ಕೋರ್ಟ್ ಆವರಣದಲ್ಲೇ ಕರ್ತವ್ಯ ನಿರತ ಪೊಲೀಸ್ ಕಾನ್ಸ್ ಟೇಬಲ್ ನೇಣಿಗೆ ಶರಣು
Team Udayavani, Dec 30, 2022, 6:31 PM IST
ಲಕ್ನೋ:ಕರ್ತವ್ಯ ನಿರತ ಕಾನ್ಸ್ ಸ್ಟೇಬಲ್ ಕೋರ್ಟ್ ಆವರಣದಲ್ಲಿ ನೇಣಿಗೆಗೆ ಶರಣಾಗಿರುವ ಘಟನೆ ಶುಕ್ರವಾರ ಉತ್ತರಪ್ರದೇಶದ ಛಿಬ್ರಮೌ ತೆಹಸಿಲ್ ನಲ್ಲಿ ನಡೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಕಾನ್ಸ್ ಟೇಬಲ್ ವಿಷ್ಣು ಅವರನ್ನು ಛಿಬ್ರಮೌ ಕೋರ್ಟ್ ನಲ್ಲಿ ಕರ್ತವ್ಯ ನಿರ್ವಹಿಸಲು ನಿಯೋಜಿಸಲಾಗಿತ್ತು. ಪ್ರತಿದಿನ ಕರ್ತವ್ಯಕ್ಕೆ ಹಾಜರಾಗುವ ಅವರು ಮೊಬೈಲ್ ನಲ್ಲಿ ಸ್ವಲ್ಪ ಸಮಯ ಮಾತನಾಡಿದ್ದರು.
ಆದರೆ ಶುಕ್ರವಾರ 10 ಗಂಟೆಯ ನಂತರ ವಿಷ್ಣು ಕೋರ್ಟ್ ಆವರಣದ ಹಿಂಭಾಗದ ಮರಕ್ಕೆ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿರುವುದು ಕಂಡು ಬಂದಿತ್ತು ಎಂದು ಛಿಬ್ರಮೌ ಸರ್ಕಲ್ ಇನ್ಸ್ ಪೆಕ್ಟರ್ ದೀಪಕ್ ದುಬೆ ತಿಳಿಸಿದ್ದಾರೆ.
ಶವವನ್ನು ಕೆಳಗಿಳಿಸಿದ ನಂತರ ವಿಷ್ಣು ಕುಟುಂಬ ಸದಸ್ಯರಿಗೆ ಮಾಹಿತಿ ನೀಡಲಾಗಿತ್ತು. ಕಾನ್ಸ್ ಟೇಬಲ್ ಈ ನಿರ್ಧಾರಕ್ಕೆ ಬರಲು ಕಾರಣವೇನು ಎಂಬುದು ಇನ್ನಷ್ಟೇ ತಿಳಿದು ಬರಬೇಕಾಗಿದೆ ಎಂದು ದುಬೆ ತಿಳಿಸಿದ್ದಾರೆ.
ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ವರದಿ ಬಂದ ನಂತರ ತನಿಖೆಗೆ ಸಹಾಯಕವಾಗಲಿದೆ. ವಿಷ್ಣು ಮಥುರಾ ನಿವಾಸಿಯಾಗಿದ್ದು, ಕಳೆದ ಐದು ತಿಂಗಳ ಹಿಂದಷ್ಟೇ ವಿವಾಹವಾಗಿದ್ದರು ಎಂದು ವರದಿ ವಿವರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Edible oil; ದಾಸ್ತಾನಿದ್ದರೂ ಖಾದ್ಯ ತೈಲ ಬೆಲೆ ಏರಿಸಿದ್ದೇಕೆ: ಸರಕಾರ ಪ್ರಶ್ನೆ
Budgam; ಬಸ್ ಪ್ರಪಾತಕ್ಕೆ ಬಿದ್ದು 3 ಯೋಧರು ಮೃ*ತ್ಯು, 9 ಮಂದಿಗೆ ಗಂಭೀರ ಗಾಯ
AAP ಬೇಡಿಕೆ: ನಿರ್ಗಮಿತ ಸಿಎಂ ಕೇಜ್ರಿವಾಲ್ ಅವರಿಗೆ ಸರಕಾರಿ ವಸತಿ ಕಲ್ಪಿಸಿ
Congress ಪಕ್ಷವನ್ನು ತುಕ್ಡೆ ತುಕ್ಡೆ ಗ್ಯಾಂಗ್, ನಗರ ನಕ್ಸಲರು ನಡೆಸುತ್ತಿದ್ದಾರೆ:ಮೋದಿ
SC ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ರದ್ದು ಅರ್ಜಿ ಎರಡು ವಾರ ಮುಂದೂಡಿಕೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.