![Santhe-last](https://www.udayavani.com/wp-content/uploads/2025/02/Santhe-last-415x249.jpg)
![Santhe-last](https://www.udayavani.com/wp-content/uploads/2025/02/Santhe-last-415x249.jpg)
Team Udayavani, Dec 25, 2022, 6:42 PM IST
ಮುಂಬೈ: ಕಿರುತೆರೆ ನಟಿ ತುನಿಶಾ ಪ್ರಕರಣದ ತನಿಖೆಯನ್ನು ಲವ್ ಜಿಹಾದ್ ಕೋನದಿಂದಲೂ ತನಿಖೆ ಮಾಡಬೇಕೆಂದು ಬಿಜೆಪಿ ಶಾಸಕ ರಾಮ್ ಕದಂ ಹೇಳಿದ್ದಾರೆ.
ಜನಪ್ರಿಯ ಟಿವಿ ಧಾರಾವಾಹಿಗಳಾದ ‘ಚಕ್ರವರ್ತಿನ್ ಅಶೋಕ ಸಾಮ್ರಾಟ್ʼ, ‘ಭಾರತ್ ಕಾ ವೀರ್ ಪುತ್ರ-ಮಹಾರಾಣಾ ಪ್ರತಾಪ್’ ಮತ್ತು ‘ಅಲಿ ಬಾಬಾ ದಸ್ತಾನ್-ಇ-ಕಾಬೂಲ್’ ಮುಂತಾದ ಜನಪ್ರಿಯ ಟಿವಿ ಧಾರಾವಾಹಿಗಳಲ್ಲಿನ ಪಾತ್ರಗಳಿಗೆ ಖ್ಯಾತಿ ಪಡೆದಿದ್ದ ತುನಿಶಾ ಶನಿವಾರ (ಡಿ.24 ರಂದು ) ಸೆಟ್ ನಲ್ಲೇ ನೇಣಿಗೆ ಶರಣಾಗಿದ್ದರು.
ಪ್ರಕರಣಕ್ಕೆ ಸಂಬಂಧಿಸಿದಂತೆ ಸಹ ನಟ ಶೀಜನ್ ಮೊಹಮ್ಮದ್ ಖಾನ್ ನನ್ನು ಪೊಲೀಸರು ಬಂಧಿಸಿದ್ದಾರೆ. ಶೀಜನ್ ಹಾಗೂ ಮೊಹಮ್ಮದ್ ಖಾನ್ ಹಾಗೂ ತುನಿಶಾ ಇಬ್ಬರು ಪ್ರೇಮ ಸಂಬಂಧದಲ್ಲಿದ್ದರು. ಇಬ್ಬರ ನಡುವಿನ ಸಂಬಂಧ ಕಳೆದ 15 ದಿನಗಳ ಹಿಂದಷ್ಟೇ ಮುರಿದು ಬಿದ್ದಿತ್ತು ಎಂದು ವರದಿ ತಿಳಿಸಿದೆ.
ಪ್ರಕರಣಕ್ಕೆ ಸಂಬಂಧಿಸಿ ರವಿವಾರ ಮಾಧ್ಯಮದವರೊಂದಿಗೆ ಮಾತಾನಾಡಿದ ಬಿಜೆಪಿ ಶಾಸಕ ರಾಮ್ ಕದಂ,” ತುನಿಶಾ ಶರ್ಮಾ ಅವರ ಕುಟುಂಬಕ್ಕೆ ನ್ಯಾಯ ಸಿಗಲಿದೆ. ಪ್ರಕರಣವು ಲವ್ ಜಿಹಾದ್ಗೆ ಸಂಬಂಧಿಸಿ ಇದೆಯೇ ಅಥವಾ ಇಲ್ಲವೇ ಎಂಬುದನ್ನು ನಾವು ಕಂಡುಹಿಡಿಯಬೇಕು. ಇದರ ಹಿಂದೆ ಯಾವುದಾದರೂ ಸಂಘಟನೆಗಳ ಕೈವಾಡ, ಪಿತೂರಿಗಳಿದ್ದರೆ ಅದನ್ನು ಕೂಡ ಬಹಿರಂಗವಾಗಬೇಕು ಎಂದು ಹೇಳಿದ್ದಾರೆ.
Bollywood: ವಿಕ್ಕಿ ಕೌಶಲ್ To ರಶ್ಮಿಕಾ.. ʼಛಾವಾʼಕ್ಕೆ ಕಲಾವಿದರು ಪಡೆದ ಸಂಭಾವನೆ ಎಷ್ಟು?
ಹೇಗಿದೆ ಬಹುನಿರೀಕ್ಷಿತ ʼಛಾವಾʼ? ವಿಕ್ಕಿ ‘ಸಂಭಾಜಿ’ ಅವತಾರಕ್ಕೆ ಪ್ರೇಕ್ಷಕರು ಹೇಳಿದ್ದೇನು?
Chhaava: ‘ಚಾವಾ’ಗೆ ಧ್ವನಿಯಾದ ಅಜಯ್ ದೇವಗನ್
ಗಂಡು ಮೊಮ್ಮಗನೇ ಬೇಕು ಎಂಬ ಅಭಿಲಾಷೆ: ಚಿರಂಜೀವಿ ಹೇಳಿಕೆಗೆ ಭಾರಿ ವಿರೋಧ
Spiritual journey: ಕಿನ್ನರ್ ಅಖಾಡ ತೊರೆದು ಹೊರಬಂದ ಮಾಜಿ ನಟಿ, ಸಾಧ್ವಿ ಮಮತಾ ಕುಲಕರ್ಣಿ
You seem to have an Ad Blocker on.
To continue reading, please turn it off or whitelist Udayavani.