ಸ್ಥಳೀಯರ ಒಪ್ಪಿಗೆ ಪಡೆದೇ ದರ್ಗಾ ತೆರವು: ಬೊಮ್ಮಾಯಿ


Team Udayavani, Dec 22, 2022, 3:26 PM IST

ಸ್ಥಳೀಯರ ಒಪ್ಪಿಗೆ ಪಡೆದೇ ದರ್ಗಾ ತೆರವು: ಬೊಮ್ಮಾಯಿ

ಸುವರ್ಣ ವಿಧಾನಸೌಧ: ಹುಬ್ಬಳ್ಳಿ- ಧಾರವಾಡ ನಡುವಿನ ಭೈರಿದೇವರಕೊಪ್ಪದ ಬಳಿ ಹೆದ್ದಾರಿಯಲ್ಲಿರುವ ಹಜರತ್‌ ಸಯ್ಯದ್‌ ಮೆಹಮೂದ್‌ ಶಹಾ ದರ್ಗಾವನ್ನು ರಸ್ತೆ (ಬಿಆರ್‌ಟಿಎಸ್‌) ಅಭಿವೃದ್ಧಿಗಾಗಿ ಸ್ಥಳೀಯರ ಒಪ್ಪಿಗೆ ಪಡೆದೇ ಸ್ಥಳಾಂತರಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಶೂನ್ಯವೇಳೆಯಲ್ಲಿ ಶಾಸಕ ಪ್ರಸಾದ್‌ ಅಬ್ಬಯ್ಯ ವಿಷಯ ಮಂಡನೆ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿದ ಅವರು, ಯಾರಿಗೂ ನೋವು ಕೊಡುವ ಉದ್ದೇಶ ಇಲ್ಲ. ಇಡೀ ದೇಶದಲ್ಲಿ ರಸ್ತೆ ಅಗಲೀಕರಣ ವಿಷಯದಲ್ಲಿ ಯಾವ ರೀತಿ ಕ್ರಮಕೈಗೊಳ್ಳಬೇಕೆಂದು ಕಾನೂನು ಇದೆ. 10-12 ವರ್ಷದಿಂದಲೂ ಭೂ ಸ್ವಾಧೀನಕ್ಕೆ ತಡೆಯಾಗಿದ್ದು, ಕಾರಿಡಾರ್‌ ನಿರ್ಮಿಸಲು ಸ್ಥಳಾಂತರ ಮಾಡಲೇಬೇಕಾಗುತ್ತದೆ. ಈ ವಿಚಾರದಲ್ಲಿ ಆರು ಬಾರಿ ಮಾತುಕತೆ ನಡೆದಿದೆ.

ಅಲ್ಲಿರುವವರೆಲ್ಲ ಗೊತ್ತಿದ್ದಾರೆ, ದರ್ಗಾ ಸ್ಥಳಾಂತರಕ್ಕೂ ಒಪ್ಪಿದ್ದಾರೆ ಹಾಗೂ ನಾವೇ ಮಾಡುತ್ತೇವೆ ಎಂದಿದ್ದಾರೆ. ಅವರಿಗೆ ಏನೆಲ್ಲ ಸಹಕಾರ ಕೊಡಬೇಕೋ ಕೊಡುತ್ತೇವೆ. ಶುಕ್ರವಾರ ಅಲ್ಲಿಗೆ ಭೇಟಿಕೊಡುತ್ತೇನೆ ಎಂದರು. ನಾನು ಆ ಭಾಗದವನೇ. ರಸ್ತೆಗಾಗಿ ಶೋ ರೂಂ, ಮನೆ-ಅಂಗಡಿಗಳನ್ನು ತೆರವು ಮಾಡಲಾಗಿದೆ. ಅಷ್ಟೇ ಏಕೆ ಪ್ರೈಮ್‌ ಏರಿಯಾದಲ್ಲಿದ್ದ ನನ್ನ ಜಾಗವನ್ನೇ ಸ್ವಾಧೀನ ಮಾಡಿಕೊಳ್ಳಲಾಗಿದೆ. ಐದಾರು ಕೋಟಿ ರೂ. ಬೆಲೆ ಬಾಳುವ ಜಾಗಕ್ಕೆ ಐದಾರು ಲಕ್ಷ ರೂ. ಪರಿಹಾರ ಬಂದಿದೆ ಎಂದರು.

ಶಾಸಕ ಪ್ರಸಾದ್‌ ಅಬ್ಬಯ್ಯ ಮಾತನಾಡಿ, ಚುನಾವಣೆ ಸಂದರ್ಭ ಇಂತಹ ವಿಚಾರ ಮುನ್ನೆಲೆಗೆ ಬರುತ್ತಿದೆ. ದರ್ಗಾ ತೆರವು ಮಾಡುವ ವಿಷಯದಲ್ಲಿ ಕೋರ್ಟ್‌ ತಡೆಯಾಜ್ಞೆ ತೆರವು ಮಾಡಿದ್ದರಿಂದ ಏಕಾಏಕಿ 144 ಸೆಕ್ಷನ್‌ ಹಾಕಿ ತೆರವು ಕಾರ್ಯಾಚರಣೆ ನಡೆಸಲಾಗುತ್ತಿದೆ. ಇದರಿಂದ ಅಶಾಂತಿ ಸೃಷ್ಟಿ ಮಾಡಿದಂತಾಗುತ್ತದೆ, ಸರ್ಕಾರಕ್ಕೆ ಯಾವ ಒತ್ತಡ ಇದೆಯೋ ಗೊತ್ತಿಲ್ಲ ಎಂದರು.

ಆ ದರ್ಗಾ ಸರ್ವಧರ್ಮ ಸಮನ್ವಯ ಸ್ಥಳ. ಅನೇಕ ವರ್ಷಗಳಿಂದಲೂ ಅಲ್ಲಿದೆ. ಅದನ್ನು ತೆರವು ಮಾಡುವುದರಿಂದ ಉದ್ವಿಗ್ನತೆ ಉಂಟಾಗುತ್ತದೆ, ದ್ವೇಷಕ್ಕೆ ಎಡೆಮಾಡಿಕೊಟ್ಟಂತಾಗುತ್ತದೆ. ಹೀಗಾಗಿ ಮಂಗಳವಾರ ರಾತ್ರಿ ಸಿಎಂಗೆ ಕರೆ ಮಾಡಿ ತೆರವು ಮಾಡದಂತೆ ಮನವಿ ಮಾಡಿದ್ದೆ ಎಂದರು.

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಉಪನಾಯಕ ಯು.ಟಿ.ಖಾದರ್‌, ದರ್ಗಾವನ್ನು ಮುಟ್ಟಬೇಡಿ, ರಸ್ತೆಗೆ ಅಡಚಣೆಯಾಗುವುದಾದರೆ ಎದುರಿನ ಜಾಗವನ್ನು ಸ್ವಾಧೀನಪಡಿಸಿಕೊಂಡು ಅಲ್ಲಿ ರಸ್ತೆ ಮಾಡಿ ಎಂದು ಸಲಹೆ ನೀಡಿದರು. ಬಿಜೆಪಿಯ ಅರವಿಂದ ಬೆಲ್ಲದ್‌ ಮಾತನಾಡಿ, ಬಿಆರ್‌ಟಿಎಸ್‌ಗಾಗಿ 13 ಗುಡಿ ಹಾಗೂ ಒಂದು ಚರ್ಚ್‌ ತೆರವುಗೊಳಿಸಲಾಗಿದೆ. ದರ್ಗಾ ತೆಗೆಯಬಾರದೆಂದರೆ ಹೇಗೆ? ಎಲ್ಲರ ಭಾವನೆಯೂ ಒಂದೇ. ಅಲ್ಲಿ ರಸ್ತೆ ಸುರಕ್ಷಿತವಾಗಿಲ್ಲ, ತೆರವು ಆಗಲೇ ಬೇಕು. ದರ್ಗಾದವರೂ ಸಹ ತೆರವು ಮಾಡಲು ಒಪ್ಪಿದ್ದಾರೆ. ಕಾಂಗ್ರೆಸ್‌ ಮಾತ್ರ ಓಟ್‌ ಬ್ಯಾಂಕ್‌ ರಾಜಕಾರಣ ಮಾಡುತ್ತಿದೆ ಎಂದರು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

High Court: ಅಶ್ಲೀಲ ವೀಡಿಯೋ ಹಂಚಿಕೆ: ಪ್ರೀತಂಗೌಡ ವಿರುದ್ಧದ ಪ್ರಕರಣ ವಿಚಾರಣೆ ಮುಂದಕ್ಕೆ

High Court: ಅಶ್ಲೀಲ ವೀಡಿಯೋ ಹಂಚಿಕೆ: ಪ್ರೀತಂಗೌಡ ವಿರುದ್ಧದ ಪ್ರಕರಣ ವಿಚಾರಣೆ ಮುಂದಕ್ಕೆ

ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

Congress: ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

KEA: 206 ಸೀಟು ರದ್ದು ಮಾಡಿಕೊಂಡ ಅಭ್ಯರ್ಥಿಗಳು

KEA: 206 ಸೀಟು ರದ್ದು ಮಾಡಿಕೊಂಡ ಅಭ್ಯರ್ಥಿಗಳು

1 ಮೆಟ್ರಿಕ್‌ ಟನ್‌ ರೇಷ್ಮೆ ಉತ್ಪಾದನೆ ಗುರಿ: ಕೇಂದ್ರ ಜವುಳಿ ಸಚಿವ ಗಿರಿರಾಜ್‌ ಸಿಂಗ್‌

1 ಮೆಟ್ರಿಕ್‌ ಟನ್‌ ರೇಷ್ಮೆ ಉತ್ಪಾದನೆ ಗುರಿ: ಕೇಂದ್ರ ಜವುಳಿ ಸಚಿವ ಗಿರಿರಾಜ್‌ ಸಿಂಗ್‌

CT Ravi: ಶೇ. 80ರಷ್ಟು ಹಿಂದೂಗಳೇ ಇದ್ದರೂ ಗಣೇಶೋತ್ಸವಕ್ಕೆ ಅಡ್ಡಿ

CT Ravi: ಶೇ. 80ರಷ್ಟು ಹಿಂದೂಗಳೇ ಇದ್ದರೂ ಗಣೇಶೋತ್ಸವಕ್ಕೆ ಅಡ್ಡಿ

Araga Jnanendra ಕಾಲದ ಹಗರಣ ತನಿಖೆ ನಡೆಸಿ: ಕಿಮ್ಮನೆ ರತ್ನಾಕರ್‌

Araga Jnanendra ಕಾಲದ ಹಗರಣ ತನಿಖೆ ನಡೆಸಿ: ಕಿಮ್ಮನೆ ರತ್ನಾಕರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-joshi

Tirupati Laddu; ರಾಜ್ಯದ ಪವಿತ್ರ ಕ್ಷೇತ್ರಗಳ ಪ್ರಸಾದ ಪರೀಕ್ಷಿಸಬೇಕು: ಜೋಶಿ ಆಗ್ರಹ

ಶಾಸಕ ಮುನಿರತ್ನ ಒಬ್ಬ ನಾಲಾಯಕ್, ಅಯೋಗ್ಯ: ಶಾಸಕ ಪ್ರಸಾದ ಅಬ್ಬಯ್ಯ

Hubli; ಶಾಸಕ ಮುನಿರತ್ನ ಒಬ್ಬ ನಾಲಾಯಕ್, ಅಯೋಗ್ಯ: ಶಾಸಕ ಪ್ರಸಾದ ಅಬ್ಬಯ್ಯ

ಅಪರಾಧ ರಹಿತ ಸಮಾಜ ನಿರ್ಮಾಣಕ್ಕೆ ಮುಂದಾಗಿ-ನ್ಯಾ| ಸಂತೋಷ ಹೆಗ್ಡೆ

ಅಪರಾಧ ರಹಿತ ಸಮಾಜ ನಿರ್ಮಾಣಕ್ಕೆ ಮುಂದಾಗಿ-ನ್ಯಾ| ಸಂತೋಷ ಹೆಗ್ಡೆ

Dharwad: ತತ್ವಶಾಸ್ತ್ರವೇ ನನ್ನ ಕಾದಂಬರಿಗಳ ಮೂಲಸೆಲೆ: ಎಸ್.ಎಲ್.ಬೈರಪ್ಪ

Dharwad: ತತ್ವಶಾಸ್ತ್ರವೇ ನನ್ನ ಕಾದಂಬರಿಗಳ ಮೂಲಸೆಲೆ: ಎಸ್.ಎಲ್.ಭೈರಪ್ಪ

basavaraj

Dharwad; ಶಾಂತಿ ಕದಡುವವರ ವಿರುದ್ಧ ಕ್ರಮಕ್ಕೆ ಸಿಎಂಗೆ ಪತ್ರ: ಹೊರಟ್ಟಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

1-wewewqeqwewqe

Edible oil; ದಾಸ್ತಾನಿದ್ದರೂ ಖಾದ್ಯ ತೈಲ ಬೆಲೆ ಏರಿಸಿದ್ದೇಕೆ: ಸರಕಾರ ಪ್ರಶ್ನೆ

Madikeri ಭಾಗದ ಅಪರಾಧ ಸುದ್ದಿಗಳು

Madikeri ಭಾಗದ ಅಪರಾಧ ಸುದ್ದಿಗಳು

High Court: ಅಶ್ಲೀಲ ವೀಡಿಯೋ ಹಂಚಿಕೆ: ಪ್ರೀತಂಗೌಡ ವಿರುದ್ಧದ ಪ್ರಕರಣ ವಿಚಾರಣೆ ಮುಂದಕ್ಕೆ

High Court: ಅಶ್ಲೀಲ ವೀಡಿಯೋ ಹಂಚಿಕೆ: ಪ್ರೀತಂಗೌಡ ವಿರುದ್ಧದ ಪ್ರಕರಣ ವಿಚಾರಣೆ ಮುಂದಕ್ಕೆ

ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

Congress: ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.