ಕುಂದಾಪುರ ವೃತ್ತಕ್ಕೆ ಅಂತೂ ಬಂತು ಶಾಸ್ತ್ರಿ ಪ್ರತಿಮೆ

15 ಲಕ್ಷ ರೂ. ವೆಚ್ಚದಲ್ಲಿ ಲಾಲ್‌ ಬಹದ್ದೂರ್‌ ಶಾಸ್ತ್ರಿ ಪ್ರತಿಮೆ ನಿರ್ಮಾಣ

Team Udayavani, Dec 29, 2022, 11:40 AM IST

ಕುಂದಾಪುರ ವೃತ್ತಕ್ಕೆ ಅಂತೂ ಬಂತು ಶಾಸ್ತ್ರಿ ಪ್ರತಿಮೆ

ಕುಂದಾಪುರ: ನಗರದ ಪ್ರವೇಶದ್ವಾರ ಶಾಸ್ತ್ರಿ ವೃತ್ತದಲ್ಲಿ ವಿನೂತನ ಮಾದರಿಯಲ್ಲಿ ರಚನೆಯಾಗುತ್ತಿರುವ ಕಾಮಗಾರಿ ಮುಕ್ತಾಯದ ಹಂತಕ್ಕೆ ಬಂದಿದೆ. ಬುಧವಾರ ಲಾಲ್‌ ಬಹದ್ದೂರ್‌ ಶಾಸ್ತ್ರಿಗಳ ಕಂಚಿನ ಪ್ರತಿಮೆ ಕುಂದಾಪುರಕ್ಕೆ ಆಗಮಿಸಿದ್ದು ವೃತ್ತದಲ್ಲಿ ನಿಲ್ಲಿಸಲಾಗಿದೆ.

ಪ್ರತಿಮೆ
ಸೇನಾಪುರ ಗ್ರಾಮದ ಶಿಲ್ಪಿ ಶ್ರೀತಿನ್‌ ಶೆಟ್ಟಿಗಾರ್‌ ಬಂಟ್ವಾಡಿ ಅವರು ಮೈಸೂರಿನಲ್ಲಿ ನಿಂತ ಭಂಗಿಯಲ್ಲಿ ಇರುವ ಶಾಸ್ತ್ರಿಗಳ ಈ ಶಿಲ್ಪವನ್ನು ನಿರ್ಮಿಸಿದ್ದು ಸುಮಾರು 15 ಲಕ್ಷ ರೂ. ವೆಚ್ಚವಾಗಿದೆ. ಪ್ರತಿಮೆಯ ವೆಚ್ಚವನ್ನು ಈ ಹಿಂದೆ ಪ್ರತಿಮೆ ನೀಡಿದ್ದ ಇಲ್ಲಿ ಚಾರ್ಮಕ್ಕಿ ನಾರಾಯಣ ಶೆಟ್ಟರ ಹೆಸರಿನಲ್ಲಿ ಎಸ್‌ ಎಸ್‌ಎನ್‌ ಕನ್‌ಸ್ಟ್ರಕ್ಷನ್‌ ಕಂಪೆನಿ ನೀಡುವ ಭರವಸೆ ನೀಡಿದೆ. ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರ ಪ್ರಯತ್ನದಿಂದ ಇದು ಸಾಕಾರವಾಗಿದೆ. ಪೂರ್ಣ ಪ್ರಮಾಣದ ಪ್ರತಿಮೆ ಇಡುವುದೋ, ಈ ಹಿಂದೆ ಇದ್ದಂತೆ ತಲೆಯ ಭಾಗ ಮಾತ್ರ ಇಡುವುದೋ ಎಂದು ಚರ್ಚೆಗೀಡಾಗಿತ್ತು. ಕೊನೆಗೆ ಶಾಸಕರ ಮಧ್ಯಸ್ಥಿಕೆಯಲ್ಲಿ ಈ ಪ್ರತಿಮೆ ನಿರ್ಮಾಣ ಮಾಡಲಾಗಿದೆ.

ಬಾಕಿ
ಇನ್ನು ವೃತ್ತದ ಸುತ್ತ ತಡೆಬೇಲಿ, ಉದ್ಯಾನವನ ನಿರ್ಮಾಣ ಆಗಬೇಕಿದೆ. ಹೈಮಾಸ್ಟ್‌ ದೀಪದ ಸ್ಥಳಾಂತರ ನಡೆದಿದೆ. ದೀಪ ಹಾಗೂ ಕಂಬ ಕೂರಿಸುವ ಕೆಲಸ ಇನ್ನಷ್ಟೇ ಆಗಬೇಕಿದೆ. ಪಂಚಾಂಗ ನಿರ್ಮಿಸಲಾಗಿದೆ.

ಕಾಮಗಾರಿಗೂ ಮುನ್ನ ಇದನ್ನು ಮೈಸೂರು ಜಯಚಾಮರಾಜೇಂದ್ರ ವೃತ್ತದ ಮಾದರಿಯಲ್ಲಿ ವಿನ್ಯಾಸಗೊಳಿಸುವ ಇರಾದೆಯಿತ್ತು. ಅನಂತರ ವಿನ್ಯಾಸ ಬದಲಾಯಿತು. ಸಿಮೆಂಟ್‌ ಬದಲು ಕಲ್ಲು ಬಳಸಲಾಯಿತು. ನಿಗದಿ ಪಡಿಸಿದ ಮೊತ್ತವೂ ಹೆಚ್ಚಾಯಿತು. ಅದು ಸಾಮಾಜಿಕ ಜಾಲತಾಣದಲ್ಲಿ ಬಂದು ಪುರಸಭೆ ಸಾಮಾನ್ಯ ಸಭೆಯಲ್ಲೂ ಚರ್ಚೆಯಾಯಿತು. ಒಂದಷ್ಟು ವಿವಾದ, ಟೀಕೆ ಎಲ್ಲ ಆಯಿತು. ಒಂದೇ ಬಜೆಟ್‌ ತೋರಿಸುವ ಬದಲು ತುಂಡು ತುಂಡು ಕಾಮಗಾರಿಗೆ ಮೊತ್ತ ತೋರಿಸಲಾಯಿತು.

ಸರ್ಕಲ್‌ ಅವಶ್ಯ
ಕುಂದಾಪುರ ಶಾಸ್ತ್ರಿ ಸರ್ಕಲ್‌, ಶಾಸ್ತ್ರಿ ಪಾರ್ಕ್‌ ಹೆಸರು ವಾಸಿ. ಕುಂದಾಪುರಕ್ಕೆ ಎಲ್ಲಿಂದಲೇ ಬಂದರೂ ಬಸ್‌ ನಿಂದಿಳಿಯಲು ಸೂಚನೆ ಕೊಡುವುದು ಇದೇ ವೃತ್ತವನ್ನು. ಯಾವುದೇ ಸ್ಥಳದ ಗುರುತು ಪರಿಚಯ ಹೇಳಬೇಕಾದರೂ ಶಾಸ್ತ್ರಿ ಸರ್ಕಲನ್ನು ಹೆಸರಿಸುತ್ತಾರೆ. ಇಲ್ಲಿ ಚಾರ್ಮಕ್ಕಿ ನಾರಾಯಣ ಶೆಟ್ಟರ ಹೆಸರಿನಲ್ಲಿ ಎಸ್‌ಎಸ್‌ಎನ್‌ ಕನ್‌ಸ್ಟ್ರಕ್ಷನ್‌ ಕಂಪೆನಿ ನೀಡಿದ ಲಾಲ್‌ಬಹದ್ದೂರ್‌ ಶಾಸ್ತ್ರಿಗಳ ಸುಂದರ ಪ್ರತಿಮೆಯಿತ್ತು. ಅದೆಷ್ಟೋ ವರ್ಷಗಳಿಂದ ಹಸುರು ಹುಲ್ಲಿನ ನಡುವೆ
ಶಿಲೆಯ ಮೇಲೆ ಕೂರಿಸಲ್ಪಟ್ಟ ಶಾಸ್ತ್ರಿ ವಿಗ್ರಹವುಳ್ಳ ಸರ್ಕಲ್‌ ಈಚಿನ ದಿನಗಳಲ್ಲಿ ಬೀಡಾಡಿಗಳ ತಾಣವಾಗಿತ್ತು. ಈಗ ಇವರೆಲ್ಲ ಫ್ಲೈಓವರ್‌ ಅಡಿಗೆ ಸ್ಥಳಾಂತರಗೊಂಡಿದ್ದಾರೆ!

ಹೊಸ ಸರ್ಕಲ್‌
ಶಾಸ್ತ್ರಿಗಳ ಪ್ರತಿಮೆಗೂ ಸೂಕ್ತ ಭದ್ರತೆ ಇರಲಿಲ್ಲ. ಶಾಸ್ತ್ರಿ ಸರ್ಕಲ್‌ನ ಸೌಂದರ್ಯ ಹೆಚ್ಚಿಸಬೇಕೆಂದು ಪುರಸಭೆ ಆಡಳಿತ ಇಲ್ಲಿ ಕಾಮಗಾರಿ ನಡೆಸಿದೆ. ವೃತ್ತ ರಚನೆಯಾಗಿದ್ದು ಮೂರ್ತಿಯೂ ಬಂದಿದೆ. ಇನ್ನು ತಡೆಬೇಲಿ, ಉದ್ಯಾನವನ ಆದಲ್ಲಿಗೆ ಶಾಸ್ತ್ರಿ ಸರ್ಕಲ್‌ಗೆ ಹೊಸ ಕಳೆ ಬರಲಿದೆ. ಸುಂದರ ಕುಂದಾಪುರ ಕಲ್ಪನೆಗೆ ಪೂರಕ ಮನಃಸ್ಥಿತಿ ನಿರ್ಮಾಣವಾಗುತ್ತದೆ ಎಂದು ಪುರಸಭೆ ಆಡಳಿತ ಭಾವಿಸಿದೆ. ಈ ನಿಟ್ಟಿನಲ್ಲಿ ಪುರಸಭೆ ವೃತ್ತ ನಿರ್ಮಾಣ ಮಾಡಿದೆ.

ಟಾಪ್ ನ್ಯೂಸ್

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

MRPL: ಕರಾವಳಿಗೆ ಮೊದಲ “ಗ್ರೀನ್‌ ಹೈಡ್ರೋಜನ್‌’ ಘಟಕ

MRPL: ಕರಾವಳಿಗೆ ಮೊದಲ “ಗ್ರೀನ್‌ ಹೈಡ್ರೋಜನ್‌’ ಘಟಕ

AFGvsSA; ಐತಿಹಾಸಿಕ ಸರಣಿ ಗೆದ್ದ ಅಫ್ಘಾನ್:‌ ದ.ಆಫ್ರಿಕಾಗೆ 177 ರನ್‌ ಅಂತರದ ಸೋಲು

AFGvsSA; ಐತಿಹಾಸಿಕ ಸರಣಿ ಗೆದ್ದ ಅಫ್ಘಾನ್:‌ ದ.ಆಫ್ರಿಕಾಗೆ 177 ರನ್‌ ಅಂತರದ ಸೋಲು

Laddoo Row: ಲಡ್ಡು ತಯಾರಿಸಲು ತಿರುಪತಿಗೆ ನಾವು ತುಪ್ಪ ಪೂರೈಕೆ ಮಾಡಿಲ್ಲ: ಅಮುಲ್ ಸ್ಪಷ್ಟನೆ

Laddoo Row: ಲಡ್ಡು ತಯಾರಿಸಲು ತಿರುಪತಿಗೆ ನಾವು ತುಪ್ಪ ಪೂರೈಕೆ ಮಾಡಿಲ್ಲ: ಅಮೂಲ್ ಸ್ಪಷ್ಟನೆ

Kuki: ಮಣಿಪುರಕ್ಕೆ ಅಕ್ರಮ ಪ್ರವೇಶಿಸಿದ 900 ಕುಕಿ ಉಗ್ರರು: ಭದ್ರತಾ ಸಂಸ್ಥೆ ಮಾಹಿತಿ

Kuki: ಮಣಿಪುರಕ್ಕೆ ಅಕ್ರಮ ಪ್ರವೇಶಿಸಿದ 900 ಕುಕಿ ಉಗ್ರರು: ಭದ್ರತಾ ಸಂಸ್ಥೆ ಮಾಹಿತಿ

atishi

Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

POlice

Kundapura: ನಿಂದನೆ, ಜೀವ ಬೆದರಿಕೆ: ಕೇಸು ದಾಖಲು

Belve ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ 108 ಆ್ಯಂಬುಲೆನ್ಸ್‌ ಬೇಕು

Belve ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ 108 ಆ್ಯಂಬುಲೆನ್ಸ್‌ ಬೇಕು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

1

Amparu: ರೆಸ್ಟೋರೆಂಟ್‌ನಲ್ಲಿ ಹೊಡೆದಾಟ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Langoti Man Movie Review

Langoti Man Movie Review: ಸಂಪ್ರದಾಯದ ಕೊಂಡಿಯಲ್ಲಿ ಲಂಗೋಟಿ!

Mangaluru: “ಜಾತ್ಯತೀತ’ ಬದಲು “ನಾಸ್ತಿಕ ಭಾರತ’ವಾಗಲಿ: ತುಷಾರ್‌ ಗಾಂಧಿ

Mangaluru: “ಜಾತ್ಯತೀತ’ ಬದಲು “ನಾಸ್ತಿಕ ಭಾರತ’ವಾಗಲಿ: ತುಷಾರ್‌ ಗಾಂಧಿ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Sullia: ತೋಟಕ್ಕೆ ಕಾಡಾನೆ ಲಗ್ಗೆ… ಬಾಳೆ, ಅಡಿಕೆ, ತೆಂಗು ಕೃಷಿಗೆ ಹಾನಿ

Sullia: ತೋಟಕ್ಕೆ ಕಾಡಾನೆ ಲಗ್ಗೆ… ಬಾಳೆ, ಅಡಿಕೆ, ತೆಂಗು ಕೃಷಿಗೆ ಹಾನಿ

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.