ತೋಟಗಾರಿಕೆ ಇಲಾಖೆ ವಿಕೇಂದ್ರೀಕರಣ: ಬೈಂದೂರು, ಕಾಪು, ಹೆಬ್ರಿಗೆ ಪ್ರತ್ಯೇಕ ಕಚೇರಿ


Team Udayavani, Dec 22, 2022, 6:35 AM IST

ತೋಟಗಾರಿಕೆ ಇಲಾಖೆ ವಿಕೇಂದ್ರೀಕರಣ: ಬೈಂದೂರು, ಕಾಪು, ಹೆಬ್ರಿಗೆ ಪ್ರತ್ಯೇಕ ಕಚೇರಿ

ಕುಂದಾಪುರ: ಎರಡು ತಾಲೂಕುಗಳಿಗೆ ಸಂಬಂಧಪಟ್ಟಂತೆ ಕಾರ್ಯಾಚರಿಸುತ್ತಿದ್ದ ತೋಟ ಗಾರಿಕೆ ಇಲಾಖೆ ಕಚೇರಿ ಇನ್ನು ಮುಂದೆ ರಾಜ್ಯದ 57 ಹೊಸ ತಾಲೂಕುಗಳಲ್ಲಿ ಪ್ರತ್ಯೇಕವಾಗಿ ಕಾರ್ಯಾರಂಭಿಸಲಿವೆ.

ಹೊಸ ತಾಲೂಕುಗಳಲ್ಲಿ ಜಿ.ಪಂ. ಅಧೀನದ ಯಾವುದಾದರೂ ಬಳಕೆ ಮಾಡದ ಕಟ್ಟಡಗಳನ್ನು ಉಪಯೋಗಿಸಿಕೊಳ್ಳುವಂತೆ, ಕಟ್ಟಡ ಇಲ್ಲದಿದ್ದರೆ ಲೋಕೋಪಯೋಗಿ ಇಲಾಖೆಗೆ ಹೊಸ ಕಟ್ಟಡ ನಿರ್ಮಾ ಣಕ್ಕೆ ಅಂದಾಜು ಪ್ರಸ್ತಾವನೆ ತಯಾರಿಸಿ ಸಲ್ಲಿಸುವಂತೆಯೂ ನಿರ್ದೇಶಕರು ತಿಳಿಸಿದ್ದಾರೆ. ಇದ ರನ್ವಯ ಉಡುಪಿ ಜಿಲ್ಲೆಯಲ್ಲಿ ಬೈಂದೂರು, ಹೆಬ್ರಿ, ಕಾಪುವಿಗೆ ಪ್ರತ್ಯೇಕ ಇಲಾಖಾ ಕಚೇರಿ ದೊರೆಯಲಿದೆ.

ಹೊಸ ಹುದ್ದೆ ಅನುಮಾನ
ಅವಿಭಜಿತ ತಾಲೂಕುಗಳಿಂದ ಎಷ್ಟು ಹೋಬಳಿಗಳನ್ನು ತೆಗೆದು ಹೊಸ ತಾಲೂಕುಗಳಿಗೆ ಸೇರಿಸಲಾಗಿದೆ ಎಂಬ ಬಗ್ಗೆ ಪರಿಶೀಲಿಸಿ, ಅದೇ ಹೋಬಳಿಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಸಹಾಯಕ ತೋಟಗಾರಿಕೆ ಅಧಿಕಾರಿಗಳನ್ನು ಹೊಸ ತಾಲೂಕುಗಳಿಗೆ ನಿಯೋಜನೆ ಮಾಡಲಾಗುತ್ತದೆ. ಈ ಮೂಲಕ ಆಡಳಿತಾತ್ಮಕ ವೆಚ್ಚ ತಗ್ಗಿಸುವ ಯೋಚನೆ ಸರಕಾರದ್ದು. ಹೊಸ ತಾಲೂಕುಗಳಿಗೆ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಶ್ರೇಣಿಯ ಅಧಿಕಾರಿಗಳು ಬೇಕೇ ಬೇಡವೇ ಎಂದು ತೀರ್ಮಾನವಾಗಿಲ್ಲ. ಅಲ್ಲಿ ಕೆಲಸದ ಒತ್ತಡ ಕಡಿಮೆ ಇರುವುದರಿಂದ ಕಚೇರಿ ಅಧೀಕ್ಷಕರ ಹುದ್ದೆ ಅಗತ್ಯ ಇಲ್ಲವೆಂದು ನಿರ್ಧರಿಸಲಾಗಿದೆ. ಒಬ್ಬ ಪ್ರಥಮ ದರ್ಜೆ ಸಹಾಯಕ, 2 ದ್ವಿತೀಯ ದರ್ಜೆ ಸಹಾಯಕರು, ಇತರ ಕೆಳಹಂತದ ಹುದ್ದೆಗಳನ್ನು ಸೃಷ್ಟಿಸಿ ನೇಮಕಾತಿ ನಡೆಯಲಿದೆ.

ಸಿಬಂದಿ ಕೊರತೆ
ಈಗ ಇರುವ ಕಚೇರಿಗಳಲ್ಲೇ ಸಿಬಂದಿ ಕೊರತೆಯಿದೆ. ಇನ್ನು ಹೊಸದಾಗಿ ರಚನೆಯಾಗುವ ಕಚೇರಿಗಳಿಗೂ ಇರುವ ಸಿಬಂದಿಯನ್ನೇ ಆಚೀಚೆ ಮಾಡಿ ನಿಯೋಜನೆ ಮಾಡಲು ಇಲಾಖೆ ತೀರ್ಮಾನಿಸಿದಂತಿದೆ. ಹೊಸದಾಗಿ ಕೆಲವೇ ಹುದ್ದೆಗಳು ಸೃಷ್ಟಿಯಾಗಲಿವೆ. ಹಾಗಿರುವಾಗ ಸಿಬಂದಿ ಕೊರತೆ ನಿವಾರಣೆಯಾಗದೇ ಮತ್ತೆ ಹೊಸ ಕಚೇರಿ ತೆರೆದು ಅಲ್ಲೂ ಸಿಬಂದಿ ಕೊರತೆಯಾದರೆ ಜನರಿಂದ ಛೀಮಾರಿ ಎದುರಿಸಬೇಕಾಗುತ್ತದೆ. ಜನರಿಗೆ ಅಗತ್ಯವಿರುವ ಕೆಲಸ ಕಾರ್ಯಗಳು ಇಲಾಖೆಯಲ್ಲಿ ಆಗುವುದಿಲ್ಲ ಎನ್ನುವ ಅಪವಾದ ಎದುರಿಸಬೇಕಾಗುತ್ತದೆ. ಈ ನಿಟ್ಟಿನಲ್ಲಿ ಇಲಾಖೆ ಗಮನಹರಿಸಬೇಕಿದೆ.

ಬೇಡಿಕೆ
ಹೊಸದಾಗಿ ರಚನೆಯಾದ ತಾಲೂಕುಗಳಿಂದ, ಶಾಸಕರಿಂದ, ಹೋರಾಟಗಾರರಿಂದ, ರೈತರಿಂದ, ಸಂಘಟನೆಗಳಿಂದ ಪ್ರತ್ಯೇಕ ಕಚೇರಿ ರಚನೆಗೆ ಅನೇಕ ಸಮಯದಿಂದ ಬೇಡಿಕೆ ಇತ್ತು. ತಾಲೂಕು ರಚನೆಯಾಗಿ ಇಷ್ಟು ವರ್ಷಗಳ ಅನಂತರ ಇಲಾಖೆ ಕಚೇರಿ ವಿಭಾಗಿಸಲು ಹೊರಟಿದೆ.

ಒಂದೇ ಕಚೇರಿ, ಅನುದಾನ
ಈವರೆಗೆ ಅವಿಭಜಿತ ತಾಲೂಕುಗಳಲ್ಲಿ ಒಂದೇ ಕಚೇರಿಯಿದ್ದು ಸಿಬಂದಿಗೆ ನಿರ್ವಹಣೆ ಹೊರೆಯಾಗುತ್ತಿತ್ತು. ಅದಕ್ಕಿಂತ ಹೆಚ್ಚು ಗಮನಿಸಬೇಕಾದ ಅಂಶ ಎಂದರೆ ಎರಡು ತಾಲೂಕಿಗೆ ಪ್ರತ್ಯೇಕ ಅನುದಾನ ಬರುತ್ತಿರಲಿಲ್ಲ. ಇದರಿಂದ ಫ‌ಲಾನುಭವಿಗಳಿಗೆ ಹಂಚುವುದು ಕಷ್ಟವಾಗುತ್ತಿತ್ತು. ಫ‌ಲಾನುಭವಿಗಳ ಆಯ್ಕೆ, ಅನುದಾನ ವಿಂಗಡನೆ ಇತ್ಯಾದಿಗಳನ್ನು ಸಮಾನವಾಗಿ ಮಾಡಬೇಕಿತ್ತು. ಈ ಎಲ್ಲ ಕಷ್ಟ ಇನ್ನು ದೂರವಾಗಲಿದೆ.

ಕಟ್ಟಡ ಹುಡುಕಲು ಸೂಚನೆ
ಹೊಸದಾಗಿ ರಚನೆಯಾದ ತಾಲೂಕುಗಳಲ್ಲಿ ಪ್ರತ್ಯೇಕ ಕಚೇರಿ ನಿರ್ಮಿಸಲು ಕಟ್ಟಡ ಹುಡುಕಲು ಇಲಾಖೆಯಿಂದ ಸೂಚನೆ ಬಂದಿದೆ. ಅದರಂತೆ ಕಾರ್ಯನಿರ್ವಹಿಸಲಾಗುತ್ತಿದೆ.
  - ನಿಧೀಶ್‌ ಹೊಳ್ಳ ಹಿರಿಯ ತೋಟಗಾರಿಕೆ ಸಹಾಯಕ ನಿರ್ದೇಶಕರು, ಕುಂದಾಪುರ

ದ.ಕ. ಜಿಲ್ಲೆಯ ಕಡಬ, ಉಳ್ಳಾಲ, ಮೂಲ್ಕಿ, ಮೂಡುಬಿದಿರೆ ಮತ್ತು ಉಡುಪಿ ಜಿಲ್ಲೆಯ ಬೈಂದೂರು, ಬ್ರಹ್ಮಾವರ, ಕಾಪು, ಹೆಬ್ರಿಯಲ್ಲಿ ನೂತನ ಕಚೇರಿಗಳಾಗಲಿವೆ.
 - ಭುವನೇಶ್ವರಿ, ಉಪನಿರ್ದೇಶಕಿ ಉಡುಪಿ/ 
– ಪ್ರವೀಣ್‌, ಹಿರಿಯ ಸಹಾಯಕ ನಿರ್ದೇಶಕ ಮಂಗಳೂರು

ಟಾಪ್ ನ್ಯೂಸ್

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

1

Amparu: ರೆಸ್ಟೋರೆಂಟ್‌ನಲ್ಲಿ ಹೊಡೆದಾಟ

sand

Kundapura: ಮರಳು ಅಕ್ರಮ ಸಾಗಾಟ ಪತ್ತೆ

4

Kundapura: ಕೆಲಸವಿಲ್ಲದೆ ಜುಗುಪ್ಸೆ: ಯುವಕ ಆತ್ಮಹತ್ಯೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

12

High Court: ಬಿಎಸ್‌ವೈ ಪೋಕ್ಸೋ ಕೇಸ್‌: ಸೆ.27ಕ್ಕೆ ವಿಚಾರಣೆ ಮುಂದಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.