![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
Team Udayavani, Dec 25, 2022, 1:37 PM IST
ಮುಂಬೈ: ನಟಿ ತುನಿಶಾ ಶರ್ಮಾ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಹ ನಟ ಶೀಜನ್ ಮೊಹಮ್ಮದ್ ಖಾನ್ ನನ್ನು ಪೊಲೀಸರು ಬಂಧಿಸಿದ್ದಾರೆ.
ಜನಪ್ರಿಯ ಟಿವಿ ಧಾರಾವಾಹಿಗಳಾದ ‘ಚಕ್ರವರ್ತಿನ್ ಅಶೋಕ ಸಾಮ್ರಾಟ್’, ‘ಭಾರತ್ ಕಾ ವೀರ್ ಪುತ್ರ-ಮಹಾರಾಣಾ ಪ್ರತಾಪ್’ ಮತ್ತು ‘ಅಲಿ ಬಾಬಾ ದಸ್ತಾನ್-ಇ-ಕಾಬೂಲ್’ ಮುಂತಾದ ಜನಪ್ರಿಯ ಟಿವಿ ಧಾರಾವಾಹಿಗಳಲ್ಲಿನ ಪಾತ್ರಗಳಿಗೆ ಖ್ಯಾತಿ ಪಡೆದ ನಟಿ ತುನಿಶಾ ಶರ್ಮಾ ಅವರು ಶನಿವಾರ 20 ನೇ ವಯಸ್ಸಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಟಿವಿ ಧಾರಾವಾಹಿಯ ಸೆಟ್ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಕೂಡಲೇ ಆಕೆಯನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಆಕೆ ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿದ್ದರು.
ಇದನ್ನೂ ಓದಿ:ಬಿಜೆಪಿ ಜತೆಗಿನ ಸಂಬಂಧ ಮುಗಿಯಿತು, ಮುಂದಿನ ಚುನಾವಣೆಯಲ್ಲೇ ಸ್ಪರ್ಧೆ ಮಾಡ್ತೇನೆ: ಗುಡುಗಿದ ರೆಡ್ಡಿ
ಪ್ರಕರಣದ ಎಫ್ಐಆರ್ ವರದಿ ಪ್ರಕಾರ, ಇಬ್ಬರು ನಟರು ಪ್ರೇಮ ಸಂಬಂಧದಲ್ಲಿದ್ದರು. ಆದರೆ 15 ದಿನಗಳ ಹಿಂದೆ ಸಂಬಂಧ ಮುರಿದುಬಿತ್ತು ಎಂದು ತಿಳಿದುಬಂದಿದೆ. ತುನಿಶಾ ಶರ್ಮಾ ಒತ್ತಡದಲ್ಲಿದ್ದರು ಎಂದು ವರದಿಯಾಗಿದೆ.
ಜೆಜೆ ಆಸ್ಪತ್ರೆಯಲ್ಲಿ ಶವಪರೀಕ್ಷೆ ನಡೆದಿದ್ದು, ಆಕೆಯ ದೇಹದ ಮೇಲೆ ಯಾವುದೇ ಗಾಯದ ಗುರುತುಗಳಿಲ್ಲ. ಉಸಿರುಕಟ್ಟುವಿಕೆಯಿಂದಾಗಿ ಆಕೆ ಸಾವನ್ನಪ್ಪಿದ್ದಾಳೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.
Bollywood: ವಿಕ್ಕಿ ಕೌಶಲ್ To ರಶ್ಮಿಕಾ.. ʼಛಾವಾʼಕ್ಕೆ ಕಲಾವಿದರು ಪಡೆದ ಸಂಭಾವನೆ ಎಷ್ಟು?
ಹೇಗಿದೆ ಬಹುನಿರೀಕ್ಷಿತ ʼಛಾವಾʼ? ವಿಕ್ಕಿ ‘ಸಂಭಾಜಿ’ ಅವತಾರಕ್ಕೆ ಪ್ರೇಕ್ಷಕರು ಹೇಳಿದ್ದೇನು?
Chhaava: ‘ಚಾವಾ’ಗೆ ಧ್ವನಿಯಾದ ಅಜಯ್ ದೇವಗನ್
ಗಂಡು ಮೊಮ್ಮಗನೇ ಬೇಕು ಎಂಬ ಅಭಿಲಾಷೆ: ಚಿರಂಜೀವಿ ಹೇಳಿಕೆಗೆ ಭಾರಿ ವಿರೋಧ
Spiritual journey: ಕಿನ್ನರ್ ಅಖಾಡ ತೊರೆದು ಹೊರಬಂದ ಮಾಜಿ ನಟಿ, ಸಾಧ್ವಿ ಮಮತಾ ಕುಲಕರ್ಣಿ
You seem to have an Ad Blocker on.
To continue reading, please turn it off or whitelist Udayavani.