ಯುದ್ಧಕ್ಕೆ ತೆರೆ ಎಳೆಯಲು ಬಯಸುತ್ತೇವೆ: ಮಾಸ್ಕೋದಲ್ಲಿ ರಷ್ಯಾ ಅಧ್ಯಕ್ಷ ಪುತಿನ್ ಅಚ್ಚರಿ ಹೇಳಿಕೆ
Team Udayavani, Dec 24, 2022, 7:25 AM IST
ಮಾಸ್ಕೋ: “ಉಕ್ರೇನ್ ವಿರುದ್ಧದ ಯುದ್ಧವನ್ನು ಶೀಘ್ರವೇ ಮುಕ್ತಾಯಗೊಳಿಸಬೇಕು ಎಂಬ ಇರಾದೆಯಲ್ಲಿದ್ದೇನೆ. ಅದಕ್ಕಾಗಿ ನಾವು ಕೆಲಸ ಮಾಡುತ್ತಿದ್ದೇವೆ’
– ಹೀಗೆಂದು ಹೇಳಿದ್ದು ಬೇರೆ ಯಾರೂ ಅಲ್ಲ. 300 ದಿನಗಳ ಹಿಂದೆ ಉಕ್ರೇನ್ ವಿರುದ್ಧ ತಕರಾರು ತೆಗೆದು ದಾಳಿ ಆರಂಭಿಸಿ ದ್ದ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುತಿನ್. ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅಮೆರಿಕಕ್ಕೆ ದಿಢೀರ್ ಪ್ರವಾಸ ಕೈಗೊಂಡಿರುವಂತೆಯೇ ಈ ಹೇಳಿಕೆ ಹೊರಬಿದ್ದಿದೆ.
ಮಾಸ್ಕೋದಲ್ಲಿ ಮಾತನಾಡಿದ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುತಿನ್ ರಷ್ಯಾ ಯುದ್ಧವನ್ನು ಮುಕ್ತಾಯ ಮಾಡು ವುದರ ಬಗ್ಗೆ ಆಸಕ್ತಿ ಹೊಂದಿದ್ದರೂ ಅಮೆರಿಕ ಅದಕ್ಕೆ ಅನುವು ಮಾಡಿಕೊಡುತ್ತಿಲ್ಲ. ನಮ್ಮ ದೇಶವನ್ನು ದುರ್ಬಲಗೊಳಿಸಲು ಮುಂದಾಗಿದೆ ಎಂದು ದೂರಿದ್ದಾರೆ.
“ಶೀಘ್ರವೇ ಕದನ ಮುಕ್ತಾಯಗೊಳಿಸಬೇಕು ಎಂಬ ಉದ್ದೇಶ ಹೊಂದಿ ದ್ದೇವೆ. ಅದಕ್ಕಾಗಿ ನಾವು ಕೆಲಸ ಮಾಡು ತ್ತಿದ್ದೇವೆ. ಮಾತುಕತೆಯ ಮೂಲಕ ಹೇಗಾ ದರೂ ಮಾಡಿ ಬಿಕ್ಕಟ್ಟು ಶಮನ ಮಾಡ ಬೇಕು ಎಂಬ ಹಂಬ ಲದಿಂದ ಇದ್ದೇವೆ’ ಎಂದು ಪುತಿನ್ ಹೇಳಿಕೊಂಡಿದ್ದಾರೆ.
ಇದೇ ವೇಳೆ, ರಷ್ಯಾ ಸೇನಾ ಮುಖ್ಯಸ್ಥ ಪ್ರತಿಕ್ರಿಯೆ ನೀಡಿ, ಸದ್ಯ ಉಕ್ರೇನ್ನಲ್ಲಿ ದಾಳಿ ಮುಂದುವರಿದಿದೆ. ಆ ದೇಶದ ಪಶ್ಚಿಮ ಭಾಗದ ಡಾನೆಸ್ಕ್ನಲ್ಲಿ ಪ್ರದೇ ಶಗಳನ್ನು ವಶ ಪಡಿ ಸುವತ್ತ ಮುಂದುವರಿದಿದ್ದೇವೆ ಎಂದರು.
ಇನ್ನೊಂದೆಡೆ ರಷ್ಯಾದ ವಾಂಗರ್ ಗ್ರೂಪ್ಗೆ ಶಸ್ತ್ರಾಸ್ತ್ರ ಪೂರೈಕೆ ಮಾಡಿಲ್ಲ ಎಂದು ಉತ್ತರ ಕೊರಿಯಾ ಹೇಳಿಕೊಂಡಿದೆ.
ಯುದ್ಧ ನಿಲ್ಲಿಸಲು ಬಯಸುತ್ತೇವೆ ಎಂಬ ಹೇಳಿಕೆಯನ್ನು ಪುತಿನ್ ನೀಡಿದ ಬಳಿಕವೂ ಉಕ್ರೇನ್ ಮೇಲಿನ ದಾಳಿ ಮುಂದುವರಿದಿದೆ. ಶುಕ್ರವಾರ ಪೂರ್ವ ಮತ್ತು ದಕ್ಷಿಣ ಉಕ್ರೇನ್ ಮೇಲೆ ರಾಕೆಟ್, ಮೋರ್ಟಾರ್ ಹಾಗೂ ವೈಮಾನಿಕ ದಾಳಿಯನ್ನು ರಷ್ಯಾ ನಡೆಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Burkina Faso: ಬುರ್ಕಿನಫಾಸೋದಲ್ಲಿ ಒಂದೇ ಗಂಟೆಯಲ್ಲಿ 600 ಮಂದಿ ಹತ್ಯೆ
Zakir Naik ವಿವಾದ; ಎಲ್ಲರೂ ಅಲ್ಲಾಹನನ್ನಷ್ಟೇ ಪ್ರಾರ್ಥಿಸಿದರೆ ಶಾಂತಿ…
Iran ಅಣ್ವಸ್ತ್ರ ಕೇಂದ್ರದ ಮೇಲೆ ದಾಳಿ ಮಾಡಿ: ಇಸ್ರೇಲ್ಗೆ ಟ್ರಂಪ್
Middle East latest; ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ: ಹಮಾಸ್ ಅಧಿಕಾರಿ ಸಾ*ವು
Iran ಸರ್ವೋಚ್ಚ ನಾಯಕನ ಕೈಯಲ್ಲಿ ರೈಫಲ್!; ಇಸ್ರೇಲ್ ದೀರ್ಘಕಾಲ ಉಳಿಯುವುದಿಲ್ಲ..
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
ICC Womens T20 World Cup; ಪಾಕಿಸ್ಥಾನ ವಿರುದ್ಧ ಗೆಲುವಿನ ನಗೆ ಬೀರಿದ ಭಾರತ
Ambewadi ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಬೀಟೆ ಮರ ಕಡಿಯುತ್ತಿದ್ದ ಓರ್ವನ ಬಂಧನ
Cycle Ride: ಸಾಗುತ ದೂರ ದೂರ… ಬೆಂಗಳೂರು ಟು ಗೋವಾ ಸೈಕಲ್ ಸವಾರಿ
Kamanur village: ದಾರಿ ತೋರುವ ಮಾದರಿ ಗ್ರಾಮ
Bigg Boss: ಬಿಗ್ ಬಾಸ್ ಮಾಜಿ ಸ್ಪರ್ಧಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.