ನಾಳೆ ಪಂಚಮಸಾಲಿ ಮೀಸಲಾತಿ ಪ್ರಕಟಣೆ ಆಗಲಿದೆ: ಯತ್ನಾಳ್
Team Udayavani, Dec 21, 2022, 12:20 PM IST
ಬೆಳಗಾವಿ: ನಾಳೆ ಶಕ್ತಿಪ್ರದರ್ಶನ ಆಗವುದರಿಂದ, ಬೊಮ್ಮಾಯಿ ಐತಿಹಾಸಿಕ ನಿರ್ಧಾರ ಮಾಡಲಿದ್ದಾರೆ. ನಾವು ಯಾರಿಗೂ ಆಹ್ವಾನ ನೀಡುತ್ತಿಲ್ಲ, 25 ಲಕ್ಷ ಜನ ಬರುತ್ತಾರೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.
ನಾಳೆ ಪಂಚಮಸಾಲಿ ಸಮುದಾಯದ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿರುವ ಕುರಿತು ಸುವರ್ಣಸೌಧದಲ್ಲಿ ಮಾತನಾಡಿದ ಅವರು, ಸರ್ಕಾರದ ಮೇಲೆ ವಿಶ್ವಾಸ ಇದೆ. ನಾಳೆ ಪಂಚಮಸಾಲಿ ಮೀಸಲಾತಿ ಪ್ರಕಟಣೆ ಆಗಲಿದೆ. ಗುರುವಾರ ಈ ನಿಟ್ಟಿನಲ್ಲಿ ಐತಿಹಾಸಿಕ ಘೋಷಣೆ ಆಗಲಿದೆ. ಅಷ್ಟೇ ಅಲ್ಲದೆ ಬೆಳಗಾವಿಯಲ್ಲಿ ಸ್ವಯಂಪ್ರೇರಿತವಾಗಿ ಜನ ಬಂದು ಶಕ್ತಿ ಪ್ರದರ್ಶನ ಮಾಡಲಿದ್ದಾರೆ ಎಂದರು.
ಇದನ್ನೂ ಓದಿ:ಮೊದಲು ನಾನು ಬಿಜೆಪಿಯ ಕಾರ್ಯಕರ್ತ ನಂತರ ಸಭಾಪತಿ: ರಘುನಾಥ್ ಮಲ್ಕಾಪುರೆ
ನಾಳೆ ಶಕ್ತಿಪ್ರದರ್ಶನ ಆಗವುದರಿಂದ, ಬೊಮ್ಮಾಯಿ ಐತಿಹಾಸಿಕ ನಿರ್ಧಾರ ಮಾಡಲಿದ್ದಾರೆ. ನಾವು ಯಾರಿಗೂ ಆಹ್ವಾನ ನೀಡುತ್ತಿಲ್ಲ, 25 ಲಕ್ಷ ಜನ ಬರುತ್ತಾರೆ. ನಿರಾಣಿ ಬಂದರೆ ಅವರನ್ನು ವೇದಿಕೆ ಮೇಲೆ ಕರೆಯುವುದಿಲ್ಲ. ಅವರಿಗೆ ಕೆಳಗೆ ಕುರ್ಚಿ ಹಾಕುತ್ತೇವೆ. ಇನ್ನು ಮೀಸಲಾತಿ ಶ್ರೇಯ ಯಾರಿಗೆ ಲಭಿಸಬೇಕು ಎಂಬ ಕುರಿತು ಪ್ರತಿಕ್ರಿಯಿಸಿದ ಅವರು, ಇದು ಯಾರೊಬ್ಬರಿಗೂ ಸೀಮಿತವಲ್ಲ, ಸಮುದಾಯದ ಕಟ್ಟಡೆಯ ವ್ಯಕ್ತಿಗೆ ಸೇರುತ್ತದೆ ಎಂದು ತಿಳಿಸಿದರು.
ಎಲ್ಲಾ ಒಳ್ಳೆಯದಾಗಲಿದೆ: ಇದೇ ವೇಳೆ ಪಂಚಮಸಾಲಿ ಮೀಸಲಾತಿ ವಿಚಾರವಾಗಿ ಮಾತನಾಡಿದ ಸಚಿವ ಸಿ.ಸಿ.ಪಾಟೀಲ್, ಜಯಮೃತ್ಯುಂಜಯ ಸ್ವಾಮೀಜಿ ಫೋನ್ ಮಾಡಿ, ಸಿಹಿ ಸುದ್ದಿ ಸಿಗುತ್ತಾ ಎಂದು ಕೇಳಿದರು. ಮುಖ್ಯಮಂತ್ರಿಯನ್ನು ಕೇಳಬೇಕು ಎಂದು ನಾನು ಹೇಳಿದ್ದೇನೆ. ಹೋಪ್ ಫಾರ್ ದ ಬೆಸ್ಟ್ ಎಂದಿದ್ದೇನೆ. ಇನ್ನು ಸುವರ್ಣಸೌಧದಲ್ಲಿ ನಾಳೆ ಸಮುದಾಯದವರು ಬೃಹತ್ ಪ್ರತಿಭಟನೆ ಹಮ್ಮಿಕೊಂಡಿರುವ ಕುರಿತು ಮಾತನಾಡಿದ ಅವರು, ಇದು ಶಕ್ತಿ ಪ್ರದರ್ಶನ ಅಂತಲ್ಲ, 2ಎ ಮೀಸಲಾತಿಗಾಗಿ ಹಕ್ಕೊತ್ತಾಯ ಮಾಡುತ್ತಿದ್ದಾರೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
R. Ashok: “ಮುಸ್ಲಿಂ ಭಯೋತ್ಪಾದಕರಿಗೆ ಸರಕಾರದಿಂದಲೇ ಕುಮ್ಮಕ್ಕು’
Chikkodi; ಈದ್ ಮಿಲಾದ್ ಮೆರವಣಿಗೆಯಲ್ಲಿ ಹಾರಾಡಿದ ಪ್ಯಾಲೇಸ್ತೀನ್ ಧ್ವಜ
Bidar; ಪತ್ನಿ ಜತೆ ಅನೈತಿಕ ಸಂಬಂಧ:ಯುವಕನ ಮರ್ಮಾಂಗಕ್ಕೆ ಕತ್ತರಿ ಹಾಕಿದ ಪತಿ!!
Hindutva ಮತ್ತು ಹಿಂದೂಗಳಿಗೆ ಒಳ್ಳೆಯದಾಗಲಿ: ದೇವರ ಹುಂಡಿಗೆ ಪತ್ರ!
BJP ದ್ವೇಷದ ರಾಜಕಾರಣಕ್ಕೆ ನಾನೇ ದೊಡ್ಡ ಸಾಕ್ಷಿ: ಶಾಸಕ ವಿನಯ ಕುಲಕರ್ಣಿ ಆಕ್ರೋಶ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.