ಬಂಟ್ವಾಳ: ಒಂಟಿ ಮಹಿಳೆಯನ್ನು ಕಟ್ಟಿ ಹಾಕಿ ದರೋಡೆ


Team Udayavani, Dec 23, 2022, 9:16 AM IST

ಬಂಟ್ವಾಳ: ಒಂಟಿ ಮಹಿಳೆಯನ್ನು ಕಟ್ಟಿ ಹಾಕಿ ದರೋಡೆ

ಬಂಟ್ವಾಳ: ಒಬ್ಬಂಟಿಯಾಗಿ ಮನೆಯಲ್ಲಿದ್ದ ವೇಳೆ ಮಹಿಳೆಯೊರ್ವಳನ್ನು ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸಿ ಬಳಿಕ ದರೋಡೆ ಮಾಡಿದ ಘಟನೆ ತಾಲೂಕಿನ ಬರಿಮಾರು ಗ್ರಾಮದ ಕಾಗೆಕಾನದಲ್ಲಿ ಡಿ.22 ರಂದು ಗುರುವಾರ ಸಂಜೆ ಸುಮಾರು 7 ಗಂಟೆ ವೇಳೆಗೆ ನಡೆದಿದೆ.
ಬರಿಮಾರು ಗ್ರಾಮದ ಕಡೆಕನ ನಿವಾಸಿ ರೋಹಿತ್ ಎಂಬವರ ಪತ್ನಿ ಪವಿತ್ರ ಎಂಬಾಕೆಯನ್ನು ಕಂಬಕ್ಕೆ ಕಟ್ಟಿ ಹಾಕಿ ಮನೆಯಿಂದ ರಾಬರಿ ಮಾಡಲಾಗಿದೆ ಎಂಬ ದೂರು ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದಾಖಲಾಗಿದೆ.
ಘಟನೆ ವಿವರ:
ರೋಹಿತ್ ಕುಮಾರ್ ಅವರು ಐಸ್ ಕ್ರೀಂ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದು, ಕೆಲಸಕ್ಕೆ ಹೋಗಿದ್ದರು. ಪತ್ನಿ ಪವಿತ್ರ ಮನೆಯಲ್ಲಿರುತ್ತಿದ್ದರು. ಮಕ್ಕಳಿಬ್ಬರು ಗುರುವಾರ ಮೂಡಬಿದಿರೆಯಲ್ಲಿ ನಡೆಯುವ ಜಾಂಬೂರಿ ಕಾರ್ಯಕ್ರಮಕ್ಕೆ ತೆರಳಿದ್ದರು.
ಸಂಜೆ ಸುಮಾರು 6.30 ರ ವೇಳೆ ಪವಿತ್ರ ಅವರು ಮನೆಯ ಬಾತ್ ರೂಮ್ ನಲ್ಲಿ ಸ್ನಾನ ಮಾಡುತ್ತಿದ್ದ ವೇಳೆ ಮನೆಯ ಮಾಡಿಗೆ ಕಲ್ಲು ಹೊಡೆದ ಶಬ್ದವಾಯಿತು, ಆ ಬಳಿಕ ಮನೆಯ ಕಿಟಕಿ ಬಾಗಿಲಿನ ಗಾಜಿಗೆ ಕಲ್ಲು ಎಸೆಯಲಾಗಿತ್ತು. ಸ್ನಾನ ಮಾಡಿ ಹೊರಬಂದು ನೋಡಿದಾಗ ಯಾರು ಕಾಣಲಿಲ್ಲ, ಯಾರು ಇಲ್ಲ ಅಂತ ವಾಪಾಸು ಬಾತ್ ರೂಮ್ ನ ಬಾಗಿಲು ಹಾಕಲು ಬರುವ ವೇಳೆ ಇಬ್ಬರು ಮುಸುಕುದಾರಿ ಅಪರಿಚಿತ ವ್ಯಕ್ತಿಗಳು ಏಕಾಏಕಿ ಪವಿತ್ರರನ್ನು ಎಳೆದುಕೊಂಡು ಹೋಗಿ ಮನೆಯ ಆಂಗಳದಲ್ಲಿದ್ದ ಅಡಿಕೆ ಮರದ ಕಂಬಕ್ಕೆ ನೈಲಾನ್ ಹಗ್ಗದಿಂದ ಕಟ್ಟಿ ಹಾಕಿ ಹಲ್ಲೆ ನಡೆಸಿದ್ದಾರೆ.
ಆ ಬಳಿಕ ಕುತ್ತಿಗೆಯಲ್ಲಿದ್ದ ಕರಿಮಣಿ ಸರ ಕಾಣೆಯಾಗಿದೆ.ಮನೆಯೊಳಗೆ ನುಗ್ಗಿದ ಇಬ್ಬರು ವ್ಯಕ್ತಿಗಳು ಟೇಬಲ್ ಮೇಲೆ ಇದ್ದ ನಗದು 4 ಸಾವಿರ ಹಾಗೂ ಅಂಗಳದಲ್ಲಿದ್ದ ಅಡಿಕೆ ಗೋಣಿಯನ್ನು ಕೊಂಡುಹೋಗಿದ್ದಾರೆ ಹಾಗೂ ಕಪಾಟು ಒಳಗೆ ಜಾಲಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಪವಿತ್ರ ಅವರನ್ನು ಕಟ್ಟಿ ಹಾಕಿದ ಬಗ್ಗೆ ಯಾರು ಕೂಡ ಗಮನಿಸಿಲ್ಲ, ಸುಮಾರು 7 ಅಂದಾಜಿಗೆ ಮನೆಯ ಸಮೀಪದ ಮನೆಯವರು ನೋಡಿ ಕಟ್ಟಿ ಹಾಕಿದನ್ನು ಬಿಚ್ಚಿದ ಬಳಿಕ ಘಟನೆಯ ಬಗ್ಗೆ ತಿಳಿದಿದೆ. ಬಿಜೆಪಿ ಮುಖಂಡ ಗಣೇಶ್ ರೈ ಮಾಣಿ ಅವರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪೊಲೀಸರಿಗೆ ಈ ಬಗ್ಗೆ ಮಾಹಿತಿ ನೀಡಿದ್ದಾರೆ.
ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಎಸ್. ಐ.ಹರೀಶ್ ಭೇಟಿ ನೀಡಿದ್ದಾರೆ.ಇಂದು ಬೆರಳಚ್ಚು ತಜ್ಞರು ಹಾಗೂ ಶ್ವಾನದಳ ಆಗಮಿಸಿ ಪರಿಶೀಲನೆ ನಡೆಸುವ ಬಗ್ಗೆ ಎಸ್.ಐ.ಹರೀಶ್ ‌ಮಾಹಿತಿ ನೀಡಿದ್ದಾರೆ.

ಟಾಪ್ ನ್ಯೂಸ್

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ

8-kukke

Subrahmanya: ಮುಜರಾಯಿ ಸಚಿವರ ನೇತೃತ್ವದಲ್ಲಿ ಕುಕ್ಕೆ ದೇಗುಲದ ಅಭಿವೃದ್ಧಿ ಸಭೆ

3(1

Sullia: ಜಳಕದಹೊಳೆ ಸೇತುವೆ; ಸಂಚಾರ ನಿಷೇಧ

2(1

Uppinangady: ಕಾಂಕ್ರೀಟ್‌ ರಸ್ತೆಯೇ ಕಿತ್ತೋಗಿದೆ

1

Bantwal: ಕೃಷಿಕರ ತೋಟಗಳಿಗೆ ನುಗ್ಗಿದ ಜಕ್ರಿಬೆಟ್ಟು ಅಣೆಕಟ್ಟು ನೀರು!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.