ಬಂಟ್ವಾಳ: ಹಲವೆಡೆ ಕಳವು: ಆರೋಪಿ ಬಂಧನ
Team Udayavani, Dec 27, 2022, 1:53 AM IST
ಬಂಟ್ವಾಳ: ಬಂಟ್ವಾಳ ನಗರ ಠಾಣಾ ವ್ಯಾಪ್ತಿಯೂ ಸೇರಿದಂತೆ ಹಲವೆಡೆ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಬಂಟ್ವಾಳ ನಗರ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ.
ಕಡಬ ತಾಲೂಕಿನ ಗೋಳಿತೊಟ್ಟು ಗ್ರಾಮ ನಿವಾಸಿ ಮೊಹಮ್ಮದ್ ಇರ್ಫಾನ್ ಬಂಧಿತ ಆರೋಪಿ. ಆತ ಬಿ.ಸಿ. ರೋಡು ಸಮೀಪದ ಗಾಣದಪಡು³ನಲ್ಲಿರುವ ಹೋಲ್ಸೇಲ್ ಅಂಗಡಿಯೊಂದರ ಶಟರಿನ ಬೀಗವನ್ನು ಮರಿದು ಅಂಗಡಿಯದ್ದ 20 ಸಾವಿರ ರೂ. ಮೌಲ್ಯದ 2 ಮೊಬೈಲ್ಗಳು ಹಾಗೂ 10 ಸಾವಿರ ರೂ. ನಗದನ್ನು ಕಳವು ಮಾಡಿದ್ದ. ಈ ಕುರಿತು ಅಂಗಡಿ ಮಾಲಕರು ನೀಡಿದ ದೂರಿನಂತೆ ಪ್ರಕರಣ ದಾಖಲಾಗಿತ್ತು.
ಜತೆಗೆ ಈತ ಕಳೆದ ವರ್ಷ ಬಿ.ಸಿ. ರೋಡಿನ ಬಸ್ಸು ನಿಲ್ದಾಣದ ಬಳಿಯ ವಾಣಿಜ್ಯ ಸಂಕೀರ್ಣವೊಂದರಲ್ಲಿದ್ದ ನ್ಯಾಯವಾದಿಯೊಬ್ಬರ ಕಚೇರಿಗೆ ನುಗ್ಗಿ 3 ಸಾವಿರ ರೂ. ನಗದು ಕಳವು ಮಾಡಿದ್ದ. ಆರೋಪಿಯು ಕೆಲವು ದಿನಗಳ ಹಿಂದೆ ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಗೋಳಿತೊಟ್ಟುನಲ್ಲಿ ಮನೆಯೊಂದರ ಬೀಗ ಮುರಿದು ನಗದು ಕಳವು ಮಾಡಿದ್ದ ಎನ್ನಲಾಗಿದೆ.
ಕಾರ್ಯಾಚರಿಸಿದ ತಂಡ ಈ ಎಲ್ಲ ಪ್ರಕರಣಕ್ಕೆ ಸಂಬಂಧಿಸಿ ಬಂಟ್ವಾಳ ನಗರ ಠಾಣಾ ಇನ್ಸ್ಪೆಕ್ಟರ್ ವಿವೇಕಾನಂದ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ. ಕಾರ್ಯಾಚರಣೆಯಲ್ಲಿ ನಗರ ಠಾಣಾ ಪಿಎಸ್ಐಗಳಾದ ಅವಿನಾಶ್, ಕಲೈಮಾರ್, ಸಿಬಂದಿ ರಾಜೇಶ್, ಇರ್ಷಾದ್, ಗಣೇಶ್ ಹಾಗೂ ಪ್ರವೀಣ್ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.