ಎಲ್ಲಾ ಜನಪ್ರತಿನಿಧಿಗಳು ಕ್ರೀಡೋತ್ಸವ ಆಯೋಜಿಸಿ ಕ್ರೀಡಾ ಕ್ರಾಂತಿ ಮಾಡಬೇಕು: ಅನುರಾಗ್‌ ಸಿಂಗ್‌ ಠಾಕೂರ್‌

ಉಡುಪಿ ಬಿಜೆಪಿ 'ಅಟಲ್‌ ಉತ್ಸವ’ದಲ್ಲಿ ಕೇಂದ್ರದ ಯುವ ವ್ಯವಹಾರ ಮತ್ತು ಕ್ರೀಡಾ ಸಚಿವ

Team Udayavani, Dec 24, 2022, 10:37 PM IST

1-d-adadsa

ಉಡುಪಿ : ದೇಶದಲ್ಲಿ ಎಲ್ಲಾ ಎಲ್ಲಾ ಜನಪ್ರತಿನಿಧಿಗಳು ಕ್ರೀಡೋತ್ಸವ ಆಯೋಜಿಸುವ ಮೂಲಕ ಕ್ರೀಡಾ ಕ್ರಾಂತಿ ನಡೆಸಬೇಕು ಎಂದು ಕೇಂದ್ರದ ಯುವ ವ್ಯವಹಾರ ಮತ್ತು ಕ್ರೀಡಾ ಸಚಿವ ಅನುರಾಗ್‌ ಸಿಂಗ್‌ ಠಾಕೂರ್‌ ಕರೆ ನೀಡಿದರು.

ಡಿ. 24ರಂದು ಬಿಜೆಪಿ ಉಡುಪಿ ನಗರ ಮತ್ತು ಗ್ರಾಮಾಂತರ ವತಿಯಿಂದ ಹಮ್ಮಿಕೊಂಡ “ಅಟಲ್‌ ಉತ್ಸವ’ದ ಪ್ರಯುಕ್ತ ಎಂಜಿಎಂ ಕಾಲೇಜು ಮೈದಾನದಲ್ಲಿ ನಡೆದ ಹೊನಲು ಬೆಳಕಿನ ರಾಷ್ಟ್ರಮಟ್ಟದ ಮುಕ್ತ ಪ್ರೊ ಕಬಡ್ಡಿ ಪಂದ್ಯಾಟದಲ್ಲಿ ಭಾಗಿಯಾಗಿ ಮಾತನಾಡಿ, ನಾನು ಇಂತಹ ಕ್ರೀಡೆಯನ್ನು ಉತ್ತೇಜಿಸುವ ಕಾರ್ಯಕ್ರಮಕ್ಕೆ ಕರೆದರೆ ಒಂದು ಬಾರಿಯಲ್ಲ ಹತ್ತು ಬಾರಿಯಾದರೂ ಬರುತ್ತೇನೆ ಎಂದರು.

545 ಲೋಕಸಭಾ ಸಂಸದರು 245 ರಾಜ್ಯಸಭಾ ಸಂಸದರು 4000 ಮಂದಿ ಶಾಸಕರು ಇಂತಹ ಟ್ರೋಫಿಗಳನ್ನು ಆಯೋಜಿಸಿದರೆ ದೇಶದಲ್ಲಿ ಕ್ರೀಡಾ ಕ್ರಾಂತಿ ನಡೆಸಬಹುದು. ಎಲ್ಲಾ ಕಡೆ ಇಂತಹ ಕ್ರೀಡೋತ್ಸವ ಆಯೋಜಿಸುವ ರಘುಪತಿ ಭಟ್ ಅವರಂತಹ ಹೆಚ್ಚಿನ ನಾಯಕರು ಬೇಕಾಗಿದೆ ಎಂದರು.

ಹಿಂದೆ ಕ್ರಿಕೆಟ್ ಅನ್ನು ದೇಶದಲ್ಲಿ ಬಹುವಾಗಿ ಮೆಚ್ಚಲಾಗಿತ್ತು, ಈಗ ಪ್ರೊ ಕಬಡ್ಡಿ ಮೂಲಕ ಕ್ರೀಡಾಳುಗಳ ಮೌಲ್ಯ ಕ್ರಿಕೆಟ್ ನಂತೆ ಕೋಟಿ ರೂ.ಗೆ ಏರಿಕೆಯಾಗಿದೆ ಎಂದರು.

3195 ಕೋಟಿ ರೂ. ಹಣವನ್ನು ಬಿಡುಗಡೆ ಮಾಡಲಾಗಿದೆ. ಖೇಲೋ ಇಂಡಿಯಾಗಾಗಿ, ಕರ್ನಾಟಕದಲ್ಲಿ ಹೊಸ ದಾಖಲೆ ಬರೆಯಲಾಗಿದೆ. ಹರಿಯಾಣದಲ್ಲಿ ನಡೆದ ಕ್ರೀಡಾ ಕೂಟದಲ್ಲಿ ಹಲವು ದಾಖಲೆಗಳನ್ನು ಮುರಿಯಲಾಗಿದೆ ಎಂದರು. 5000 ಕ್ರೀಡಾ ಪಟುಗಳು ಕರ್ನಾಟಕಕ್ಕೆ ಆಗಮಿಸಿ ಯಶಸ್ವೀ ಖೇಲೋ ಇಂಡಿಯಾ ಆಯೋಜಿಸಲಾಗಿದೆ ಎಂದರು.

ಅಟಲ್ ಜಿ ಅವರು ಅಂದು ವಿಶ್ವಸಂಸ್ಥೆಯಲ್ಲಿ ಹಿಂದಿ ಯಲ್ಲಿ ಮಾತನಾಡಿದರು ಭಾರತದ ಶಕ್ತಿಯನ್ನು ಪೊಖ್ರಾನ್ ಅಣು ಸ್ಪೋಟದ ಮೂಲಕ ಜಗತ್ತಿಗೆ ತೋರಿದರು. ಭಾರತದ 50 ನೇ ಸ್ವಾತಂತ್ರ್ಯದ ವೇಳೆ ನಾನು ವ್ಯಾಪಾರ ಮೇಳಕ್ಕೆ ಅಮೆರಿಕಕ್ಕೆ ಹೋಗಿದ್ದೆ.ಆಗ ಹಾವು ಮೋಡಿ ಮಾಡುವವರು ಮತ್ತು ಭಿಕ್ಷುಕರು ಎಂದು ಅಲ್ಲಿನ ಪತ್ರಿಕೆಯಲ್ಲಿ ಬರೆಯಲಾಗಿತ್ತು. ಆದರೆ ಪೊಖ್ರಾನ್ ಅಣು ಸ್ಪೋಟದ ಬಳಿಕ ಭಾರತ ಹೊರ ಹೊಮ್ಮುತ್ತಿರುವ ದೊಡ್ಡ ಶಕ್ತಿ ಎಂದು ಅಟಲ್ ವಿಶ್ವಕ್ಕೆ ತೋರಿಸಿಕೊಟ್ಟರು ಎಂದರು.

ಆರ್ ಎಸ್ ಎಸ್ ಶಾಖೆ ಯಲ್ಲಿ ಅಟಲ್ ಜಿ ಅವರು ಕಬಡ್ಡಿ ಆಡಲು ಶುರು ಮಾಡಿದರು. ಅವರು ತನ್ನ ಉತ್ತರದಲ್ಲೇ ಎಲ್ಲರ ಪ್ರಶಂಸೆ ಪಡೆಯುತ್ತಿದ್ದರು. ಅವರು ಕ್ರಿಕೆಟ್ ಅನ್ನು ಕೂಡ ಮೆಚ್ಚುತ್ತಿದ್ದರು ಎಂದರು.

ಜಗತ್ತಿನ ಅತೀದೊಡ್ಡ ಜಿಡಿಪಿ ಬೆಳವಣಿಗೆ ದರ 7.2 ಭಾರತದ್ದಾಗಿದೆ. ದೊಡ್ಡ ದೊಡ್ಡ ದೇಶಗಳನ್ನು ಹಿಂದಿಕ್ಕಲಾಗಿದೆ. ಇದು ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಸಾಧ್ಯವಾಗಿದೆ ಎಂದರು. ಕೋವಿಡ್ ವ್ಯಾಕ್ಸಿನ್ 200 ಕೋಟಿ ಎರಡು ಡೋಸ್ ಕೊಡುವ ಕೆಲಸ ನಮ್ಮ ಸರಕಾರ ಮಾಡಿದೆ ಎಂದರು.

ಬಿಎಫ್ 7 ಬಂದಿದೆ. ಚೀನದಲ್ಲಿ ಸಾವಿರರು ಜನರು ಬಲಿಯಾಗಿದ್ದಾರೆ. ನೀವು ಕೋವಿಡ್ ಪ್ರೋಟೋಕಾಲ್ ಗಳನ್ನು ಅನುಸರಿಸಿ ಎಂದು ಕರೆ ನೀಡಿದರು.

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸೇರಿ ಗಣ್ಯರು ಸಮಾರಂಭದಲ್ಲಿ ಭಾಗಿಯಾಗಿದ್ದರು.

ರಾಜ್ಯ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ನಾರಾಯಣಗೌಡ ಅವರು ಕ್ರೀಡಾಂಗಣವನ್ನು ಉದ್ಘಾಟಿಸಿದರು. ಕರ್ನಾಟಕ ಸೇರಿದಂತೆ ಹೊರ ರಾಜ್ಯಗಳಾದ ದೆಹಲಿ, ಹರ್ಯಾಣ, ತಮಿಳುನಾಡು, ಮಹಾರಾಷ್ಟ್ರ, ಕೇರಳ ರಾಜ್ಯಗಳ ಒಟ್ಟು 12 ತಂಡಗಳು ಭಾಗವಹಿಸಿವೆ. ಅನುಕ್ರಮವಾಗಿ 1 ಲ.ರೂ., 75,000 ರೂ., 50,000 ರೂ., 25,000 ರೂ. ಬಹುಮಾನಗಳನ್ನು ಪ್ರಶಸ್ತಿ ಫ‌ಲಕಗಳೊಂದಿಗೆ ಪ್ರಥಮ, ದ್ವಿತೀಯ, ತೃತೀಯ, ಚತುರ್ಥ ಸ್ಥಾನಗಳ ವಿಜೇತರಿಗೆ ನೀಡಲಾಗುತ್ತಿದೆ.

5 ಅಡಿ ಎತ್ತರದ ಟ್ರೋಫಿ
ಜೀವನದ ಉದ್ದಕ್ಕೂ ನೆನಪಿಸುವಂತೆ ಸುಮಾರು 5 ಅಡಿ ಎತ್ತರದ ಆಕರ್ಷಕ ಟ್ರೋಫಿಗಳನ್ನು ಬಹುಮಾನವಾಗಿ ಕೊಡಲಾಗುತ್ತಿದೆ.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.