ಅಪಘಾತ ತಾಣವಾಗಿ ಬದಲಾಗುತ್ತಿದೆ ಕಟಪಾಡಿ ಜಂಕ್ಷನ್‌: ಬೇಕಿದೆ ತುರ್ತು ಸೇವೆಗಾಗಿ ಆ್ಯಂಬುಲೆನ್ಸ್‌


Team Udayavani, Jan 3, 2023, 6:20 AM IST

ಅಪಘಾತ ತಾಣವಾಗಿ ಬದಲಾಗುತ್ತಿದೆ ಕಟಪಾಡಿ ಜಂಕ್ಷನ್‌: ಬೇಕಿದೆ ತುರ್ತು ಸೇವೆಗಾಗಿ ಆ್ಯಂಬುಲೆನ್ಸ್‌

ಕಟಪಾಡಿ: ನಿರಂತರ ಅಪಘಾತದ ತಾಣವಾಗುತ್ತಿರುವ ಕಟಪಾಡಿ ಜಂಕ್ಷನ್‌ನಲ್ಲಿ ಗಾಯಾಳುಗಳ ಜೀವ ರಕ್ಷಣೆಗೆ ಉಡುಪಿ ಅಥವಾ ಮಣಿಪಾಲ ಆಸ್ಪತ್ರೆಗೆ ಕರೆದೊಯ್ಯಲು ತುರ್ತು ಸೇವೆಯ ಆ್ಯಂಬುಲೆನ್ಸ್‌ ಆವಶ್ಯಕವಾಗಿ ಬೇಕಿದೆ ಎಂಬ ಸಾರ್ವಜನಿಕರ ಒತ್ತಾಯ ಕೇಳಿ ಬರುತ್ತಿದೆ.

ಕಟಪಾಡಿ, ಉದ್ಯಾವರ, ಕುರ್ಕಾಲು, ಶಂಕರಪುರ, ಬಂಟಕಲ್ಲು ಸಹಿತ ಪರಿಸರದ ಈ ಪ್ರದೇಶದಲ್ಲಿ ರಸ್ತೆ ಅವಘಡವು ಸಂಭವಿಸಿದಾಗ ಗಾಯಾಳುವಿನ ತುರ್ತು ರಕ್ಷಣೆಗೆ ರಿಕ್ಷಾ ಚಾಲಕರೇ ಮುಂದಾಗುತ್ತಿದ್ದು, ರಿಕ್ಷ ತುರ್ತು ಸೇವೆಯನ್ನು ನೀಡುವ ವಾಹನವಾಗಿ ಪರಿಣಮಿಸುತ್ತಿದೆ. ಆ ನಿಟ್ಟಿನಲ್ಲಿ ರಿಕ್ಷದವರ ಸೇವೆಯು ಅನನ್ಯವಾಗಿದೆ.

ನಿಜಕ್ಕಾದರೆ ಈ ಭಾಗದಲ್ಲಿ ಅಪಘಾತದಿಂದ ಗಾಯಗೊಂಡ ಗಾಯಾಳುಗಳ ಜೀವ ರಕ್ಷಣೆಗೆ ತುರ್ತು ಸೇವೆಯ ಆ್ಯಂಬುಲೆನ್ಸ್‌ ಅವಶ್ಯಕವಾಗಿ ಬೇಕಿದ್ದು, ಗಾಯಾಳುವಿಗೆ ತುರ್ತಾಗಿ ಬೇಕಾಗುವ ಪ್ರಥಮ ಚಿಕಿತ್ಸೆ, ಆಕ್ಸಿಜನ್‌ ವ್ಯವಸ್ಥೆ ಸಹಿತ ಮತ್ತಿತರ ಸೌಲಭ್ಯಗಳು ಲಭಿಸಿದಲ್ಲಿ ಗಾಯಾಳುಗಳ ಜೀವ ರಕ್ಷಣೆಗೆ ಹೆಚ್ಚಿನ ಆದ್ಯತೆ ನೀಡಲು ಸಾಧ್ಯವಾಗುತ್ತದೆ ಎಂದು ಸಾರ್ವಜನಿಕರು ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ.

ಡಿಸೆಂಬರ್‌ ತಿಂಗಳಲ್ಲಿಯೇ ಟಿಪ್ಪರ್‌ ಢಿಕ್ಕಿ ಹೊಡೆದು ದ್ವಿಚಕ್ರ ವಾಹನ ಸವಾರ ಉದ್ಯಾವರ ಬೊಳೆjಯ ಯುವಕ, ಬೈಕ್‌, ಕಾರು ಢಿಕ್ಕಿ ಹೊಡೆದು ಪಾದಚಾರಿಗಳು ಸಾವನ್ನಪ್ಪಿದ ಘಟನೆಯು ಕಟಪಾಡಿ ಜಂಕ್ಷನ್‌ ಪ್ರದೇಶದಲ್ಲಿ ಸಂಭವಿಸಿದೆ. ಉದ್ಯಾವರ ಪ್ರದೇಶದಲ್ಲಿಯೂ ಅಪಘಾತದಿಂದ ಸಾವು ನೋವುಗಳು ಸಂಭವಿಸಿದೆ. ಕುರ್ಕಾಲು, ಶಂಕರಪುರ, ಬಂಟಕಲ್ಲು ಪರಿಸರದಲ್ಲೂ ರಸ್ತೆ ಆವಘಡದಲ್ಲಿ ಸಾವು ನೋವುಗಳು ಸಂಭವಿಸಿವೆೆ.

ರಾಷ್ಟ್ರೀಯ ಹೆದ್ದಾರಿ 66ರ ಮಂಗಳೂರು ಮತ್ತು ಉಡುಪಿ ಪ್ರದೇಶದಿಂದ ಬರುವ ವಾಹನಗಳು ಹಾಗೂ ಬೆಳ್ಮಣ್‌, ಶಿರ್ವ, ಬಂಟಕಲ್ಲು, ಶಂಕರಪುರ ಹಾಗೂ ಮಣಿಪುರ ಭಾಗದಿಂದ ಬರುವ ವಾಹನಗಳು ಮತ್ತು ಮಟ್ಟು ಕಟಪಾಡಿ ಪೇಟೆಯೊಳಗಿಂದ ಬರುವ ವಾಹನಗಳು ಕಟಪಾಡಿಯಲ್ಲಿ ರಾಷ್ಟ್ರೀಯ ಹೆದ್ದಾರಿ 66ರ ಜಂಕ್ಷನ್‌ ಮೂಲಕ ಸಾಗಬೇಕಿದೆ. ಹಾಗಾಗಿ ಸಹಜವಾಗಿಯೇ ಬೆಳೆಯುತ್ತಿರುವ ಕಟಪಾಡಿಯಲ್ಲಿ ಸದಾ ವಾಹನ ದಟ್ಟಣೆ, ಜನದಟ್ಟಣೆಯು ಸಾಮಾನ್ಯವಾಗಿದ್ದು, ನಿಯಂತ್ರಣಕ್ಕೆ ಪೊಲೀಸರು ಶ್ರಮ ವಹಿಸುತ್ತಿದ್ದಾರೆ.

ಕಟಪಾಡಿಯಲ್ಲಿ ಅಂಡರ್‌ ಅಥವಾ ಓವರ್‌ ಪಾಸ್‌ ನಿರ್ಮಿಸಿ ಶಾಶ್ವತ ಪರಿಹಾರ ಕ್ರಮ ಕೈಗೊಳ್ಳಬೇಕು. ಜನ ಸಾಮಾನ್ಯರ ಜೀವದ ಮೌಲ್ಯವನ್ನು ಅರಿತು, ಜನಪ್ರತಿನಿಧಿಗಳು, ಅಧಿಕಾರಿಗಳು ಎಚ್ಚೆತ್ತು ಕಟಪಾಡಿ ಜಂಕ್ಷನ್‌ ಪ್ರದೇಶದಲ್ಲಿ ತುರ್ತು ಸೇವೆಯ ಆ್ಯಂಬುಲೆನ್ಸ್‌ ವಾಹನದ ಸೌಕರ್ಯವನ್ನು ಒದಗಿಸಿ ಅಪಘಾತದಿಂದ ಗಾಯಗೊಂಡ ಗಾಯಾಳುಗಳ ಜೀವ ರಕ್ಷಣೆಗೆ ಹೆಚ್ಚಿನ ಆದ್ಯತೆ-ಸುರಕ್ಷತೆಯನ್ನು ಕಲ್ಪಿಸಿಬೇಕೆಂದು ನಾಗರಿಕರು ಆಗ್ರಹಿಸುತ್ತಿದ್ದಾರೆ.

ಬೆಳೆಯುತ್ತಿರುವ ಕಟಪಾಡಿ ಪರಿಸರದಲ್ಲಿ ನಿರಂತರವಾಗಿ ಅಪಘಾತ ಸಂಭವಿಸುತ್ತಿದೆ. ರಿಕ್ಷಾದವರೇ ತುರ್ತಾಗಿ ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದಾರೆ. ಗಂಭೀರ ಗಾಯಗೊಂಡ ಗಾಯಾಳುವಿಗೆ ಉತ್ತಮ ಸುರಕ್ಷತೆ ಹಾಗೂ ಜೀವ ರಕ್ಷಣೆಗೆ ಕಟಪಾಡಿ ಜಂಕ್ಷನ್‌ ಪ್ರದೇಶದಲ್ಲಿ ತುರ್ತು ಸೇವೆಯ ಆ್ಯಂಬುಲೆನ್ಸ್‌ ವಾಹನ ಸೌಕರ್ಯದ ಆವಶ್ಯಕತೆ ಇದೆ.
-ಪ್ರೇಮ್‌ ಕುಮಾರ್‌ ಕಟಪಾಡಿ, ಅಧ್ಯಕ್ಷರು, ರಿಕ್ಷಾ ಯೂನಿಯನ್‌ ಕಟಪಾಡಿ

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.