ಅಮೆರಿಕದ ಪ್ರವಾಸಿಗರೆದುರು ಟ್ಯಾಕ್ಸಿ ಚಾಲಕರ ಜಗಳ : ಕ್ಷಮೆಯಾಚಿಸಿದ ಗೋವಾ ಶಾಸಕ
Team Udayavani, Dec 16, 2022, 10:37 PM IST
ಪಣಜಿ: ಪ್ರವಾಸಿಗರ ಕ್ರೂಸ್ ಹಡಗು (ಡಿಸೆಂಬರ್ 15 ರಂದು ) ಮುರಗಾಂವ್ ಬಂದರಿಗೆ ಆಗಮಿಸಿತ್ತು, ಈ ವೇಳೆ ಅಮೆರಿಕದ ಪ್ರವಾಸಿಗರನ್ನು ಬಂದರಿನಿಂದ ನಗರಕ್ಕೆ ಕರೆದೊಯ್ಯಲು ಟ್ಯಾಕ್ಸಿ ಚಾಲಕರ ನಡುವೆ ಜಗಳವಾಗಿದೆ. ವಿವಾದದಲ್ಲಿ ಅಮೆರಿಕದ ಪ್ರವಾಸಿಗರು ಮಾನಸಿಕ ಯಾತನೆ ಅನುಭವಿಸಿದ್ದಾರೆ ಎಂದು ವಿದೇಶಿ ಪ್ರವಾಸಿಗರು ರಾಯಭಾರ ಕಚೇರಿಗೆ ದೂರು ನೀಡಿದ್ದರಿಂದ ಪ್ರಕರಣ ತಿರುವು ಪಡೆದುಕೊಂಡಿದ್ದು, ಈ ಕುರಿತು ವಾಸ್ಕೊ ಮುರಗಾಂವ್ ಶಾಸಕ ಸಂಕಲ್ಪ್ ಅಮೋಣಕರ್ ಪ್ರವಾಸಿಗರ ಬಳಿ ಕ್ಷಮೆಯಾಚಿಸಿದ್ದಾರೆ.
ವಾಸ್ಕೊ ಮುರಗಾಂವ್ ಶಾಸಕ ಸಂಕಲ್ಪ್ ಅಮೋಣಕರ್ ಇಂದು ಸುದ್ದಿಗೋಷ್ಠಿ ನಡೆಸಿದರು. ಮುಗಾರ್ಂವ್ ಬಂದರು ಪ್ರದೇಶದ ಕ್ರೂಸ್ ಟರ್ಮಿನಲ್ನಲ್ಲಿ ಟ್ಯಾಕ್ಸಿ ಚಾಲಕರು ಮತ್ತು ಪ್ರವಾಸಿಗರ ನಡುವಿನ ದುರದೃಷ್ಟಕರ ಘರ್ಷಣೆಗಾಗಿ ವಿದೇಶಿ ಪ್ರವಾಸಿಗರಲ್ಲಿ ಶಾಸಕ ಅಮೋಣಕರ್ ಕ್ಷಮೆಯಾಚಿಸಿದರು. ಈ ಘಟನೆಯ ಹೊಣೆಯನ್ನು ಶಾಸಕ ಅಮೋಣಕರ್ ವಹಿಸಿಕೊಂಡಿದ್ದು, ಮುಂದೆ ಇಂತಹ ಘಟನೆಗಳು ಮರುಕಳಿಸುವುದಿಲ್ಲ ಎಂದು ಭರವಸೆ ನೀಡಿದರು. ಹೀಗಾಗಿ ಈ ವಿವಾದಕ್ಕೆ ತೆರೆ ಬೀಳುವ ಸಾಧ್ಯತೆ ಇದೆ.
ಗೋವಾದಲ್ಲಿ ಇಂತಹ ಗೂಂಡಾಗಿರಿ ಸಹಿಸುವುದಿಲ್ಲ : ಮುಖ್ಯಮಂತ್ರಿ
ಪ್ರವಾಸಿಗರ ಕಡೆಗೆ ಸ್ಥಳೀಯ ಟ್ಯಾಕ್ಸಿ ಚಾಲಕರ ವರ್ತನೆಯು ಅನುಚಿತವಾಗಿದ್ದು, ಇಂತಹ ವರ್ತನೆಯನ್ನು ಸಹಿಸಲಾಗುವುದಿಲ್ಲ. ಈ ಟ್ಯಾಕ್ಸಿ ಚಾಲಕರು ಬಸ್ ಚಾಲಕನನ್ನು ಥಳಿಸಿದರೆ, ಅವರನ್ನು ಬಂಧಿಸಲಾಗುತ್ತದೆ. ಅಲ್ಲದೆ, ಗೋವಾದಲ್ಲಿ ಇಂತಹ ಗೂಂಡಾಗಿರಿಯನ್ನು ಸಹಿಸುವುದಿಲ್ಲ ಎಂದು ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಪಣಜಿಯಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM: ಕಾಂಗ್ರೆಸ್ ಡ್ರಗ್ಸ್ ದಂಧೆ ಹಣ ಚುನಾವಣೆ ಗೆಲ್ಲಲು ಬಳಸಿಕೊಳ್ಳುತ್ತಿದೆ: ಪ್ರಧಾನಿ ಮೋದಿ
IFFI: ನವೆಂಬರ್ 20ರಿಂದ ಗೋವಾದಲ್ಲಿ 55ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವ
West Bengal: ಬಾಲಕಿಯನ್ನು ಅಪಹರಿಸಿ ಕೊ*ಲೆ: ಭುಗಿಲೆದ್ದ ಆಕ್ರೋಶ, ಪ್ರತಿಭಟನೆ
Pune: ಉತ್ತರಕನ್ನಡ ಮೂಲದ ಮಾಜಿ ಕ್ರಿಕೆಟಿಗ, ನಟ ಸಲೀಲ್ ತಾಯಿ ಶವ ಪತ್ತೆ, ಗಂಟಲು ಸೀಳಿ ಕೊಲೆ?
ಈ ಬಾರಿಯ ದುರ್ಗಾ ಪೂಜೆಗೆ ಬಂಗಾಳದ ಕೈದಿಗಳಿಗೆ ಮಟನ್, ಚಿಕನ್ ಬಿರಿಯಾನಿ ಜೊತೆಗೆ ವಿಶೇಷ ಖಾದ್ಯ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Bigg Boss: ಬಿಗ್ ಬಾಸ್ ಮನೆಯಲ್ಲಿ ರಾದ್ಧಾಂತ ಸೃಷ್ಟಿಸಿದ ವಿವಾದಿತ ಸ್ಪರ್ಧಿಗಳಿವರು..
Irani Cup: ತನುಷ್ ಕೋಟ್ಯಾನ್ ದಿಟ್ಟ ಹೋರಾಟ; 27 ವರ್ಷದ ಬಳಿಕ ಇರಾನಿ ಕಪ್ ಗೆದ್ದ ಮುಂಬೈ
Goa ದಲ್ಲಿ ನಡೆದ ಘಟನೆ ಅಲ್ಲ; ವಿದೇಶಿ ಕಡಲಿನಲ್ಲಿ ಬೋಟ್ ದುರಂತ: ವೈರಲ್ ವಿಡಿಯೋ ನೋಡಿ
Bellary: ನೀರಿನ ರಭಸಕ್ಕೆ ಕೊಚ್ಚಿಹೋಗಿ ವ್ಯಕ್ತಿ ಮೃತ
Renukaswamy Case: ದರ್ಶನ್ ಪರ ವಕೀಲರ ಸುದೀರ್ಘ ವಾದ..ಜಾಮೀನು ಅರ್ಜಿ ಮತ್ತೆ ಮುಂದೂಡಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.