ಯುವಕರಲ್ಲಿ ದೇಶಿ ಕಲೆ-ಸಾಹಿತ್ಯದ ಅರಿವು ಮೂಡಿಸಿ
ಸಾಹಿತ್ಯ ಹಾಗೂ ಸಾಂಸ್ಕೃತಿಕ ಚಟುಚಟಿಕೆಗಳ ಕುರಿತು ಅರಿವು ಮೂಡಿಸುವುದು ಅವಶ್ಯವಿದೆ.
Team Udayavani, Jan 2, 2023, 4:56 PM IST
ಧಾರವಾಡ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ರೈಸಿಂಗ್ ಸ್ಟಾರ್ಸ್ ಆರ್ಟ್ ಆ್ಯಂಡ್ ಕಲ್ಚರಲ್ ಅಕಾಡೆಮಿ ವತಿಯಿಂದ ಸಂಗೀತ, ನೃತ್ಯ, ಜಾನಪದ ಹಾಗೂ ವೈವಿಧ್ಯಮಯ ಕಲಾ ಪ್ರಕಾರಗಳ ರಾಜ್ಯಮಟ್ಟದ ಸಾಂಸ್ಕೃತಿಕ ಕಲಾಮೇಳ ಕಾರ್ಯಕ್ರಮವನ್ನು ಕವಿಸಂನಲ್ಲಿ ಹಮ್ಮಿಕೊಳ್ಳಲಾಗಿತ್ತು.
ಮೇಯರ್ ಈರೇಶ ಅಂಚಟಗೇರಿ ಮಾತನಾಡಿ, ನಮ್ಮ ನಾಡಿನ ಕಲೆಗಳು ಜನಪ್ರಿಯವಾಗಿವೆ. ಕಲೆಗಳನ್ನು ಆರಾಧಿಸುವ ಹಲವಾರು ಮಹನೀಯರು ನಮ್ಮ ಜಿಲ್ಲೆಯ ಮೂಲಕ ಪ್ರಸಿದ್ಧರಾಗಿದ್ದಾರೆ. ನಾಡಿನ ಯುವ ಜನತೆಗೆ ದೇಶಿಯ ಕಲೆ, ಸಾಹಿತ್ಯ ಹಾಗೂ ಸಾಂಸ್ಕೃತಿಕ ಚಟುಚಟಿಕೆಗಳ ಕುರಿತು ಅರಿವು ಮೂಡಿಸುವುದು ಅವಶ್ಯವಿದೆ.
ರೈಸಿಂಗ್ ಸ್ಟಾರ್ಸ್ ಸಂಸ್ಥೆಗೆ ಹುಡಾದಿಂದ ಮಂಜೂರಾದ ಸಿಎ ನಿವೇಶನದಲ್ಲಿ ಸುಸಜ್ಜಿತ ಕಲಾ ತರಬೇತಿ ಹಾಗೂ ಪ್ರದರ್ಶನಾತ್ಮಕ ಕಲಾ ಕೇಂದ್ರ ನಿರ್ಮಿಸಲು ಪಾಲಿಕೆ ವತಿಯಿಂದ ಸಹಕಾರ ನೀಡಲಾಗುವುದು ಎಂದರು.
ಧಾರವಾಡ ಎಪಿಎಂಸಿ ಮಾಜಿ ಉಪಾಧ್ಯಕ್ಷ ಕೃಷ್ಣಾ ಕೊಳ್ಳಾನಟ್ಟಿ, ಕವಿವಿ ಸಿಂಡಿಕೇಟ್ ಸದಸ್ಯ ಕಲ್ಮೇಶ ಹಾವೇರಿಪೇಟ್ ಮಾತನಾಡಿದರು. ಬಸವರಾಜ ಮಲಕಾರಿ ಅಧ್ಯಕ್ಷತೆ ವಹಿಸಿದ್ದರು. ಅಮರ ಕಾಳೆ, ಹಾವೇರಿ ಜಿಲ್ಲೆಯ ಸ್ಯಾಕ್ಸೋಪೋನ್ ವಾದಕ ಬಸವರಾಜ ಸಾವಕ್ಕನವರ, ವಿದುಷಿ ವಿಜೇತಾ ವೆರ್ಣೇಕರ ಸೇರಿದಂತೆ ಸಾಧಕರನ್ನು ಸನ್ಮಾನಿಸಲಾಯಿತು.ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ ಇದ್ದರು.
ಡಾ| ಪ್ರಕಾಶ ಮಲ್ಲಿಗವಾಡ ಸ್ವಾಗತಿಸಿ, ಪ್ರಾಸ್ತಾವಿಕ ಮಾತನಾಡಿದರು. ಸಂಜಯ ಕುಮಾರ ಬಿರಾದಾರ ನಿರೂಪಿಸಿದರು. ದೇವರಾಜ ಲಮಾಣಿ ವಂದಿಸಿದರು. ವಿವಿಧ ಜಿಲ್ಲೆಗಳಿಂದ ಆಗಮಿಸಿದ ಕಲಾ ತಂಡಗಳಿಂದ ನೃತ್ಯ, ಗಾಯನ, ಜಾನಪದ ಹಾಗೂ ವೈವಿಧ್ಯಮಯ ಕಲಾ ಪ್ರದರ್ಶನಗಳು ಜರುಗಿದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ವಿಜಯೇಂದ್ರ ಎಳಸು, ನನ್ನ ಬಗ್ಗೆ ಏನು ಮಾತನಾಡುತ್ತಾರೆ..: ಕೆ.ಎಸ್.ಈಶ್ವರಪ್ಪ ವಾಗ್ದಾಳಿ
Hubballi: ದರೋಡೆಗೆ ಯತ್ನ… ಪೊಲೀಸರಿಂದ ಓರ್ವನ ಕಾಲಿಗೆ ಗುಂಡು, ಉಳಿದವರಿಗಾಗಿ ಶೋಧ ಕಾರ್ಯ
Hubli; ದತ್ತಮೂರ್ತಿ 4 ಕೈ ಭಗ್ನ ಮಾಡಿದ ದುಷ್ಕರ್ಮಿಗಳು
Hubbali: ಅಪಾರ್ಟ್ಮೆಂಟ್ ಆವರಣದಲ್ಲಿದ್ದ ದತ್ತಾತ್ರೇಯ ದೇವರ ಮೂರ್ತಿ ಧ್ವಂಸಗೈದ ಕಿಡಿಗೇಡಿಗಳು
Dr G Parameshwar: ಸೆನ್ ಠಾಣೆಗಳಿಗೂ ಎಸ್ಪಿ ಕೇಡರ್: ಗೃಹ ಸಚಿವ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Singham Again trailer: ಭರಪೂರ ಆ್ಯಕ್ಷನ್ ಟ್ರೇಲರ್ನಲ್ಲಿ ʼರಾಮಾಯಣʼವೇ ಹೈಲೈಟ್
Kaup: ಉಚ್ಚಿಲ ದಸರೆಗೆ ವಸ್ತುಪ್ರದರ್ಶನ ಮೆರುಗು
ವೈದ್ಯೆಯ ಮೇಲೆ ಅತ್ಯಾ*ಚಾರ ಎಸಗಿ ಕೊಂದಿದ್ದು ಸಂಜಯ್ ರಾಯ್: ಸಿಬಿಐ ಚಾರ್ಜ್ ಶೀಟ್ ಸಲ್ಲಿಕೆ
Mangaluru: ಬೃಹತ್ ಪ್ರಮಾಣದ ಡ್ರಗ್ಸ್ ವಶಪಡಿಸಿಕೊಂಡ ಸಿಸಿಬಿ ತಂಡ; ನೈಜಿರಿಯಾ ಪ್ರಜೆ ಬಂಧನ
Karkala: ಮಕ್ಕಳ ಕೈಯ್ಯಲ್ಲಿ ಹೂವಿನಕೋಲು!; ನವರಾತ್ರಿ ವಿಶೇಷ ಆಚರಣೆ ಮುಂದುವರಿಸುವ ಮಕ್ಕಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.