![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Jan 1, 2023, 9:36 PM IST
ಕೋಲಾರ: ಕೋಲಾರ ವಿಧಾನಸಭಾ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಅಲ್ಲ, ಅವರ ನಾಯಕ ರಾಹುಲ್ ಗಾಂಧಿ ಬಂದರೂ ಭಯವಿಲ್ಲ. ಅವರನ್ನು ಹೀನಾಯವಾಗಿ ಸೋಲಿಸಿ ಮನೆಗೆ ಕಳುಹಿಸಲು ಇಲ್ಲಿನ ಜನರು ಶಪಥ ಮಾಡಿದ್ದಾರೆ.
ಕೋಲಾರದಲ್ಲಿ ವರ್ತೂರು ಪ್ರಕಾಶ್ ಸಹಿತ ಜಿಲ್ಲೆಯಲ್ಲಿ ಕನಿಷ್ಠ 4 ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಶತಸಿದ್ಧ ಎಂದು ಸಂಸದ ಎಸ್. ಮುನಿಸ್ವಾಮಿ ಹೇಳಿದರು.
ತಾಲೂಕಿನ ವಕ್ಕಲೇರಿ ಗ್ರಾಮದಲ್ಲಿ ಮಾಜಿ ಸಚಿವ ವರ್ತೂರು ಪ್ರಕಾಶ್ ನೇತೃತ್ವದಲ್ಲಿ ನಡೆದ ಬೃಹತ್ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಮತ್ತವರ ಕಾಂಗ್ರೆಸ್ ಪಕ್ಷ ಕುರುಬರು, ಒಕ್ಕಲಿಗರು, ದಲಿತರು, ಅಲ್ಪಸಂಖ್ಯಾಕರ ವಿರೋಧಿಯಾಗಿದೆ. ಇವರೆಲ್ಲರೂ ಸಿದ್ದರಾಮಯ್ಯ ಕೋಲಾರಕ್ಕೆ ಬರಲಿ ಎಂದು ಕಾಯುತ್ತಿದ್ದಾರೆ. ಜನರೊಂದಿಗೆ ಮಿಳಿತವಾಗಿರುವ ವರ್ತೂರು ಪ್ರಕಾಶ್ ಗೆಲುವನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದರು.
ಕಾಂಗ್ರೆಸ್ ದಲಿತರ ವಿರೋಧಿ ಎಂಬುದು ಅನೇಕ ನಿದರ್ಶನಗಳ ಮೂಲಕ ಸತ್ಯವಾಗಿದೆ. ಬಿಜೆಪಿ ಎಂದಿಗೂ ದಲಿತ ವಿರೋಧಿಯಲ್ಲ, ವಾಜಪೇಯಿ, ಮೋದಿಯವರ ಆಡಳಿತದಲ್ಲಿ ದಲಿತರಿಗಾಗಿ ಕೆಲಸ ಮಾಡಿದ್ದಾರೆ ಎಂಬುದನ್ನು ಮರೆಯಬಾರದು ಎಂದರು.
You seem to have an Ad Blocker on.
To continue reading, please turn it off or whitelist Udayavani.