![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Dec 25, 2022, 12:12 PM IST
ಬೆಂಗಳೂರು: ಕೆಲ ದಿನಗಳಿಂದ ರಾಜಕೀಯ ಮರು ಪ್ರವೇಶದ ಬಗ್ಗೆ ಕುತೂಹಲಕ್ಕೆ ಕಾರಣವಾಗಿದ್ದ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರು ಹೊಸ ಪಕ್ಷ ಸ್ಥಾಪನೆ ಮಾಡುವುದಾಗಿ ಘೋಷಿಸಿಕೊಂಡಿದ್ದಾರೆ. ‘ಕಲ್ಯಾಣ ರಾಜ್ಯ ಪ್ರಗತಿ ಪಕ್ಷ’ ಎಂದು ಹೊಸ ಪಕ್ಷ ಸ್ಥಾಪಿಸಿ ರಾಜಕೀಯದ ಎರಡನೇ ಇನ್ನಿಂಗ್ಸ್ ಆರಂಭಿಸುವುದಾಗಿ ಇಂದು ಹೇಳಿದ್ದಾರೆ.
ಬಸವಣ್ಣನವರು ಹೇಳಿದ ಹಾಗೆ ಯಾವುದೇ ಜಾತಿ ಮತ ಭೇದ ಇಲ್ಲದ ಹಾಗೆ, ಮೇಲು ಕೀಳು ಇಲ್ಲದ ಹಾಗೆ ಏನೆಲ್ಲಾ ಅಭಿವೃದ್ಧಿ ಕೆಲಸ ಮಾಡುವ ಸಲುವಾಗಿ, ವಾಜಪೇಯಿ ಅವರನ್ನ ಸ್ಮರಿಸುತ್ತಾ ಸಾರ್ವಜನಿಕ ಬದುಕಿಗೆ ಬರಬೇಕು ಅಂತ ತೀರ್ಮಾನಿಸಿದ್ದೇನೆ. ‘ಕಲ್ಯಾಣ ರಾಜ್ಯ ಪ್ರಗತಿ ಪಕ್ಷ’ ಕಟ್ಟಿ ಮುಂದೆ ಹೆಜ್ಜೆ ಹಾಕುತ್ತೇನೆ. ಹೊಸ ಪಕ್ಷದೊಂದಿಗೆ ರಾಜ್ಯಾದ್ಯಂತ ಮನೆ ಮನೆಗೆ ಹೋಗುತ್ತೇನೆ. ರಾಜ್ಯದ ಅಭಿವೃದ್ಧಿ ಗುರಿ ಇಟ್ಟುಕೊಂಡು ಪಕ್ಷ ಸ್ಥಾಪನೆ ಮಾಡುತ್ತಿದ್ದೇನೆ ಎಂದು ಜನಾರ್ದನ ರೆಡ್ಡಿ ಘೋಷಿಸಿದರು.
ಬೆಂಗಳೂರಿನ ಪಾರಿಜಾತ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಜನಾರ್ದನ ರೆಡ್ಡಿ ತಮ್ಮ ಜೀವನದ ಪ್ರಮುಖ ಘಟನೆಗಳ ಮೆಲುಕು ಹಾಕಿಕೊಂಡರು.
ಗಣಿಗಾರಿಕೆ ವಿಚಾರದಲ್ಲಿ ನನ್ನ ಮೇಲೆ ಆರೋಪ ಮಾಡಿದ್ದರು. ಅಕ್ರಮ ಗಣಿಗಾರಿಕೆಯೆಂದು ರಾಜಕೀಯ ವಿರೋಧಿಗಳು ಅಪಪ್ರಚಾರ ಮಾಡಿದರು. ಸತ್ಯವಾಗಿ ಹೇಳುತ್ತೇನೆ, ನಾನು ಅಕ್ರಮ ಗಣಿಗಾರಿಕೆ ಮಾಡಿಲ್ಲ. ನಾನು ಮಾಡಿದ್ದು ಸಕ್ರಮ ಗಣಿಗಾರಿಕೆ. ಕೋರ್ಟ್ ನಲ್ಲಿ ಕೇಸ್ ನಡೆಯುತ್ತಿದೆ. ನಾನು ನಿರ್ದೋಷಿಯಾಗಿ ಬರುತ್ತೇನೆ. ಅಕ್ರಮವಾಗಿ ನನ್ನನ್ನು ಬಂಧನ ಮಾಡಲೇಬೇಕು ಅಂತ ಬಂಧನ ಮಾಡಿದರು. ಸುಷ್ಮಾ ಸ್ವರಾಜ್ ಗೆ ಸಹಾಯ ಮಾಡಿದ್ದಕ್ಕೆ 2011 ರಲ್ಲಿ ನನಗೆ ಬಂಧನ ಮಾಡಿದರು. ನಾನು ಕಷ್ಟದಲ್ಲಿ ಇದ್ದಾಗ ಯಡಿಯೂರಪ್ಪ ಮತ್ತು ಜಗದೀಶ್ ಶೆಟ್ಟರ್ ಬಿಟ್ಟು ಇನ್ಯಾರು ನನ್ನ ಮನೆಗೆ ಬಂದಿರಲಿಲ್ಲ. ಅವರು ಇಬ್ಬರು ಮಾತ್ರ ನನಗೆ ಧೈರ್ಯ ತುಂಬಿದ್ದರು. ಅವರನ್ನು ನಾನು ನೆನಪು ಮಾಡಿಕೊಳ್ಳುತ್ತೇನೆ ಎಂದರು.
ಇದನ್ನೂ ಓದಿ:ಟಾಲಿವುಡ್ ರಂಗಕ್ಕೆ ಮತ್ತೊಂದು ಆಘಾತ: 600 ಕ್ಕೂ ಹೆಚ್ಚಿನ ಸಿನಿಮಾದಲ್ಲಿ ನಟಿಸಿದ್ದ ಛಲಪತಿ ರಾವ್ ನಿಧನ
ನನ್ನವರೇ ಅಂತ ನಾನು ಎಲ್ಲರನ್ನೂ ಮೆರೆಸಿ ಮೋಸ ಹೋದೆ. ಇದನ್ನು ನನ್ನ ಸ್ನೇಹಿತರು ಈಗಲೂ ಹೇಳುತ್ತಾರೆ. ನನ್ನ ಜೊತೆ ಕಷ್ಟದಲ್ಲಿ ಯಾರು ಬಂದಿಲ್ಲ. ನಾನು ಚೆನ್ನಾಗಿ ಇದ್ದಾಗ ಎಲ್ಲರು ಹೊಗಳಿದರು, ಆದರೆ ಕಷ್ಟದಲ್ಲಿ ಯಾರು ಬಂದಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.