕಾಲುವೆ ನಿರ್ಮಾಣ ಮಾಡಿದ್ದು ಎಂದರು.
ಮಹಾದಾಯಿ ಸಮಾವೇಶ ಮಾಡಲು ಕಾಂಗ್ರೆಸ್ ನವರಿಗೆ ಯಾವ ನೈತಿಕ ಹಕ್ಕಿದೆ? ಸೋನಿಯಾ ಗಾಂಧಿ ಅವರು ಹಿಂದೆ ಗೋವಾದಲ್ಲಿ ಮಹಾದಾಯಿ ನದಿಯ ಒಂದು ಹನಿ ನೀರನ್ನು ಕರ್ನಾಟಕಕ್ಕೆ ಬಿಡಲ್ಲ ಎಂದು ಘೋಷಿಸಿದ್ದರು. ಈಗ ಅವರಿಗೆ ಅದರ ಬಗ್ಗೆ ಮಾತನಾಡುವ ಯಾವ ನೈತಿಕತೆ ಇದೆ. ಈ ಕುರಿತು ಚರ್ಚೆಗೆ ಅವರು ಬರಲಿ ಎಂದು ಅವರು ಸವಾಲೆಸೆದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.