ರಘುನಾಥ ರಾವ್‌ ಮಲ್ಕಾಪುರೆಗೆ ಪ್ರಮುಖರ ಸಾಂತ್ವನ


Team Udayavani, Dec 22, 2022, 1:18 AM IST

ರಘುನಾಥ ರಾವ್‌ ಮಲ್ಕಾಪುರೆಗೆ ಪ್ರಮುಖರ ಸಾಂತ್ವನ

ಬೆಳಗಾವಿ: ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ  ಆಯ್ಕೆಯಾದ ಹಿನ್ನೆಲೆಯಲ್ಲಿ ಈ ಸ್ಥಾನದಿಂದ ಕೆಳಗಿಳಿದ ಬಿಜೆಪಿಯ ರಘುನಾಥ ರಾವ್‌ ಮಲ್ಕಾಪುರೆ  ಅವರಿಗೆ ಪ್ರಮುಖ ನಾಯಕರು ಸಮಾಧಾನ ಹೇಳಿದರು.  ಹೊರಟ್ಟಿ  ಆಯ್ಕೆ ಬಳಿಕ ಸದನದಲ್ಲಿ ಮಾತನಾಡಿದ ಬಿಜೆಪಿಯ ಆಯನೂರು ಮಂಜುನಾಥ್‌, ರಘುನಾಥ ರಾವ್‌ ಮಲ್ಕಾಪುರೆ  ಸಭಾಪತಿ ಸ್ಥಾನದಲ್ಲಿ ಉತ್ತಮ ಕೆಲಸ ಮಾಡಿದ್ದಾರೆ. ಅವರಿಗೆ ಯೋಗ್ಯತೆಯಿದೆ, ಆದರೆ ಯೋಗವಿಲ್ಲ. ಹೀಗಾಗಿ ಅವರು ಸಭಾಪತಿ ಸ್ಥಾನದಲ್ಲಿ ಮುಂದುವರಿ ಯಲು ಸಾಧ್ಯವಾಗಲಿಲ್ಲ ಎಂದರು.

ಬಳಿಕ  ಮಾತನಾಡಿದ  ಲಕ್ಷ್ಮಣ ಸವದಿ, ಆಯನೂರು ಮಂಜುನಾಥ್‌ ಗಾಯದ ಮೇಲೆ ಬೆರಳಿಡುವ ಕೆಲಸ ಮಾಡುತ್ತಾರೆ, ಅದು ಸರಿಯಲ್ಲ.  ಮಲ್ಕಾಪುರೆ ಅವರಿಗೆ ಉಜ್ವಲ ಭವಿಷ್ಯವಿದೆ. ಯಾವುದನ್ನೂ ಮನಸ್ಸಿನಲ್ಲಿ ಇಟ್ಟುಕೊಳ್ಳುವುದು ಬೇಡ. ಪಕ್ಷ ಅವರಿಗೆ ಎಲ್ಲವನ್ನೂ ನೀಡಲಿದೆ ಎಂದು ಹೇಳುವ ಮೂಲಕ ಸಭಾಪತಿ ಸ್ಥಾನದಿಂದ ಕೆಳಗಿಳಿಸಿದ ಮುನಿಸನ್ನು ಶಮನ ಮಾಡಲು ಯತ್ನಿಸಿದರು.

ಯಜಮಾನರು ಕರೆಸುತ್ತಾರೆ
ಜೆಡಿಎಸ್‌ನ ಭೋಜೇಗೌಡ ಮಾತನಾಡಿ, ಬಸವರಾಜ ಹೊರಟ್ಟಿ  8 ಬಾರಿ ಎಂಎಲ್‌ಸಿ ಆಗಿದ್ದು, ಎರಡು ಬಾರಿ ಹೊರತುಪಡಿಸಿ ಉಳಿದ 6 ಬಾರಿ ಜೆಡಿಎಸ್‌ನಿಂದ ಗೆದ್ದಿದ್ದಾರೆ ಎಂದರು. ಆಗ ಮಧ್ಯಪ್ರವೇಶಿಸಿದ ಬಸವರಾಜ ಹೊರಟ್ಟಿ, ಮೊದಲು ಪಕ್ಷೇತರ, ಅನಂತರ ಜನತಾ ಪಕ್ಷ, ಜನತಾದಳ, ಲೋಕಶಕ್ತಿ, ಜೆಡಿಎಸ್‌, ಈಗ ಬಿಜೆಪಿಯಿಂದ ಆಯ್ಕೆಯಾಗಿದ್ದೇನೆ ಎಂದರು. ಅದಕ್ಕೆ ಭೋಜೆಗೌಡ ಬಿಜೆಪಿ ಬಿಟ್ಟು ಎಲ್ಲವೂ ನಮ್ಮ ಪಕ್ಷವೇ. ಹೊರಟ್ಟಿ ಅವರು ಬಿಜೆಪಿಯಲ್ಲಿದ್ದರೂ ಅವರ ಮನಸ್ಸು ಮಾತ್ರ ಇನ್ನೂ ಜೆಡಿಎಸ್‌ನಲ್ಲಿದೆ ಎಂದರು. ಆಗ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಲೋಕಶಕ್ತಿ ನಿಮ್ಮ ಪ ಕ್ಷ ಎಂದು ಹೇಳಬೇಡಿ. ಇದು ಯಜಮಾನ್ರಿಗೆ (ದೇವೇಗೌಡರಿಗೆ) ಗೊತ್ತಾದರೆ ನಿಮ್ಮನ್ನು ಮನೆಗೆ ಕರೆಸುತ್ತಾರೆ ಎಂದು ಹೇಳಿದರು.

ಲೋಕಸಭೆ ಮಾದರಿಯಲ್ಲಿ ಪ್ರಶ್ನೋತ್ತರ ಕಲಾಪವಿರಲಿ
ಪ್ರಶ್ನೋತ್ತರ ಕಲಾಪ ಸಮರ್ಪಕವಾಗಿ ನಡೆಯದಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಬಿಜೆಪಿಯ ಎಚ್‌.ವಿಶ್ವನಾಥ್‌, ಲೋಕಸಭೆ, ರಾಜ್ಯಸಭೆಗಳಲ್ಲಿ 1 ಗಂಟೆ ಮಾತ್ರ ಪ್ರಶ್ನೋತ್ತರ ಕಲಾಪ ನಡೆಯಲಿದೆ. ಅದೇ ಮಾದರಿ ವಿಧಾನ ಪರಿಷತ್‌ನಲ್ಲೂ ಜಾರಿಯಾಗಬೇಕು ಎಂದರು. ಅದಕ್ಕೆ ಪೂರಕವಾಗಿ  ಮಾತನಾಡಿದ ಬಿಜೆಪಿಯ ಆಯನೂರು ಮಂಜುನಾಥ್‌, ಲೋಕಸಭೆ ಹಾಗೂ ರಾಜ್ಯಸಭೆಯಲ್ಲಿ ಪ್ರಶ್ನೋತ್ತರ ಕಲಾಪದ ಅವಧಿ 1 ಗಂಟೆಗೆ ನಿಗದಿ ಮಾಡಲಾಗಿದೆ. ಅದು ಮುಗಿದ ಬಳಿಕ ಸಚಿವರು ಉತ್ತರ ಹೇಳುತ್ತಿದ್ದರು. ಅದನ್ನು ತಡೆದು ಮುಂದಿನ ಕಲಾಪಕ್ಕೆ ಹೋಗಲಾಗುತ್ತದೆ. ಅದನ್ನು ಇಲ್ಲೂ ಅಳವಡಿಸಬೇಕು ಎಂದು ಹೇಳಿದರು.

ಹೊರಟ್ಟಿ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಿರುವ ಪ್ರಕ್ರಿಯೆಯು ಜನತಂತ್ರದ ಮೇಲಿನ ವಿಶ್ವಾಸ ಹೆಚ್ಚುವಂತಾಗಿದೆ. ಸದನದಲ್ಲಿ ಜನರ ಸಮಸ್ಯೆ ನಿವಾರಣೆಗೆ ಹೊರಟ್ಟಿ ಅವರ ಮಾರ್ಗದರ್ಶನ ಅತ್ಯಗತ್ಯ. ಆ ಕೆಲಸವನ್ನು ಅವರು ಮಾಡಲಿದ್ದಾರೆ.
-ಕೋಟ ಶ್ರೀನಿವಾಸ ಪೂಜಾರಿ, ಸಭಾನಾಯಕ

ಹೊರಟ್ಟಿ ಅವರು ರಾಮಕೃಷ್ಣ ಹೆಗ್ಗಡೆ ಅವರ ಗರಡಿಯಲ್ಲಿ ಬೆಳೆದವರು. ಅವರಂತೆಯೇ ಉತ್ತಮ ರಾಜಕಾರಣಿ. ಹೀಗಾಗಿಯೇ ವಿರೋಧ ಪಕ್ಷವಾದರೂ ಸಭಾಪತಿ ಆಯ್ಕೆಯಲ್ಲಿ ತಟಸ್ಥವಾಗಿ ಉಳಿದೆವು. ವಿಪಕ್ಷ ಹಾಗೂ ಆಡಳಿತ ಪಕ್ಷಗಳ ಬಗ್ಗೆ ಭೇದವಿಲ್ಲದೆ ಅವರು ಕೆಲಸ ಮಾಡಬೇಕು.
-ಬಿ.ಕೆ. ಹರಿಪ್ರಸಾದ್‌, ವಿಪಕ್ಷ ನಾಯಕ

ಟಾಪ್ ನ್ಯೂಸ್

sanjay manjrekar

Women’s T20 World Cup: ಮತ್ತೆ ವಿವಾದಕ್ಕೆ ಸಿಲುಕಿದ ಕಾಮೆಂಟೇಟರ್‌ ಸಂಜಯ್‌ ಮಾಂಜ್ರೇಕರ್

West Bengal: ಬಾಲಕಿಯನ್ನು ಅಪಹರಿಸಿ ಕೊ*ಲೆ: ಭುಗಿಲೆದ್ದ ಆಕ್ರೋಶ, ಪ್ರತಿಭಟನೆ

West Bengal: ಬಾಲಕಿಯನ್ನು ಅಪಹರಿಸಿ ಕೊ*ಲೆ: ಭುಗಿಲೆದ್ದ ಆಕ್ರೋಶ, ಪ್ರತಿಭಟನೆ

ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಸಿಗುವ ವಿಶ್ವಾಸವಿದೆ ಇಲ್ಲದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ

ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಸಿಗುವ ವಿಶ್ವಾಸವಿದೆ ಇಲ್ಲದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ

16-bng

Bengaluru: ದಸರಾ ಬೊಂಬೆಗಳ ಹಬ್ಬದಲ್ಲೂ ಅಯೋಧ್ಯಾ ಶ್ರೀ ರಾಮಮಂದಿರ

Pune: ಉತ್ತರಕನ್ನಡ ಮೂಲದ ಮಾಜಿ ಕ್ರಿಕೆಟಿಗ, ನಟ ಸಲೀಲ್‌ ತಾಯಿ ಶವ ಪತ್ತೆ, ಗಂಟಲು ಸೀಳಿ ಕೊಲೆ?

Pune: ಉತ್ತರಕನ್ನಡ ಮೂಲದ ಮಾಜಿ ಕ್ರಿಕೆಟಿಗ, ನಟ ಸಲೀಲ್‌ ತಾಯಿ ಶವ ಪತ್ತೆ, ಗಂಟಲು ಸೀಳಿ ಕೊಲೆ?

17-mng-dasara

Mangaluru Dasara: ನವರಾತ್ರಿ, ಶಾರದಾ ಮಹೋತ್ಸವ: ಪೊಲೀಸರಿಂದ ಮಾರ್ಗಸೂಚಿ

ನನ್ನಂತ ದಲಿತರಿಗೆ ಒಳ್ಳೆಯದಾಗದಿದ್ದರೆ ಮುಂದೆ ಯಾವ ದಲಿತರಿಗೂ ಒಳ್ಳೆದಾಗಲ್ಲ: ಜಿಗಜಿಣಗಿ ಭಾವುಕ

ನನ್ನಂತ ದಲಿತರಿಗೆ ಒಳ್ಳೆಯದಾಗದಿದ್ದರೆ ಮುಂದೆ ಯಾವ ದಲಿತರಿಗೂ ಒಳ್ಳೆದಾಗಲ್ಲ: ಜಿಗಜಿಣಗಿ ಭಾವುಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಸಿಗುವ ವಿಶ್ವಾಸವಿದೆ ಇಲ್ಲದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ

ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಸಿಗುವ ವಿಶ್ವಾಸವಿದೆ ಇಲ್ಲದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ

ನನ್ನಂತ ದಲಿತರಿಗೆ ಒಳ್ಳೆಯದಾಗದಿದ್ದರೆ ಮುಂದೆ ಯಾವ ದಲಿತರಿಗೂ ಒಳ್ಳೆದಾಗಲ್ಲ: ಜಿಗಜಿಣಗಿ ಭಾವುಕ

ನನ್ನಂತ ದಲಿತರಿಗೆ ಒಳ್ಳೆಯದಾಗದಿದ್ದರೆ ಮುಂದೆ ಯಾವ ದಲಿತರಿಗೂ ಒಳ್ಳೆದಾಗಲ್ಲ: ಜಿಗಜಿಣಗಿ ಭಾವುಕ

ಅ*ತ್ಯಾಚಾರ ಪ್ರಕರಣ:ಶಾಸಕ ಮುನಿರತ್ನ ಮತ್ತೆ ಪರಪ್ಪನ ಅಗ್ರಹಾರ ಜೈಲಿಗೆ-14 ದಿನ ನ್ಯಾಯಾಂಗ ಬಂಧನ

ಅ*ತ್ಯಾಚಾರ ಪ್ರಕರಣ:ಶಾಸಕ ಮುನಿರತ್ನ ಮತ್ತೆ ಪರಪ್ಪನ ಅಗ್ರಹಾರ ಜೈಲಿಗೆ-14 ದಿನ ನ್ಯಾಯಾಂಗ ಬಂಧನ

ಕೇಂದ್ರದಿಂದ ರಾಜ್ಯ ಸರ್ಕಾರದ ಅಸ್ಥಿರ ಪ್ರಯತ್ನ ಎಂಬುದು ಕಾಂಗ್ರೆಸ್ ನ ಭ್ರಮೆ: ಸಂಸದ ಜಿಗಜಿಣಗಿ

ಕೇಂದ್ರದಿಂದ ರಾಜ್ಯ ಸರ್ಕಾರದ ಅಸ್ಥಿರ ಪ್ರಯತ್ನ ಎಂಬುದು ಕಾಂಗ್ರೆಸ್ ನ ಭ್ರಮೆ: ಸಂಸದ ಜಿಗಜಿಣಗಿ

Raichur: ಜಾತಿಗಣತಿ ತಕ್ಷಣಕ್ಕೆ ಜಾರಿಯಿಲ್ಲ, ಬರೀ ಚರ್ಚೆಯಷ್ಟೇ: ಸಿಎಂ ಸಿದ್ದರಾಮಯ್ಯ

Raichur: ಜಾತಿಗಣತಿ ತಕ್ಷಣಕ್ಕೆ ಜಾರಿಯಿಲ್ಲ, ಬರೀ ಚರ್ಚೆಯಷ್ಟೇ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

20-ksrtc-dasara

Bengaluru: ಕೆಎಸ್‌ಆರ್‌ಟಿಸಿಯಿಂದ ದಸರಾಗೆ 2000 ಹೆಚ್ಚುವರಿ ಬಸ್‌ ಸಂಚಾರ

sanjay manjrekar

Women’s T20 World Cup: ಮತ್ತೆ ವಿವಾದಕ್ಕೆ ಸಿಲುಕಿದ ಕಾಮೆಂಟೇಟರ್‌ ಸಂಜಯ್‌ ಮಾಂಜ್ರೇಕರ್

19-bbmp

Bengaluru: ಆನ್‌ಲೈನ್‌ನಲ್ಲೇ ಆಸ್ತಿ ಇ-ಖಾತಾ ಪಡೆಯಿರಿ

West Bengal: ಬಾಲಕಿಯನ್ನು ಅಪಹರಿಸಿ ಕೊ*ಲೆ: ಭುಗಿಲೆದ್ದ ಆಕ್ರೋಶ, ಪ್ರತಿಭಟನೆ

West Bengal: ಬಾಲಕಿಯನ್ನು ಅಪಹರಿಸಿ ಕೊ*ಲೆ: ಭುಗಿಲೆದ್ದ ಆಕ್ರೋಶ, ಪ್ರತಿಭಟನೆ

18-wonderla

Bengaluru: ವಂಡರ್‌ಲಾದಲ್ಲಿ 2 ಟಿಕೆಟ್‌ ಖರೀದಿಸಿದರೆ 1 ಟಿಕೆಟ್‌ ಫ್ರೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.