![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
Team Udayavani, Dec 30, 2022, 9:17 PM IST
ಕುಷ್ಟಗಿ:ಕುಷ್ಟಗಿ ವಿಧಾನಸಭಾ ಕ್ಷೇತ್ರಕ್ಕೆ ಗಾಲಿ ಜನಾರ್ದನ ರೆಡ್ಡಿ ಅವರ ಕರ್ನಾಟಕ ರಾಜ್ಯ ಪ್ರಗತಿ ಪಕ್ಷಕ್ಕೆ ವೀರಶೈವ ಲಿಂಗಾಯತ ಸಮುದಾಯದ ಅಭ್ಯರ್ಥಿಗೆ ಗಾಳ ಹಾಕಿದ್ದು,ಕುಷ್ಟಗಿ ಕ್ಷೇತ್ರದಲ್ಲಿ ರೆಡ್ಡಿ ಪಕ್ಷ ಇದೀಗ ಮುನ್ನೆಲೆಗೆ ಬಂದಿದೆ.
ಈಗಾಗಲೇ ಜೆಡಿಎಸ್ ತುಕಾರಾಮ್ ಸುರ್ವೆ ತನ್ನ ಅಭ್ಯರ್ಥಿ ಎಂದು ಪ್ರಕಟಿಸಿದೆ. ಕಾಂಗ್ರೆಸ್ ಅಭ್ಯರ್ಥಿ ಹಾಲಿ ಶಾಸಕ ಅಮರೇಗೌಡ ಪಾಟೀಲ ಬಯ್ಯಾಪೂರ, ಪ್ರತಿಸ್ಪರ್ಧಿ ಬಿಜೆಪಿ ಪಕ್ಷದ ಮಾಜಿ ಶಾಸಕ ದೊಡ್ಡನಗೌಡ ಪಾಟೀಲ ಅಭ್ಯರ್ಥಿಗಳೆಂದು ಪ್ರಕಟಿಸುವುದು ಬಾಕಿ ಇದೆ.
ಇಂತಹ ಸಂಧರ್ಭದಲ್ಲಿ ಗಾಲಿ ಜನಾರ್ದನ ರೆಡ್ಡಿ ಅವರು ಗಂಗಾವತಿ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಘೋಷಿಸಿದ್ದು, ಪಕ್ಕದ ಕ್ಷೇತ್ರ ಕುಷ್ಟಗಿಯಲ್ಲಿಯೂ ರೆಡ್ಡಿ ಪಕ್ಷ ಕೆಲವು ದಿನಗಳಿಂದ ಸದ್ದು ಮಾಡಲಾರಂಭಿಸಿದೆ. ಈ ಹಿನ್ನೆಲೆಯಲ್ಲಿ ಮುಂದಿನ ಚುನಾವಣೆಗೆ ವೀರಶೈವ ಲಿಂಗಾಯತ ಸಮುದಾಯದ ಅಭ್ಯರ್ಥಿಯನ್ನು ಕಣಕ್ಕಿಳಿಸುವ ತಂತ್ರಗಾರಿಕೆ ಇದಾಗಿದೆ. ಈ ಸಮುದಾಯದವರು ಕಾಂಗ್ರೆಸ್, ಬಿಜೆಪಿ ಪಕ್ಷಗಳಲ್ಲಿ ಧ್ರುವೀಕರಣಗೊಂಡಿದ್ದು, ಇದರ ಮುಂದುವರಿದ ಭಾಗವಾಗಿ ಬಿಜೆಪಿ ತಾಲೂಕು ಮಂಡಲ ಅಧ್ಯಕ್ಷ ಬಸವರಾಜ ಹಳ್ಳೂರು ಅವರನ್ನು ಸಂಪರ್ಕಿಸಿದ್ದು, ಸ್ಪಷ್ಟ ಅಭಿಪ್ರಾಯ ತಿಳಿಸಲು ಜ.3 ರವರೆಗೆ ಗಡುವು ವಿಧಿಸಿದ್ದಾರೆ.
ಈ ಕುರಿತು ಜನಾರ್ದನ ರೆಡ್ಡಿ ಕಡೆಯವರು ಕುಷ್ಟಗಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಸಂಪರ್ಕಿಸಿದ್ದು ನಿಜ ಆದರೆ ಅವರಿಗೆ ಏನೂ ಅಭಿಪ್ರಾಯ ತಿಳಿಸಿಲ್ಲ ಎಂದಿದ್ದಾರೆ.
Gangavati: 15 ದಿನದಲ್ಲೇ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು…
Gangavathi: ಬ್ರಹ್ಮಾವರ ಮೂಲದ ದೇಗುಲ ಕಟ್ಟಡ ಎಂಜಿನಿಯರ್ ಕೊಪ್ಪಳದಲ್ಲಿ ಆತ್ಮಹ*ತ್ಯೆ
Tawargera: ಲಾರಿ-ಬುಲೆರೋ ವಾಹನ ಡಿಕ್ಕಿ; ಇಬ್ಬರು ಸಾವು
Kanakagiri: ಬ್ಯಾಂಕಿನಲ್ಲಿಯೇ ವೃದ್ಧ ಗ್ರಾಹಕನ ಹಣ ಎಗರಿಸಿದ ಖದೀಮರು
Koppal: ರಾಜ್ಯದಲ್ಲಿ ನಾವು ಸ್ಟ್ರಾಂಗ್ ಇದ್ದಿದ್ದರಿಂದ ಇವಿಎಂ ಕಿತಾಪತಿ ನಡೆದಿಲ್ಲ; ತಂಗಡಗಿ
You seem to have an Ad Blocker on.
To continue reading, please turn it off or whitelist Udayavani.