ಮಂಗಳೂರು ಪ್ರಕರಣ: ಚಿಕಿತ್ಸಾ ವೆಚ್ಚ ಭರಿಸಲು ಪುರುಷೋತ್ತಮ ಕುಟುಂಬಸ್ಥರ ಪರದಾಟ


Team Udayavani, Dec 22, 2022, 7:45 AM IST

ಮಂಗಳೂರು ಪ್ರಕರಣ: ಚಿಕಿತ್ಸಾ ವೆಚ್ಚ ಭರಿಸಲು ಪುರುಷೋತ್ತಮ ಕುಟುಂಬಸ್ಥರ ಪರದಾಟ

ಮಂಗಳೂರು : ಕುಕ್ಕರ್‌ ಬಾಂಬ್‌ ಸ್ಫೋಟದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ಆಟೋರಿಕ್ಷಾ ಚಾಲಕ ಪುರುಷೋತ್ತಮ ಪೂಜಾರಿ ಅವರ ಚಿಕಿತ್ಸಾ ವೆಚ್ಚ ಭರಿಸಲು ಕುಟುಂಬ
ಸ್ಥರಿಗೆ ಒತ್ತಡ ಹಾಕಬಾರದು ಎಂದು ದ.ಕ. ಜಿಲ್ಲಾಧಿಕಾರಿ ಯವರು ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರಿಗೆ ನಿರ್ದೇಶ ನೀಡಿದ್ದಾರೆ.

ಪುರುಷೋತ್ತಮ ಅವರಿಗೆ ಸೂಕ್ತ ಚಿಕಿತ್ಸೆ ಮುಂದುವರಿಸಬೇಕು. ವೆಚ್ಚ ಭರಿಸುವಂತೆ ಒತ್ತಡ ಹಾಕಬಾರದು. ಅವರ ಪುತ್ರಿಯ ಇಎಸ್‌ಐನಿಂದ ಭರಿಸಿರುವ ಮೊತ್ತವನ್ನು ಸರಕಾರದ ವತಿಯಿಂದ ಮರು ಪಾವತಿಸಲಾಗುವುದು ಎಂದು ಡಿಸಿಯವರು ಪತ್ರದ ಮೂಲಕ ವೈದ್ಯಕೀಯ ಅಧೀಕ್ಷಕರಿಗೆ ತಿಳಿಸಿದ್ದಾರೆ.

“ಪುರುಷೋತ್ತಮ ಅವರ ಚಿಕಿತ್ಸಾ ವೆಚ್ಚವನ್ನು ಪುತ್ರಿಯ ಇಎಸ್‌ಐ ಮೂಲಕ ಭರಿಸಲಾಗಿತ್ತು. ಆದರೆ ಮುಂದಿನ ಚಿಕಿತ್ಸೆಯನ್ನು ಇಎಸ್‌ಐನಿಂದ ಭರಿಸಲಾಗುವುದಿಲ್ಲ ಎಂದು ಆಸ್ಪತ್ರೆಯವರು ತಿಳಿಸಿದ್ದರಿಂದ ಕುಟುಂಬದವರು ಡಿಸಿಯವರಲ್ಲಿ ಸಂಕಷ್ಟ ಹೇಳಿಕೊಂಡಿದ್ದರು. ಈ ಹಿನ್ನೆಲೆ ಯಲ್ಲಿ ಅವರು ಆಸ್ಪತ್ರೆಯವರಿಗೆ ನಿರ್ದೇಶ ನೀಡಿದ್ದಾರೆ.

ನ. 19ರಂದು ಆಟೋರಿಕ್ಷಾದಲ್ಲಿ ಕುಕ್ಕರ್‌ ಬಾಂಬ್‌ ಸ್ಫೋಟಗೊಂಡು ಪುರುಷೋತ್ತಮ ಪೂಜಾರಿ ಅವರು ಗಾಯಗೊಂಡಿದ್ದು ಇನ್ನು ಕೂಡ ಅವರ ಚಿಕಿತ್ಸೆ ಮುಂದುವರಿದಿದೆ. ಘಟನೆ ನಡೆದ ಅನಂತರ ಆಸ್ಪತ್ರೆಗೆ ಭೇಟಿ ನೀಡಿದ್ದ ಗೃಹಸಚಿವ ಆರಗ ಜ್ಞಾನೇಂದ್ರ ಅವರು ಚಿಕಿತ್ಸಾ ವೆಚ್ಚವನ್ನು ಸರಕಾರದ ವತಿಯಿಂದ ಭರಿಸಲಾಗುವುದು ಎಂದು ತಿಳಿಸಿ ದ್ದರು. ಆದರೆ ಸರಕಾರ ಚಿಕಿತ್ಸಾ ವೆಚ್ಚ ಭರಿಸದೇ ಇದ್ದುದರಿಂದ ಮತ್ತು ಆರ್ಥಿಕ ಸಹಾಯ ನೀಡುವ ಭರವಸೆ ಈಡೇರಿಸದೆ ಇದ್ದುದರಿಂದ ಕುಟುಂಬಸ್ಥರು ನೋವು ತೋಡಿಕೊಂಡಿದ್ದರು.

ನಿಯಮದಂತೆ ಪರಿಹಾರ ಬಿಡುಗಡೆ: ಶಾಸಕ ಕಾಮತ್‌
ಪುರುಷೋತ್ತಮ ಪೂಜಾರಿ ಅವರಿಗೆ ಪರಿಹಾರ ಧನ ಒದಗಿಸುವ ಬಗ್ಗೆ ಸರಕಾರ ಸಕಾರಾತ್ಮಕವಾಗಿ ಸ್ಪಂದಿಸುತ್ತಿದ್ದು ನಿಯಮಗಳಂತೆ ಎಲ್ಲ ಪ್ರಕ್ರಿಯೆ ಪೂರ್ಣಗೊಂಡು ಪರಿಹಾರ ಧನ ಬಿಡುಗಡೆಯಾಗಲಿದೆ. ಪುರುಷೋತ್ತಮ ಪೂಜಾರಿ ಅವರಿಗೆ ಸರ್ವ ರೀತಿಯಲ್ಲೂ ಸಹಕಾರ ನೀಡಲಾಗುತ್ತಿದೆ. ಭಯೋತ್ಪಾದನ ಚಟುವಟಿಕೆಗಳಂತಹ ಹೀನ ಕೃತ್ಯಗಳಲ್ಲಿ ರಾಜಕೀಯ ಬೇಳೆ ಬೇಯಿಸುವುದು ಸರಿಯಲ್ಲ. ನಾನು ಈಗಾಗಲೇ ಪುರುಷೋತ್ತಮ ಅವರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದೇನೆ. ಅವರ ಕುಟುಂಬದ ಜತೆ ಸಂಪರ್ಕದಲ್ಲಿದ್ದೇನೆ. ವೈಯಕ್ತಿಕ ನೆಲೆಯಲ್ಲಿ ಈಗಾಗಲೇ ಧನ ಸಹಾಯ ನೀಡಲಾಗಿದೆ. ಕಾರ್ಯಕರ್ತರು ಕುಟುಂಬದ ಸದಸ್ಯರ ಜತೆಗಿದ್ದಾರೆ. ಪುರುಷೋತ್ತಮ ಪೂಜಾರಿ ಅವರಿಗೆ ಹಿಂದಿನ ಪರ್ಮಿಟ್‌ನಲ್ಲಿ ಹೊಸದಾಗಿ ಆಟೋ ರಿಕ್ಷಾ ಕೊಡಿಸುವ ವ್ಯವಸ್ಥೆ ಮಾಡಲಾಗುವುದು. ಬುಧವಾರ ಕೂಡ ಬಿಜೆಪಿ ಮುಖಂಡರು ಪುರುಷೋತ್ತಮ ಪೂಜಾರಿ, ವೈದ್ಯರು ಮತ್ತು ಕುಟುಂಬದವರನ್ನು ಭೇಟಿಯಾಗಿ ಧೈರ್ಯ ತುಂಬಿದ್ದಾರೆ ಎಂದು ಶಾಸಕ ವೇದವ್ಯಾಸ ಕಾಮತ್‌ ತಿಳಿಸಿದ್ದಾರೆ.

ಇನ್ನಷ್ಟು ದಿನ ಆಸ್ಪತ್ರೆಯಲ್ಲಿ
ಸುಟ್ಟ ಗಾಯಗಳೊಂದಿಗೆ ನ. 19ರಂದು ಆಸ್ಪತ್ರೆಗೆ ದಾಖಲಿಸಲ್ಪಟ್ಟಿರುವ ಪುರುಷೋತ್ತಮ ಪೂಜಾರಿ ಅವರು ಚೇತರಿಸಿಕೊಳ್ಳುತ್ತಿದ್ದಾರೆ. ಆದರೆ ಇನ್ನೂ ಹಲವು ದಿನಗಳ ಕಾಲ ಅವರಿಗೆ ಚಿಕಿತ್ಸೆಯ ಅಗತ್ಯವಿದೆ ಎಂದು ಮೂಲಗಳು ತಿಳಿಸಿವೆ. ಸ್ಫೋಟದಿಂದ ಶೇ. 45ರಷ್ಟು ಸುಟ್ಟ ಗಾಯಗಳೊಂದಿಗೆ ಆಸ್ಪತ್ರೆಗೆ ದಾಖಲಾಗಿದ್ದ ಶಂಕಿತ ಉಗ್ರ ಮಹಮ್ಮದ್‌ ಶಾರೀಕ್‌ ಬಹುತೇಕ ಚೇತರಿಸಿಕೊಂಡಿದ್ದು ಮುಂದಿನ ಚಿಕಿತ್ಸೆ ಮತ್ತು ವಿಚಾರಣೆಗಾಗಿ ಆತನನ್ನು ಬೆಂಗಳೂರಿಗೆ ಕರೆದೊಯ್ಯಲಾಗಿದೆ.

ಟಾಪ್ ನ್ಯೂಸ್

BY-Election: ನಿಖಿಲ್‌ ಕುಮಾರಸ್ವಾಮಿಗೆ ಟಿಕೆಟ್‌ ಕೊಡಿಸಲು ಚದುರಂಗದಾಟ: ಡಿ.ಕೆ. ಸುರೇಶ್‌

BY-Election: ನಿಖಿಲ್‌ ಕುಮಾರಸ್ವಾಮಿಗೆ ಟಿಕೆಟ್‌ ಕೊಡಿಸಲು ಚದುರಂಗದಾಟ: ಡಿ.ಕೆ. ಸುರೇಶ್‌

Exam

PDA; ನಾಳೆ ಮುಖ್ಯ ಪರೀಕ್ಷೆ

PM Modi

70+ Ayushman; ಅ. 29ರಂದು ಮೋದಿ ಚಾಲನೆ

Haveri: ಸಚಿವ ಜಮೀರ್‌ ಅಹ್ಮದ್‌ ಕಾರಿನ ಮೇಲೆ ಖಾದ್ರಿ ಬೆಂಬಲಿಗರ ಕಲ್ಲು ತೂರಾಟ

Haveri: ಸಚಿವ ಜಮೀರ್‌ ಅಹ್ಮದ್‌ ಕಾರಿನ ಮೇಲೆ ಖಾದ್ರಿ ಬೆಂಬಲಿಗರ ಕಲ್ಲು ತೂರಾಟ

ನಾನು ಹುಷಾರಾದರೆ ನಿಖಿಲ್‌ ಪರ ಪ್ರಚಾರಕ್ಕೆ ಹೋಗುವೆ: ರೇವಣ್ಣ

H.D. Revanna: ನಾನು ಹುಷಾರಾದರೆ ನಿಖಿಲ್‌ ಪರ ಪ್ರಚಾರಕ್ಕೆ ಹೋಗುವೆ

BJP: ಹೈಕಮಾಂಡ್‌ ಸೂಚಿಸಿರುವ ಅಭ್ಯರ್ಥಿ ಪರ ಕೆಲಸ: ನಿರಾಣಿ

BJP: ಹೈಕಮಾಂಡ್‌ ಸೂಚಿಸಿರುವ ಅಭ್ಯರ್ಥಿ ಪರ ಕೆಲಸ: ನಿರಾಣಿ

H. D. Kumaraswamy: ಇದು ಕಾರ್ಯಕರ್ತರ ಚುನಾವಣೆ, ನಿಖಿಲ್‌ ಗೆಲ್ಲುತ್ತಾರೆ

H. D. Kumaraswamy: ಇದು ಕಾರ್ಯಕರ್ತರ ಚುನಾವಣೆ, ನಿಖಿಲ್‌ ಗೆಲ್ಲುತ್ತಾರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಸೈಟ್‌ ತೋರಿಸುವ ನೆಪದಲ್ಲಿ ಲೈಂಗಿಕ ಕಿರುಕುಳ: ಬಿಲ್ಡರ್‌ ವಿರುದ್ಧ ಮಹಿಳೆ ದೂರು

Mangaluru: ಸೈಟ್‌ ತೋರಿಸುವ ನೆಪದಲ್ಲಿ ಲೈಂಗಿಕ ಕಿರುಕುಳ: ಬಿಲ್ಡರ್‌ ವಿರುದ್ಧ ಮಹಿಳೆ ದೂರು

17(1)

Mangaluru: ವಿಶೇಷ ಮಕ್ಕಳ ಕಂಗಳಲ್ಲಿ ಬಣ್ಣದ ಹಣತೆಗಳ ಕಾಂತಿ

12-surath

ನನ್ನ ಜತೆ ಬರದಿದ್ದರೆ 24 ತುಂಡು ಮಾಡುವೆ:ಬೆದರಿಕೆ ಪ್ರಕರಣ-ಆತಂಕದಿಂದ ಯುವತಿ ಆತ್ಮಹತ್ಯೆ ಯತ್ನ

11

Paduperar: ಈ ಬಾರಿ ರಾಮ ಮಂದಿರ ಗೂಡುದೀಪ!

10

Mangaluru: ನಿರ್ಬಂಧವಿದೆ, ದಂಡನೆಯಿದೆ.. ಜಾರಿ ಇಲ್ಲ !

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

BY-Election: ನಿಖಿಲ್‌ ಕುಮಾರಸ್ವಾಮಿಗೆ ಟಿಕೆಟ್‌ ಕೊಡಿಸಲು ಚದುರಂಗದಾಟ: ಡಿ.ಕೆ. ಸುರೇಶ್‌

BY-Election: ನಿಖಿಲ್‌ ಕುಮಾರಸ್ವಾಮಿಗೆ ಟಿಕೆಟ್‌ ಕೊಡಿಸಲು ಚದುರಂಗದಾಟ: ಡಿ.ಕೆ. ಸುರೇಶ್‌

Exam

PDA; ನಾಳೆ ಮುಖ್ಯ ಪರೀಕ್ಷೆ

PM Modi

70+ Ayushman; ಅ. 29ರಂದು ಮೋದಿ ಚಾಲನೆ

Haveri: ಸಚಿವ ಜಮೀರ್‌ ಅಹ್ಮದ್‌ ಕಾರಿನ ಮೇಲೆ ಖಾದ್ರಿ ಬೆಂಬಲಿಗರ ಕಲ್ಲು ತೂರಾಟ

Haveri: ಸಚಿವ ಜಮೀರ್‌ ಅಹ್ಮದ್‌ ಕಾರಿನ ಮೇಲೆ ಖಾದ್ರಿ ಬೆಂಬಲಿಗರ ಕಲ್ಲು ತೂರಾಟ

ನಾನು ಹುಷಾರಾದರೆ ನಿಖಿಲ್‌ ಪರ ಪ್ರಚಾರಕ್ಕೆ ಹೋಗುವೆ: ರೇವಣ್ಣ

H.D. Revanna: ನಾನು ಹುಷಾರಾದರೆ ನಿಖಿಲ್‌ ಪರ ಪ್ರಚಾರಕ್ಕೆ ಹೋಗುವೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.