ದೇಶಾದ್ಯಂತ ಕೋವಿಡ್ ಅಣಕು ಕಾರ್ಯಾಚರಣೆ
Team Udayavani, Dec 28, 2022, 1:33 AM IST
ಹೊಸದಿಲ್ಲಿ/ಬೀಜಿಂಗ್: ಚೀನ ಸಹಿತ ಹಲವು ರಾಷ್ಟ್ರಗಳಲ್ಲಿ ಕೊರೊನಾ ಮತ್ತೂಮ್ಮೆ ಪ್ರಕೋಪ ತೋರಿಸುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ಸಹಿತ ದೇಶಾದ್ಯಂತ ಆಸ್ಪತ್ರೆಗಳಲ್ಲಿ ಮಾಕ್ ಡ್ರಿಲ್ ನಡೆಸಲಾಯಿತು.
ಒಂದು ವೇಳೆ ಪರಿಸ್ಥಿತಿ ಕೈಮೀರಿ ಹೋದರೆ, ಸೋಂಕು ಪೀಡಿತರಿಗೆ ಲಭ್ಯವಾಗಲಿರುವ ಹಾಸಿಗೆಗಳು, ವೆಂಟಿಲೇಟರ್ಗಳು, ಔಷಧಗಳು, ಸೋಂಕು ಪೀಡಿತರಿಗೆ ಶುಶ್ರೂಷೆ ನೀಡಲು ತರಬೇತಿ ಪಡೆದಿರುವ ಸಿಬಂದಿ, ವಿಶೇಷ ವಾರ್ಡ್ಗಳು ಸಹಿತ ಹತ್ತು ಹಲವು ವ್ಯವಸ್ಥೆಗಳು ಕ್ರಮಬದ್ಧವಾಗಿ ಇವೆಯೇ ಎಂದು ಪರಿಶೀಲನೆ ನಡೆಸಲಾಯಿತು.
ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಮನ್ಸುಖ್ ಮಾಂಡವಿಯಾ ಹೊಸದಿಲ್ಲಿಯ ಸಫªರ್ಜಂಗ್ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಹಾ ರಾಷ್ಟ್ರದಲ್ಲಿ ಕಳೆದ ಬಾರಿ ಸಮಸ್ಯೆ ತಲೆದೋರಿದ್ದರಿಂದ ಮುಂಬಯಿ ಸಹಿತ ಆ ರಾಜ್ಯಾದ್ಯಂತ ಔಷಧ, ಸಿಬಂದಿ ಸಹಿತ ಹಲವು ವ್ಯವಸ್ಥೆಗಳ ಬಗ್ಗೆ ಪರಿಶೀಲನೆ ನಡೆಸಲಾಯಿತು.
ಹೊಸ ಕೇಸು: ಸೋಮವಾರದಿಂದ ಮಂಗಳವಾರದ ಅವಧಿಯಲ್ಲಿ 157 ಹೊಸ ಪ್ರಕರಣಗಳು ದಾಖಲಾಗಿದೆ. ಸಕ್ರಿಯ ಸೋಂಕಿನ ಸಂಖ್ಯೆ 3, 421ಕ್ಕೆ ಏರಿಕೆಯಾಗಿದೆ.
ಕ್ವಾರಂಟೈನ್ ನಿಯಮಕ್ಕೆ ತೆರೆ
ಚೀನದಲ್ಲಿ ಕೊರೊನಾ ಸಂಖ್ಯೆ ಹೆಚ್ಚಾಗಿರುವಂತೆಯೇ ಅಂತಾ ರಾಷ್ಟ್ರೀಯ ಪ್ರಯಾಣಿಕರಿಗಾಗಿ ಇರುವ ಕಡ್ಡಾಯ ಕ್ವಾರಂಟೈನ್ ನಿಯಮವನ್ನು ರದ್ದು ಮಾಡಿದೆ. ಈ ಮೂಲಕ ಮತ್ತೂಮ್ಮೆ ಕಠಿನ ನಿಯಮವನ್ನು ಸಡಿಲಿಸಿದೆ. ಜ.8 ರಿಂದ ಹೊಸ ನಿಯಮ ಅನ್ವಯ ವಾಗಲಿದೆ. ಇನ್ನೊಂದೆಡೆ ಚೀನ ದಿಂದ ಆಗಮಿಸುವವರಿಗೆ ಕಡ್ಡಾ ಯವಾಗಿ ಕೊರೊನಾ ಪರೀಕ್ಷೆ ನಡೆಸಲು ಜಪಾನ್ ನಿರ್ಧರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ
Tirupati ತಿರುಪತಿ ಲಡ್ದು ಪ್ರಸಾದದಲ್ಲಿ ಬೀಫ್ ಫ್ಯಾಟ್!:ಲ್ಯಾಬ್ ವರದಿಯಲ್ಲಿ ದೃಢ
Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್ ಡೆಲಿವರಿ ಯುವಕ ಆತ್ಮಹತ್ಯೆ
Haryana: ಮಹಿಳೆಯರಿಗೆ ವಿತ್ತ ನೆರವು, ಎಂಎಸ್ ಪಿ ಭರವಸೆ; ಬಿಜೆಪಿ ಪ್ರಣಾಳಿಕೆ ಬಿಡುಗಡೆ
Chennai: ರಸ್ತೆ ಬದಿ ಪತ್ತೆಯಾದ ಸೂಟ್ಕೇಸ್ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.