ಬಿಲಾವಲ್ ಭುಟ್ಟೋ ತಲೆ ತೆಗೆದವರಿಗೆ 2 ಕೋಟಿ ರೂ. ಇನಾಮು ಘೋಷಿಸಿದ ಬಿಜೆಪಿ ಮುಖಂಡ
Team Udayavani, Dec 17, 2022, 9:51 PM IST
ಪಾಕ್ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೋ ಜರ್ದಾರಿ
ಬಾಗ್ಪತ್: ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿರುವ ಪಾಕ್ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೋ ಜರ್ದಾರಿ ಅವರ ತಲೆ ತೆಗೆದವರಿಗೆ 2 ಕೋಟಿ ರೂಪಾಯಿ ಇನಾಮು ನೀಡುವುದಾಗಿ ಉತ್ತರ ಪ್ರದೇಶದ ಸ್ಥಳೀಯ ಬಿಜೆಪಿ ನಾಯಕರೊಬ್ಬರು ಶನಿವಾರ ಹೇಳಿದ್ದಾರೆ.
ಭುಟ್ಟೋ ಜರ್ದಾರಿ ಹೇಳಿಕೆಯನ್ನು ವಿರೋಧಿಸಿ ಬಿಜೆಪಿ ರಾಷ್ಟ್ರವ್ಯಾಪಿ ಪ್ರತಿಭಟನೆ ನಡೆಸುತ್ತಿದ್ದು, ಕಲೆಕ್ಟರೇಟ್ನಲ್ಲಿ ನಡೆದ ಪ್ರತಿಭಟನಾ ಸಭೆಯನ್ನುದ್ದೇಶಿಸಿ ಮಾತನಾಡಿದ ಬಾಗ್ಪತ್ನ ಜಿಲ್ಲಾ ಪಂಚಾಯತ್ ಸದಸ್ಯ ಮನುಪಾಲ್ ಬನ್ಸಾಲ್ ಈ ಘೋಷಣೆ ಮಾಡಿದ್ದಾರೆ.
“ಸಚಿವ ಬಿಲಾವಲ್ ಭುಟ್ಟೋ ಶಿರಚ್ಛೇದ ಮಾಡುವ ಯಾರಿಗಾದರೂ ನಾನು 2 ಕೋಟಿ ರೂಪಾಯಿ ಬಹುಮಾನ ನೀಡುತ್ತೇನೆ ಎಂದು ಘೋಷಿಸುತ್ತೇನೆ” ಎಂದು ಬನ್ಸಾಲ್ ಹೇಳಿದ್ದಾರೆ.ಅವರ ಘೋಷಣೆಯ ನಂತರ ಜನಸಮೂಹದಿಂದ ‘ಮನುಪಾಲ್ ಬನ್ಸಾಲ್ ಜಿಂದಾಬಾದ್’ ಘೋಷಣೆಗಳು ಮೊಳಗಿದವು.
ನಂತರ ಪಿಟಿಐ ಜೊತೆ ಮಾತನಾಡಿದ ಬನ್ಸಾಲ್ ,ನಾನು ನನ್ನ ಹೇಳಿಕೆಗೆ ಬದ್ಧವಾಗಿದ್ದೇನೆ. ನಾನು ಇಂದು ಆ ಹೇಳಿಕೆಯನ್ನು ನೀಡಿದ್ದೇನೆ. ನಾವು ತುಂಬಾ ಗೌರವಿಸುವ ನಮ್ಮ ಪ್ರಧಾನಿಯ ಬಗ್ಗೆ ಅವರು ಇಂತಹ ಮಾತುಗಳನ್ನು ಹೇಳುತ್ತಿದ್ದರೆ, ಅಂತಹ ವ್ಯಕ್ತಿಯನ್ನು ನಾವು ಸಹಿಸುವುದಿಲ್ಲ. ನಾವು ನಮ್ಮ ಪ್ರಧಾನ ಮಂತ್ರಿಯೊಂದಿಗೆ ಅಪಾರವಾದ ಬಾಂಧವ್ಯವನ್ನು ಹೊಂದಿದ್ದೇವೆ ಮತ್ತು ನಾವು ಅವರಿಗಾಗಿ ಏನು ಬೇಕಾದರೂ ಮಾಡಲು ನಮಗೆ ಯಾವುದೇ ಸಮಸ್ಯೆ ಇಲ್ಲ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.