ಮಣಿಪಾಲ: ಬೈಕ್ ಡಿವೈಡರ್ಗೆ ಢಿಕ್ಕಿ: ವಿದ್ಯಾರ್ಥಿ ಸಾವು; ಇಬ್ಬರಿಗೆ ಗಾಯ
Team Udayavani, Dec 16, 2022, 8:03 PM IST
ಉಡುಪಿ: ಮಣಿಪಾಲದಲ್ಲಿ ಡಿವೈಡರ್ಗೆ ಬೈಕ್ ಢಿಕ್ಕಿ ಹೊಡೆದು ಎಂಐಟಿಯ ವಿದ್ಯಾರ್ಥಿ ನಿಖಿಲ್(23) ಸಾವನ್ನಪ್ಪಿದ್ದಾರೆ. ಇವರು ಶಿವಮೊಗ್ಗ ಮೂಲದವರಾಗಿದ್ದು, ಮಣಿಪಾಲದಲ್ಲಿ ವ್ಯಾಸಂಗ ಮಾಡಿಕೊಂಡಿದ್ದರು.
ಮಹೇಂದ್ರ ಜಿ.ಅವರು ಶುಕ್ರವಾರ ತನ್ನ ಸ್ನೇಹಿತರಾದ ನಿಹಾಲ್ ಮತ್ತು ನಿಖಿಲ್ ಅವರೊಂದಿಗೆ ಬೈಕ್ನಲ್ಲಿ ಕೆಳ ಪರ್ಕಳ ಕಡೆಯಿಂದ ಉಡುಪಿ ಕಡೆಗೆ ತೆರಳುತ್ತಿದ್ದರು.
ನಿಹಾಲ್ ಬೈಕ್ ಚಲಾಯಿಸುತ್ತಿದ್ದರು. ಮಹೇಂದ್ರ ಅವರ ಸ್ನೇಹಿತ ನಿಖಿಲ್ ಮಧ್ಯದಲ್ಲಿ ಮತ್ತು ಮಹೇಂದ್ರ ಅವರು ನಿಖಿಲ್ ನ ಹಿಂಬದಿಯಲ್ಲಿ ಕುಳಿತುಕೊಂಡಿದ್ದರು. ಬೈಕ್ ಮಣಿಪಾಲದ ಟೈಗರ್ ಸರ್ಕಲ್ನ ಸ್ವಲ್ಪ ಮುಂದೆ ತಲುಪಿದಾಗ ಆರೋಪಿ ನಿಹಾಲ್ ಬೈಕ್ ಅನ್ನು ಅತೀ ವೇಗದಿಂದ ಚಲಾಯಿಸಿದ ಪರಿಣಾಮ ನಿಯಂತ್ರಣ ತಪ್ಪಿ ಡಿವೈಡರ್ಗೆ ಢಿಕ್ಕಿ ಹೊಡೆದಿದೆ.
ಈ ವೇಳೆ ಮೂರೂ ಮಂದಿ ಬೈಕ್ನಿಂದ ಕೆಳಗೆ ಬಿದ್ದಿದ್ದಾರೆ. ನಿಖಿಲ್ ನ ತಲೆಯ ಹಿಂಭಾಗಕ್ಕೆ ಗಂಭೀರ ಗಾಯವಾಗಿದ್ದು ಪ್ರಜ್ಞೆ ಇರಲಿಲ್ಲ. ಉಳಿದ ಇಬ್ಬರಿಗೂ ಗಾಯ ಉಂಟಾಗಿತ್ತು. ಸ್ಥಳೀಯರು ಗಾಯಾಳುಗಳನ್ನು ಆ್ಯಂಬುಲೆನ್ಸ್ನಲ್ಲಿ ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಿದರು.
ಆದರೆ ನಿಖಿಲ್ ಅದಾಗಲೇ ಸಾವನ್ನಪ್ಪಿದ್ದರು. ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.