ಯಶಸ್ವಿನಿಯಲ್ಲಿ ತಾರತಮ್ಯ: ಉದಯವಾಣಿ ವರದಿ ಪ್ರತಿಧ್ವನಿ
Team Udayavani, Dec 29, 2022, 8:55 PM IST
ಸುವರ್ಣ ವಿಧಾನಸೌಧ: ಯಶಸ್ವಿನಿ ಯೋಜನೆಯಲ್ಲಿ ಗ್ರಾಮಾಂತರ ಹಾಗೂ ನಗರ ಸಹಕಾರಿ ಸಂಘಗಳ ಸದಸ್ಯರಿಗೆ ಪಾವತಿಸಬೇಕಾಗುವ ವಂತಿಗೆಯಲ್ಲಿ ತಾರತಮ್ಯದಿಂದಾಗಿ ಯೋಜನೆಯಲ್ಲಿ ನೋಂದಾಯಿಸಿಕೊಳ್ಳಲು ಸಹಕಾರಿ ಸದಸ್ಯರು ಹಿಂದೇಟು ಹಾಕುತ್ತಿರುವ ವಿಚಾರ ಗುರುವಾರ ವಿಧಾನ ಪರಿಷತ್ನಲ್ಲಿ ಗಮನ ಸೆಳೆಯಿತು.
ಗುರುವಾರ ಸದಸ್ಯ ಮಂಜುನಾಥ ಭಂಡಾರಿ ಅವರು ಕಲಾಪದ ಶೂನ್ಯವೇಳೆಯಲ್ಲಿ ವಿಷಯ ಪ್ರಸ್ತುತ ಪಡಿಸಿ, ಉದಯವಾಣಿಯ ಮುಖಪುಟದಲ್ಲಿ ಈ ಕುರಿತು ಪ್ರಕಟವಾದ ವರದಿಯನ್ನು ಉಲ್ಲೇಖೀಸಿದರು. ಯಶಸ್ವಿನಿ ನೋಂದಣಿಗೆ ಪಾವತಿಸಬೇಕಾಗಿರುವ ವಂತಿಗೆಯಲ್ಲಿರುವ ತಾರತಮ್ಯ ನಿವಾರಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ಸಹಕಾರಿ ಸಚಿವರನ್ನು ಒತ್ತಾಯಿಸಿದರು.
ಸಹಕಾರ ಸಚಿವರ ಪರವಾಗಿ ಉತ್ತರಿಸಿದ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಈ ಕುರಿತು ಸಹಕಾರ ಸಚಿವರಿಂದ ಉತ್ತರ ಪಡೆದು ಒದಗಿಸುವುದಾಗಿ ತಿಳಿಸಿದರು.
ಹೆಚ್ಚುವರಿ ಸದಸ್ಯರಿಗೆ 200 ರೂ.:
ಯಶಸ್ವಿನಿಯಲ್ಲಿ ಗ್ರಾಮೀಣ ಸಹಕಾರ ಸಂಘಗಳ/ಸ್ವಸಹಾಯ ಗುಂಪುಗಳ ನಾಲ್ಕು ಸದಸ್ಯರ ಕುಟುಂಬವೊಂದಕ್ಕೆ ವಾರ್ಷಿಕ 500 ರೂ. ವಂತಿಗೆ ಹಾಗೂ ನಾಲ್ಕಕ್ಕಿಂತ ಹೆಚ್ಚಿನ ಸದಸ್ಯರುಳ್ಳ ಕುಟುಂಬದ ಪ್ರತಿ ಸದಸ್ಯರಿಗೆ ಶೇ.20ರಷ್ಟು ಹೆಚ್ಚುವರಿಯಾಗಿ ಎಂದರೆ ಪ್ರತಿ ಹೆಚ್ಚುವರಿ ಸದಸ್ಯರಿಗೆ 100 ರೂ. ಪಾವತಿಸಬೇಕಾಗುತ್ತದೆ. ಆದರೆ ನಗರ ಸದಸ್ಯರ ವಿಚಾರದಲ್ಲಿ ಮಾತ್ರ ವಂತಿಗೆ ದರ ಬದಲಾಗಿದೆ. ನಗರ ಸಹಕಾರಿ ಸಂಘಗಳ ಗರಿಷ್ಠ 4 ಸದಸ್ಯರ ಕುಟುಂಬ ಒಂದಕ್ಕೆ ವಾರ್ಷಿಕ 1000 ರೂ. ವಂತಿಗೆ ಮತ್ತು ಹೆಚ್ಚುವರಿ ಸದಸ್ಯರಿಗೆ 200 ರೂ. ನೀಡಬೇಕಾಗುತ್ತದೆ ಎಂದು ಉದಯವಾಣಿ ಡಿ.28ರಂದು ವರದಿ ಪ್ರಕಟಿಸಿತ್ತು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ
leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ
Daily Horoscope: ಅನವಶ್ಯ ಮಾತುಗಳಿಂದ ದೂರವಿರಿ, ಉದ್ಯೋಗಸ್ಥರ ಸಮಸ್ಯೆ ನಿವಾರಣೆ
KSOU: ಪರೀಕ್ಷೆ ಸಮೀಪಿಸುತ್ತಿದ್ದರೂ ಮುದ್ರಿತ ಪಠ್ಯ ಸಿಗಲಿಲ್ಲ
Israel ಸರ್ಜಿಕಲ್ ಸ್ಟ್ರೈಕ್: ಹೆಜ್ಬುಲ್ಲಾ ಮುಖ್ಯಸ್ಥನ ಅಂತ್ಯಕ್ಕೆ 80 ಟನ್ ಬಾಂಬ್!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.