ಉಕ್ರೇನ್ ಮೇಲೆ ಮುಗಿಬಿದ್ದ ರಷ್ಯಾ: ಒಂದೇ ದಿನ 70ಕ್ಕೂ ಹೆಚ್ಚು ಕ್ಷಿಪಣಿ ದಾಳಿ
Team Udayavani, Dec 17, 2022, 9:22 AM IST
ಕೀವ್: ರಷ್ಯಾವು ಶುಕ್ರವಾರ ಉಕ್ರೇನ್ ನ ಮೇಲೆ 70 ಕ್ಕೂ ಹೆಚ್ಚು ಕ್ಷಿಪಣಿಗಳನ್ನು ಹಾರಿಸಿದ್ದು, ಯುದ್ಧದ ಪ್ರಾರಂಭದ ನಂತರದ ಅತಿದೊಡ್ಡ ದಾಳಿಗಳಲ್ಲಿ ಇದು ಒಂದಾಗಿದೆ. ಇದು ಕೈವ್ ಗೆ ರಾಷ್ಟ್ರವ್ಯಾಪಿ ತುರ್ತು ಬ್ಲ್ಯಾಕೌಟ್ ಗಳನ್ನು ಜಾರಿಗೊಳಿಸಲು ಒತ್ತಾಯಿಸಿತು ಎಂದು ಉಕ್ರೇನಿಯನ್ ಅಧಿಕಾರಿಗಳು ತಿಳಿಸಿದ್ದಾರೆ.
ಸೆಂಟ್ರಲ್ ಕ್ರಿವಿ ರಿಹ್ ನಲ್ಲಿ ಅಪಾರ್ಟ್ಮೆಂಟ್ ಗೆ ಕ್ಷಿಪಣಿ ಅಪ್ಪಳಿಸಿದ ಪರಿಣಾಮ ಮೂವರು ಸಾವನ್ನಪ್ಪಿದ್ದಾರೆ. ದಕ್ಷಿಣ ಖರ್ಸನ್ ನಲ್ಲಿ ಶೆಲ್ ದಾಳಿಯಲ್ಲಿ ಇನ್ನೊಬ್ಬರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಹೇಳಿದರು. ಆದರೆ ಆಕ್ರಮಿತ ಪೂರ್ವ ಉಕ್ರೇನ್ ನಲ್ಲಿ ರಷ್ಯಾ ಸ್ಥಾಪಿಸಿದ ಅಧಿಕಾರಿಗಳು ಉಕ್ರೇನಿಯನ್ ಶೆಲ್ ದಾಳಿಯಿಂದ 12 ಜನರು ಸಾವನ್ನಪ್ಪಿದ್ದಾರೆ ಎಂದು ಹೇಳಿದರು.
ಈ ಬಗ್ಗೆ ಉಕ್ರೇನ್ ಅಧ್ಯಕ್ಷ ವೊಲಿಡಿಮಿರ್ ಝೆಲೆನ್ಸ್ಕಿ ವಿಡಯೋ ಸಂದೇಶದಲ್ಲಿ ಮಾತನಾಡಿದ್ದು, “ರಷ್ಯಾ ಇನ್ನೂ ಹಲವಾರು ಬೃಹತ್ ದಾಳಿಗಳಿಗೆ ಬೇಕಾದಷ್ಟು ಕ್ಷಿಪಣಿಗಳನ್ನು ಹೊಂದಿದೆ. ಹೀಗಾಗಿ ಪಾಶ್ಚಿಮಾತ್ಯ ಮಿತ್ರರಾಷ್ಟ್ರಗಳು ಉಕ್ರೇನ್ ಗೆ ಹೆಚ್ಚು ಮತ್ತು ಉತ್ತಮವಾದ ವಾಯು ರಕ್ಷಣಾ ವ್ಯವಸ್ಥೆಗಳೊಂದಿಗೆ ಪೂರೈಸಬೇಕು” ಎಂದು ಒತ್ತಾಯಿಸಿದರು.
ಉಕ್ರೇನ್ ಪುಟಿದೇಳುವಷ್ಟು ಪ್ರಬಲವಾಗಿದೆ ಎಂದು ಝೆಲೆನ್ಸ್ಕಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. “ಮಾಸ್ಕೋದ ರಾಕೆಟ್ ಹಾರಿಸುವವರು ಏನೂ ಬೇಕಾದರೂ ಎಣಿಸಲಿ, ಆದರೆ ಅದು ಇನ್ನೂ ಈ ಯುದ್ಧದಲ್ಲಿ ಶಕ್ತಿಯ ಸಮತೋಲನವನ್ನು ಬದಲಾಯಿಸುವುದಿಲ್ಲ” ಎಂದು ಅವರು ಹೇಳಿದರು.
Russia fired more than 70 missiles at Ukraine on Friday, which’s one of the biggest attacks since the start of the war, & forcing Kyiv to implement emergency blackouts nationwide, reports Reuters citing Ukrainian officials
— ANI (@ANI) December 16, 2022
ಅಕ್ಟೋಬರ್ ಆರಂಭದಿಂದ ವಾರಕ್ಕೊಮ್ಮೆ ರಷ್ಯಾ ಉಕ್ರೇನಿಯನ್ ಶಕ್ತಿಯ ಮೂಲಸೌಕರ್ಯದ ಮೇಲೆ ಕ್ಷಿಪಣಿಗಳ ಮಳೆಗರೆದಿದೆ, ಆದರೆ ಶುಕ್ರವಾರದ ದಾಳಿಯು ಇತರ ದಾಳಿಗಿಂತ ಹೆಚ್ಚಿನ ಹಾನಿಯನ್ನುಂಟುಮಾಡಿದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Explode in Lebanon: ಪೇಜರ್ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು
Israel: ಹೆಜ್ಬುಲ್ಲಾ ಬಳಸಿದ್ದ ಪೇಜರ್ಸ್ ಒಳಗೆ ಸ್ಫೋಟಕ ಅಳವಡಿಸಿದ್ದ ಇಸ್ರೇಲ್ ನ ಮೊಸ್ಸಾದ್!
Diddy ;ಸೆ*ಕ್ಸ್ ದಂಧೆ ಆರೋಪ: ಅಮೆರಿಕದ ಖ್ಯಾತ ಹಿಪ್-ಹಾಪ್ ಸ್ಟಾರ್ ಬಂಧನ
PM Modi ಅವರನ್ನು ಭೇಟಿಯಾಗಿ ಮಾತುಕತೆ ನಡೆಸುವುದಾಗಿ ಘೋಷಿಸಿದ ಟ್ರಂಪ್
Drought; ನಮೀಬಿಯಾ ಆಯ್ತು, ಈಗ ಜಿಂಬಾಬ್ವೆಯಲ್ಲಿ 200 ಆನೆಗಳ ಹತ್ಯೆ?
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.