ಸಿದ್ದೇಶ್ವರ ಶ್ರೀ ಲಿಂಗೈಕ್ಯ : ಶ್ರೀಗಳ ಅಂತಿಮ ದರ್ಶನಕ್ಕೆ ಮಾರ್ಗಸೂಚಿ ಬಿಡುಗಡೆ


Team Udayavani, Jan 2, 2023, 11:59 PM IST

ಸಿದ್ದೇಶ್ವರ ಶ್ರೀ ಲಿಂಗೈಕ್ಯ : ಅಂತಿಮ ದರ್ಶನಕ್ಕೆ ಮಾರ್ಗಸೂಚಿ ಬಿಡುಗಡೆ

ವಿಜಯಪುರ : ನಡೆದಾಡುವ ದೇವರೆಂದೆ ಖ್ಯಾತರಾದ ಜ್ಞಾನಯೋಗಾಶ್ರಮದ ಸಿದ್ದೇಶ್ವರ ಸ್ವಾಮಿಜೀಗಳು ಸೋಮವಾರದಂದು ಲಿಂಗೈಕ್ಯರಾಗಿದ್ದಾರೆ. ರಾಜ್ಯ ಸರ್ಕಾರ ತೀವ್ರ ಸಂತಾಪವನ್ನು ವ್ಯಕ್ತಪಡಿಸಿದ್ದು, ಪೂಜ್ಯರ ಅಂತಿಮ ಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲು ನಿರ್ದೇಶಿರುತ್ತದೆ.

ಅಲ್ಲದೇ ಶ್ರೀಗಳ ಅಂತಿಮ ದರ್ಶನಕ್ಕೆ ಭಕ್ತಾದಿಗಳು ಹಾಗೂ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಜಿಲ್ಲೆಯ ಎಲ್ಲ ಶಾಲಾ-ಕಾಲೇಜು ಮತ್ತು ಸರ್ಕಾರಿ ಕಛೇರಿಗಳಿಗೆ ಸರ್ಕಾರ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ತಿಳಿಸಿದ್ದಾರೆ.

ಜಿಲ್ಲಾಡಳಿತವು ಪೂಜ್ಯರ ಪಾರ್ಥಿವ ಶರೀರವನ್ನು ಶ್ರೀ ಜ್ಞಾನಯೋಗಾಶ್ರಮದಲ್ಲಿ ಈ ರಾತ್ರಿಯಿಂದ ನಾಳೆ ಬೆಳಗ್ಗೆ 4.30ರವರೆಗೆ ಭಕ್ತಾದಿಗಳ ದರ್ಶನಕ್ಕಾಗಿ ಇಡಲಾಗುವುದು. ನಂತರ ಪೂಜ್ಯರ ಪಾರ್ಥಿವ ಶರೀರವನ್ನು ತೆರೆದ ವಾಹನದಲ್ಲಿ ಶ್ರೀ ಜ್ಞಾನಯೋಗಾಶ್ರಮದಿಂದ ಸೈನಿಕ ಶಾಲೆಯವರೆಗೆ ತರಲಾಗುವುದು ಎಂದು ಅವರು ತಿಳಿಸಿದ್ದಾರೆ.

ಭಕ್ತಾದಿಗಳಿಗೆ ಶ್ರೀಗಳ ಅಂತಿಮ ದರ್ಶನವನ್ನು ಮಂಗಳವಾರ ಬೆಳಗ್ಗೆ 6 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ವಿಜಯಪುರ ನಗರದ ಸೈನಿಕ ಶಾಲೆ ಆವರಣದಲ್ಲಿ ಏರ್ಪಡಿಸಲಾಗಿದೆ.

ಅಂತಿಮ ದರ್ಶನಕ್ಕಾಗಿ ಸೋಲಾಪುರ, ಕಲಬುರಗಿ, ಸಿಂದಗಿ, ಬಾಗಲಕೋಟೆ, ಜಮಖಂಡಿ, ಅಥಣಿಯಿಂದ ಆಗಮಿಸುವ ಭಕ್ತಾದಿಗಳು ನೇರವಾಗಿ ವಿಜಯಪುರ ನಗರದ ರಿಂಗ್ ರೋಡ್ ಮೂಲಕ (ಇಟಗಿ ಪೆಟ್ರೋಲ್ ಪಂಪ್) ಜಿಲ್ಲಾ ಆಸ್ಪತ್ರೆಯ ಹಿಂಭಾಗದಲ್ಲಿ ವಾಹನ ನಿಲುಗಡೆ ವ್ಯವಸ್ಥೆ ಕಲ್ಪಿಸಲಾಗಿದೆ. ಈ ಸ್ಥಳದಲ್ಲಿಯೇ ಭಕ್ತಾದಿಗಳಿಗೆ ಪ್ರಸಾದ, ನೀರು, ಇನ್ನಿತರೆ ವ್ಯವಸ್ಥೆ ಮಾಡಲಾಗಿದೆ.

ಭಕ್ತಾದಿಗಳು ಜಿಲ್ಲಾ ಸರ್ಕಾರಿ ಆಸ್ಪತ್ರೆಯ ಸೈನಿಕ ಶಾಲೆಯ ಎದುರುಗಡೆ ಇರುವ ನೇತಾಜಿ ಸುಭಾಶ್ಚಂದ್ರ ಬೋಸ್ ರಸ್ತೆಯ ಮೂಲಕ ನಡೆದುಕೊಂಡು ಸೈನಿಕ ಶಾಲೆಯ ಮುಖ್ಯ ದ್ವಾರದ ಮೂಲಕ ಪ್ರವೇಶಿಸಬೇಕು.

ದರ್ಶನದ ನಂತರ ಸೈನಿಕ ಶಾಲೆಯ 2ನೇ ಗೇಟ್ ಮೂಲಕ (ಲೆಫ್ಟಿನೆಂಟ್ ಕರ್ನಲ್ ಅಜಿತ್ ಭಂಡಾರಕರ ದ್ವಾರ) ಹೊರಗಡೆ ಬಂದು ತಮ್ಮ ವಾಹನ ಮೂಲಕ ವಾಪಸ ತೆರಳಬೇಕು. ಸೈನಿಕ ಶಾಲೆಯಲ್ಲಿ ಮಧ್ಯಾಹ್ನ 3 ರಿಂದ ಸಂಜೆ 4 ಗಂಟೆಯ ಅವಧಿಯಲ್ಲಿ ಸರ್ಕಾರದಿಂದ ಸಕಲ ಗೌರವಗಳೊಂದಿಗೆ ಪೂಜ್ಯರಿಗೆ ಅಂತಿಮ ನಮನ ಸಲ್ಲಿಸಲಾಗುವುದು ಎಂದು ತಿಳಿಸಿದ್ದಾರೆ.

ಸಂಜೆ 4 ಗಂಟೆಯಿಂದ ಪುನಃ ತೆರೆದ ವಾಹನದಲ್ಲಿ ಪೂಜ್ಯರ ಪಾರ್ಥೀವ ಶರೀರವನ್ನು ಸೈನಿಕ ಶಾಲೆಯಿಂದ ಶ್ರೀ ಜ್ಞಾನಯೋಗಾಶ್ರಮಕ್ಕೆ ತರಲಾಗುವುದು. (ಮಾರ್ಗ: ಗೋದಾವರಿ-ಶ್ರೀ ಶಂಕರಲಿಂಗ ದೇವಸ್ಥಾನ-ಶಿವಾಜಿವೃತ್ತ – ಗಾಂಧಿವೃತ್ತ- ಶ್ರೀ ಸಿದ್ದೇಶ್ವರ ದೇವಸ್ಥಾನ-ಬಿ.ಎಲ್.ಡಿ.ಇ. ಆಸ್ಪತ್ರೆ-ಶ್ರೀ ಜ್ಞಾನಯೋಗಾಶ್ರಮ), ಭಕ್ತಾದಿಗಳು ರಸ್ತೆಯ ಇಕ್ಕೆಲಗಳಲ್ಲಿ ನಿಂತುಕೊಂಡು ಪೂಜ್ಯರ ಪಾರ್ಥೀವ ಶರೀರಕ್ಕೆ ಅಂತಿಮ ನಮನವನ್ನು ಸಲ್ಲಿಸಬಹುದಾಗಿದೆ.

ಪೂಜ್ಯರ ಅಂತಿಮ ಕ್ರಿಯೆಯನ್ನು ಸಂಜೆ 5 ಗಂಟೆಗೆ ಶ್ರೀ ಜ್ಞಾನಯೋಗಾಶ್ರಮದ ಆವರಣದಲ್ಲಿ ವಿಧಿವಿಧಾನಗಳಂತೆ ನೇರವೇರಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ಶ್ರೀ ಜ್ಞಾನಯೋಗಾಶ್ರಮದ ಆವರಣದಲ್ಲಿ ಸ್ಥಳಾವಕಾಶದ ಅಭಾವವಿರುವುದರಿಂದ ಭಕ್ತಾದಿಗಳು ಸೈನಿಕ ಶಾಲೆಯಲ್ಲಿಯೇ ಅಂತಿಮ ದರ್ಶನ ಪಡೆಯಲು ಮನವಿ ಮಾಡಿಕೊಂಡ ಜಿಲ್ಲಾಧಿಕಾರಿಗಳು, ಭಕ್ತಾದಿಗಳು ಯಾವುದೇ ಆತಂತಕ್ಕೆ ಒಳಗಾಗದೇ ಶಾಂತ ರೀತಿಯಿಂದ ವರ್ತಿಸಿ, ಜಿಲ್ಲಾಡಳಿತದೊಂದಿಗೆ ಸಹಕರಿಸುವಂತೆ ಅವರು ಕೋರಿದ್ದಾರೆ.

ಟಾಪ್ ನ್ಯೂಸ್

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

High Court: ಬಿಎಸ್‌ವೈ ಪೋಕ್ಸೋ ಕೇಸ್‌: ಸೆ.27ಕ್ಕೆ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

12

High Court: ಬಿಎಸ್‌ವೈ ಪೋಕ್ಸೋ ಕೇಸ್‌: ಸೆ.27ಕ್ಕೆ ವಿಚಾರಣೆ ಮುಂದಕ್ಕೆ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.