‘ಜೋರ್ಡನ್’ ನಲ್ಲಿ ಫ್ಯಾಮಿಲಿ ಡ್ರಾಮಾ: ಡಿ.30ಕ್ಕೆ ತೆರೆಗೆ


Team Udayavani, Dec 19, 2022, 6:31 PM IST

kannada movie jordan ready to release

ಸದ್ದಿಲ್ಲದೇ ತಯಾರಾದ, ವಿನೋದ್‌ ಧಯಾಳನ್‌ ನಿರ್ದೇಶನದ “ಜೋರ್ಡನ್‌’ ಸಿನಿಮಾ ಬಿಡುಗಡೆಯ ಹೊಸ್ತಿಲಿಗೆ ಬಂದಿದೆ. ಇದೇ ಡಿಸೆಂಬರ್‌ 30 ರಂದು ಚಿತ್ರ ತೆರೆಕಾಣಲಿದ್ದು, ಬಿಡುಗಡೆಯ ಮೊದಲ ಹಂತವಾಗಿ ಚಿತ್ರದ ಟ್ರೇಲರ್‌ ಬಿಡುಗಡೆ ಮಾಡಿದೆ ಚಿತ್ರತಂಡ. ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಭಾ.ಮ. ಹರೀಶ್‌ ಟ್ರೇಲರ್‌ ಬಿಡುಗಡೆ ಮಾಡುವ ಮೂಲಕ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ.

ನಿರ್ದೇಶಕ ವಿನೋದ್‌ ಧಯಾಳನ್‌ ಮಾತನಾಡಿ, “ಅಮೆರಿಕನ್‌ ಬಾಸ್ಕೆಟ್‌ ಬಾಲ್‌ ಆಟಗಾರ ಮೈಕಲ್‌ ಜೋರ್ಡನ್‌ ಹೇಳಿರುವ ವೈಫ‌ಲ್ಯವನ್ನು ನಾನು ಒಪ್ಪಿಕೊಳ್ಳುತ್ತೇನೆ, ಪ್ರತಿಯೊಬ್ಬರೂ ಯಾವುದಾದರೂ ವಿಷಯದಲ್ಲಿ ವಿಫ‌ಲರಾಗುತ್ತಾರೆ ಆದರೆ ಪ್ರಯತ್ನ ಪಡದೇ ವೈಫ‌ಲ್ಯವನ್ನು ನಾನು ಎಂದಿಗೂ ಒಪ್ಪಿಕೊಳ್ಳಲು ಸಾಧ್ಯವಿಲ್ಲ’ ಎಂಬ ಹೇಳಿಕೆಯನ್ನು ಆಧಾರವಾಗಿಟ್ಟುಕೊಂಡು ಈ ಸಿನಿಮಾ ಕಥೆಯನ್ನು ಹೆಣೆಯಲಾಗಿದೆ. ಕೌಟುಂಬಿಕ ಕಥಾಹಂದರ ಒಳಗೊಂಡ ಸ್ಪೂರ್ತಿದಾಯಕ ಸಿನಿಮಾವಾಗಿದೆ. ಕಥೆಯೇ ಈ ಚಿತ್ರದ ಹೀರೋ. ಕಾಮಿಡಿ ಕಿಲಾಡಿ ಖ್ಯಾತಿಯ ಮಹೇಂದ್ರ ಪ್ರಸಾದ್‌ ಹಾಗೂ ಸಂಪತ್‌ ಮೈತ್ರೇಯ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದಾರೆ. ಈ ಹಿಂದೆ ಕಿರು ಚಿತ್ರಗಳನ್ನು ನಿರ್ದೇಶನ ಮಾಡಿದ್ದ ನನಗೆ ಇದು ಮೊದಲ ಸಂಪೂರ್ಣ ಸಿನಿಮಾ’ ಎಂದು ಚಿತ್ರದ ಬಗ್ಗೆ ಮಾಹಿತಿ ಹಂಚಿಕೊಂಡರು.

ನಾಯಕ ಮಹೇಂದ್ರ ಪ್ರಸಾದ್‌ ಮಾತನಾಡಿ, “ನನ್ನ ನಟನೆಯ ಮೊದಲ ಸಿನಿಮಾ ಇದಾಗಿದ್ದು, ಚಿತ್ರದಲ್ಲಿ ಮೈಕಲ್‌ ಪಾತ್ರವನ್ನು ಮಾಡಿದ್ದೇನೆ. ತಂದೆ ಮಗನ ಬಾಂಧವ್ಯ ಚಿತ್ರದಲ್ಲಿದೆ. ಈ ಸಿನಿಮಾ ಮುಗಿಯುವವರೆಗೆ ಯಾವ ಚಿತ್ರವನ್ನು ನಾನು ಒಪ್ಪಿಕೊಳ್ಳದೇ ಪಾತ್ರದಲ್ಲೇ ತಲ್ಲೀನನಾಗಿದ್ದೆ. ನಿರ್ದೇಶಕರು ನನ್ನ ಪಾತ್ರದ ಬಗ್ಗೆ ತಿಳಿಸಿಕೊಟ್ಟು ನನ್ನಿಂದ ಅಭಿನಯ ಮಾಡಿಸಿದ್ದಾರೆ’ ಎಂದರು.

ಚಿತ್ರದ ಮತ್ತೋರ್ವ ನಾಯಕ ಸಂಪತ್‌ ಮೈತ್ರೇಯ ಮಾತನಾಡಿ, “ನನ್ನ ಸ್ನೇಹಿತರೊಬ್ಬರ ಮೂಲಕ ಈ ಸಿನಿಮಾ ನನಗೆ ಸಿಕ್ಕಿತು. ತುಂಬಾ ಒಳ್ಳೆ ಕಂಟೆಂಟ್‌ ಇರುವ ಸಿನಿಮಾ’ ಎಂದರು.

ಸೀತಾರ, ಸುನೀಲ್, ಯೋಗೇಶ್‌ ಶಂಕರ್‌ ನಾರಾಯಣನ್‌, ಗಣೇಶ್‌ ಜೈ ಕುಮಾರ್‌ ಚಿತ್ರದ ತಾರಾಬಳಗದಲ್ಲಿದ್ದಾರೆ. ನೋ ನಾನ್ಸೆನ್ಸ್ ಕ್ರಿಯೇಷನ್ಸ್ ಬ್ಯಾನರ್‌ ನಡಿ ಜೆ.ಜಾನಕಿರಾಮ್, ಎನ್‌ ಆರ್‌ .ಪಾಟೀಲ್‌ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಜೈಕುಮಾರ್‌ ಜೆ ಸ್ಟಾಲಿನ್‌ ಛಾಯಾಗ್ರಹಣ, ಸಾಯಿ ಸರ್ವೇಶ್‌ ಸಂಗೀತ ನಿರ್ದೇಶನ ಹಾಗೂ ಸಾಹಿತ್ಯ, ನಿರಂಜನ್‌ ದೇವರಮನೆ ಸಂಕಲನ ಚಿತ್ರಕ್ಕಿದೆ.

ಟಾಪ್ ನ್ಯೂಸ್

belagavi

Belagavi; ಮಳೆಯ ನಡುವೆಯೂ ವಿವಾದಿತ ಕಳಸಾ ನಾಲಾ ಪ್ರದೇಶಕ್ಕೆ ಅಧಿಕಾರಿಗಳ ಭೇಟಿ

6-kalburgi

Kalaburagi: ವೈದ್ಯಕೀಯ ದ್ರವ ಆಮ್ಲಜನಕ ಸೋರಿಕೆ ಬಗ್ಗೆ ಡಿ.ಎಚ್.ಓ ಸ್ಪಷ್ಟನೆ

Hit & run: ದಂಪತಿಗೆ ಢಿಕ್ಕಿ ಹೊಡೆದ ಬಿಎಂಡಬ್ಲ್ಯು ಕಾರು; ಪತ್ನಿ ಸಾವು, ಪತಿಗೆ ಗಾಯ

Hit & run: ದಂಪತಿಗೆ ಢಿಕ್ಕಿ ಹೊಡೆದ ಬಿಎಂಡಬ್ಲ್ಯು ಕಾರು; ಪತ್ನಿ ಸಾವು, ಪತಿಗೆ ಗಾಯ

Gadag; ಜಿಲ್ಲೆಯಲ್ಲಿ ಡೇಂಜರ್ ಡೆಂಘೀಗೆ ಮೊದಲ ಬಲಿ

Gadag; ಜಿಲ್ಲೆಯಲ್ಲಿ ಡೇಂಜರ್ ಡೆಂಘೀಗೆ ಮೊದಲ ಬಲಿ

Haveri; 12 ವರ್ಷದ ಬಾಲಕನಿಗೆ ಇಲಿ ಜ್ವರ

Haveri; 12 ವರ್ಷದ ಬಾಲಕನಿಗೆ ಇಲಿ ಜ್ವರ

Hollywood: ಆಸ್ಕರ್‌ ವಿಜೇತ ‘ಟೈಟಾನಿಕ್‌ʼ, ʼಅವತಾರ್‌ʼ ನಿರ್ಮಾಪಕ ಜಾನ್ ಲ್ಯಾಂಡೌ ನಿಧನ

Hollywood: ಆಸ್ಕರ್‌ ವಿಜೇತ ‘ಟೈಟಾನಿಕ್‌ʼ, ʼಅವತಾರ್‌ʼ ನಿರ್ಮಾಪಕ ಜಾನ್ ಲ್ಯಾಂಡೌ ನಿಧನ

4-chincholi

Chincholi: ಆಕ್ಸಿಜನ್ ಪ್ಲಾಂಟ್ ನಲ್ಲಿ ಅನಿಲ ಸೋರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Renukaswamy case: ದರ್ಶನ್‌ ಗ್ಯಾಂಗ್‌ ವಿರುದ್ಧ 200 ಸಾಕ್ಷಿಗಳ ಸಂಗ್ರಹ

Renukaswamy case: ದರ್ಶನ್‌ ಗ್ಯಾಂಗ್‌ ವಿರುದ್ಧ 200 ಸಾಕ್ಷಿಗಳ ಸಂಗ್ರಹ

ಸಾಲು-ಸಾಲು ಹೊಸ ಸಿನೆಮಾ: ಕೋಸ್ಟಲ್‌ವುಡ್‌ಗೀಗ ಪರ್ವ ಕಾಲ!

ಸಾಲು-ಸಾಲು ಹೊಸ ಸಿನೆಮಾ: ಕೋಸ್ಟಲ್‌ವುಡ್‌ಗೀಗ ಪರ್ವ ಕಾಲ!

ರಿಶ್ವಿ‌ಕ್‌ ಶೆಟ್ಟಿ ನಿರ್ಮಾಣದ “ಬಿಲ್ಲಾರಿ” ಮುಹೂರ್ತ

Billari; ರಿಶ್ವಿ‌ಕ್‌ ಶೆಟ್ಟಿ ನಿರ್ಮಾಣದ “ಬಿಲ್ಲಾರಿ” ಮುಹೂರ್ತ

vidyarthi vidyarthiniyare premier show in dubai

ದುಬೈನಲ್ಲಿ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ ಪ್ರೀಮಿಯರ್‌ ಶೋ

Huccha movie to be re-released with technical update

Huccha; ತಾಂತ್ರಿಕ ಅಪ್ಡೇಟ್ ನೊಂದಿಗೆ ಮರು ಬಿಡುಗಡೆಯಾಗಲಿದೆ ‘ಹುಚ್ಚ’

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

belagavi

Belagavi; ಮಳೆಯ ನಡುವೆಯೂ ವಿವಾದಿತ ಕಳಸಾ ನಾಲಾ ಪ್ರದೇಶಕ್ಕೆ ಅಧಿಕಾರಿಗಳ ಭೇಟಿ

Kalaburagi; ವ್ಯಕ್ತಿತ್ವ ನಿರ್ಮಾಣ ದಾಸ ಸಾಹಿತ್ಯದ ಧ್ಯೇಯ: ಡಾ.ಅಗ್ನಿಹೋತ್ರಿ

Kalaburagi; ವ್ಯಕ್ತಿತ್ವ ನಿರ್ಮಾಣ ದಾಸ ಸಾಹಿತ್ಯದ ಧ್ಯೇಯ: ಡಾ.ಅಗ್ನಿಹೋತ್ರಿ

6-kalburgi

Kalaburagi: ವೈದ್ಯಕೀಯ ದ್ರವ ಆಮ್ಲಜನಕ ಸೋರಿಕೆ ಬಗ್ಗೆ ಡಿ.ಎಚ್.ಓ ಸ್ಪಷ್ಟನೆ

5-vitla

Vitla: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಕಾರು

Hit & run: ದಂಪತಿಗೆ ಢಿಕ್ಕಿ ಹೊಡೆದ ಬಿಎಂಡಬ್ಲ್ಯು ಕಾರು; ಪತ್ನಿ ಸಾವು, ಪತಿಗೆ ಗಾಯ

Hit & run: ದಂಪತಿಗೆ ಢಿಕ್ಕಿ ಹೊಡೆದ ಬಿಎಂಡಬ್ಲ್ಯು ಕಾರು; ಪತ್ನಿ ಸಾವು, ಪತಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.