ಉಳ್ಳಾಲ: 20 ವರುಷಗಳಿಂದ ಡಾಮರು ಕಾಣದ ರಸ್ತೆ: ಸಂಚಾರ ದುಸ್ತರ


Team Udayavani, Dec 15, 2022, 5:20 AM IST

ಉಳ್ಳಾಲ: 20 ವರುಷಗಳಿಂದ ಡಾಮರು ಕಾಣದ ರಸ್ತೆ: ಸಂಚಾರ ದುಸ್ತರ

ಉಳ್ಳಾಲ : ಹರೇಕಳ ಗ್ರಾ.ಪಂ. ಗಡಿಭಾಗವನ್ನು ಹೊಂದಿರುವ ಕೊಣಾಜೆ ಗ್ರಾಮಕ್ಕೊಳಪಟ್ಟ ತಾರಿಪ್ಪಾಡಿ ಸೈಟ್‌ನಿಂದ ಕಾರಂಗಿಲ (ಮಿಷನ್‌ ಕಾಂಪೌಂಡ್‌) ರಸ್ತೆ ಡಾಮರು ಕಾಣದೆ 20 ವರುಷಗಳು ಕಳೆದಿದ್ದು, ಇಳಿಜಾರು ಆಗಿರುವ ಈ ರಸ್ತೆಯಲ್ಲಿ ನಡೆದುಕೊಂಡು ಹೋಗಲು ಸರ್ಕಸ್‌ ಮಾಡುವ ಸ್ಥಿತಿಯಿದ್ದು, ಈ ರಸ್ತೆಗೆ ಡಾಮರು ಹಾಕದಿದ್ದರೆ ಚುನಾವಣೆ ಬಹಿಷ್ಕಾರಕ್ಕೆ ಸ್ಥಳೀಯರು ಚಿಂತನೆ ನಡೆಸುತ್ತಿದ್ದಾರೆ.

ಸುಮಾರು 35 ವರ್ಷಗಳ ಹಿಂದೆ ಸ್ಥಳೀಯರೇ ನಿರ್ಮಾಣ ಮಾಡಿದ್ದ ಈ ರಸ್ತೆಗೆ 20 ವರ್ಷಗಳ ಹಿಂದೆ ಜಯರಾಮ ಶೆಟ್ಟಿ ಶಾಸಕರಾಗಿದ್ದಾಗ ಡಾಮರು ಹಾಕಲಾಗಿತ್ತು. 10 ವರ್ಷಗಳಿಂದ ಈ ರಸ್ತೆಯ ಡಾಮರು ಕಿತ್ತು ಹೋಗಲು ಆರಂಭಿಸಿದ್ದು, ಐದು ವರ್ಷಗಳಿಂದ ರಸ್ತೆಯಲ್ಲಿ ನಡೆದಾಡುವುದೇ ದುಸ್ತರವಾಗಿದೆ. ಹಿಂದೆ ಡಾಮರು ಹಾಕುವಾಗ ಬಳಸಿದ್ದ ಜಲ್ಲಿ ಕಲ್ಲುಗಳು ಎದ್ದಿರುವುದರಿಂದ ರಸ್ತೆಯಲ್ಲಿ ಹೊಂಡಗಳು ಸೃಷ್ಟಿಯಾಗಿವೆ. ಈ ರಸ್ತೆಯಲ್ಲಿ ದ್ವಿಚಕ್ರ, ರಿಕ್ಷಾ ಚಾಲಕರು ಸಂಚಾರಕ್ಕೆ ಹಿಂದೇಟು ಹಾಕುವಂತಾಗಿದೆ.

ಜನಪ್ರತಿನಿಧಿಗಳ ಭರವಸೆ ಮಾತ್ರ
ಐದು ವರುಷಗಳಿಂದ ಈ ಪ್ರದೇಶದ ಜನರು ರಸ್ತೆ ಕಾಂಕ್ರೀಟ್‌ ಕಾಮಗಾರಿಗೆ ಬೇಡಿಕೆ ಇಡುತ್ತಾ ಬಂದಿದ್ದಾರೆ. ಮುಂದಿನ ತಿಂಗಳು ರಸ್ತೆ ನಿರ್ಮ ಮಾಡುತ್ತೇವೆ ಎಂದು ಹೋದವರು ಐದು ವರುಷಗಳು ಕಳೆದರೂ ರಸ್ತೆ ನಿರ್ಮಾಣ ಆಗಿಲ್ಲ ಎನ್ನುತ್ತಾರೆ ಸ್ಥಳೀಯರು. ಶಾಸಕ ಯು.ಟಿ. ಖಾದರ್‌, ಸಂಸದ ನಳಿನ್‌ ಕುಮಾರ್‌ ಕಟೀಲು, ಹಿಂದಿನ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರಿಂದ ಭರವಸೆ ಮಾತ್ರ ಸಿಕ್ಕಿದೆ. ಆದರೆ ಕಾಮಗಾರಿಗೆ ಇನ್ನೂ ದಿನ ಕೂಡಿ ಬಂದಿಲ್ಲ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಆಹಾರ ಸಾಮಗ್ರಿ ಹೊತ್ತುಕೊಂಡೇ ಸಾಗಬೇಕು
ರಸ್ತೆ ನಾದುರಸ್ತಿಯಿಂದ ರಿಕ್ಷಾ ಚಾಲಕರು ಈ ಕಡೆ ಬರಲು ಹಿಂಜರಿಯುತ್ತಿದ್ದು, ಪಡಿತರ ಸಾಮಗ್ರಿ ಮತ್ತು ಗ್ಯಾಸ್‌ ಮನೆಗೆ ಹೊತ್ತುಕೊಂಡೇ ಸಾಗುವ ಸ್ಥಿತಿ ನಮ್ಮದು ಎನ್ನುತ್ತಾರೆ ಸುಧಾಚಂದ್ರಹಾಸ್‌. ಅನಾರೋಗ್ಯ ದಿಂದಿರುವವರನ್ನು ಮತ್ತು ಹಿರಿಯರನ್ನು ಈ ಪ್ರದೇಶದಿಂದ ಕರೆದುಕೊಂಡು ಹೋಗುವುದೇ ಕಷ್ಟದ ಕೆಲಸ ಎನ್ನುತ್ತಾರೆ ದೇವಕಿ ಅವರು. ಔಷಧ ತರಲು ಹೋಗಿ ರಿಕ್ಷಾದಲ್ಲಿ ವಾಪಸು ಬರುತ್ತಿದ್ದಾಗ ರಸ್ತೆ ಗುಂಡಿಗೆ ರಿಕ್ಷಾದ ಚಕ್ರ ಇಳಿದು ನನ್ನ ಸೊಂಟ ಉಳುಕಿದ್ದು, ಈಗಲೂ ನೋವಿನ ಯಾತನೆಯನ್ನು ಅನುಭವಿಸುತ್ತಿದ್ದೇನೆ ಎನ್ನುತ್ತಾರೆ ಸುಮಾರು 90 ವರುಷ ಹಿರಿಯರಾದ ಮೊಮ್ಮಕ್ಕ ಅವರು. ಈ ರಸ್ತೆ ಸಂಪರ್ಕಿಸುವ ಮಿಷನ್‌ ಕಾಂಪೌಂಡ್‌ ಬಳಿ ಶ್ಮಶಾನ ಭೂಮಿಯಿದ್ದು, ನಮ್ಮವರು ಈ ಪ್ರದೇಶಕ್ಕೆ ಬರಲು ಹಿಂಜರಿಯುವಂತಾಗಿದೆ. ಇಲ್ಲಿ ವಾಹನ ಸಂಚರಿಸುವುದು ಬಿಡಿ ಜನರು ನಡೆದು ಹೋಗುವುದೇ ಕಷ್ಟಕರವಾಗಿದೆ ಎನ್ನುತ್ತಾರೆ ಸ್ಥಳೀಯ ನಿವಾಸಿ ಜಾಕೋಬ್‌ ಅಂಚನ್‌ ಅವರು.
ಗ್ರಾ.ಪಂ. ಚುನಾವಣೆ ಸಂದರ್ಭ ಒಂದು ತಿಂಗಳೊಳಗೆ ಕಾಮಗಾರಿ ಆರಂಭಿಸುವ ಭರವಸೆ ಈಗ ಹುಸಿಯಾಗಿದ್ದು, ಈ ಬಾರಿ ವಿಧಾನಸಭೆ ಕ್ಷೇತ್ರದ ಚುನಾವಣೆಯನ್ನೇ ಬಹಿಷ್ಕರಿಸುತ್ತೇವೆ ಎನ್ನುತ್ತಾರೆ ಈ ಪ್ರದೇಶದ ನಿವಾಸಿಗಳು.

ಸಮಸ್ಯೆಗೆ ತತ್‌ಕ್ಷಣ ಸ್ಪಂದಿಸಿ
ರಸ್ತೆ ನಿರ್ಮಾಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ತಿಂಗಳೊಳಗೆ ಕಾಮಗಾರಿ ನಡೆಸುವ ಭರವಸೆ ಐದು ವರ್ಷಗಳಿಂದ ಸುಳ್ಳಾಗಿದೆ. ಸುಮಾರು 40 ಮನೆಗಳಲ್ಲಿ 150ಕ್ಕೂ ಹೆಚ್ಚು ಮತದಾರರಿದ್ದು, ಮುಂದಿನ ಚುನಾವಣೆಯೊಳಗೆ ರಸ್ತೆ ಕಾಮಗಾರಿ ನಡೆಸದಿದ್ದರೆ ಚುನಾವಣೆಯನ್ನು ಬಹಿಷ್ಕಾರ ಮಾಡಲಾಗುವುದು. ಗ್ರಾ.ಪಂ., ಜನಪ್ರತಿನಿಧಿಗಳು ನಮ್ಮ ಸಮಸ್ಯೆಗೆ ತತ್‌ಕ್ಷಣ ಸ್ಪಂದಿಸಬೇಕು
– ರವಿಚಂದ್ರ ಗಟ್ಟಿ, ಸ್ಥಳೀಯರು

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Dinesh-Gundurao

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.