![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Dec 22, 2022, 2:54 PM IST
ನವದೆಹಲಿ : ಭಾರತದ ವೇಗಿ ಜಯದೇವ್ ಉನಾದ್ಕತ್ ಅವರು ಭಾರತದ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಅತಿ ಹೆಚ್ಚು ಪಂದ್ಯಗಳನ್ನು ಮಿಸ್ ಮಾಡಿಕೊಂಡ ದೇಶದ ಮೊದಲ ಕ್ರಿಕೆಟಿಗ ಎಂಬ ದಾಖಲೆಯನ್ನು ನಿರ್ಮಿಸಿದ್ದಾರೆ.
2010ರಲ್ಲಿ ಪದಾರ್ಪಣೆ ಮಾಡಿದ್ದ ಉನಾದ್ಕತ್ ಢಾಕಾದಲ್ಲಿ ನಡೆಯುತ್ತಿರುವ ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ ತಮ್ಮ ವೃತ್ತಿಜೀವನದ ಎರಡನೇ ಟೆಸ್ಟ್ ಪಂದ್ಯವನ್ನಷ್ಟೇ ಆಡುತ್ತಿದ್ದಾರೆ. ಅವರು ಸ್ಪಿನ್ನರ್ ಕುಲದೀಪ್ ಯಾದವ್ ಅವರ ಬದಲಿ ಆಟಗಾರನಾಗಿ ಆಡುತ್ತಿದ್ದಾರೆ.
ಕುಲದೀಪ್ ಯಾದವ್ ಚಟ್ಟೋಗ್ರಾಮ್ನಲ್ಲಿ ನಡೆದ ಸರಣಿಯ ಆರಂಭಿಕ ಪಂದ್ಯದಲ್ಲಿ ಭಾರತವು 188 ರನ್ಗಳ ಗೆಲುವಿನಲ್ಲಿ ಮಹತ್ವದ ಪಾತ್ರ ವಹಿಸಿದ್ದರು. 8 ವಿಕೆಟ್ ಕಬಳಿಸಿ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದರು. ಅವರ ಬದಲಿಗೆ 31 ರ ಹರೆಯದ ಉನಾದ್ಕತ್ ತಂಡದಲ್ಲಿ ಸ್ಥಾನ ಪಡೆದಿರುವುದು ಅಚ್ಚರಿಗೆ ಕಾರಣವಾಗಿದೆ.
ಬಾಂಗ್ಲಾ ವಿರುದ್ದ ದ ಪಂದ್ಯದಲ್ಲಿ 16 ಓವರ್ ಗಳಲ್ಲಿ 2 ಮೇಡನ್ ಎಸೆದು 50 ರನ್ ನೀಡಿ 2 ವಿಕೆಟ್ ಪಡೆದಿದ್ದಾರೆ.
ಉನದ್ಕತ್ ಬರೋಬ್ಬರಿ 12 ವರ್ಷ ಮತ್ತು ಎರಡು ದಿನಗಳ ಹಿಂದೆ ಡಿಸೆಂಬರ್ 16, 2020 ರಂದು ಸೆಂಚೂರಿಯನ್ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ತಮ್ಮ ಚೊಚ್ಚಲ ಟೆಸ್ಟ್ ಪಂದ್ಯವನ್ನು ಆಡಿದ್ದರು. ಈ ನಡುವೆ, ಅವರು 118 ಟೆಸ್ಟ್ ಪಂದ್ಯಗಳನ್ನು ತಪ್ಪಿಸಿಕೊಂಡಿದ್ದಾರೆ. ಇದು ಭಾರತೀಯ ಆಟಗಾರನೊಬ್ಬ ಮಿಸ್ ಮಾಡಿಕೊಂಡ ಅತ್ಯಧಿಕ ಮತ್ತು ವಿಶ್ವ ಕ್ರಿಕೆಟ್ನಲ್ಲಿ ಎರಡನೇ ಅತಿ ಹೆಚ್ಚು ಪಂದ್ಯದ ದಾಖಲೆಯಾಗಿದೆ.
ಇಂಗ್ಲೆಂಡ್ನ ಗರೆಥ್ ಬ್ಯಾಟಿ (142 ಪಂದ್ಯ) ಮಾತ್ರ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಉನಾದ್ಕತ್ಗಿಂತ ಹೆಚ್ಚು ಪಂದ್ಯಗಳನ್ನು ಮಿಸ್ ಮಾಡಿಕೊಂಡಿದ್ದಾರೆ.
𝐏𝐞𝐫𝐬𝐢𝐬𝐭𝐞𝐧𝐜𝐞 𝐚𝐧𝐝 𝐡𝐚𝐫𝐝 𝐰𝐨𝐫𝐤 𝐩𝐚𝐲𝐬 𝐨𝐟𝐟 🫡@JUnadkat last played a Test match for #TeamIndia on December 16, 2010.
After 12 years, he will be donning the whites again today.#BANvIND pic.twitter.com/ziQGecIcrE
— BCCI (@BCCI) December 22, 2022
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್ ವಿವಾದ
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.