ಗ್ರಾಮವಾಸ್ತವ್ಯದ ಮಹತ್ವವನ್ನು ಅಧಿಕಾರಿಗಳೇ ಅರಿತಿಲ್ಲ: ಡಿಸಿ ಕಿಡಿ

ಮಲವಂತಿಗೆಯಲ್ಲಿ ಜಿಲ್ಲಾಧಿಕಾರಿ ಗ್ರಾಮ ವಾಸ್ತವ್ಯ

Team Udayavani, Dec 17, 2022, 10:11 PM IST

ಗ್ರಾಮವಾಸ್ತವ್ಯದ ಮಹತ್ವವನ್ನು ಅಧಿಕಾರಿಗಳೇ ಅರಿತಿಲ್ಲ: ಡಿಸಿ ಕಿಡಿ

ಬೆಳ್ತಂಗಡಿ: ಇಲಾಖೆಗೆ ಸಂಬಂಧಪಟ್ಟ ಮಾಹಿತಿ ಇಲ್ಲದ ಗ್ರಾಮದ ಸ್ಥಳಗಳ ಪರಿಚಯ ವಿವರ, ಸಮಸ್ಯೆಗಳ ಕುರಿತು ಅರಿವಿಲ್ಲದ ಅಧಿಕಾರಿಗಳು ಸಭೆಗಳಲ್ಲಿ ಕಾಟಾಚಾರಕ್ಕೆ ಭಾಗವಹಿಸುತ್ತಿರುವುದು ವಿಷಾದನೀಯ ಎಂದು ಜಿಲ್ಲಾಧಿಕಾರಿ ರವಿ ಕುಮಾರ್‌ ಎಂ.ಆರ್‌. ಅವರು ಅಧಿಕಾರಿಗಳ ವಿರುದ್ಧವೇ ಗರಂ ಆದರು.

ಬೆಳ್ತಂಗಡಿ ತಾಲೂಕಿನ ಮಲವಂತಿಗೆ ಗ್ರಾಮದ ಕಜಕ್ಕೆ ಹಿ.ಪ್ರಾ. ಶಾಲೆಯಲ್ಲಿ ಡಿ. 17ರಂದು ಜರಗಿದ ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಮಾತ ನಾಡಿದ ಅವರು, ಸಾರ್ವಜನಿಕರನ್ನು ಪದೆ ಪದೇ ಕಚೇರಿಗಳಿಗೆ ಅಲೆದಾಡುವಂತೆ ಮಾಡಬೇಡಿ. ಅವರ ಸಮಸ್ಯೆಗಳಿಗೆ ಸೂಕ್ತ ಸ್ಪಂದನೆಯ ಜತೆ ಯೋಜನೆಗಳ ಕುರಿತು ಸರಿಯಾದ ಮಾಹಿತಿ ಒದಗಿಸುವಂತೆ ಖಡಕ್‌ ಸೂಚನೆ ನೀಡಿದರು. ಸಭೆಗೆ ಹಾಜರಾಗದ ಇಲಾಖೆ ಅಧಿಕಾರಿಗಳಿಗೆ ಕ್ರಮ ಕೈಗೊಳ್ಳಲಾಗುವುದು ಎಂದರು.
ಮಲವಂತಿಗೆಯಲ್ಲಿ ಕಂದಾಯ, ಅರಣ್ಯ ಇಲಾಖೆಯ ಜಾಗಗಳು ಅಕ್ಕ ಪಕ್ಕವೇ ಇರುವುದು ದೊಡ್ಡ ಸಮಸ್ಯೆಯಾಗಿದೆ. ಇದಕ್ಕೆ ರೆಖ್ಯ ಗ್ರಾಮದ ಮಾದರಿಯಲ್ಲಿ ಜಿಪಿಎಸ್‌ ಆಧರಿತ ಡ್ರೋನ್‌ನಲ್ಲಿ ಸಮೀಕ್ಷೆ ನಡೆಸಿ ಪರಿಹಾರ ಕಲ್ಪಿಸಲಾಗುವುದು ಎಂದು ಪುತ್ತೂರು ಸಹಾಯಕ ಆಯುಕ್ತ ಗಿರೀಶ್‌ ನಂದನ್‌ ಹೇಳಿದರು.

ಎಲೆಚುಕ್ಕಿ ರೋಗಕ್ಕೆ ಎಕ್ರೆ ಆಧಾರದಲ್ಲಿ ಪರಿಹಾರ
ಎಲೆಚುಕ್ಕಿ ರೋಗ ವ್ಯಾಪಕವಾಗಿದ್ದು ತೋಟಗಾರಿಕೆ ಇಲಾಖೆ ಅಧಿಕಾರಿಗಳು ಸಮೀಕ್ಷೆಗೆ ಬರುವಾಗ ತೋಟಗಳಲ್ಲಿ ಅಡಿಕೆ ಮರಗಳು ಇಲ್ಲದ ಸ್ಥಿತಿ ಇದ್ದು ಸರಿಯಾದ ಮೌಲ್ಯಮಾಪನ ಸಿಗದೇ ಪರಿಹಾರಕ್ಕೆ ತೊಂದರೆಯಾಗುತ್ತಿದೆ ಎಂದು ಗ್ರಾಮಸ್ಥರು ದೂರಿದರು. ಇದಕ್ಕೆ ಎಕ್ರೆ ಆಧಾರದಲ್ಲಿ ಪರಿಹಾರ ನೀಡುವ ಯೋಜನೆ ಬಗ್ಗೆ ಸರಕಾರದ ಗಮನ ಸೆಳೆಯುವ ಕುರಿತು ಅಭಿಪ್ರಾಯ ವ್ಯಕ್ತವಾಯಿತು.

ಎಳನೀರಿನಲ್ಲಿ ಪ್ರಾ.ಆ. ಉಪಕೇಂದ್ರದಲ್ಲಿ ಆರೋಗ್ಯ ಸಹಾಯಕರು ಇಲ್ಲದೆ ಜನರು ದೂರದ ಕಳಸಕ್ಕೆ ತೆರಳುವ ಸ್ಥಿತಿ ಇದೆ ಎಂದು ಗ್ರಾಮಸ್ಥರು ದೂರಿದರು. ರವಿವಾರ ನೂತನ ಸಿಬಂದಿ ನೇಮಕ ಪ್ರಕ್ರಿಯೆ ನಡೆಯಲಿದ್ದು ಮುಂದಿನ ವಾರದೊಳಗೆ ಸಿಬಂದಿ ನೇಮಿಸಿ ಎರಡು ತಿಂಗಳ ತರಬೇತಿ ಬಳಿಕ ಕಳುಹಿಸಿಕೊಡಲಾಗುವುದು ಎಂದು ಡಿಎಚ್‌ಒ ಭರವಸೆ ನೀಡಿದರು.

ಮಲವಂತಿಗೆ ಭಾಗಕ್ಕೆ ಪಿಯು ಕಾಲೇಜು ನಿರ್ಮಾಣವಾಗಬೇಕೆಂದು ಗ್ರಾಮಸ್ಥರು ಆಗ್ರಹಿಸಿದರು. ಕೊಲ್ಲಿ ಅಂಗನವಾಡಿಗೆ ಕಾರ್ಯಕರ್ತೆ ನೇಮಕ, ನರೇಗಾ ಮೂಲಕ ಗ್ರಾಮದ ಅಭಿವೃದ್ಧಿ ಕಾಮಗಾರಿ ನಡೆಸಲು, ನನೆಗುದಿಗೆ ಬಿದ್ದಿರುವ ಕಡತಗಳ ಶೀಘ್ರ ವಿಲೇವಾರಿ ಕುರಿತು ಜಿಲ್ಲಾಧಿಕಾರಿ ಅಧಿಕಾರಿಗಳಿಗೆ ಆದೇಶ ನೀಡಿದರು.

ಗ್ರಾಮದ ಸಮಸ್ಯೆಗೆ ಒತ್ತು ನೀಡಿದ ಡಿಸಿ
ಅಕ್ರಮ ಸಕ್ರಮ ಯೋಜನೆಯಲ್ಲಿ 1992ರಲ್ಲಿ ಕಳೆಂಜ ಗ್ರಾಮದ ಮಾಣಿಗೇರಿಯ ಸುಮಾರು 40 ಕುಟುಂಬಗಳಿಗೆ ಜಾಗ ಮಂಜೂರಾಗಿದ್ದು ಅರಣ್ಯ ಇಲಾಖೆಯ ಎನ್‌ಒಸಿ ಸಿಕ್ಕರೂ ಅಗತ್ಯ ದಾಖಲೆಗಳನ್ನು ನೀಡಲು ಕಂದಾಯ ಇಲಾಖೆ ಸತಾಯಿಸುತ್ತಿರುವ ಕುರಿತು ಗ್ರಾಮಸ್ಥರು ಡಿಸಿ ಗಮನಕ್ಕೆ ತಂದು ಅಗತ್ಯ ದಾಖಲೆ ಒದಗಿಸಿದರು. ಸ್ಥಳದ ಸಮಸ್ಯೆ ಅಲ್ಲದಿದ್ದರೂ ಅಲ್ಲಿನ ಜನರ ಮನವಿ ಮೇರೆಗೆ ದಾಖಲೆ ಪರಿಶೀಲಿಸಿ ಒಂದು ವಾರದೊಳಗೆ ಹಕ್ಕುಪತ್ರ ನೀಡಲು ಆದೇಶ ನೀಡಿದರು.

ಮಲೆಕುಡಿಯ ಸಮುದಾಯ ಭವನ ಪ್ರಸ್ತಾವ
ಜಾಗದ ಸಮಸ್ಯೆಯಿಂದ ಶಿಥಿಲಾವಸ್ಥೆ ತಲುಪಿದ್ದ ದಿಡುಪೆಯ ಮಲೆಕುಡಿಯ ಸಮಾಜ ಮಂದಿರದ ಹಳೆ ಕಟ್ಟಡ ಸ್ಥಳದ ಕುರಿತು ಉದಯವಾಣಿ ಸುದಿನದಲ್ಲಿ ಬೆಳಕು ಚೆಲ್ಲಿತ್ತು. ಸ್ಥಳೀಯರು ಡಿಸಿ ಗಮನಕ್ಕೆ ತಂದಾಗ ಮಲವಂತಿಗೆ ಪಂಚಾಯತ್‌ ಕಟ್ಟಡಕ್ಕೆ ಕಾಯ್ದಿರಿಸಿ ಉಳಿದ ಸ್ಥಳವನ್ನು ಮಲೆಕುಡಿಯ ಸಮುದಾಯ ಭವನಕ್ಕೆ ಕಾಯ್ದಿರಿಸಬೇಕು. ಕುಮ್ಕಿ ಜಾಗದಲ್ಲಿರುವ ಈ ಸ್ಥಳವನ್ನು ಕುಮ್ಕಿ ರಹಿತವಾಗಿ ಸೋಮವಾರ ಆದೇಶ ಮಾಡುವುದಾಗಿ ಡಿಸಿ ಭರವಸೆ ನೀಡಿದರು.

ಟಾಪ್ ನ್ಯೂಸ್

Drug ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು; ಬೆಂಗಳೂರು,ಮಂಗಳೂರಲ್ಲಿ ಡ್ರಗ್ಸ್‌ ಹಾವಳಿ ಹೆಚ್ಚಳ

Karnataka Govt.,; ಡ್ರಗ್‌ ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

Kadri-park

Mangaluru: ಕದ್ರಿ ಪಾರ್ಕ್‌ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ

Puspa-Amar

Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್‌ ಅಧಿಕಾರಿ: ಪುಷ್ಪಾ ಅಮರನಾಥ್‌

MU-Univerasity

Virtual Meeting: ಮಂಗಳೂರು ವಿಶ್ವವಿದ್ಯಾನಿಲಯ ಶೈಕ್ಷಣಿಕ ಮಂಡಳಿ ಸಭೆ

ssa

Mangaluru: ಮಾದಕವಸ್ತು ಸಹಿತ ಮೂವರ ಬಂಧನ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Drug ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು; ಬೆಂಗಳೂರು,ಮಂಗಳೂರಲ್ಲಿ ಡ್ರಗ್ಸ್‌ ಹಾವಳಿ ಹೆಚ್ಚಳ

Karnataka Govt.,; ಡ್ರಗ್‌ ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.