ಉಕ್ರೇನ್‌ ಮೇಲೆ ಕ್ಷಿಪಣಿ ಮಳೆ: 120ಕ್ಕೂ ಹೆಚ್ಚು ಕ್ಷಿಪಣಿಗಳಿಂದ ದಾಳಿ


Team Udayavani, Dec 30, 2022, 6:50 AM IST

tdy-23

ಕೀವ್‌: ದಟ್ಟ ಮಂಜು, ಥರಗುಟ್ಟುವ ಚಳಿಯ ನಡುವೆಯೂ ಉಕ್ರೇನ್‌ ಮೇಲೆ ರಷ್ಯಾ ಪಡೆ ದಾಳಿಯನ್ನು ತೀವ್ರಗೊಳಿಸಿದೆ. ಗುರುವಾರ ರಷ್ಯಾ ಸೇನೆಯ ಕಡೆಯಿಂದ ಕ್ಷಿಪಣಿಗಳ ಮಳೆಯೇ ಹರಿದಿದೆ.

ವಿದ್ಯುತ್‌ ಸ್ಥಾವರಗಳು ಸೇರಿದಂತೆ ಪ್ರಮುಖ ಮೂಲಸೌಕರ್ಯಗಳನ್ನು ಗುರಿಯಾಗಿಸಿಕೊಂಡು ಕಳೆದ ಕೆಲವು ವಾರಗಳಲ್ಲೇ ನಡೆದ ದೊಡ್ಡಹಂತದ ದಾಳಿ ಇದಾಗಿದೆ. ಗುರುವಾರ ಉಕ್ರೇನ್‌ನಾದ್ಯಂತ ವೈಮಾನಿಕ ದಾಳಿಯ ಸೈರನ್‌ಗಳು ಮೊಳಗಿದ್ದು, 120ಕ್ಕೂ ಹೆಚ್ಚು ಕ್ಷಿಪಣಿಗಳನ್ನು ಉಡಾಯಿಸಲಾಗಿದೆ.

ಬುಧವಾರ ತಡರಾತ್ರಿ ಆಯ್ದ ಪ್ರದೇಶಗಳಿಗೆ ಸ್ಫೋಟಕ ಡ್ರೋನ್‌ಗಳನ್ನು ಕಳುಹಿಸಿದ್ದ ರಷ್ಯಾ, ಅದಾದ ಬೆನ್ನಲ್ಲೇ ಬೆಳಕು ಹರಿಯುತ್ತಿದ್ದಂತೆ ವಿಮಾನಗಳು ಮತ್ತು ಯುದ್ಧನೌಕೆಗಳಿಂದ ಕ್ರೂಸ್‌ ಕ್ಷಿಪಣಿಗಳನ್ನು ಪ್ರಯೋಗಿಸಿ ಒಂದೇ ಸಮನೆ ದಾಳಿ ಮಾಡಿದೆ. ಪರಿಣಾಮ 14 ವರ್ಷದ ಬಾಲಕಿ ಸೇರಿದಂತೆ ಮೂವರು ಗಾಯಗೊಂಡಿದ್ದಾರೆ. ವಿದ್ಯುತ್‌ ಸ್ಥಾವರದ ಮೇಲೂ ದಾಳಿ ನಡೆದ ಕಾರಣ, ಕೀವ್‌ನಲ್ಲಿ ವಿದ್ಯುತ್‌ ಅಭಾವ ತಲೆದೋರಿದೆ. ಎಲ್ಲರೂ ನೀರನ್ನು ಸಂಗ್ರಹಿಸಿಟ್ಟುಕೊಂಡು, ಎಲೆಕ್ಟ್ರಾನಿಕ್‌ ಸಾಧನಗಳನ್ನು ಚಾರ್ಜ್‌ ಮಾಡಿಟ್ಟುಕೊಳ್ಳುವಂತೆ ಸ್ಥಳೀಯಾಡಳಿತವು ಜನರಿಗೆ ಸೂಚಿಸಿದೆ. ಹಲವು ನಗರಗಳಲ್ಲಿ ವಿದ್ಯುತ್‌ ಸಂಪರ್ಕ ಕಡಿತಗೊಂಡಿದೆ, ಇಂಟರ್ನೆಟ್‌ ಕೆಲಸ ಮಾಡುತ್ತಿಲ್ಲ.

54 ಕ್ಷಿಪಣಿ ಧ್ವಂಸ: ಉಕ್ರೇನ್‌:

ಗುರುವಾರ ಬೆಳಗ್ಗೆ ರಷ್ಯಾ ಪಡೆ ಉಡಾಯಿಸಿದ್ದ 69 ಕ್ಷಿಪಣಿಗಳ ಪೈಕಿ 54 ಅನ್ನು ನಾವು ಧ್ವಂಸಗೊಳಿಸಿದ್ದೇವೆ ಎಂದು ಉಕ್ರೇನ್‌ ವಾಯುಪಡೆ ಹೇಳಿಕೊಂಡಿದೆ. ನಮ್ಮ ದೇಶದ ಪ್ರಮುಖ ಮೂಲಸೌಕರ್ಯಗಳನ್ನು ಗುರಿಯಾಗಿಸಿಕೊಂಡು ದಾಳಿ ಮಾಡುವ ಮೂಲಕ ರಷ್ಯಾವು ಇಲ್ಲಿನ ಜನರಲ್ಲಿ ಭಯವನ್ನು ಸೃಷ್ಟಿಸುತ್ತಿದೆ. ರಷ್ಯಾ ಕಳುಹಿಸಿದ್ದ 11 ಶಹೇದ್‌ ಡ್ರೋನ್‌ಗಳನ್ನು ನಾವು ಹೊಡೆದುರುಳಿಸಿದ್ದೇವೆ. ಒಟ್ಟಾರೆ 54 ಕ್ಷಿಪಣಿಗಳನ್ನು ನಾಶ ಮಾಡಿದ್ದೇವೆ ಎಂದು ಉಕ್ರೇನ್‌ ಸೈನಿಕರು ಹೇಳಿದ್ದಾರೆ.

ಪುಟಿನ್‌ ಆರೋಗ್ಯದ ಬಗ್ಗೆ ಆಘಾತಕಾರಿ ಮಾಹಿತಿ! :

ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ ಅವರು ಕ್ಯಾನ್ಸರ್‌ ಮಾತ್ರವಲ್ಲದೇ ಪಾರ್ಕಿನ್ಸನ್‌ ರೋಗದಿಂದಲೂ ಬಳಲುತ್ತಿದ್ದಾರೆ ಎಂಬ ಆಘಾತಕಾರಿ ಮಾಹಿತಿ ಹೊರಬಿದ್ದಿದೆ. ಅಷ್ಟೇ ಅಲ್ಲ, ಪುಟಿನ್‌ಗೆ ಪಾಶ್ಚಿಮಾತ್ಯದ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ. ಕ್ಯಾನ್ಸರ್‌ ದೇಹದ ಇತರೆ ಭಾಗಗಳಿಗೆ ವ್ಯಾಪಿಸುತ್ತಿದ್ದು, ಅದನ್ನು ನಿಧಾನಗೊಳಿಸಲು ವೈದ್ಯರು ಔಷಧಗಳನ್ನು ನೀಡುತ್ತಿದ್ದಾರೆ. ಈ ಔಷಧಗಳಿಂದಲೇ ಅವರು ಜೀವಂತವಾಗಿರುವುದು ಎಂದು ರಷ್ಯಾ ಇತಿಹಾಸಕಾರ ಮತ್ತು ರಾಜಕೀಯ ವಿಶ್ಲೇಷಕ ವಲೇರಿ ಸೊಲೊವೆ ಹೇಳಿದ್ದಾರೆ. ವಿದೇಶಿ ಚಿಕಿತ್ಸೆ ಇಲ್ಲದಿರುತ್ತಿದ್ದರೆ, ಈಗ ಪುಟಿನ್‌ ಅವರೂ ಇರುತ್ತಿರಲಿಲ್ಲ. ಅವರಿಗೆ ಅತ್ಯಂತ ಸುಧಾರಿತ ಚಿಕಿತ್ಸೆ ನೀಡಲಾಗುತ್ತಿದೆ. ಹೀಗಿದ್ದರೂ, ಭವಿಷ್ಯದಲ್ಲಿ ಅವರ ಆರೋಗ್ಯ ಸ್ಥಿತಿ ಕುರಿತು ವೈದ್ಯರಿಗೆ ಗ್ಯಾರಂಟಿ ಕೊಡಲು ಸಾಧ್ಯವಾಗುತ್ತಿಲ್ಲ ಎಂದೂ ಸೊಲೊವೆ ತಿಳಿಸಿದ್ದಾರೆ.

ಟಾಪ್ ನ್ಯೂಸ್

1-horoscope

Daily Horoscope: ಮನೋಬಲವನ್ನು ಹೆಚ್ಚಿಸಿ ಕೊಂಡಷ್ಟೂ ಹೆಚ್ಚು ಅನುಕೂಲ

Monkey-Pox

Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Drug ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು; ಬೆಂಗಳೂರು,ಮಂಗಳೂರಲ್ಲಿ ಡ್ರಗ್ಸ್‌ ಹಾವಳಿ ಹೆಚ್ಚಳ

Karnataka Govt.,; ಡ್ರಗ್‌ ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು

ಹೆಜ್ಬುಲ್ಲಾ ಬಳಸಿದ್ದ ಸಾವಿವಾರು ಪೇಜರ್ಸ್‌ ಒಳಗೆ ಸ್ಫೋಟಕ ಅಳವಡಿಸಿದ್ದ ಇಸ್ರೇಲ್‌ ನ ಮೊಸ್ಸಾದ್!

Israel: ಹೆಜ್ಬುಲ್ಲಾ ಬಳಸಿದ್ದ ಪೇಜರ್ಸ್‌ ಒಳಗೆ ಸ್ಫೋಟಕ ಅಳವಡಿಸಿದ್ದ ಇಸ್ರೇಲ್‌ ನ ಮೊಸ್ಸಾದ್!

arrest-25

Diddy ;ಸೆ*ಕ್ಸ್ ದಂಧೆ ಆರೋಪ: ಅಮೆರಿಕದ ಖ್ಯಾತ ಹಿಪ್-ಹಾಪ್‌ ಸ್ಟಾರ್ ಬಂಧನ

1-trfff

PM Modi ಅವರನ್ನು ಭೇಟಿಯಾಗಿ ಮಾತುಕತೆ ನಡೆಸುವುದಾಗಿ ಘೋಷಿಸಿದ ಟ್ರಂಪ್

After Namibia 200 elephants slaughtered in Zimbabwe

Drought; ನಮೀಬಿಯಾ ಆಯ್ತು, ಈಗ ಜಿಂಬಾಬ್ವೆಯಲ್ಲಿ 200 ಆನೆಗಳ ಹತ್ಯೆ?

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-horoscope

Daily Horoscope: ಮನೋಬಲವನ್ನು ಹೆಚ್ಚಿಸಿ ಕೊಂಡಷ್ಟೂ ಹೆಚ್ಚು ಅನುಕೂಲ

Monkey-Pox

Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.