ಹಲವು ವರ್ಷ ಪ್ರೀತಿಸಿದ್ದರೂ ಮದುವೆಗೆ ನಕಾರ; ಫೇಸ್ಬುಕ್ ಲೈವ್ ಮಾಡಿ ಜೀವವನ್ನೇ ಕೊನೆಯಾಗಿಸಿಕೊಂಡ ಯುವಕ.!
Team Udayavani, Dec 31, 2022, 1:16 PM IST
ಅಸ್ಸಾಂ: ಪ್ರೀತಿಸುತ್ತಿದ್ದ ಯುವತಿ ಮದುವೆಯ ಪ್ರಸ್ತಾಪವನ್ನು ತಿರಸ್ಕರಿಸಿದ ಕಾರಣ ಯುವಕನೊಬ್ಬ ದುಃಖದಿಂದ ತನ್ನ ಜೀವವನ್ನೇ ಕೊನೆಯಾಗಿಸಿಕೊಂಡ ಘಟನೆ ಕ್ಯಾಚಾರ್ಸ್ ಕಲಾಯಿನ್ ಪ್ರದೇಶದಲ್ಲಿ ನಡೆದಿದೆ.
27 ವರ್ಷದ ಜಯದೀಪ್ ರಾಯ್ ಕಳೆದ ಕೆಲ ವರ್ಷಗಳಿಂದ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದ. ಇತ್ತೀಚೆಗೆ ತನ್ನ ಪ್ರೇಯಸಿಗೆ ಮದುವೆಯ ಪ್ರಸ್ತಾಪವನ್ನು ಮಾಡಿದ್ದ. ಎಲ್ಲರ ಮುಂದೆ ಮದುವೆಯ ಪ್ರಸ್ತಾಪವನ್ನು ಮಾಡಿದ್ದರೂ, ಆಕೆ ಅದನ್ನು ತಿರಸ್ಕರಿಸಿದ್ದಳು. ಇದಾದ ಬಳಿಕ ಯುವತಿ ಮನೆವರು ಕೂಡ ಯುವಕನಿಗೆ ಬೆದರಿಕೆ ಹಾಕಿ, ಆಕೆಯನ್ನು ಪ್ರೀತಿಸಿದರೆ ಸುಮ್ಮನೆ ಬಿಡುವುದಿಲ್ಲ ಒಂದು ಗತಿ ಕಾಣಿಸುತ್ತೇವೆ ಎಂದು ಯುವಕನಿಗೆ ಬೆದರಿಕೆ ಹಾಕಿದ್ದರು ಎಂದು ವರದಿ ತಿಳಿಸಿದೆ.
ಇದರಿಂದ ನೊಂದುಕೊಂಡಿದ್ದ ಯುವಕ ಇತ್ತೀಚೆಗೆ ಫೇಸ್ ಬುಕ್ ನಲ್ಲಿ ಲೈವ್ ನಲ್ಲಿ ಯುವತಿ ಮದುವೆ ಪ್ರಸ್ತಾಪ ತಿರಸ್ಕರಿಸಿದ ವಿಚಾರವನ್ನು ಹೇಳಿ, ನನ್ನಿಂದ ಆಕೆಗೆ ಯಾವ ಕಷ್ಟವೂ ಆಗಬಾರದೆಂದು, ಮನೆಯವರಲ್ಲಿ ಕ್ಷಮೆ ಕೇಳಿ, ಫೇಸ್ ಬುಕ್ ಲೈವ್ ಸ್ಟ್ರೀಮಿಂಗ್ ಇರುವಾಗಲೇ ಫ್ಯಾನಿಗೆ ಕೊರಳೊಡ್ಡಿ ದುರಂತ ಅಂತ್ಯ ಕಂಡಿದ್ದಾನೆ.
ಈ ರೀತಿ ಮಾಡಿಕೊಳ್ಳುವ ಯುವಕ ಸಹೋದರನಿಗೆ ಮೆಸೇಜ್ ಮಾಡಿದ್ದಾನೆ. ಆ ಬಳಿಕ ಮನೆಯವರ ಎಲ್ಲರ ಸಂಪರ್ಕವನ್ನು ಬ್ಲಾಕ್ ಮಾಡಿಕೊಂಡಿದ್ದ ಎಂದು ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM Modi ನಾನು ಹೇಳಿದ್ದನ್ನು ಮಾಡಿ ತೋರಿಸಿದರೆ ಬಿಜೆಪಿ ಪರ ಪ್ರಚಾರ ಮಾಡುತ್ತೇನೆ: ಕೇಜ್ರಿವಾಲ್
EAM Jaishankar; ರಷ್ಯಾ ಮತ್ತು ಉಕ್ರೇನ್ ನಡುವೆ ಮಾತುಕತೆ ಮೋದಿಯಂತ ನಾಯಕರಿಂದ ಸಾಧ್ಯ
J&K ; ಬಿಜೆಪಿ ವಿರುದ್ಧ ಜಾತ್ಯತೀತ ಸರಕಾರ ರಚಿಸಲು ಒಂದಾಗುತ್ತೇವೆ ಎಂದ ಪಿಡಿಪಿ
Panaji: ಮಲ್ಪೆಯ ಎರಡು ಮೀನುಗಾರಿಕಾ ಬೋಟ್ಗಳನ್ನು ವಶಪಡಿಸಿಕೊಂಡ ಗೋವಾ ಸರಕಾರ!
Jammu Kashmir: ಬಿಜೆಪಿಯ ʼನಯಾ ಕಾಶ್ಮೀರʼ ಕೈಕೊಟ್ಟಿದ್ದೆಲ್ಲಿ? ಕಣಿವೆಯ ಜನರ ಭಾವನೆಯೇನು?
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.