![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Dec 25, 2022, 3:34 PM IST
ಈ ವರ್ಷದ ಮೂತ್ರಪಿಂಡ ದಿನವನ್ನು “ಎಲ್ಲರಿಗೂ ಮೂತ್ರಪಿಂಡಗಳ ಆರೋಗ್ಯ’ ಎಂಬ ಧ್ಯೇಯವಾಕ್ಯದೊಂದಿಗೆ ಆಚರಿಸಲಾಯಿತು.
ಇನ್ನೊಂದು ರೀತಿಯಲ್ಲಿ ಹೇಳುವುದಾದರೆ, ವೈದ್ಯಕೀಯ ಮತ್ತು ಆರೋಗ್ಯ ಕ್ಷೇತ್ರಗಳಲ್ಲಿ ಇರುವವರ ಜತೆಗೆ ಜನಸಾಮಾನ್ಯರಲ್ಲಿಯೂ ಮೂತ್ರಪಿಂಡದ ಆರೋಗ್ಯ, ಮೂತ್ರಪಿಂಡದ ಕಾಯಿಲೆಗಳ ಬಗ್ಗೆ ಜ್ಞಾನವನ್ನು ಹೆಚ್ಚಿಸುವ ಮೂಲಕ ಅರಿವನ್ನು ಹೆಚ್ಚಿಸುವತ್ತ ನಾವೆಲ್ಲರೂ ಜತೆಗೂಡಿ ಕೆಲಸ ಮಾಡಬೇಕು ಎಂಬುದು ಇದರ ಅರ್ಥ.
ಮೂತ್ರಪಿಂಡ ಕಾಯಿಲೆಗಳ ಬಗ್ಗೆ ಅರಿವು ಹೆಚ್ಚಾದರೆ ಅದರಿಂದಾಗಿ ಈ ಕಾಯಿಲೆಗಳ ಬಗ್ಗೆ ಹೆಚ್ಚು ಗಮನ ಹರಿಸಲು, ಬೇಗನೆ ಪತ್ತೆ ಹಚ್ಚಲು ಮತ್ತು ಬೇಗನೆ ಚಿಕಿತ್ಸೆ ಒದಗಿಸಲು, ಚೆನ್ನಾಗಿ ಆರೈಕೆ ಮಾಡಲು ಮತ್ತು ಅವುಗಳನ್ನು ತಡೆಗಟ್ಟುವ ಕ್ರಮಗಳ ಬಗ್ಗೆ ಅರಿತುಕೊಳ್ಳಲು ಸಾಧ್ಯವಾಗುತ್ತದೆ. ಬಹುಹಿಂದಿನಿಂದಲೂ ಪ್ರಚಲಿತದಲ್ಲಿರುವ “ರೋಗ ಬಂದ ಮೇಲೆ ಗುಣಪಡಿಸುವುದಕ್ಕಿಂತ ರೋಗ ಬಾರದಂತೆ ತಡೆಗಟ್ಟುವುದು ಮೇಲು’ ಎಂಬ ನೀತಿವಾಕ್ಯ ಮೂತ್ರಪಿಂಡಗಳ ಕಾಯಿಲೆಗಳ ವಿಚಾರದಲ್ಲಿಯೂ ಪ್ರಸ್ತುತವಾಗಿದೆ.
ಮೂತ್ರಪಿಂಡ ಕಾಯಿಲೆಗಳನ್ನು ಬೇಗನೆ ಪತ್ತೆ ಹಚ್ಚಿದರೆ ಅವುಗಳನ್ನು ಹೆಚ್ಚು ಪರಿಣಾಮಕಾರಿಯಾಗಿ ನಿಭಾಯಿಸಲು, ಗುಣಪಡಿಸಲು, ಅವು ಉಲ್ಬಣಿಸುವುದನ್ನು ನಿಧಾನಗೊಳಿಸಲು ಮಾತ್ರವಲ್ಲದೆ ಮೂತ್ರಪಿಂಡದ ಕಾಯಿಲೆಗಳ ಕೊನೆಯ ಹಂತವನ್ನು ಹೆಚ್ಚು ಚೆನ್ನಾಗಿ ನಿಭಾಯಿಸಲು ಕ್ರಮಗಳಿಗೆ ಸಿದ್ಧರಾಗಿರುವುದು ಸಾಧ್ಯವಾಗುತ್ತದೆ.
ದುರದೃಷ್ಟವಶಾತ್ ನಮ್ಮ ದೇಶದಲ್ಲಿ ಮೂತ್ರಪಿಂಡ ಕಾಯಿಲೆಗಳು ತುಂಬ ವಿಳಂಬವಾಗಿ ಪತ್ತೆಯಾಗುತ್ತಿರುವುದು ಅಂಕಿಅಂಶಗಳಿಂದ ತಿಳಿದುಬರುತ್ತದೆ.
ಆದ್ದರಿಂದ ಜನಸಾಮಾನ್ಯರಲ್ಲಿ ಮೂತ್ರಪಿಂಡ ಕಾಯಿಲೆಗಳ ಲಕ್ಷಣಗಳು ಮತ್ತು ಅವುಗಳನ್ನು ಬೇಗನೆ ಪತ್ತೆ ಮಾಡುವುದರ ಪ್ರಾಮುಖ್ಯದ ಬಗ್ಗೆ ತಿಳಿವಳಿಕೆಯನ್ನು ಮೂಡಿಸಿದರೆ ಹೆಚ್ಚು ಉತ್ತಮ ಫಲಿತಾಂಶವನ್ನು ಪಡೆಯಲು ಸಾಧ್ಯ.
ಬಹುತೇಕ ಮೂತ್ರಪಿಂಡ ಕಾಯಿಲೆಗಳಲ್ಲಿ ಆರಂಭಿಕ ಹಂತಗಳಲ್ಲಿ ಯಾವುದೇ ಲಕ್ಷಣಗಳು ಕಂಡುಬರುವುದಿಲ್ಲ ಅಥವಾ ತುಂಬಾ ಕನಿಷ್ಠವಾಗಿರುತ್ತವೆ. ಕೆಲವು ಆರಂಭಿಕ ಲಕ್ಷಣಗಳನ್ನು ಹೇಳುವುದಾದರೆ:
-ಡಾ| ಮಯೂರ್ ವಿ. ಪ್ರಭು, ಕನ್ಸಲ್ಟಂಟ್ ನೆಫ್ರಾಲಜಿಸ್ಟ್, ಕೆಎಂಸಿ ಆಸ್ಪತ್ರೆ, ಮಂಗಳೂರು
(ಈ ಲೇಖನದಲ್ಲಿರುವ ವಿಚಾರಗಳ ಬಗ್ಗೆ ಹೆಚ್ಚಿನ ಮಾಹಿತಿಗಳಿಗಾಗಿ ಸಂಪರ್ಕಿಸಿ: ಮುಖ್ಯಸ್ಥರು, ನೆಫ್ರಾಲಜಿ ವಿಭಾಗ, ಕೆಎಂಸಿ, ಮಾಹೆ, ಮಂಗಳೂರು)
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.