ಗುರುವಾಯೂರು ದೇಗುಲವೂ ಶ್ರೀಮಂತವೇ
Team Udayavani, Dec 30, 2022, 7:30 AM IST
ತ್ರಿಶೂರ್: ರಹಸ್ಯ ಮಹಡಿಗಳಲ್ಲಿ ಲೆಕ್ಕವಿಲ್ಲದಷ್ಟು ಆಸ್ತಿಯ ಮೂಲಕ ಕೇರಳದ ಶ್ರೀ ಪದ್ಮನಾಭಸ್ವಾಮಿ ದೇವಸ್ಥಾನವು ಖ್ಯಾತಿ ಗಳಿಸಿದ್ದು ಎಲ್ಲರಿಗೂ ಗೊತ್ತಿದೆ. ಈಗ ಕೇರಳದ ಮತ್ತೂಂದು ದೇವಾಲಯವು “ಭಾರೀ ಆಸ್ತಿ’ಯ ಕಾರಣಕ್ಕೆ ಸುದ್ದಿಯಾಗಿದೆ. ಅದು ಬೇರಾವ ದೇಗುಲವೂ ಅಲ್ಲ, ತ್ರಿಶೂರ್ನಲ್ಲಿರುವ ಗುರುವಾಯೂರು ಶ್ರೀ ಕೃಷ್ಣ ದೇವಾಲಯ.
ಗುರುವಾಯೂರು ದೇಗುಲವು 1,737.04 ಕೋಟಿ ರೂ. ಬ್ಯಾಂಕ್ ಠೇವಣಿಯನ್ನು ಹೊಂದಿದ್ದು, ದೇಗುಲದ ಹೆಸರಲ್ಲಿ 271.05 ಎಕರೆ ಭೂಮಿಯೂ ಇದೆ ಎಂದು ಮಾಹಿತಿ ಹಕ್ಕು ಕಾಯ್ದೆಯಡಿ ಸಲ್ಲಿಕೆಯಾಗಿರುವ ಅರ್ಜಿಯಿಂದ ತಿಳಿದುಬಂದಿದೆ. ಅಷ್ಟೇ ಅಲ್ಲ, ಭಕ್ತಾದಿಗಳಿಂದ ಬಂದಿರುವ ಭಾರೀ ಪ್ರಮಾಣದ ಚಿನ್ನ, ಬೆಳ್ಳಿ, ಅಮೂಲ್ಯ ಹರಳುಗಳ ಸಂಗ್ರಹವನ್ನೂ ಹೊಂದಿದೆ. ಭದ್ರತೆಯ ಕಾರಣಕ್ಕಾಗಿ ದೇಗುಲದ ಆಡಳಿತ ಮಂಡಳಿ ಇವುಗಳ ಮಾಹಿತಿ ಮತ್ತು ಮೌಲ್ಯವನ್ನು ಬಹಿರಂಗಪಡಿಸಿಲ್ಲ.
“ಪ್ರಾಪರ್ ಚಾನೆಲ್’ ಎಂಬ ಸಂಸ್ಥೆಯ ಅಧ್ಯಕ್ಷರೂ ಆಗಿರುವ ಗುರುವಾಯೂರು ನಿವಾಸಿ ಎಂ.ಕೆ.ಹರಿದಾಸ್ ಎಂಬುವರು ಸಲ್ಲಿಸಿದ್ದ ಆರ್ಟಿಐ ಅರ್ಜಿಗೆ ಉತ್ತರವಾಗಿ ದೇಗುಲದ ಆಡಳಿತ ಮಂಡಳಿಯು ಈ ಎಲ್ಲ ವಿವರಗಳನ್ನು ನೀಡಿದೆ. “ದೇಗುಲದ ಆಡಳಿತ ಮಂಡಳಿಯ ಬಳಿ ಇಷ್ಟೊಂದು ಆಸ್ತಿಪಾಸ್ತಿ ಇರುವ ಹೊರತಾಗಿಯೂ ದೇವಾಲಯದ ಅಭಿವೃದ್ಧಿ ಮತ್ತು ಭಕ್ತಾದಿಗಳ ಅನುಕೂಲಕ್ಕಾಗಿ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಮಂಡಳಿಯು ಒಂದು ಆಸ್ಪತ್ರೆಯನ್ನು ನಿರ್ವಹಿಸುತ್ತಿದ್ದರೂ, ಅದರ ಸ್ಥಿತಿಯನ್ನು ಹೇಳತೀರದು’ ಎಂದು ಹರಿದಾಸ್ ಆರೋಪಿಸಿದ್ದಾರೆ. ಆದರೆ, ಈ ಆರೋಪಗಳಿಗೆ ಮಂಡಳಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.
ಇದೇ ವೇಳೆ, 2016ರಲ್ಲಿ ಪಿಣರಾಯಿ ವಿಜಯನ್ ಸರ್ಕಾರಿ ಅಸ್ತಿತ್ವಕ್ಕೆ ಬಂದ ಬಳಿಕ ದೇಗುಲಕ್ಕೆ ಯಾವುದೇ ಹಣಕಾಸು ನೆರವು ಸರ್ಕಾರದ ಕಡೆಯಿಂದ ಬಂದಿಲ್ಲ ಎಂದೂ ದೇವಸ್ವಂ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ
Tirupati ತಿರುಪತಿ ಲಡ್ದು ಪ್ರಸಾದದಲ್ಲಿ ಬೀಫ್ ಫ್ಯಾಟ್!:ಲ್ಯಾಬ್ ವರದಿಯಲ್ಲಿ ದೃಢ
Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್ ಡೆಲಿವರಿ ಯುವಕ ಆತ್ಮಹತ್ಯೆ
Haryana: ಮಹಿಳೆಯರಿಗೆ ವಿತ್ತ ನೆರವು, ಎಂಎಸ್ ಪಿ ಭರವಸೆ; ಬಿಜೆಪಿ ಪ್ರಣಾಳಿಕೆ ಬಿಡುಗಡೆ
Chennai: ರಸ್ತೆ ಬದಿ ಪತ್ತೆಯಾದ ಸೂಟ್ಕೇಸ್ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.