ಚಿಕಿತ್ಸೆಯಲ್ಲೂ ಸಂಗೀತ ಬಳಕೆ: ಪ್ರೊ| ಕೆ.ಬಿ. ಗುಡಸಿ
ವಿದ್ಯಾರ್ಥಿಗಳು ಸದುಪಯೋಗ ಪಡೆಯಬೇಕು
Team Udayavani, Jan 2, 2023, 4:43 PM IST
ಧಾರವಾಡ: ಧಾರವಾಡದ ಸಂಗೀತ ತನ್ನದೇ ಆದ ಶಕ್ತಿ ಹೊಂದಿದ್ದು, ಧಾರವಾಡವನ್ನು ಇಡೀ ದೇಶ ಮತ್ತು ಪ್ರಪಂಚಕ್ಕೆ ಪರಿಚಯಿಸಿದ ಕೀರ್ತಿ ಮಲ್ಲಿಕಾರ್ಜುನ ಮನಸೂರ ಸೇರಿದಂತೆ ಇಲ್ಲಿನ ಸಂಗೀತಗಾರರಿಗೆ ಸಲ್ಲುತ್ತದೆ ಎಂದು ಕವಿವಿ ಕುಲಪತಿ ಪ್ರೊ| ಕೆ.ಬಿ. ಗುಡಸಿ ಹೇಳಿದರು.
ಕವಿವಿಯು ಪದ್ಮವಿಭೂಷಣ ಡಾ| ಮಲ್ಲಿಕಾರ್ಜುನ ಮನಸೂರ ಸ್ಮರಣಾರ್ಥ ಲಲಿತಕಲಾ ಮತ್ತು ಸಂಗೀತ ಮಹಾವಿದ್ಯಾಲ ಯದಲ್ಲಿ “ಸಂಗೀತಜ್ಞರ ದಿನಾಚರಣೆ’ಯ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಪ್ರತಿಯೊಬ್ಬ ಯಶಸ್ವಿ ಸಂಗೀತಗಾರನ ಹಿಂದೆ ಕಠಿಣವಾದ ಪರಿಶ್ರಮ ಇದೆ. ಸಾಮಾನ್ಯ ಕುಟುಂಬದಿಂದ ಬಂದ ಮಲ್ಲಿಕಾರ್ಜುನ ಮನಸೂರ ಅವರು ಸಂಗೀತ ಕ್ಷೇತ್ರಕ್ಕೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ಇಂದು ಸಂಗೀತವನ್ನು ಮನೋವೈಜ್ಞಾನಿಕ ಕ್ಷೇತ್ರದಲ್ಲಿ ಚಿಕಿತ್ಸೆ ನೀಡಲು ಕೂಡ ಸಂಗೀತವನ್ನು ಬಳಕೆ ಮಾಡಲಾಗುತ್ತದೆ ಎಂದರು.
ಕವಿವಿ ಪ್ರಸಾರಾಂಗದ ನಿರ್ದೇಶಕ ಡಾ| ಚಂದ್ರಶೇಖರ ರೊಟ್ಟಿಗವಾಡ ಮಾತನಾಡಿ, ಪಂಡಿತ ಮಲ್ಲಿಕಾರ್ಜುನ ಮನಸೂರ ತಮ್ಮ ಇಡೀ ಜೀವನವನ್ನು ಸಂಗೀತಕ್ಕಾಗಿ ಮುಡಿಪಾಗಿಟ್ಟು, ತಮ್ಮ ಸಂಗೀತದ ಸಾಧನೆಯಿಂದ ಧಾರವಾಡವನ್ನು ಜಗತ್ತಿಗೆ ಪರಿಚಯಿಸಿದರು. ಕವಿವಿ ಪ್ರಸಾರಂಗವು ಅನೇಕ ಮಹನೀಯರ ಹೆಸರಿನಲ್ಲಿ ಉಪನ್ಯಾಸಗಳನ್ನು ಆಯೋಜಿಸುತ್ತಿದೆ. ವಿದ್ಯಾರ್ಥಿಗಳು ಸದುಪಯೋಗ ಪಡೆಯಬೇಕು ಎಂದು ಹೇಳಿದರು.
ಕರ್ನಾಟಕ ಸಂಗೀತ ಕಾಲೇಜಿನ ಪ್ರಾಚಾರ್ಯ ಡಾ| ಶಾಂತಾರಾಮ ಹೆಗಡೆ ಮಾತನಾಡಿದರು. ಡಾ| ಸುಲಭಾದತ್ತ ನೀರಲಗಿ ಗಾಯನ ಪ್ರಸ್ತುತಪಡಿಸಿದರು. ಕರ್ನಾಟಕ ಕಲಾ ಕಾಲೇಜಿನ ಪ್ರಾಚಾರ್ಯರಾದ ಡಾ| ಡಿ.ಬಿ. ಕರಡೋಣಿ, ಡಾ| ಎಸ್.ಸಿ. ಚೌಗಲಾ, ಉಪ ನಿರ್ದೇಶಕರಾದ ಡಾ| ಎನ್.ಸಿದ್ದಪ್ಪ, ಸಂಗೀತ ಕಾಲೇಜಿನ ವಿಶ್ರಾಂತ ಪ್ರಾಚಾರ್ಯರಾದ ಡಾ|ಮಲ್ಲಿಕಾರ್ಜುನ ತರ್ಲಗಟ್ಟಿ, ಸಂಗೀತ ಕಲಾವಿದೆ ಸುಕನ್ಯಾ ಗುರುವ ಇನ್ನಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.