ಮತ್ತೊಂದು ವಿಭಜನೆ ತಡೆಯಿರಿ: ರಾಮ್‌ ಮಾಧವ್‌


Team Udayavani, Dec 19, 2022, 6:25 AM IST

ಮತ್ತೊಂದು ವಿಭಜನೆ ತಡೆಯಿರಿ: ರಾಮ್‌ ಮಾಧವ್‌

ಮೈಸೂರು: 1947ರ ಭಾರತ – ಪಾಕಿಸ್ಥಾನ ವಿಭಜನೆಯು ಭೂಮಿಗೆ ಸಂಬಂಧಿಸಿದ್ದಲ್ಲ. ಅದು  ಹೃದಯದ ವಿಭಜನೆಯಾಗಿದೆ. ಇದರಿಂದ ನಾವೆಲ್ಲರೂ ಪಾಠ ಕಲಿತು ದೇಶದ ಮತ್ತೊಂದು ವಿಭಜನೆಯನ್ನು ತಡೆಯಲು ಮುಂದಾಗಬೇಕು ಎಂದು ಬಿಜೆಪಿಯ ಹಿರಿಯ ನಾಯಕ ಮತ್ತು ಆರೆಸ್ಸೆಸ್‌ ಕಾರ್ಯಾಧ್ಯಕ್ಷ ರಾಮ್‌ ಮಾಧವ್‌ ಹೇಳಿದರು.

ತಾನು ಬರೆದಿದ್ದ ಪಾರ್ಟಿಶಿಯನ್‌x ಫ್ರೀಡಂ ಪುಸ್ತಕ ಬಿಡುಗಡೆ ಹಾಗೂ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಮಾನಸಗಂಗೋತ್ರಿಯ ವಿಜ್ಞಾನ ಭವನದಲ್ಲಿ ಮಂಥನ ಮೈಸೂರು ವೈಚಾರಿಕ ವೇದಿಕೆಯಿಂದ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಅಖಂಡ ಭಾರತ ನಿರ್ಮಾಣಕ್ಕಾಗಿ 130 ಕೋಟಿ ಜನರ ಹೃದಯಗಳು ಒಗ್ಗೂಡಬೇಕು. ನಮ್ಮೆಲ್ಲರ ಮನಸ್ಸುಗಳು ಒಗ್ಗೂಡಿದರೆ, ನಾವು ಕಳೆದುಕೊಂಡಿರುವ ಪ್ರದೇಶಗಳು ತಾವಾಗಿಯೇ ಅಖಂಡ ಭಾರತದ ವ್ಯಾಪ್ತಿಗೆ ಬರುತ್ತವೆ ಎಂದರು.

ಇತಿಹಾಸದಿಂದ ಪಾಠ ಕಲಿಯಬೇಕು
ಸ್ವಾತಂತ್ರ್ಯದ ಅಮೃತ ಮಹೋತ್ಸವದಲ್ಲಿ ನಾವಿದ್ದೇವೆ. ಇಲ್ಲಿ ನಿಂತು, ಹಿಂದಿನ ಕಾಲಘಟ್ಟದಲ್ಲಿ ಏನು ನಡೆಯಿತು, ಏನಾಯಿತು ಎನ್ನುವುದೇ ಇತಿಹಾಸ. ಬರೆದವರ ಭಾವಕ್ಕೂ ಸೇರುವಂಥದ್ದು. ಅವರು ಅರ್ಥ ಮಾಡಿಕೊಂಡಿದ್ದನ್ನು ಬರೆದಿರಬಹುದು. ನಾವು ಆ ಕಾಲದಲ್ಲಿ ಇರಲಿಲ್ಲವಾದ್ದರಿಂದ, ನೋಡಿಲ್ಲವಾದ್ದರಿಂದ ಯಾರನ್ನೂ ಟೀಕಿಸುವುದರಿಂದ ಪ್ರಯೋಜನವಿಲ್ಲ. ಆದರೆ, ಆ ಇತಿಹಾಸದಿಂದ ಪಾಠವನ್ನು ಕಲಿಯಬೇಕಾಗುತ್ತದೆ ಎಂದು ಹೇಳಿದರು.

ಬ್ರಿಟಿಷರು ಧಾರ್ಮಿಕ ತಳಹದಿಯಲ್ಲಿ ಹಿಂದೂ- ಮುಸ್ಲಿಮರನ್ನು ವಿಭಜಿಸಿದ್ದರು. ಆದರೆ, ಈಗಲೂ ನಾವು ಬೇರೆ ಬೇರೆಯಾಗಿರುವುದು ಸರಿಯಲ್ಲ. ದೇಶದಲ್ಲಿರುವ ಎಲ್ಲರೂ ಒಗ್ಗೂಡಬೇಕು. ಐಕ್ಯತೆ ಕಾಪಾಡಿಕೊಳ್ಳಬೇಕು. ದೇಶವು ಒಗ್ಗೂಡುವುದಕ್ಕಾಗಿ ಯಾವುದೇ ತ್ಯಾಗಕ್ಕೂ ಸಿದ್ಧವಾಗಬೇಕು. ಇದನ್ನು ಪ್ರಧಾನಿ ನರೇಂದ್ರ ಮೋದಿ ಒಬ್ಬರೇ ಮಾಡಲಾಗದು. ಎಲ್ಲರೂ ಕೈಜೋಡಿಸಬೇಕು ಎಂದು ತಿಳಿಸಿದರು.

ಹೃದಯ  ಒಡೆಯುವುದನ್ನೂ ನಿಲ್ಲಿಸಬೇಕು
ಹಿಂದೂಗಳಲ್ಲೂ ಕೆಲವರು ನಾವೆಲ್ಲರೂ ಒಟ್ಟಿಗೆ ಬದುಕಲಾಗುವುದಿಲ್ಲ ಎಂದು ಭಾವಿಸಿದ್ದಾರೆ. ಇದು ದೂರಾಗಬೇಕು. ಹೃದಯಗಳನ್ನು ಒಡೆಯುವುದನ್ನೂ ನಿಲ್ಲಿಸಬೇಕು. ಅಂತಹ ಕೆಲಸ ಮಾಡುವ ಶಕ್ತಿಗಳನ್ನು ಧಿಕ್ಕರಿಸಬೇಕು. ಮನಸ್ಸುಮನಸ್ಸುಗಳ ನಡುವೆ ಸೇತುವೆ ನಿರ್ಮಿಸಬೇಕು. ಆಗ, ಆಕ್ರಮಿಸಿಕೊಂಡಿರುವ ಜಾಗಗಳೂ ನಮ್ಮದಾಗುತ್ತವೆ ಎಂದರು.

ದೇಶವು ವಿಭಜನೆಯಾಗಿದ್ದೇಕೆ ಎನ್ನುವುದನ್ನು ಈ ಪುಸ್ತಕದಲ್ಲಿ ಬರೆದಿದ್ದೇನೆ. ವಿಭಜನೆಗೆ ಮಹಾತ್ಮ ಗಾಂಧೀಜಿ ವಿರೋಧವಿತ್ತು. ಅಖಂಡ ಭಾರತ ಇರಬೇಕು ಎನ್ನುವುದು ಅವರ ಉದ್ದೇಶವಾಗಿತ್ತು ಎಂದು ಹೇಳಿದರು.

ಪತ್ರಿಕೋದ್ಯಮಿ ಕೆ.ಬಿ.ಗಣಪತಿ,  ಮಂಥನ ಮೈಸೂರು ಸಂಚಾಲಕ ವಿಶ್ವನಾಥ್‌ ಮೊದಲಾದವರು ಉಪಸ್ಥಿತರಿದ್ದರು.

ಇನ್ನೊಂದು ಪಾಕ್‌‌ ಸೃಷ್ಟಿಗೆ ಯತ್ನ
ಮೈಸೂರು: ನರಸಿಂಹರಾಜ ಕ್ಷೇತ್ರದಲ್ಲಿ ನರಸಿಂಹರಾಜ ಹೋಗಿದ್ದಾನೆ. ಟಿಪ್ಪು ರಾಜನಾಗಿದ್ದಾನೆ. ಮತ್ತೊಂದು ಪಾಕಿಸ್ಥಾನ ಸೃಷ್ಟಿಸುವ ಕೆಲಸ ಇಲ್ಲಿ ನಡೆಯುತ್ತಿದೆ ಎಂದು ಕಲ್ಲಡ್ಕ ಪ್ರಭಾಕರ ಭಟ್‌ ಹೇಳಿದರು.

ನಗರದ ಬನ್ನಿಮಂಟಪ ಮೈದಾನದಲ್ಲಿ ರವಿ ವಾರ ನಡೆದ ಮೈಸೂರು ನಗರದ ಆರೆಸ್ಸೆಸ್‌ ಶಾಖೆಗಳ ಏಕತ್ರಿಕರಣ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದೇಶದಲ್ಲಿ ದೇಶ ವಿರೋಧಿ ಚಟುವಟಿಕೆಗಳು ಹೆಚ್ಚುತ್ತಿದ್ದು, ಮತ್ತೊಂದು ಪಾಕಿಸ್ಥಾನ ಸೃಷ್ಟಿಗೆ ಯತ್ನ ನಡೆಯುತ್ತಿದೆ ಎಂದರು.

ದೇವಸ್ಥಾನಗಳನ್ನು ನಾಶ ಮಾಡಿದ, ಮಹಿಳೆಯರ ಮೇಲೆ ಅತ್ಯಾಚಾರ ಮಾಡಿದ ಹಿಂದೂ ವಿರೋಧಿ ಟಿಪ್ಪುವನ್ನು ಹುಲಿ ಎಂದು ಕರೆಯುತ್ತಿದ್ದಾರೆ. ಜತೆಗೆ ಆತನನ್ನು ರಾಜನನ್ನಾಗಿ ಮಾಡಲು ಹೊರಟಿ¨ªಾರೆ. ಇದು ನರಸಿಂಹರಾಜ ಕ್ಷೇತ್ರಕ್ಕೆ ಸೀಮಿತವಲ್ಲ. ಇದೊಂದು ಚಿಂತನೆಯಾಗಿದ್ದು, ಇಡೀ ದೇಶದಲ್ಲಿಯೇ ಕೆಲಸ ಮಾಡುತ್ತಿದೆ. ಈ ಬಗ್ಗೆ ನಾವೆಲ್ಲ ಜಾಗರೂಕರಾಗಬೇಕು ಎಂದು ಹೇಳಿದರು.

ಹಿಂದೂ ಸಮಾಜ ಎಲ್ಲರನ್ನೂ ಗೌರವಿಸುತ್ತದೆ. ಜಗತ್ತು ಉಳಿಯಬೇಕೆಂದರೆ ಭಾರತ ಉಳಿಯ ಬೇಕು. ಭಾರತ ಉಳಿಯಬೇಕೆಂದರೆ ಹಿಂದೂ ಉಳಿಯಬೇಕು. ಹಿಂದೂಗಳನ್ನು ಉಳಿಸುವ ಕಾರ್ಯವನ್ನು ಆರೆಸ್ಸೆಸ್‌ ಮಾಡುತ್ತಿದೆ  ಎಂದರು.

ಟಾಪ್ ನ್ಯೂಸ್

1-asaaasa

Hindutva ಮತ್ತು ಹಿಂದೂಗಳಿಗೆ ಒಳ್ಳೆಯದಾಗಲಿ: ದೇವರ ಹುಂಡಿಗೆ ಪತ್ರ!

BJP ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ದ‌ ದೂರು ದಾಖಲು

BJP ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ದ‌ ದೂರು ದಾಖಲು

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Vinay Kulakarni

BJP ದ್ವೇಷದ ರಾಜಕಾರಣಕ್ಕೆ ನಾನೇ ದೊಡ್ಡ ಸಾಕ್ಷಿ‌: ಶಾಸಕ ವಿನಯ ಕುಲಕರ್ಣಿ ಆಕ್ರೋಶ

Yakshagana: ಶತಾವಧಾನಿ ಗಣೇಶ್ ರಿಗೆ ಉತ್ತರ ಕನ್ನಡ ಜಿಲ್ಲಾ ಯಕ್ಷಶ್ರೀ ಪ್ರಶಸ್ತಿ ಘೋಷಣೆ

Udayavani.com “ನಮ್ಮನೆ ಕೃಷ್ಣ”: ದ್ವಿತೀಯ ಬಹುಮಾನ ಗಳಿಸಿದ ರೀಲ್ಸ್

Udayavani.com “ನಮ್ಮನೆ ಕೃಷ್ಣ”: ದ್ವಿತೀಯ ಬಹುಮಾನ ಗಳಿಸಿದ ರೀಲ್ಸ್

kejriwal-2

AAP ಬೇಡಿಕೆ: ನಿರ್ಗಮಿತ ಸಿಎಂ ಕೇಜ್ರಿವಾಲ್ ಅವರಿಗೆ ಸರಕಾರಿ ವಸತಿ ಕಲ್ಪಿಸಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap ಸ್ಲೀಪರ್ ಕೋಚ್ ಬಸ್ ಪಲ್ಟಿ: ಓರ್ವ ಮೃತ್ಯು; 11 ಮಂದಿಗೆ ಗಾಯ

Road Mishap ಸ್ಲೀಪರ್ ಕೋಚ್ ಬಸ್ ಪಲ್ಟಿ: ಓರ್ವ ಮೃತ್ಯು; 11 ಮಂದಿಗೆ ಗಾಯ

CM Siddaramaiah slams BJP about Ganeshotsav riot

Mysuru; ಬಿಜೆಪಿಯವರ ಕುಮ್ಮಕ್ಕಿನಿಂದಲೇ ರಾಜ್ಯದಲ್ಲಿ ಗಲಾಟೆ: ಸಿಎಂ ಸಿದ್ದರಾಮಯ್ಯ ಆರೋಪ

ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ

Mysuru Dasara 2024: ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ

Mysore Dasara: ಮರದ ಅಂಬಾರಿ ಹೊತ್ತು ಅಭಿಮನ್ಯು ತಾಲೀಮು

Mysore Dasara: ಮರದ ಅಂಬಾರಿ ಹೊತ್ತು ಅಭಿಮನ್ಯು ತಾಲೀಮು

Hunasur: ಸಾವಿನಲ್ಲೂ ಒಂದಾದ ಅಕ್ಕ- ತಮ್ಮ

Hunasur: ಸಾವಿನಲ್ಲೂ ಒಂದಾದ ಅಕ್ಕ- ತಮ್ಮ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

POlice

Kundapura: ನಿಂದನೆ, ಜೀವ ಬೆದರಿಕೆ: ಕೇಸು ದಾಖಲು

13

Udupi: ಅಪಾಯಕಾರಿಯಾಗಿ ಬಸ್‌ ಚಾಲನೆ: ಪ್ರಕರಣ ದಾಖಲು

11

Udupi: ರೈಲು ಹತ್ತುತ್ತಿದ್ದಾಗ ಬಿದ್ದ ಮಹಿಳೆಯ ರಕ್ಷಣೆ

1-aaccc

Mangaluru; ಕುಂಟಿಕಾನದಲ್ಲಿ ಅಪಘಾತ: ಕಾಲೇಜು ವಿದ್ಯಾರ್ಥಿ ಸಾ*ವು

3

Uppala: ಸುಮಾರು 3.5 ಕೋಟಿ ರೂ. ಮೌಲ್ಯದ ಅಮಲು ಪದಾರ್ಥ ವಶಕ್ಕೆ : ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.