ಆದಿಚುಂಚನಗಿರಿ ನಿರ್ಮಲಾನಂದನಾಥ ಸ್ವಾಮೀಜಿಯವರನ್ನು ಭೇಟಿಯಾದ ಶಾ
Team Udayavani, Dec 31, 2022, 9:36 PM IST
ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಶನಿವಾರ ಇಲ್ಲಿನ ಪ್ರಭಾವಿ ಆದಿಚುಂಚನಗಿರಿ ಮಠದ ಪೀಠಾಧಿಪತಿ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರನ್ನು ಭೇಟಿ ಮಾಡಿದರು.
ಶಾ ಅವರೊಂದಿಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ, ಕಂದಾಯ ಸಚಿವ ಆರ್ ಅಶೋಕ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಒಕ್ಕಲಿಗ ಸಮುದಾಯದ ಪ್ರಾಬಲ್ಯವಿರುವ ಹಳೇ ಮೈಸೂರು ಭಾಗದಲ್ಲಿ ದುರ್ಬಲ ಎಂದು ಪರಿಗಣಿಸಲಾಗಿರುವ ಬಿಜೆಪಿ 2023ರ ವಿಧಾನಸಭೆ ಚುನಾವಣೆಯಲ್ಲಿ ಸಂಪೂರ್ಣ ಬಹುಮತ ಗಳಿಸಲು ಈ ಬೆಲ್ಟ್ನತ್ತ ಗಮನಹರಿಸುತ್ತಿರುವುದರಿಂದ ಈ ಭೇಟಿ ಮಹತ್ವ ಪಡೆದುಕೊಂಡಿದೆ.
ಹಳೇ ಮೈಸೂರು ಪ್ರದೇಶವನ್ನು ಜೆಡಿಎಸ್ನ ಭದ್ರಕೋಟೆ ಎಂದು ಪರಿಗಣಿಸಲಾಗಿದೆ, ಆದರೆ ಅಲ್ಲಿ ಕಾಂಗ್ರೆಸ್ ಸಹ ಪ್ರಬಲವಾಗಿದೆ, ಆದರೆ ಬಿಜೆಪಿಯು ಮೇಲುಗೈ ಸಾಧಿಸಲು ಪ್ರಯತ್ನಿಸುತ್ತಿದೆ. ಈ ಪ್ರದೇಶವು ಮಂಡ್ಯ, ಮೈಸೂರು, ಹಾಸನ, ತುಮಕೂರು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳನ್ನು ಒಳಗೊಂಡಿದೆ.
ಒಕ್ಕಲಿಗರು ಮತ್ತು ಲಿಂಗಾಯತರಿಗೆ ಎರಡು ಹೊಸ ಒಬಿಸಿ ವರ್ಗಗಳನ್ನು ರಚಿಸಲು ಮತ್ತು 10% EWS ಕೋಟಾದ ಒಂದು ಭಾಗವನ್ನು ಬಳಸಿಕೊಳ್ಳುವ ಮೂಲಕ ಅವರ ಮೀಸಲಾತಿ ಬೇಡಿಕೆಯನ್ನು ಪೂರೈಸಲು ರಾಜ್ಯ ಸಚಿವ ಸಂಪುಟದ ಇತ್ತೀಚಿನ ನಿರ್ಧಾರದ ನಂತರ ಈ ಭೇಟಿಯು ಮಹತ್ವವನ್ನು ಪಡೆದುಕೊಂಡಿದೆ.ಹಳೆಯ ಮೈಸೂರು ಪ್ರದೇಶದಲ್ಲಿ ವಿಶೇಷವಾಗಿ ಪ್ರಬಲವಾದ ಒಕ್ಕಲಿಗ ಸಮುದಾಯದ ಮತಗಳ ಮೇಲೆ ಬಿಜೆಪಿ ಈ ಬಾರಿ ಕಣ್ಣಿಟ್ಟಿದೆ.
ಶುಕ್ರವಾರ ಮಂಡ್ಯದಲ್ಲಿ ನಡೆದ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಶಾ, ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳನ್ನು ಪರಿವಾರವಾದಿ ರಾಜವಂಶೀಯ ಮತ್ತು ಭ್ರಷ್ಟ ಎಂದು ಬಣ್ಣಿಸಿ ಹಳೆ ಮೈಸೂರು ಭಾಗದ ಜನತೆಗೆ ಬಿಜೆಪಿಯನ್ನು ಬೆಂಬಲಿಸಲು ಕರೆ ನೀಡಿದ್ದರು.
ಅದಮ್ಯ ಚೇತನಕ್ಕೆ ಭೇಟಿ
ಮಠಕ್ಕೆ ಭೇಟಿ ನೀಡುವ ಮೊದಲು, ಶಾ, ದಿವಂಗತ ಕೇಂದ್ರ ಸಚಿವ ಅನಂತ್ ಕುಮಾರ್ ಅವರ ಪತ್ನಿ, ರಾಜ್ಯ ಬಿಜೆಪಿ ಉಪಾಧ್ಯಕ್ಷ ತೇಜಸ್ವಿನಿ ಅನಂತ್ ಕುಮಾರ್ ಅವರು ನಡೆಸುತ್ತಿರುವ ಅದಮ್ಯ ಚೇತನ ಸೇವಾ ಸಂಸ್ಥೆಗೆ ಭೇಟಿ ನೀಡಿದರು.ಅದಮ್ಯ ಚೇತನದ ‘ಅಮೃತ ಮಹೋತ್ಸವ-ಅನಂತ ಸೇವಾ ಉತ್ಸವ’ದಲ್ಲಿ ಭಾಗವಹಿಸಿದ್ದಲ್ಲದೆ, ಇಲ್ಲಿನ ಗವಿಪುರದಲ್ಲಿರುವ ಶೂನ್ಯ ತ್ಯಾಜ್ಯ ಅಡುಗೆ ಮನೆಗೂ ಭೇಟಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dr G Parameshwar: ಸೆನ್ ಠಾಣೆಗಳಿಗೂ ಎಸ್ಪಿ ಕೇಡರ್: ಗೃಹ ಸಚಿವ
Manvi: ವಿಪಕ್ಷಗಳ ಬೆದರಿಕೆಗಳಿಗೆ ಜಗ್ಗಲ್ಲ, ಜನರಿಗಾಗಿ ಹೋರಾಟ ಮುಂದುವರಿಸುವೆ: ಸಿದ್ದರಾಮಯ್ಯ
Renukaswamy Case: ದರ್ಶನ್ ಪರ ವಕೀಲರ ಸುದೀರ್ಘ ವಾದ..ಜಾಮೀನು ಅರ್ಜಿ ಮತ್ತೆ ಮುಂದೂಡಿಕೆ
Bellary; ಸಿದ್ರಾಮಯ್ಯ 5 ಸಾವಿರ ಕೋಟಿ ಬೇನಾಮಿ ಆಸ್ತಿ ಮಾಡಿದ್ದಾರೆ: ಜನಾರ್ದನ ರೆಡ್ಡಿ ಆರೋಪ
Heavy Rain: ದಾಂಡೇಲಿಯಲ್ಲಿ ವ್ಯಾಪಕ ಮಳೆ… ಅಂಗಡಿ, ಮನೆಗಳಿಗೆ ನುಗ್ಗಿದ ಕೊಳಚೆ ನೀರು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.