ನೀರೂರಿಸಿದ ತರಹೇವಾರಿ ತೊಪ್ಪಲು ಪಲ್ಲೆ ಖಾದ್ಯಗಳು

ಜವಾರಿ ಸೊಪ್ಪಿನ ಅಡುಗೆ ಸ್ಪರ್ಧೆ ವಿಜೇತರಿಗೆ ಬಹುಮಾನ

Team Udayavani, Dec 26, 2022, 6:56 PM IST

ನೀರೂರಿಸಿದ ತರಹೇವಾರಿ ತೊಪ್ಪಲು ಪಲ್ಲೆ ಖಾದ್ಯಗಳು

ಧಾರವಾಡ: ರಾಮಾಯಣ ಕಾಲದಲ್ಲಿ ಲಕ್ಷ್ಮಣನ ಜೀವ ಉಳಿಸಿದ್ದು ಸಂಜೀವಿನ ಸೊಪ್ಪು. ಅಂತಹ ಶಕ್ತಿ ಸೊಪ್ಪಿಗಿದೆ. ಸೊಪ್ಪು ಪರಿಪೂರ್ಣ ಆಹಾರ, ದೇಹಕ್ಕೆ ಬೇಕಾದ ಪೋಷಣೆ ಹಾಗೂ ಚೈತನ್ಯ ಕೊಡುವಂತದ್ದು. ರಕ್ತಹೀನತೆ, ಅಪೌಷ್ಟಿಕತೆ ಮತ್ತು ಇತರೆ ಆರೋಗ್ಯ ಸಮಸ್ಯೆ ನಿವಾರಿಸುವಲ್ಲಿ ಸೊಪ್ಪು ಮಹತ್ವದ ಪಾತ್ರ ವಹಿಸುತ್ತದೆ ಎಂದು ಆಹಾರ ತಜ್ಞೆ ಡಾ| ಅರುಣಾ ತಿಮ್ಮಾಪುರ ಹಿರೇಮಠ ಹೇಳಿದರು.

ಸಹಜ ಸಮೃದ್ಧ ಹಾಗೂ ಪೀಪಲ್‌ ಫಸ್ಟ್‌ ಫೌಂಡೇಷನ್‌ ಆಶ್ರಯದಲ್ಲಿ ಆಯೋಜಿಸಿದ್ದ ಸೊಪ್ಪಿನ ಮೇಳದ ಅಂಗವಾಗಿ ರವಿವಾರ ನಡೆದ ಜವಾರಿ ಸೊಪ್ಪಿನ ಅಡುಗೆ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಿಸಿ ಅವರು ಮಾತನಾಡಿದರು.

ಸೊಪ್ಪು ನಿಸರ್ಗದ ಕೊಡುಗೆ. ಹೆಚ್ಚು ಒಳಸುರಿ ಕೇಳದೆ ಬೆಳೆಯುವ ಸೊಪ್ಪು, ರೈತರಿಗೂ ಆರ್ಥಿಕ ಭದ್ರತೆ ಒದಗಿಸುತ್ತದೆ. ಇಷ್ಟೊಂದು ಬಗೆಯ ಸೊಪ್ಪುಗಳು ಇರುವುದು ಹೆಚ್ಚಿನವರಿಗೆ ಗೊತ್ತೇ ಇಲ್ಲ. ಇಂತಹ ಮೇಳಗಳನ್ನು ಆಯೋಜಿಸುವ ಮೂಲಕ ಗ್ರಾಹಕರಲ್ಲಿ ಶುದ್ಧ ಆಹಾರದ ಕುರಿತು ಜಾಗೃತಿ ಮೂಡಿಸುವುದು ಮಾದರಿಯಾಗಿದೆ ಎಂದರು. ಸೊಪ್ಪಿನ ಅಡುಗೆ ಸ್ಪರ್ಧೆ ತೀರ್ಪುಗಾರರಾಗಿದ್ದ ಸುನಂದಾ ಪ್ರಕಾಶ ಭಟ್‌ ಮಾತನಾಡಿ, ತೊಪ್ಪಲು ಪಲ್ಲೆ ನಮ್ಮ ದಿನನಿತ್ಯದ ಅಡುಗೆ ಭಾಗವಾಗಬೇಕು.

ಅವುಗಳ ಬಳಕೆಯ ಪಾಕ ವಿಧಾನಗಳನ್ನು ಪರಿಚಯಿಸಬೇಕಾಗಿದೆ. ಇವತ್ತಿನ ಅಡುಗೆ ಸ್ಪರ್ಧೆಯಲ್ಲಿ ವಿವಿಧ ಬಗೆಯ ಹೊಸ ತರಹದ ಅಡುಗೆಗಳನ್ನು ಪರಿಚಯಿಸಿದ್ದು ಸಂತಸದ ಸಂಗತಿ ಎಂದು ಹೇಳಿದರು.

ಇನ್ನೋರ್ವ ತೀರ್ಪುಗಾರ ಲಿಂಗರಾಜ ಬಿ. ಮಾಸೂರ ಮಾತನಾಡಿ, ಸೊಪ್ಪಿನ ಕೃಷಿಯಲ್ಲಿ ಅಪಾರವಾದ ರಾಸಾಯನಿಕಗಳನ್ನು ಬಳಸಲಾಗುತ್ತದೆ. ಇದು ಗ್ರಾಹಕರ ಆರೋಗ್ಯದ ಮೇಲೆ ನೇರ ಪರಿಣಾಮ ಬೀರುತ್ತದೆ. ಹೀಗಾಗಿ ಗ್ರಾಹಕರು ಸಾವಯವದಲ್ಲಿ ಬೆಳೆದ ವಿಷಮಯಕ್ತ ಸೊಪ್ಪುಗಳನ್ನು ಬಳಸಬೇಕು ಎಂದರು. ಸಹಜ ಸಮೃದ್ಧದ ನಿರ್ದೇಶಕ ಜಿ.ಕೃಷ್ಣಪ್ರಸಾದ್‌ ಮತ್ತು ನಿಷಾಂತ್‌ ಇದ್ದರು. ಶಾಂತಕುಮಾರ್‌ ಸ್ವಾಗತಿಸಿದರು. ಜನಾರ್ಧನ್‌ ಬಟಾರಿ ನಿರೂಪಿಸಿದರು.

ಪ್ರತಿಮಾ ಪ್ರಥಮ-ವಾಣಿಶ್ರೀ ಭಟ್‌ ದ್ವಿತೀಯ
ಸೊಪ್ಪಿನ ರೊಟ್ಟಿ, ಹರಿವೆ ಸೊಪ್ಪಿನ ಕೇಕ್‌, ಸೊಪ್ಪಿನ ಪಲಾವ್‌, ತಂಬುಳಿ, ನುಗ್ಗೆ ಸೊಪ್ಪಿನ ಪಡ್ಡು, ದೊಡ್ಡಪತ್ರೆ ಬಜ್ಜಿ, ಮೆಂತೆ ಸೊಪ್ಪಿನ ಉಂಡಗಡಬು, ಸೊಪ್ಪಿನ ಚಟ್ನಿ, ಕೆಸುವಿನ ಎಲೆಯ ಪತ್ರೊಡೆ, ಸಬ್ಬಸಿಗೆ ಸೊಪ್ಪಿನ ವಡೆ, ದಾಸವಾಳ ಸೊಪ್ಪಿನ ದೋಸೆ, ಸಬ್ಬಸಿಗೆ ಸೊಪ್ಪಿನ ನಿಪ್ಪಟ್ಟು, ಸಬ್ಬಸಿಗೆ ಸೊಪ್ಪಿನ ನುಚ್ಚಿನ ಉಂಡೆ ಸೇರಿದಂತೆ ವೈವಿಧ್ಯಮಯ ರುಚಿಕರ ತಿಂಡಿ-ತಿನಿಸುಗಳನ್ನು ಸ್ಪರ್ಧೆಗೆ ತರಲಾಗಿತ್ತು. ಪ್ರತಿಮಾ ಪ್ರವಾರ್‌ ಪ್ರಥಮ, ವಾಣಿಶ್ರೀ ಎನ್‌. ಭಟ್ಟ ದ್ವಿತೀಯ, ಪ್ರಿಯದರ್ಶಿನಿ ಹಾಗೂ ಸಾವಿತ್ರಿ ಎಸ್‌. ಕೊಡಲಿ ತೃತೀಯ ಬಹುಮಾನ ಪಡೆದರು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Train: ರೈಲು ಢಿಕ್ಕಿ ತಡೆಯಲು ಉಪಕ್ರಮ: ನೈಋತ್ಯ ರೈಲ್ವೇಗೆ ಮೊದಲ ಬಾರಿ “ಕವಚ’

Train: ರೈಲು ಢಿಕ್ಕಿ ತಡೆಯಲು ಉಪಕ್ರಮ: ನೈಋತ್ಯ ರೈಲ್ವೇಗೆ ಮೊದಲ ಬಾರಿ “ಕವಚ’

ಮೂವರು ಲೇಖಕಿಯರಿಗೆ ಕವಿಸಂ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಆಯ್ಕೆ

ಮೂವರು ಲೇಖಕಿಯರಿಗೆ ಕವಿಸಂ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಆಯ್ಕೆ

8

Dharwad: ಪಂ.ಮನಸೂರ ಸಂಗೀತ ಪಾಠ ಶಾಲೆ ಮತ್ತೆ ಆರಂಭ; ಜಿಲ್ಲಾಧಿಕಾರಿ ದಿವ್ಯ ಪ್ರಭು

Hubli: Police seize Rs 89.99 lakhs being transported without documents

Hubli: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89.99 ಲಕ್ಷ ರೂ ಪೊಲೀಸ್‌ ವಶಕ್ಕೆ

ED summons case: Temporary relief for Siddaramaiah’s wife Parvathi, Bairati Suresh

ED summons: ಸಿದ್ದರಾಮಯ್ಯ ಪತ್ನಿ ಪಾರ್ವತಿ, ಬೈರತಿ ಸುರೇಶಗೆ ತಾತ್ಕಾಲಿಕ ರಿಲೀಫ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.