![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Dec 20, 2022, 9:21 AM IST
ಗಂಗಾವತಿ: ತಾಲೂಕಿನ ಬಸಾಪಟ್ಟಣ ಗ್ರಾಮದ ಬಾಲನಗೌಡ ಎಂಬವರಿಗೆ ಪುಣೆಯ ಸೈನಿಕ ತರಬೇತಿ ಕೇಂದ್ರದಲ್ಲಿ ಯಶಸ್ವಿಯಾಗಿ ಭೂಸೇನೆಯ ತರಬೇತಿ ಮುಗಿಸಿ ಜಮ್ಮು ಕಾಶ್ಮೀರದಲ್ಲಿ ಭೂಸೇನೆಯ ಲೆಫ್ಟಿನೆಂಟ್ ಆಗಿ ನೇಮಕಗೊಂಡು ಪ್ರಥಮ ಬಾರಿ ಸ್ವಗ್ರಾಮ ಬಸಾಪಟ್ಟಣಕ್ಕೆ ಆಗಮಿಸಿದ ಸಂದರ್ಭದಲ್ಲಿ ಗ್ರಾಮಸ್ಥರು ಅದ್ದೂರಿಯಾಗಿ ಸ್ವಾಗತಿಸಿದರು.
ಗ್ರಾ.ಪಂ.ಕಚೇರಿ, ನಂಜುಂಡೇಶ್ವರ ಮಠ, ಗಂಗಾವತಿ ಕೋಟೆ ಹಾಗೂ ಕುಟುಂಬದವರೆಲ್ಲರೂ ಸೇರಿ ವಿವಿಧ ಸ್ಥಳಗಳಲ್ಲಿ ಸೇನಾಧಿಕಾರಿ ಬಾಲನಗೌಡ ಹಾಗೂ ಅವರ ಪಾಲಕರನ್ನು ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಬಾಲನಗೌಡ ಮಾತನಾಡಿ, ಯುವಕರು ದೇಶ ಭಕ್ತಿ ಮೈಗೂಡಿಸಿಕೊಂಡು ಪಾಲಕರ ಕನಸು ನನಸು ಮಾಡಲು ಶ್ರಮವಹಿಸಿ ಓದಬೇಕು. ಉನ್ನತ ಹುದ್ದೆಯ ಕನಸನ್ನು ಚಿಕ್ಕಂದಿನಿಂದಲೇ ಕಂಡು ನನಸು ಮಾಡಲು ನಿತ್ಯವೂ ಪರಿಶ್ರಮಪಡಬೇಕು. ಸೇನೆಗೆ ಸೇರಿ ಜಮ್ಮು ಕಾಶ್ಮೀರದಲ್ಲಿ ಲೆಫ್ಟಿನೆಂಟ್ ಆಗಿ ಸೇವೆ ಮಾಡುವ ಅವಕಾಶ ದೊರಕಿರುವುದು ನಮ್ಮಕುಟುಂಬ ಮತ್ತು ಗುರು ಹಿರಿಯ ಆಶೀರ್ವಾದ. ವಿದ್ಯಾರ್ಥಿಗಳು ದುಶ್ಚಟಕ್ಕೆ ಬಲಿಯಾಗದೇ ಮೊಬೈಲ್ ಗೀಳಿಗೆ ಬೀಳದೆ ಉತ್ತಮ ಭವಿಷ್ಯದ ಕಡೆ ಗಮನ ಹರಿಸುವಂತೆ ಕರೆ ನೀಡಿದರು.
ಈ ಸಂದರ್ಭದಲ್ಲಿ ಪೂಜ್ಯ ಸಿದ್ದಯ್ಯ, ಸಿದ್ದರಾಮಯ್ಯ ಗುರುವಿನ್, ಶರಣೇಗೌಡ, ಶೇಖರಗೌಡ, ಮಹೆಬೂಬಸಾಬ, ಬಸಾಪಟ್ಟಣದ ಗ್ರಾಮಸ್ಥರು, ಗ್ರಾ.ಪಂ. ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ವೀರಶೈವ ಲಿಂಗಾಯತ ಸಮಾಜದವರಿದ್ದರು.
Gangavati: 15 ದಿನದಲ್ಲೇ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು…
Gangavathi: ಬ್ರಹ್ಮಾವರ ಮೂಲದ ದೇಗುಲ ಕಟ್ಟಡ ಎಂಜಿನಿಯರ್ ಕೊಪ್ಪಳದಲ್ಲಿ ಆತ್ಮಹ*ತ್ಯೆ
Tawargera: ಲಾರಿ-ಬುಲೆರೋ ವಾಹನ ಡಿಕ್ಕಿ; ಇಬ್ಬರು ಸಾವು
Kanakagiri: ಬ್ಯಾಂಕಿನಲ್ಲಿಯೇ ವೃದ್ಧ ಗ್ರಾಹಕನ ಹಣ ಎಗರಿಸಿದ ಖದೀಮರು
Koppal: ರಾಜ್ಯದಲ್ಲಿ ನಾವು ಸ್ಟ್ರಾಂಗ್ ಇದ್ದಿದ್ದರಿಂದ ಇವಿಎಂ ಕಿತಾಪತಿ ನಡೆದಿಲ್ಲ; ತಂಗಡಗಿ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.