ಏಕದಿನ ರ್ಯಾಂಕಿಂಗ್: ಕೊಹ್ಲಿಗೆ 8 ನೇ ಸ್ಥಾನ; 117 ಸ್ಥಾನಗಳ ಜಿಗಿತ ಕಂಡ ಇಶಾನ್ ಕಿಶನ್
ಮೊದಲ ಎರಡು ರ್ಯಾಂಕ್ ಪಾಕ್ ಆಟಗಾರಿಗೆ ...
Team Udayavani, Dec 14, 2022, 3:44 PM IST
ದುಬೈ : ಐಸಿಸಿ ಏಕದಿನ ರ್ಯಾಂಕಿಂಗ್ ನಲ್ಲಿ ವಿರಾಟ್ ಕೊಹ್ಲಿ 8 ನೇ ಸ್ಥಾನಕ್ಕೆ ಬಂದಿದ್ದು, ಬಾಂಗ್ಲಾದೇಶ ವಿರುದ್ದ ಅತ್ಯಮೋಘ ದ್ವಿಶತಕ ಸಿಡಿಸಿದ್ದ 117 ಸ್ಥಾನಗಳ ನೆಗೆತ ಕಂಡ ಇಶಾನ್ ಕಿಶನ್ 37ನೇ ರ್ಯಾಂಕ್ ಗೆ ಬಂದು ತಲುಪಿದ್ದಾರೆ.
ಬುಧವಾರ ಬಿಡುಗಡೆಯಾದ ರ್ಯಾಂಕಿಂಗ್ ನಲ್ಲಿ ಮೂರು ವರ್ಷಗಳ ಬಳಿಕ ಬಾಂಗ್ಲಾ ವಿರುದ್ದ ಏಕದಿನ ಶತಕ ಸಿಡಿಸಿ ಸಂಭ್ರಮಿಸಿದ್ದ ಕೊಹ್ಲಿ 3 ಸ್ಥಾನಗಳ ಜಿಗಿತ ಕಂಡು 8 ನೇ ಸ್ಥಾನದಲ್ಲಿ ಕಾಣಿಸಿಕೊಂಡಿದ್ದು ಆಗ್ರ ಹತ್ತರಲ್ಲಿರುವ ಇಬ್ಬರು ಭಾರತದ ಸ್ಟಾರ್ ಆಟಗಾರರಾಗಿದ್ದಾರೆ. ರೋಹಿತ್ ಶರ್ಮ 9 ನೇ ಸ್ಥಾನದಲ್ಲಿದ್ದಾರೆ.
ಪಾಕಿಸ್ಥಾನದ ಬ್ಯಾಟ್ಸ್ ಮ್ಯಾನ್ ಗಳಾದ ಬಾಬರ್ ಅಜಂ ಮೊದಲ ಸ್ಥಾನದಲ್ಲಿ, ಇಮಾಮ್ ಉಲ್ ಹಕ್ ಎರಡನೇ ರ್ಯಾಂಕ್ ನಲ್ಲಿ ವಿರಾಜಮಾನರಾಗಿದ್ದಾರೆ.. ದಕ್ಷಿಣ ಆಫ್ರಿಕಾದ ರಾಸ್ಸೀ ವ್ಯಾನ್ ಡೆರ್ ಡಸ್ಸೆನ್ 3 ಮತ್ತು ಕ್ವಿಂಟನ್ ಡಿ ಕಾಕ್ 4ನೇ ರ್ಯಾಂಕ್ ನಲ್ಲಿದ್ದಾರೆ.
ಢಾಕಾದಲ್ಲಿ ನಡೆದ ಸರಣಿಯ ಎರಡನೇ ಪಂದ್ಯದಲ್ಲಿ 82 ರನ್ ಗಳಿಸಿದ ನಂತರ ಶ್ರೇಯಸ್ ಅಯ್ಯರ್ ಕೂಡ ಬ್ಯಾಟಿಂಗ್ ಪಟ್ಟಿಯಲ್ಲಿ 20 ರಿಂದ 15 ನೇ ಸ್ಥಾನಕ್ಕೆ ಏರಿದ್ದಾರೆ.
ಬೌಲರ್ಗಳ ಪೈಕಿ, ಭಾರತದ ವೇಗಿ ಮೊಹಮ್ಮದ್ ಸಿರಾಜ್ ಭಾರತಕ್ಕಾಗಿ ಏಕದಿನ ಶ್ರೇಯಾಂಕದಲ್ಲಿ ನಾಲ್ಕು ಸ್ಥಾನಗಳನ್ನು ಹೆಚ್ಚಿಸಿಕೊಂಡು 22 ನೇ ಸ್ಥಾನಕ್ಕೆ ಬಂದರೆ, ಬಾಂಗ್ಲಾದೇಶದ ಸ್ಪಿನ್ ಆಲ್ರೌಂಡರ್ ಶಕೀಬ್ ಅಲ್ ಹಸನ್ ಒಂದು ಸ್ಥಾನ ಮೇಲೇರಿ ಎಂಟನೇ ಸ್ಥಾನದಲ್ಲಿದ್ದಾರೆ.ಅವರು ಆಲ್ ರೌಂಡರ್ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದಾರೆ. ಆಲ್ರೌಂಡರ್ಗಳ ಪಟ್ಟಿಯಲ್ಲಿ ಬಾಂಗ್ಲಾದೇಶದ ಮೆಹಿದಿ ಹಸನ್ ಮಿರಾಜ್ ಮೂರು ಸ್ಥಾನ ಮೇಲೇರಿ ಮೂರನೇ ಸ್ಥಾನ ಪಡೆದಿದ್ದಾರೆ.
ಟೆಸ್ಟ್ ಶ್ರೇಯಾಂಕದಲ್ಲಿ, ವೆಸ್ಟ್ ಇಂಡೀಸ್ ವಿರುದ್ಧದ ಎರಡು ಪಂದ್ಯಗಳ ಸರಣಿಯಲ್ಲಿ ಆಸೀಸ್ ಬ್ಯಾಟ್ಸ್ ಮ್ಯಾನ್ ಮಾರ್ನಸ್ ಲ್ಯಾಬುಸ್ಚಾಗ್ನೆ ಅವರು ತಮ್ಮ ಮೂರನೇ ಮೂರು-ಅಂಕಿಗಳ ನ್ನು ಸಂಗ್ರಹಿಸಿದ ನಂತರ ವೃತ್ತಿಜೀವನದ ಅತ್ಯುತ್ತಮ 937 ರೇಟಿಂಗ್ ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿದ್ದಾರೆ. ಕಳೆದ ವಾರ ಪರ್ತ್ನಲ್ಲಿ ನಡೆದ ಮೊದಲ ಪಂದ್ಯದ ವೇಳೆ ಅದೇ ಟೆಸ್ಟ್ನಲ್ಲಿ ದ್ವಿಶತಕ ಮತ್ತು ಶತಕ ಬಾರಿಸಿದ ಅಪರೂಪದ ಸಾಧನೆಯನ್ನು ಅವರು ಸಾಧಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Blind Chess World C’ships: ವಿಶ್ವ ಅಂಧರ ಚೆಸ್: ಪ್ರಶಸ್ತಿ ಸನಿಹಕ್ಕೆ ಲುಬೋವ್
Women’s T20 World Cup: ಆಸೀಸ್ಗೆ ಸುಲಭದ ತುತ್ತಾದ ಲಂಕಾ
Asian Youth Archery: ಮಹಿಳಾ ತಂಡಕ್ಕೆ ಬೆಳ್ಳಿ ಪದಕ
ISSF Junior World Championship: ಕಿರಿಯರ ಶೂಟಿಂಗ್; ಭಾರತಕ್ಕೆ ಸಮಗ್ರ ಪ್ರಶಸ್ತಿ
ಗ್ವಾಲಿಯರ್ ಮಸೀದಿಗೆ ಭೇಟಿ ನೀಡದೆ ಹೋಟೆಲ್ನಲ್ಲೇ ಬಾಂಗ್ಲಾ ಕ್ರಿಕೆಟರ್ಸ್ ಪ್ರಾರ್ಥನೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.