ಬಂಟ್ವಾಳ ಪುರಸಭೆ ವ್ಯಾಪ್ತಿ: ಘೋಷಣೆಯಾಗದ ವ್ಯಾಪಾರ ವಲಯ

ಅವರ್ಯಾರು ಕೂಡ ಪುರಸಭೆಯಿಂದ ಗುರುತಿನ ಚೀಟಿ ಪಡೆದ ವ್ಯಾಪಾರಿಗಳಲ್ಲ ಎನ್ನಲಾಗುತ್ತಿದೆ.

Team Udayavani, Dec 22, 2022, 10:25 AM IST

ಬಂಟ್ವಾಳ ಪುರಸಭೆ ವ್ಯಾಪ್ತಿ: ಘೋಷಣೆಯಾಗದ ವ್ಯಾಪಾರ ವಲಯ

ಬಂಟ್ವಾಳ: ಬಂಟ್ವಾಳ ತಾಲೂಕು ಕೇಂದ್ರ ಬಿ.ಸಿ.ರೋಡ್‌ ಸೇರಿದಂತೆ ಪುರಸಭೆ ವ್ಯಾಪ್ತಿಯ ಬಂಟ್ವಾಳ ಪೇಟೆ, ಮೆಲ್ಕಾರ್‌, ಕೈಕಂಬ ಭಾಗದಲ್ಲಿ ಬೀದಿಬದಿ ವ್ಯಾಪಾರದಿಂದಾಗುವ ತೊಂದರೆ ಕುರಿತು ಆರೋಪಗಳು ಕೇಳಿ ಬರುತ್ತಿದ್ದು, ಬೀದಿ ಬದಿ ವ್ಯಾಪಾರಿಗಳಿಗೆ ಗುರುತಿನ ಚೀಟಿ ನೀಡಿರುವ ಪುರಸಭೆಯು ಅವರಿಗೆ ನಿರ್ದಿಷ್ಟ ವಲಯವನ್ನು ಇನ್ನೂ ಘೋಷಣೆ ಮಾಡದೇ ಇರುವುದರಿಂದ ಅವರು ಫ‌ುಟ್‌ಪಾತ್‌ಗಳಲ್ಲೇ ವ್ಯಾಪಾರ ಮಾಡಬೇಕಾದ ಸ್ಥಿತಿ ಇದೆ.

ಪುರಸಭೆ ವ್ಯಾಪ್ತಿಯ ಪ್ರಮುಖ ಜಂಕ್ಷನ್‌ಗಳು ಸೇರಿದಂತೆ ಹಲವು ಭಾಗಗಳಲ್ಲಿ ದಿನ ಕಳೆದಂತೆ ರಸ್ತೆ ಬದಿಗಳಲ್ಲಿ ಸರಕುಗಳನ್ನಿಟ್ಟು ಮಾರಾಟ ಮಾಡುವ ವ್ಯಾಪಾರಿಗಳ ಸಂಖ್ಯೆ ಹೆಚ್ಚುತ್ತಿದ್ದು, ಪುರಸಭೆಯಿಂದ ಗುರುತಿನ ಚೀಟಿ ಪಡೆದವರ ಜತೆಗೆ ಪಡೆಯದವರು ಕೂಡ ರಸ್ತೆ ಬದಿ ವ್ಯಾಪಾರ ಮಾಡುತ್ತಿದ್ದಾರೆ. ಬೀದಿ ಬದಿ ವ್ಯಾಪಾರಿಗಳ ವಲಯವಿಲ್ಲದೆ ಅವರನ್ನು ವ್ಯಾಪಾರ ಮಾಡುತ್ತಿರುವ ಸ್ಥಳದಿಂದ ಎಬ್ಬಿಸುವಂತೆಯೂ ಇಲ್ಲ ಎನ್ನಲಾಗುತ್ತಿದೆ.

ಅರ್ಧಕ್ಕೆ ನಿಂತ ವಲಯ ಗುರುತು ಕೆಲಸ ಪುರಸಭೆಯ ಪ್ರತೀ ಸಾಮಾನ್ಯ ಸಭೆಗಳಲ್ಲೂ ಬೀದಿ ಬದಿ ವ್ಯಾಪಾರದ ಕುರಿತು ಸಾಕಷ್ಟು ಚರ್ಚೆ ಯಾಗುತ್ತಿದ್ದು, ನಿರ್ದಿಷ್ಟ ಸ್ಥಳವನ್ನು ಗುರುತು ಮಾಡಿ ಅವರ ವಲಯವನ್ನಾಗಿ ಘೋಷಣೆ ಮಾಡುವ ಕಾರ್ಯ ನಡೆದಿಲ್ಲ. ಈ ಹಿಂದೆ ಪುರಸಭೆ ವ್ಯಾಪ್ತಿಯ ತಲಪಾಡಿ, ಬಂಟ್ವಾಳ ಪೇಟೆಯ ಕೊಟ್ರಮ್ಮನಗಂಡಿ, ಬಡ್ಡಕಟ್ಟೆ ಭಾಗದಲ್ಲಿ ಬೀದಿ ಬದಿ ವ್ಯಾಪಾರಿ ವಲಯ ಮಾಡುವ ಪ್ರಸ್ತಾವವಿದ್ದರೂ ಯಾವುದೂ ಕೂಡ ಅನುಷ್ಠಾನಕ್ಕೆ ಬಂದಿಲ್ಲ.

ಬಿ.ಸಿ.ರೋಡ್‌ನ‌ ತಲಪಾಡಿಯಲ್ಲಿ ವ್ಯಾಪಾರಿ ವಲಯ ಮಾಡುವ ಪ್ರಸ್ತಾವ ಅಂತಿಮಗೊಂಡಿದೆ ಎಂಬ ಮಾತು ಕೇಳಿಬಂದಿದ್ದರೂ, ಅದು ಕೂಡ ಹಾಗೇ ಉಳಿದುಕೊಂಡಿದೆ. ಸಾಮಾನ್ಯವಾಗಿ ಒಂದು ಪ್ರದೇಶವನ್ನು ಬೀದಿ ಬದಿ ವ್ಯಾಪಾರಿಗಳ ವಲಯ ಎಂದು ಘೋಷಣೆ ಮಾಡಿದರೆ ಅದಕ್ಕೆ ಬೇಕಾದ ಮೂಲ ಸೌಕರ್ಯವನ್ನು ನೀಡುವ ಕಾರ್ಯವನ್ನೂ ಪುರಸಭೆ ಮಾಡಬೇಕಾಗುತ್ತದೆ. ಇಲ್ಲದೇ ಇದ್ದರೆ ಬೀದಿ ಬದಿ ವ್ಯಾಪಾರ ಅಧಿನಿಯಮ ಕಾಯ್ದೆಯನ್ನು ಉಲ್ಲಂಘನೆ ಮಾಡಿದಂತಾಗುತ್ತದೆ ಎಂಬ ಮಾತುಗಳು ಕೇಳಿಬರುತ್ತಿದೆ.

ರವಿವಾರ ಅನಧಿಕೃತ ಸಂತೆ ಬಿ.ಸಿ.ರೋಡ್‌ನ‌ಲ್ಲಿ ಪ್ರತೀ ರವಿವಾರ ನಡೆಯುವ ಅನಧಿಕೃತ ಸಂತೆಯ ಕುರಿತೇ ಸಾಕಷ್ಟು ಆರೋಪಗಳು ಕೇಳಿ ಬರುತ್ತಿದ್ದು, ಅವರಿಗೆ ವ್ಯಾಪಾರ ಮಾಡಲು ಅವಕಾಶ ಕೊಟ್ಟವರು ಯಾರು ಎಂಬ ಪ್ರಶ್ನೆ ಹುಟ್ಟಿಕೊಂಡಿದೆ. ಎಲ್ಲಿಂದಲೋ ಬಂದ ವ್ಯಾಪಾರಿಗಳು ಬಿ.ಸಿ.ರೋಡ್‌ನ‌ ಹೆದ್ದಾರಿ ಬದಿ, ಫ್ಲೈಓವರ್‌ ತಳಭಾಗದಲ್ಲಿ ತರಕಾರಿ, ದಿನಸಿ ಸಾಮಗ್ರಿ, ಹಣ್ಣುಹಂಪಲು ವ್ಯಾಪಾರ ಮಾಡುತ್ತಿದ್ದು, ಆದರೆ ಅವರ್ಯಾರು ಕೂಡ ಪುರಸಭೆಯಿಂದ ಗುರುತಿನ ಚೀಟಿ ಪಡೆದ ವ್ಯಾಪಾರಿಗಳಲ್ಲ ಎನ್ನಲಾಗುತ್ತಿದೆ.

ಅವರು ಪುರಸಭೆಯಿಂದ ಲೈಸನ್ಸ್‌ ಪಡೆದ ಅಂಗಡಿಗಳ ಮುಂದೆಯೇ ಅನಧಿಕೃತ ವ್ಯಾಪಾರ ಮಾಡುತ್ತಿದ್ದರೂ ಪುರಸಭೆ ಸುಮ್ಮನಿದೆ ಎಂಬ ಆರೋಪ ಕೇಳಿಬರುತ್ತಿದೆ. ಈ ರೀತಿಯ ವ್ಯಾಪಾರದಿಂದ ಹೆದ್ದಾರಿ ಬದಿ ನಡೆದುಕೊಂಡು ಹೋಗುವವರಿಗೆ ತೊಂದರೆಯಾಗುವ ಜತೆಗೆ ವಾಹನಗಳ ಪಾರ್ಕಿಂಗ್‌ಗೆ ಅಡ್ಡಿಯಾಗುತ್ತಿದೆ. ಎಲ್ಲೆಂದರಲ್ಲಿ ವ್ಯಾಪಾರ ಮಾಡುವ ಬೀದಿ ಬದಿ ವ್ಯಾಪಾರಿಗಳು ನಿರ್ದಿಷ್ಟ ವಲಯಕ್ಕೆ ಹೋದರೆ ಉಳಿದಂತೆ ಈ ರೀತಿಯ ಅನಧಿಕೃತ ವ್ಯಾಪಾರಗಳಿಗೆ ಬ್ರೇಕ್‌ ಹಾಕುವುದಕ್ಕೆ ಸುಲಭವಾಗಲಿದೆ.

ಅನಧಿಕೃತ ವ್ಯಾಪಾರದ ವಿರುದ್ಧ ಕ್ರಮ ಪ್ರಸ್ತುತ ಗುರುತಿನ ಚೀಟಿ ಪಡೆದಿರುವ ಬೀದಿ ಬದಿ ವ್ಯಾಪಾರಿಗಳಿಂದ ಯಾವುದೇ ಸಮಸ್ಯೆ ಇಲ್ಲ. ಅವರು ಫ‌ುಟ್‌ಪಾತ್‌ ಅತಿಕ್ರಮಿಸಿದ್ದರೆ ಅದನ್ನು ತೆರವು ಮಾಡುತ್ತೇವೆ. ಪ್ರಸ್ತುತ ಗುರುತಿನ ಚೀಟಿ ಪಡೆಯದೆ ಅನಧಿಕೃತ ವ್ಯಾಪಾರ ಮಾಡುತ್ತಿರುವವರಿಂದ ತೊಂದರೆಯಾಗುತ್ತಿದ್ದು, ಅದರ ವಿರುದ್ಧ ಕಾರ್ಯಾಚರಣೆ ನಡೆಸಲಿದ್ದೇವೆ. ವಲಯ ಘೋಷಣೆಯ ಕುರಿತು ಈಗಾಗಲೇ 2-3 ಮೂರು ಸ್ಥಳಗಳನ್ನು ಪರಿಶೀಲನೆ ನಡೆಸಿದ್ದೇವೆ.
-ಮಹಮ್ಮದ್‌ ಶರೀಫ್‌,
ಅಧ್ಯಕ್ಷರು, ಬಂಟ್ವಾಳ ಪುರಸಭೆ

ಕಿರಣ್‌ ಸರಪಾಡಿ

ಟಾಪ್ ನ್ಯೂಸ್

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

10

Puttur: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು

1

Puttur: ವಿದ್ಯುತ್‌ ಉಪಕರಣದಲ್ಲಿ ಬೆಂಕಿ

Ninthikallu-ಬೆಳ್ಳಾರೆ-ಸುಳ್ಯ ರಸ್ತೆಯಲ್ಲಿ ಹೊಂಡ-ಗುಂಡಿಗಳದ್ದೇ ಸಾಮ್ರಾಜ್ಯ

Ninthikallu-ಬೆಳ್ಳಾರೆ-ಸುಳ್ಯ ರಸ್ತೆಯಲ್ಲಿ ಹೊಂಡ-ಗುಂಡಿಗಳದ್ದೇ ಸಾಮ್ರಾಜ್ಯ

High Court ನಿರ್ದೇಶನ: ಕೊಂಬಾರಿನ ರಸ್ತೆ, ಬಿರ್ಮೆರೆಗುಂಡಿ ಸೇತುವೆಗೆ 1.31 ಕೋಟಿ ರೂ.

High Court ನಿರ್ದೇಶನ: ಕೊಂಬಾರಿನ ರಸ್ತೆ, ಬಿರ್ಮೆರೆಗುಂಡಿ ಸೇತುವೆಗೆ 1.31 ಕೋಟಿ ರೂ.

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.